Homeಮುಖಪುಟಹೊಸಪೇಟೆ ಅಪಘಾತ ಪ್ರಕರಣ: ನನ್ನ ಮಗ ಕಾರಿನಲ್ಲಿದ್ದು ನಿಜ, ಆದರೆ ಕಾರು ಚಲಾಯಿಸುತ್ತಿರಲ್ಲಿಲ್ಲ - ಸಚಿವ...

ಹೊಸಪೇಟೆ ಅಪಘಾತ ಪ್ರಕರಣ: ನನ್ನ ಮಗ ಕಾರಿನಲ್ಲಿದ್ದು ನಿಜ, ಆದರೆ ಕಾರು ಚಲಾಯಿಸುತ್ತಿರಲ್ಲಿಲ್ಲ – ಸಚಿವ ಆರ್‌ ಅಶೋಕ್‌

ಮೊದಲಿಗೆ ಆರ್‌ ಅಶೋಕ್‌ ಪುತ್ರ ಕಾರಿನಲ್ಲಿದ್ದರೂ ಸಹ ಅತನ ಹೆಸರನ್ನು ಎಫ್‌ಐಆರ್‌ನಲ್ಲಿ ಕೈಬಿಟ್ಟಿದ್ದು ಏಕೆ? ಅಪಘಾತವಾದಾಗ ಬೆಂಜ್‌ ಕಾರು ಬದಲಿಗೆ ಆಡಿ ಕಾರು ಎಂದು ಉಲ್ಲೇಖಿಸಿದ್ದು ಏಕೆ?? ಅಲ್ಲದೇ ಕುಡಿದು ಚಾಲನೆ ಮಾಡಿದರು ಎಂಬ ಅಂಶವನ್ನು ಮರೆಮಾಚಿದ್ದು ಏಕೆ???

- Advertisement -
- Advertisement -

ಹೊಸಪೇಟೆಯ ಬಳಿಯ ಮರಿಯಮ್ಮನಹಳ್ಳಿಯಲ್ಲಿ ಫೆ.10 ರಂದು ಸಂಭವಿಸಿದ ಅಪಘಾತ ಪ್ರಕರಣದಲ್ಲಿ ಸಚಿವ ಆರ್‌ ಅಶೋಕ್‌ ಪುತ್ರನ ಪಾತ್ರವಿದೆಯೆಂಬ ಸುದ್ದಿ ಹರಿದಾಡಿದ್ದು ಹೊಸ ವಿವಾದಕ್ಕೆ ಕಾರಣವಾಗಿದೆ.

ಈ ಮೊದಲು ಬೆಂಗಳೂರಿನಿಂದ ಹಂಪಿಗೆ ಪ್ರವಾಸಕ್ಕೆಂದು ತೆರಳಿದ್ದ ಸಚಿನ್‌, ರಾಹುಲ್‌ ಸೇರಿದಂತೆ ಐವರು ಗೆಳೆಯರು ಕುಡಿದ ಮತ್ತಿನಲ್ಲಿ ಅತೀವೇಗದಲ್ಲಿ ಕಾರು ಚಲಾಯಿಸಿದ ಕಾರಣಕ್ಕೆ ರಸ್ತೆ ಬದಿ ನಿಂತಿದ್ದ ರವಿನಾಯ್ಕ್‌ ಎಂಬುವವರಿಗೆ ಗುದ್ದಿ, ಕಾರು ಮಗುಚಿಕೊಂಡಿತ್ತು. ಸ್ಥಳದಲ್ಲಿಯೇ ರವಿನಾಯ್ಕ್‌ ಸೇರಿದಂತೆ ಕಾರಿನಲ್ಲಿದ್ದ ಸಚಿನ್‌ ಎಂಬುವವರು ಮೃತಪಟ್ಟಿದ್ದರು.

ಆದರೆ ಘಟನೆ ನಡೆದು ಮೂರು ದಿನಗಳು ಕಳೆದರೂ ಇದರಲ್ಲಿ ಸಚಿವ ಆರ್‌ ಅಶೋಕ್‌ ಮತ್ತು ಆತನ ಪುತ್ರನ ಹೆಸರು ಬಹಿರಂಗಗೊಳ್ಳದಂತೆ ಪೊಲೀಸರು ಕೆಲಸ ಮಾಡಿದ್ದಾರೆ. ಬೆಂಜ್‌ ಕಾರು ಅಪಘಾತದಲ್ಲಿದ್ದರೆ ಪೊಲೀಸರು ಆಡಿ ಕಾರು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಿ ಕೇಸನ್ನು ತಿರುಚಲು ಮುಂದಾಗಿದ್ದಾರೆ.

ಈಗ ಬಂದ ಸುದ್ದಿಯ ಪ್ರಕಾರ ಆರ್‌ ಅಶೋಕ್‌ರವರ ಮಗ ಶರತ್‌ ಕಾರು ಓಡಿಸುತ್ತಿದ್ದು ಆತನೇ ಅಪಘಾತಕ್ಕೆ ಕಾರಣವೆಂದು ಹೇಳಲಾಗುತ್ತಿದೆ. ಅಪಘಾತವಾದ ಕೂಡಲೇ ಆತನನ್ನು ಬೇರೊಂದು ಕಾರಿನಲ್ಲಿ ಬೆಂಗಳೂರಿಗೆ ಕಳುಹಿಸಿಕೊಟ್ಟಿದ್ದು ಎಲ್ಲಿಯೂ ಆತನ ಹೆಸರು ಬಹಿರಂಗವಾಗದಂತೆ ಮೋಸ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

ಇಂದು ಬೆಳಿಗ್ಗೆಯಿಂದಲೇ ದಿನಪತ್ರಿಕೆಗಳಲ್ಲಿ ಈ ವಿಷಯ ಬಹಿರಂಗಗೊಂಡಂತೆ ಆರ್‌.ಅಶೋಕ್‌ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಅಲ್ಲದೇ ಅಪಘಾತದಲ್ಲಿ ಒಳಗೊಂಡ ಕಾರು ಆ‌ರ್‌ ಅಶೋಕ್‌ ಒಡೆತನದ ನ್ಯಾಷನಲ್ ಪಬ್ಲಿಕ್ ಶಾಲೆಗೆ ಸೇರಿದ್ದು ಎಂಬುದು ಸ್ಪಷ್ಟವಾಗಿದೆ.

ಈ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿರುವ ಕಂದಾಯ ಸಚಿವ ಆರ್‌. ಅಶೋಕ್‌ “ಅಂದು ಅಪಘಾತವಾದ ಕಾರಿನಲ್ಲಿ ನನ್ನ ಮಗ ಶರತ್‌ ಇದ್ದಿದ್ದು ನಿಜ. ಆದರೆ ಆತ ಕಾರು ಚಾಲನೆ ಮಾಡುತ್ತಿರಲ್ಲಿಲ್ಲ ಬದಲಿಗೆ ರಾಹುಲ್‌ ಎಂಬಾತ ಕಾರು ಚಾಲನೆ ಮಾಡುತ್ತಿದ್ದ” ಎಂದು ಅವರು ಹೇಳಿದ್ದಾರೆ.

ಪೊಲೀಸರ ಪಕ್ಷಪಾತ

ಈ ಘಟನೆಯಲ್ಲಿ ಪೊಲೀಸರ ಪಕ್ಷಪಾತ ಮತ್ತು ಕರ್ತವ್ಯ ಲೋಪ ಎದ್ದುಕಾಣುತ್ತಿದೆ. ಮೊದಲಿಗೆ ಆರ್‌ ಅಶೋಕ್‌ ಪುತ್ರ ಕಾರಿನಲ್ಲಿದ್ದರೂ ಸಹ ಅತನ ಹೆಸರನ್ನು ಕೈಬಿಟ್ಟಿದ್ದು ಹೇಗೆ? ಅಪಘಾತವಾದಾಗ ಬೆಂಜ್‌ ಕಾರು ಬದಲಿಗೆ ಆಡಿ ಕಾರು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಿದ್ದು ದೊಡ್ಡ ಪ್ರಮಾದವಾಗಿದೆ. ಅಲ್ಲದೇ ಕುಡಿದು ಚಾಲನೆ ಮಾಡಿದರು ಎಂಬ ಅಂಶವನ್ನು ಸಹ ಎಫ್‌ಐಆರ್‌ನಲ್ಲಿ ಸೇರಿಸಿಲ್ಲ.

ಒಟ್ಟಿನಲ್ಲಿ ಪ್ರಭಾವಿ ಸಚಿವನ ಮಗನನ್ನು ಕಾಪಾಡಲು ಪೊಲೀಸರು ತಪ್ಪುಗಳ ಮೇಲೆ ತಪ್ಪುಗಳನ್ನು ಎಸಗಿರುವುದು ಮೇಲ್ನೋಟಕ್ಕೆ ಕಾಣುತ್ತಿದೆ.

ಇನ್ನು ಸಚಿವ ಆರ್‌ ಅಶೋಕ್‌ ಸಹ ಇದುವರೆಗೂ ಸಾವಿಗೀಡಾದ ರವಿನಾಯ್ಕ್‌ರವರ ನೊಂದ ಕುಟುಂಬವನ್ನು ಮಾತಾಡಿಸಿಲ್ಲ. ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಕೇಸನ್ನು ಮುಚ್ಚಿಹಾಕಲು ಮತ್ತು ತಮ್ಮ ಮಗನನ್ನು ರಕ್ಷಿಸಲು ಮುಂದಾಗಿರುವುದು ಖಂಡನೀಯವಾಗಿದೆ.

ಕಾಂಗ್ರೆಸ್‌ ಶಾಸಕ ಹ್ಯಾರಿಸ್‌ ಮಗ ನಲಪಾಡ್‌‌ನ ಹಿಟ್‌ ಅಂಡ್‌ ರನ್‌ ಕೇಸ್‌ನಲ್ಲಿ ವಿಚಾರದಲ್ಲಿ ದಕ್ಷತೆಯಿಂದ ನಡೆದುಕೊಂಡ ಪೊಲೀಸರು ಆರ್‌ ಅಶೋಕ್‌ ಮಗನ ವಿಚಾರದಲ್ಲಿ ಅನ್ಯಾಯ ಮಾಡಿದ್ದು ಏಕೆ? ಇದು ಕೂಡ ಹಿಟ್‌ ಅಂಡ್‌ ರನ್‌ ಕೇಸ್‌ ಅಲ್ಲವೇ? ಪೊಲೀಸರ ಮೇಲೆ ಒತ್ತಡ ಹಾಕಿದವರು ಯಾರು? ಈ ರೀತಿ ನ್ಯಾಯದ ವಿಷಯದಲ್ಲಿ ಪೊಲೀಸರೇ ತಾರತಮ್ಯ ಮಾಡಿದರೆ ಹೇಗೆ ಎಂಬ ಪ್ರಶ್ನೆಗಳು ಉದ್ಭವಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...