Homeಮುಖಪುಟಹೊಸಪೇಟೆ ಅಪಘಾತ ಪ್ರಕರಣ: ನನ್ನ ಮಗ ಕಾರಿನಲ್ಲಿದ್ದು ನಿಜ, ಆದರೆ ಕಾರು ಚಲಾಯಿಸುತ್ತಿರಲ್ಲಿಲ್ಲ - ಸಚಿವ...

ಹೊಸಪೇಟೆ ಅಪಘಾತ ಪ್ರಕರಣ: ನನ್ನ ಮಗ ಕಾರಿನಲ್ಲಿದ್ದು ನಿಜ, ಆದರೆ ಕಾರು ಚಲಾಯಿಸುತ್ತಿರಲ್ಲಿಲ್ಲ – ಸಚಿವ ಆರ್‌ ಅಶೋಕ್‌

ಮೊದಲಿಗೆ ಆರ್‌ ಅಶೋಕ್‌ ಪುತ್ರ ಕಾರಿನಲ್ಲಿದ್ದರೂ ಸಹ ಅತನ ಹೆಸರನ್ನು ಎಫ್‌ಐಆರ್‌ನಲ್ಲಿ ಕೈಬಿಟ್ಟಿದ್ದು ಏಕೆ? ಅಪಘಾತವಾದಾಗ ಬೆಂಜ್‌ ಕಾರು ಬದಲಿಗೆ ಆಡಿ ಕಾರು ಎಂದು ಉಲ್ಲೇಖಿಸಿದ್ದು ಏಕೆ?? ಅಲ್ಲದೇ ಕುಡಿದು ಚಾಲನೆ ಮಾಡಿದರು ಎಂಬ ಅಂಶವನ್ನು ಮರೆಮಾಚಿದ್ದು ಏಕೆ???

- Advertisement -
- Advertisement -

ಹೊಸಪೇಟೆಯ ಬಳಿಯ ಮರಿಯಮ್ಮನಹಳ್ಳಿಯಲ್ಲಿ ಫೆ.10 ರಂದು ಸಂಭವಿಸಿದ ಅಪಘಾತ ಪ್ರಕರಣದಲ್ಲಿ ಸಚಿವ ಆರ್‌ ಅಶೋಕ್‌ ಪುತ್ರನ ಪಾತ್ರವಿದೆಯೆಂಬ ಸುದ್ದಿ ಹರಿದಾಡಿದ್ದು ಹೊಸ ವಿವಾದಕ್ಕೆ ಕಾರಣವಾಗಿದೆ.

ಈ ಮೊದಲು ಬೆಂಗಳೂರಿನಿಂದ ಹಂಪಿಗೆ ಪ್ರವಾಸಕ್ಕೆಂದು ತೆರಳಿದ್ದ ಸಚಿನ್‌, ರಾಹುಲ್‌ ಸೇರಿದಂತೆ ಐವರು ಗೆಳೆಯರು ಕುಡಿದ ಮತ್ತಿನಲ್ಲಿ ಅತೀವೇಗದಲ್ಲಿ ಕಾರು ಚಲಾಯಿಸಿದ ಕಾರಣಕ್ಕೆ ರಸ್ತೆ ಬದಿ ನಿಂತಿದ್ದ ರವಿನಾಯ್ಕ್‌ ಎಂಬುವವರಿಗೆ ಗುದ್ದಿ, ಕಾರು ಮಗುಚಿಕೊಂಡಿತ್ತು. ಸ್ಥಳದಲ್ಲಿಯೇ ರವಿನಾಯ್ಕ್‌ ಸೇರಿದಂತೆ ಕಾರಿನಲ್ಲಿದ್ದ ಸಚಿನ್‌ ಎಂಬುವವರು ಮೃತಪಟ್ಟಿದ್ದರು.

ಆದರೆ ಘಟನೆ ನಡೆದು ಮೂರು ದಿನಗಳು ಕಳೆದರೂ ಇದರಲ್ಲಿ ಸಚಿವ ಆರ್‌ ಅಶೋಕ್‌ ಮತ್ತು ಆತನ ಪುತ್ರನ ಹೆಸರು ಬಹಿರಂಗಗೊಳ್ಳದಂತೆ ಪೊಲೀಸರು ಕೆಲಸ ಮಾಡಿದ್ದಾರೆ. ಬೆಂಜ್‌ ಕಾರು ಅಪಘಾತದಲ್ಲಿದ್ದರೆ ಪೊಲೀಸರು ಆಡಿ ಕಾರು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಿ ಕೇಸನ್ನು ತಿರುಚಲು ಮುಂದಾಗಿದ್ದಾರೆ.

ಈಗ ಬಂದ ಸುದ್ದಿಯ ಪ್ರಕಾರ ಆರ್‌ ಅಶೋಕ್‌ರವರ ಮಗ ಶರತ್‌ ಕಾರು ಓಡಿಸುತ್ತಿದ್ದು ಆತನೇ ಅಪಘಾತಕ್ಕೆ ಕಾರಣವೆಂದು ಹೇಳಲಾಗುತ್ತಿದೆ. ಅಪಘಾತವಾದ ಕೂಡಲೇ ಆತನನ್ನು ಬೇರೊಂದು ಕಾರಿನಲ್ಲಿ ಬೆಂಗಳೂರಿಗೆ ಕಳುಹಿಸಿಕೊಟ್ಟಿದ್ದು ಎಲ್ಲಿಯೂ ಆತನ ಹೆಸರು ಬಹಿರಂಗವಾಗದಂತೆ ಮೋಸ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

ಇಂದು ಬೆಳಿಗ್ಗೆಯಿಂದಲೇ ದಿನಪತ್ರಿಕೆಗಳಲ್ಲಿ ಈ ವಿಷಯ ಬಹಿರಂಗಗೊಂಡಂತೆ ಆರ್‌.ಅಶೋಕ್‌ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಅಲ್ಲದೇ ಅಪಘಾತದಲ್ಲಿ ಒಳಗೊಂಡ ಕಾರು ಆ‌ರ್‌ ಅಶೋಕ್‌ ಒಡೆತನದ ನ್ಯಾಷನಲ್ ಪಬ್ಲಿಕ್ ಶಾಲೆಗೆ ಸೇರಿದ್ದು ಎಂಬುದು ಸ್ಪಷ್ಟವಾಗಿದೆ.

ಈ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿರುವ ಕಂದಾಯ ಸಚಿವ ಆರ್‌. ಅಶೋಕ್‌ “ಅಂದು ಅಪಘಾತವಾದ ಕಾರಿನಲ್ಲಿ ನನ್ನ ಮಗ ಶರತ್‌ ಇದ್ದಿದ್ದು ನಿಜ. ಆದರೆ ಆತ ಕಾರು ಚಾಲನೆ ಮಾಡುತ್ತಿರಲ್ಲಿಲ್ಲ ಬದಲಿಗೆ ರಾಹುಲ್‌ ಎಂಬಾತ ಕಾರು ಚಾಲನೆ ಮಾಡುತ್ತಿದ್ದ” ಎಂದು ಅವರು ಹೇಳಿದ್ದಾರೆ.

ಪೊಲೀಸರ ಪಕ್ಷಪಾತ

ಈ ಘಟನೆಯಲ್ಲಿ ಪೊಲೀಸರ ಪಕ್ಷಪಾತ ಮತ್ತು ಕರ್ತವ್ಯ ಲೋಪ ಎದ್ದುಕಾಣುತ್ತಿದೆ. ಮೊದಲಿಗೆ ಆರ್‌ ಅಶೋಕ್‌ ಪುತ್ರ ಕಾರಿನಲ್ಲಿದ್ದರೂ ಸಹ ಅತನ ಹೆಸರನ್ನು ಕೈಬಿಟ್ಟಿದ್ದು ಹೇಗೆ? ಅಪಘಾತವಾದಾಗ ಬೆಂಜ್‌ ಕಾರು ಬದಲಿಗೆ ಆಡಿ ಕಾರು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಿದ್ದು ದೊಡ್ಡ ಪ್ರಮಾದವಾಗಿದೆ. ಅಲ್ಲದೇ ಕುಡಿದು ಚಾಲನೆ ಮಾಡಿದರು ಎಂಬ ಅಂಶವನ್ನು ಸಹ ಎಫ್‌ಐಆರ್‌ನಲ್ಲಿ ಸೇರಿಸಿಲ್ಲ.

ಒಟ್ಟಿನಲ್ಲಿ ಪ್ರಭಾವಿ ಸಚಿವನ ಮಗನನ್ನು ಕಾಪಾಡಲು ಪೊಲೀಸರು ತಪ್ಪುಗಳ ಮೇಲೆ ತಪ್ಪುಗಳನ್ನು ಎಸಗಿರುವುದು ಮೇಲ್ನೋಟಕ್ಕೆ ಕಾಣುತ್ತಿದೆ.

ಇನ್ನು ಸಚಿವ ಆರ್‌ ಅಶೋಕ್‌ ಸಹ ಇದುವರೆಗೂ ಸಾವಿಗೀಡಾದ ರವಿನಾಯ್ಕ್‌ರವರ ನೊಂದ ಕುಟುಂಬವನ್ನು ಮಾತಾಡಿಸಿಲ್ಲ. ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಕೇಸನ್ನು ಮುಚ್ಚಿಹಾಕಲು ಮತ್ತು ತಮ್ಮ ಮಗನನ್ನು ರಕ್ಷಿಸಲು ಮುಂದಾಗಿರುವುದು ಖಂಡನೀಯವಾಗಿದೆ.

ಕಾಂಗ್ರೆಸ್‌ ಶಾಸಕ ಹ್ಯಾರಿಸ್‌ ಮಗ ನಲಪಾಡ್‌‌ನ ಹಿಟ್‌ ಅಂಡ್‌ ರನ್‌ ಕೇಸ್‌ನಲ್ಲಿ ವಿಚಾರದಲ್ಲಿ ದಕ್ಷತೆಯಿಂದ ನಡೆದುಕೊಂಡ ಪೊಲೀಸರು ಆರ್‌ ಅಶೋಕ್‌ ಮಗನ ವಿಚಾರದಲ್ಲಿ ಅನ್ಯಾಯ ಮಾಡಿದ್ದು ಏಕೆ? ಇದು ಕೂಡ ಹಿಟ್‌ ಅಂಡ್‌ ರನ್‌ ಕೇಸ್‌ ಅಲ್ಲವೇ? ಪೊಲೀಸರ ಮೇಲೆ ಒತ್ತಡ ಹಾಕಿದವರು ಯಾರು? ಈ ರೀತಿ ನ್ಯಾಯದ ವಿಷಯದಲ್ಲಿ ಪೊಲೀಸರೇ ತಾರತಮ್ಯ ಮಾಡಿದರೆ ಹೇಗೆ ಎಂಬ ಪ್ರಶ್ನೆಗಳು ಉದ್ಭವಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...