Homeಮುಖಪುಟಹೊಸಪೇಟೆ ಅಪಘಾತ ಪ್ರಕರಣ: ನನ್ನ ಮಗ ಕಾರಿನಲ್ಲಿದ್ದು ನಿಜ, ಆದರೆ ಕಾರು ಚಲಾಯಿಸುತ್ತಿರಲ್ಲಿಲ್ಲ - ಸಚಿವ...

ಹೊಸಪೇಟೆ ಅಪಘಾತ ಪ್ರಕರಣ: ನನ್ನ ಮಗ ಕಾರಿನಲ್ಲಿದ್ದು ನಿಜ, ಆದರೆ ಕಾರು ಚಲಾಯಿಸುತ್ತಿರಲ್ಲಿಲ್ಲ – ಸಚಿವ ಆರ್‌ ಅಶೋಕ್‌

ಮೊದಲಿಗೆ ಆರ್‌ ಅಶೋಕ್‌ ಪುತ್ರ ಕಾರಿನಲ್ಲಿದ್ದರೂ ಸಹ ಅತನ ಹೆಸರನ್ನು ಎಫ್‌ಐಆರ್‌ನಲ್ಲಿ ಕೈಬಿಟ್ಟಿದ್ದು ಏಕೆ? ಅಪಘಾತವಾದಾಗ ಬೆಂಜ್‌ ಕಾರು ಬದಲಿಗೆ ಆಡಿ ಕಾರು ಎಂದು ಉಲ್ಲೇಖಿಸಿದ್ದು ಏಕೆ?? ಅಲ್ಲದೇ ಕುಡಿದು ಚಾಲನೆ ಮಾಡಿದರು ಎಂಬ ಅಂಶವನ್ನು ಮರೆಮಾಚಿದ್ದು ಏಕೆ???

- Advertisement -
- Advertisement -

ಹೊಸಪೇಟೆಯ ಬಳಿಯ ಮರಿಯಮ್ಮನಹಳ್ಳಿಯಲ್ಲಿ ಫೆ.10 ರಂದು ಸಂಭವಿಸಿದ ಅಪಘಾತ ಪ್ರಕರಣದಲ್ಲಿ ಸಚಿವ ಆರ್‌ ಅಶೋಕ್‌ ಪುತ್ರನ ಪಾತ್ರವಿದೆಯೆಂಬ ಸುದ್ದಿ ಹರಿದಾಡಿದ್ದು ಹೊಸ ವಿವಾದಕ್ಕೆ ಕಾರಣವಾಗಿದೆ.

ಈ ಮೊದಲು ಬೆಂಗಳೂರಿನಿಂದ ಹಂಪಿಗೆ ಪ್ರವಾಸಕ್ಕೆಂದು ತೆರಳಿದ್ದ ಸಚಿನ್‌, ರಾಹುಲ್‌ ಸೇರಿದಂತೆ ಐವರು ಗೆಳೆಯರು ಕುಡಿದ ಮತ್ತಿನಲ್ಲಿ ಅತೀವೇಗದಲ್ಲಿ ಕಾರು ಚಲಾಯಿಸಿದ ಕಾರಣಕ್ಕೆ ರಸ್ತೆ ಬದಿ ನಿಂತಿದ್ದ ರವಿನಾಯ್ಕ್‌ ಎಂಬುವವರಿಗೆ ಗುದ್ದಿ, ಕಾರು ಮಗುಚಿಕೊಂಡಿತ್ತು. ಸ್ಥಳದಲ್ಲಿಯೇ ರವಿನಾಯ್ಕ್‌ ಸೇರಿದಂತೆ ಕಾರಿನಲ್ಲಿದ್ದ ಸಚಿನ್‌ ಎಂಬುವವರು ಮೃತಪಟ್ಟಿದ್ದರು.

ಆದರೆ ಘಟನೆ ನಡೆದು ಮೂರು ದಿನಗಳು ಕಳೆದರೂ ಇದರಲ್ಲಿ ಸಚಿವ ಆರ್‌ ಅಶೋಕ್‌ ಮತ್ತು ಆತನ ಪುತ್ರನ ಹೆಸರು ಬಹಿರಂಗಗೊಳ್ಳದಂತೆ ಪೊಲೀಸರು ಕೆಲಸ ಮಾಡಿದ್ದಾರೆ. ಬೆಂಜ್‌ ಕಾರು ಅಪಘಾತದಲ್ಲಿದ್ದರೆ ಪೊಲೀಸರು ಆಡಿ ಕಾರು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಿ ಕೇಸನ್ನು ತಿರುಚಲು ಮುಂದಾಗಿದ್ದಾರೆ.

ಈಗ ಬಂದ ಸುದ್ದಿಯ ಪ್ರಕಾರ ಆರ್‌ ಅಶೋಕ್‌ರವರ ಮಗ ಶರತ್‌ ಕಾರು ಓಡಿಸುತ್ತಿದ್ದು ಆತನೇ ಅಪಘಾತಕ್ಕೆ ಕಾರಣವೆಂದು ಹೇಳಲಾಗುತ್ತಿದೆ. ಅಪಘಾತವಾದ ಕೂಡಲೇ ಆತನನ್ನು ಬೇರೊಂದು ಕಾರಿನಲ್ಲಿ ಬೆಂಗಳೂರಿಗೆ ಕಳುಹಿಸಿಕೊಟ್ಟಿದ್ದು ಎಲ್ಲಿಯೂ ಆತನ ಹೆಸರು ಬಹಿರಂಗವಾಗದಂತೆ ಮೋಸ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

ಇಂದು ಬೆಳಿಗ್ಗೆಯಿಂದಲೇ ದಿನಪತ್ರಿಕೆಗಳಲ್ಲಿ ಈ ವಿಷಯ ಬಹಿರಂಗಗೊಂಡಂತೆ ಆರ್‌.ಅಶೋಕ್‌ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಅಲ್ಲದೇ ಅಪಘಾತದಲ್ಲಿ ಒಳಗೊಂಡ ಕಾರು ಆ‌ರ್‌ ಅಶೋಕ್‌ ಒಡೆತನದ ನ್ಯಾಷನಲ್ ಪಬ್ಲಿಕ್ ಶಾಲೆಗೆ ಸೇರಿದ್ದು ಎಂಬುದು ಸ್ಪಷ್ಟವಾಗಿದೆ.

ಈ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿರುವ ಕಂದಾಯ ಸಚಿವ ಆರ್‌. ಅಶೋಕ್‌ “ಅಂದು ಅಪಘಾತವಾದ ಕಾರಿನಲ್ಲಿ ನನ್ನ ಮಗ ಶರತ್‌ ಇದ್ದಿದ್ದು ನಿಜ. ಆದರೆ ಆತ ಕಾರು ಚಾಲನೆ ಮಾಡುತ್ತಿರಲ್ಲಿಲ್ಲ ಬದಲಿಗೆ ರಾಹುಲ್‌ ಎಂಬಾತ ಕಾರು ಚಾಲನೆ ಮಾಡುತ್ತಿದ್ದ” ಎಂದು ಅವರು ಹೇಳಿದ್ದಾರೆ.

ಪೊಲೀಸರ ಪಕ್ಷಪಾತ

ಈ ಘಟನೆಯಲ್ಲಿ ಪೊಲೀಸರ ಪಕ್ಷಪಾತ ಮತ್ತು ಕರ್ತವ್ಯ ಲೋಪ ಎದ್ದುಕಾಣುತ್ತಿದೆ. ಮೊದಲಿಗೆ ಆರ್‌ ಅಶೋಕ್‌ ಪುತ್ರ ಕಾರಿನಲ್ಲಿದ್ದರೂ ಸಹ ಅತನ ಹೆಸರನ್ನು ಕೈಬಿಟ್ಟಿದ್ದು ಹೇಗೆ? ಅಪಘಾತವಾದಾಗ ಬೆಂಜ್‌ ಕಾರು ಬದಲಿಗೆ ಆಡಿ ಕಾರು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಿದ್ದು ದೊಡ್ಡ ಪ್ರಮಾದವಾಗಿದೆ. ಅಲ್ಲದೇ ಕುಡಿದು ಚಾಲನೆ ಮಾಡಿದರು ಎಂಬ ಅಂಶವನ್ನು ಸಹ ಎಫ್‌ಐಆರ್‌ನಲ್ಲಿ ಸೇರಿಸಿಲ್ಲ.

ಒಟ್ಟಿನಲ್ಲಿ ಪ್ರಭಾವಿ ಸಚಿವನ ಮಗನನ್ನು ಕಾಪಾಡಲು ಪೊಲೀಸರು ತಪ್ಪುಗಳ ಮೇಲೆ ತಪ್ಪುಗಳನ್ನು ಎಸಗಿರುವುದು ಮೇಲ್ನೋಟಕ್ಕೆ ಕಾಣುತ್ತಿದೆ.

ಇನ್ನು ಸಚಿವ ಆರ್‌ ಅಶೋಕ್‌ ಸಹ ಇದುವರೆಗೂ ಸಾವಿಗೀಡಾದ ರವಿನಾಯ್ಕ್‌ರವರ ನೊಂದ ಕುಟುಂಬವನ್ನು ಮಾತಾಡಿಸಿಲ್ಲ. ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಕೇಸನ್ನು ಮುಚ್ಚಿಹಾಕಲು ಮತ್ತು ತಮ್ಮ ಮಗನನ್ನು ರಕ್ಷಿಸಲು ಮುಂದಾಗಿರುವುದು ಖಂಡನೀಯವಾಗಿದೆ.

ಕಾಂಗ್ರೆಸ್‌ ಶಾಸಕ ಹ್ಯಾರಿಸ್‌ ಮಗ ನಲಪಾಡ್‌‌ನ ಹಿಟ್‌ ಅಂಡ್‌ ರನ್‌ ಕೇಸ್‌ನಲ್ಲಿ ವಿಚಾರದಲ್ಲಿ ದಕ್ಷತೆಯಿಂದ ನಡೆದುಕೊಂಡ ಪೊಲೀಸರು ಆರ್‌ ಅಶೋಕ್‌ ಮಗನ ವಿಚಾರದಲ್ಲಿ ಅನ್ಯಾಯ ಮಾಡಿದ್ದು ಏಕೆ? ಇದು ಕೂಡ ಹಿಟ್‌ ಅಂಡ್‌ ರನ್‌ ಕೇಸ್‌ ಅಲ್ಲವೇ? ಪೊಲೀಸರ ಮೇಲೆ ಒತ್ತಡ ಹಾಕಿದವರು ಯಾರು? ಈ ರೀತಿ ನ್ಯಾಯದ ವಿಷಯದಲ್ಲಿ ಪೊಲೀಸರೇ ತಾರತಮ್ಯ ಮಾಡಿದರೆ ಹೇಗೆ ಎಂಬ ಪ್ರಶ್ನೆಗಳು ಉದ್ಭವಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....