Homeಮುಖಪುಟಹೊಸಪೇಟೆ ಅಪಘಾತ ಪ್ರಕರಣ: ನನ್ನ ಮಗ ಕಾರಿನಲ್ಲಿದ್ದು ನಿಜ, ಆದರೆ ಕಾರು ಚಲಾಯಿಸುತ್ತಿರಲ್ಲಿಲ್ಲ - ಸಚಿವ...

ಹೊಸಪೇಟೆ ಅಪಘಾತ ಪ್ರಕರಣ: ನನ್ನ ಮಗ ಕಾರಿನಲ್ಲಿದ್ದು ನಿಜ, ಆದರೆ ಕಾರು ಚಲಾಯಿಸುತ್ತಿರಲ್ಲಿಲ್ಲ – ಸಚಿವ ಆರ್‌ ಅಶೋಕ್‌

ಮೊದಲಿಗೆ ಆರ್‌ ಅಶೋಕ್‌ ಪುತ್ರ ಕಾರಿನಲ್ಲಿದ್ದರೂ ಸಹ ಅತನ ಹೆಸರನ್ನು ಎಫ್‌ಐಆರ್‌ನಲ್ಲಿ ಕೈಬಿಟ್ಟಿದ್ದು ಏಕೆ? ಅಪಘಾತವಾದಾಗ ಬೆಂಜ್‌ ಕಾರು ಬದಲಿಗೆ ಆಡಿ ಕಾರು ಎಂದು ಉಲ್ಲೇಖಿಸಿದ್ದು ಏಕೆ?? ಅಲ್ಲದೇ ಕುಡಿದು ಚಾಲನೆ ಮಾಡಿದರು ಎಂಬ ಅಂಶವನ್ನು ಮರೆಮಾಚಿದ್ದು ಏಕೆ???

- Advertisement -
- Advertisement -

ಹೊಸಪೇಟೆಯ ಬಳಿಯ ಮರಿಯಮ್ಮನಹಳ್ಳಿಯಲ್ಲಿ ಫೆ.10 ರಂದು ಸಂಭವಿಸಿದ ಅಪಘಾತ ಪ್ರಕರಣದಲ್ಲಿ ಸಚಿವ ಆರ್‌ ಅಶೋಕ್‌ ಪುತ್ರನ ಪಾತ್ರವಿದೆಯೆಂಬ ಸುದ್ದಿ ಹರಿದಾಡಿದ್ದು ಹೊಸ ವಿವಾದಕ್ಕೆ ಕಾರಣವಾಗಿದೆ.

ಈ ಮೊದಲು ಬೆಂಗಳೂರಿನಿಂದ ಹಂಪಿಗೆ ಪ್ರವಾಸಕ್ಕೆಂದು ತೆರಳಿದ್ದ ಸಚಿನ್‌, ರಾಹುಲ್‌ ಸೇರಿದಂತೆ ಐವರು ಗೆಳೆಯರು ಕುಡಿದ ಮತ್ತಿನಲ್ಲಿ ಅತೀವೇಗದಲ್ಲಿ ಕಾರು ಚಲಾಯಿಸಿದ ಕಾರಣಕ್ಕೆ ರಸ್ತೆ ಬದಿ ನಿಂತಿದ್ದ ರವಿನಾಯ್ಕ್‌ ಎಂಬುವವರಿಗೆ ಗುದ್ದಿ, ಕಾರು ಮಗುಚಿಕೊಂಡಿತ್ತು. ಸ್ಥಳದಲ್ಲಿಯೇ ರವಿನಾಯ್ಕ್‌ ಸೇರಿದಂತೆ ಕಾರಿನಲ್ಲಿದ್ದ ಸಚಿನ್‌ ಎಂಬುವವರು ಮೃತಪಟ್ಟಿದ್ದರು.

ಆದರೆ ಘಟನೆ ನಡೆದು ಮೂರು ದಿನಗಳು ಕಳೆದರೂ ಇದರಲ್ಲಿ ಸಚಿವ ಆರ್‌ ಅಶೋಕ್‌ ಮತ್ತು ಆತನ ಪುತ್ರನ ಹೆಸರು ಬಹಿರಂಗಗೊಳ್ಳದಂತೆ ಪೊಲೀಸರು ಕೆಲಸ ಮಾಡಿದ್ದಾರೆ. ಬೆಂಜ್‌ ಕಾರು ಅಪಘಾತದಲ್ಲಿದ್ದರೆ ಪೊಲೀಸರು ಆಡಿ ಕಾರು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಿ ಕೇಸನ್ನು ತಿರುಚಲು ಮುಂದಾಗಿದ್ದಾರೆ.

ಈಗ ಬಂದ ಸುದ್ದಿಯ ಪ್ರಕಾರ ಆರ್‌ ಅಶೋಕ್‌ರವರ ಮಗ ಶರತ್‌ ಕಾರು ಓಡಿಸುತ್ತಿದ್ದು ಆತನೇ ಅಪಘಾತಕ್ಕೆ ಕಾರಣವೆಂದು ಹೇಳಲಾಗುತ್ತಿದೆ. ಅಪಘಾತವಾದ ಕೂಡಲೇ ಆತನನ್ನು ಬೇರೊಂದು ಕಾರಿನಲ್ಲಿ ಬೆಂಗಳೂರಿಗೆ ಕಳುಹಿಸಿಕೊಟ್ಟಿದ್ದು ಎಲ್ಲಿಯೂ ಆತನ ಹೆಸರು ಬಹಿರಂಗವಾಗದಂತೆ ಮೋಸ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

ಇಂದು ಬೆಳಿಗ್ಗೆಯಿಂದಲೇ ದಿನಪತ್ರಿಕೆಗಳಲ್ಲಿ ಈ ವಿಷಯ ಬಹಿರಂಗಗೊಂಡಂತೆ ಆರ್‌.ಅಶೋಕ್‌ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಅಲ್ಲದೇ ಅಪಘಾತದಲ್ಲಿ ಒಳಗೊಂಡ ಕಾರು ಆ‌ರ್‌ ಅಶೋಕ್‌ ಒಡೆತನದ ನ್ಯಾಷನಲ್ ಪಬ್ಲಿಕ್ ಶಾಲೆಗೆ ಸೇರಿದ್ದು ಎಂಬುದು ಸ್ಪಷ್ಟವಾಗಿದೆ.

ಈ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿರುವ ಕಂದಾಯ ಸಚಿವ ಆರ್‌. ಅಶೋಕ್‌ “ಅಂದು ಅಪಘಾತವಾದ ಕಾರಿನಲ್ಲಿ ನನ್ನ ಮಗ ಶರತ್‌ ಇದ್ದಿದ್ದು ನಿಜ. ಆದರೆ ಆತ ಕಾರು ಚಾಲನೆ ಮಾಡುತ್ತಿರಲ್ಲಿಲ್ಲ ಬದಲಿಗೆ ರಾಹುಲ್‌ ಎಂಬಾತ ಕಾರು ಚಾಲನೆ ಮಾಡುತ್ತಿದ್ದ” ಎಂದು ಅವರು ಹೇಳಿದ್ದಾರೆ.

ಪೊಲೀಸರ ಪಕ್ಷಪಾತ

ಈ ಘಟನೆಯಲ್ಲಿ ಪೊಲೀಸರ ಪಕ್ಷಪಾತ ಮತ್ತು ಕರ್ತವ್ಯ ಲೋಪ ಎದ್ದುಕಾಣುತ್ತಿದೆ. ಮೊದಲಿಗೆ ಆರ್‌ ಅಶೋಕ್‌ ಪುತ್ರ ಕಾರಿನಲ್ಲಿದ್ದರೂ ಸಹ ಅತನ ಹೆಸರನ್ನು ಕೈಬಿಟ್ಟಿದ್ದು ಹೇಗೆ? ಅಪಘಾತವಾದಾಗ ಬೆಂಜ್‌ ಕಾರು ಬದಲಿಗೆ ಆಡಿ ಕಾರು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಿದ್ದು ದೊಡ್ಡ ಪ್ರಮಾದವಾಗಿದೆ. ಅಲ್ಲದೇ ಕುಡಿದು ಚಾಲನೆ ಮಾಡಿದರು ಎಂಬ ಅಂಶವನ್ನು ಸಹ ಎಫ್‌ಐಆರ್‌ನಲ್ಲಿ ಸೇರಿಸಿಲ್ಲ.

ಒಟ್ಟಿನಲ್ಲಿ ಪ್ರಭಾವಿ ಸಚಿವನ ಮಗನನ್ನು ಕಾಪಾಡಲು ಪೊಲೀಸರು ತಪ್ಪುಗಳ ಮೇಲೆ ತಪ್ಪುಗಳನ್ನು ಎಸಗಿರುವುದು ಮೇಲ್ನೋಟಕ್ಕೆ ಕಾಣುತ್ತಿದೆ.

ಇನ್ನು ಸಚಿವ ಆರ್‌ ಅಶೋಕ್‌ ಸಹ ಇದುವರೆಗೂ ಸಾವಿಗೀಡಾದ ರವಿನಾಯ್ಕ್‌ರವರ ನೊಂದ ಕುಟುಂಬವನ್ನು ಮಾತಾಡಿಸಿಲ್ಲ. ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಕೇಸನ್ನು ಮುಚ್ಚಿಹಾಕಲು ಮತ್ತು ತಮ್ಮ ಮಗನನ್ನು ರಕ್ಷಿಸಲು ಮುಂದಾಗಿರುವುದು ಖಂಡನೀಯವಾಗಿದೆ.

ಕಾಂಗ್ರೆಸ್‌ ಶಾಸಕ ಹ್ಯಾರಿಸ್‌ ಮಗ ನಲಪಾಡ್‌‌ನ ಹಿಟ್‌ ಅಂಡ್‌ ರನ್‌ ಕೇಸ್‌ನಲ್ಲಿ ವಿಚಾರದಲ್ಲಿ ದಕ್ಷತೆಯಿಂದ ನಡೆದುಕೊಂಡ ಪೊಲೀಸರು ಆರ್‌ ಅಶೋಕ್‌ ಮಗನ ವಿಚಾರದಲ್ಲಿ ಅನ್ಯಾಯ ಮಾಡಿದ್ದು ಏಕೆ? ಇದು ಕೂಡ ಹಿಟ್‌ ಅಂಡ್‌ ರನ್‌ ಕೇಸ್‌ ಅಲ್ಲವೇ? ಪೊಲೀಸರ ಮೇಲೆ ಒತ್ತಡ ಹಾಕಿದವರು ಯಾರು? ಈ ರೀತಿ ನ್ಯಾಯದ ವಿಷಯದಲ್ಲಿ ಪೊಲೀಸರೇ ತಾರತಮ್ಯ ಮಾಡಿದರೆ ಹೇಗೆ ಎಂಬ ಪ್ರಶ್ನೆಗಳು ಉದ್ಭವಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...