Homeಮುಖಪುಟಹೊಸಪೇಟೆ ಅಪಘಾತ ಪ್ರಕರಣ: ನನ್ನ ಮಗ ಕಾರಿನಲ್ಲಿದ್ದು ನಿಜ, ಆದರೆ ಕಾರು ಚಲಾಯಿಸುತ್ತಿರಲ್ಲಿಲ್ಲ - ಸಚಿವ...

ಹೊಸಪೇಟೆ ಅಪಘಾತ ಪ್ರಕರಣ: ನನ್ನ ಮಗ ಕಾರಿನಲ್ಲಿದ್ದು ನಿಜ, ಆದರೆ ಕಾರು ಚಲಾಯಿಸುತ್ತಿರಲ್ಲಿಲ್ಲ – ಸಚಿವ ಆರ್‌ ಅಶೋಕ್‌

ಮೊದಲಿಗೆ ಆರ್‌ ಅಶೋಕ್‌ ಪುತ್ರ ಕಾರಿನಲ್ಲಿದ್ದರೂ ಸಹ ಅತನ ಹೆಸರನ್ನು ಎಫ್‌ಐಆರ್‌ನಲ್ಲಿ ಕೈಬಿಟ್ಟಿದ್ದು ಏಕೆ? ಅಪಘಾತವಾದಾಗ ಬೆಂಜ್‌ ಕಾರು ಬದಲಿಗೆ ಆಡಿ ಕಾರು ಎಂದು ಉಲ್ಲೇಖಿಸಿದ್ದು ಏಕೆ?? ಅಲ್ಲದೇ ಕುಡಿದು ಚಾಲನೆ ಮಾಡಿದರು ಎಂಬ ಅಂಶವನ್ನು ಮರೆಮಾಚಿದ್ದು ಏಕೆ???

- Advertisement -
- Advertisement -

ಹೊಸಪೇಟೆಯ ಬಳಿಯ ಮರಿಯಮ್ಮನಹಳ್ಳಿಯಲ್ಲಿ ಫೆ.10 ರಂದು ಸಂಭವಿಸಿದ ಅಪಘಾತ ಪ್ರಕರಣದಲ್ಲಿ ಸಚಿವ ಆರ್‌ ಅಶೋಕ್‌ ಪುತ್ರನ ಪಾತ್ರವಿದೆಯೆಂಬ ಸುದ್ದಿ ಹರಿದಾಡಿದ್ದು ಹೊಸ ವಿವಾದಕ್ಕೆ ಕಾರಣವಾಗಿದೆ.

ಈ ಮೊದಲು ಬೆಂಗಳೂರಿನಿಂದ ಹಂಪಿಗೆ ಪ್ರವಾಸಕ್ಕೆಂದು ತೆರಳಿದ್ದ ಸಚಿನ್‌, ರಾಹುಲ್‌ ಸೇರಿದಂತೆ ಐವರು ಗೆಳೆಯರು ಕುಡಿದ ಮತ್ತಿನಲ್ಲಿ ಅತೀವೇಗದಲ್ಲಿ ಕಾರು ಚಲಾಯಿಸಿದ ಕಾರಣಕ್ಕೆ ರಸ್ತೆ ಬದಿ ನಿಂತಿದ್ದ ರವಿನಾಯ್ಕ್‌ ಎಂಬುವವರಿಗೆ ಗುದ್ದಿ, ಕಾರು ಮಗುಚಿಕೊಂಡಿತ್ತು. ಸ್ಥಳದಲ್ಲಿಯೇ ರವಿನಾಯ್ಕ್‌ ಸೇರಿದಂತೆ ಕಾರಿನಲ್ಲಿದ್ದ ಸಚಿನ್‌ ಎಂಬುವವರು ಮೃತಪಟ್ಟಿದ್ದರು.

ಆದರೆ ಘಟನೆ ನಡೆದು ಮೂರು ದಿನಗಳು ಕಳೆದರೂ ಇದರಲ್ಲಿ ಸಚಿವ ಆರ್‌ ಅಶೋಕ್‌ ಮತ್ತು ಆತನ ಪುತ್ರನ ಹೆಸರು ಬಹಿರಂಗಗೊಳ್ಳದಂತೆ ಪೊಲೀಸರು ಕೆಲಸ ಮಾಡಿದ್ದಾರೆ. ಬೆಂಜ್‌ ಕಾರು ಅಪಘಾತದಲ್ಲಿದ್ದರೆ ಪೊಲೀಸರು ಆಡಿ ಕಾರು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಿ ಕೇಸನ್ನು ತಿರುಚಲು ಮುಂದಾಗಿದ್ದಾರೆ.

ಈಗ ಬಂದ ಸುದ್ದಿಯ ಪ್ರಕಾರ ಆರ್‌ ಅಶೋಕ್‌ರವರ ಮಗ ಶರತ್‌ ಕಾರು ಓಡಿಸುತ್ತಿದ್ದು ಆತನೇ ಅಪಘಾತಕ್ಕೆ ಕಾರಣವೆಂದು ಹೇಳಲಾಗುತ್ತಿದೆ. ಅಪಘಾತವಾದ ಕೂಡಲೇ ಆತನನ್ನು ಬೇರೊಂದು ಕಾರಿನಲ್ಲಿ ಬೆಂಗಳೂರಿಗೆ ಕಳುಹಿಸಿಕೊಟ್ಟಿದ್ದು ಎಲ್ಲಿಯೂ ಆತನ ಹೆಸರು ಬಹಿರಂಗವಾಗದಂತೆ ಮೋಸ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

ಇಂದು ಬೆಳಿಗ್ಗೆಯಿಂದಲೇ ದಿನಪತ್ರಿಕೆಗಳಲ್ಲಿ ಈ ವಿಷಯ ಬಹಿರಂಗಗೊಂಡಂತೆ ಆರ್‌.ಅಶೋಕ್‌ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಅಲ್ಲದೇ ಅಪಘಾತದಲ್ಲಿ ಒಳಗೊಂಡ ಕಾರು ಆ‌ರ್‌ ಅಶೋಕ್‌ ಒಡೆತನದ ನ್ಯಾಷನಲ್ ಪಬ್ಲಿಕ್ ಶಾಲೆಗೆ ಸೇರಿದ್ದು ಎಂಬುದು ಸ್ಪಷ್ಟವಾಗಿದೆ.

ಈ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿರುವ ಕಂದಾಯ ಸಚಿವ ಆರ್‌. ಅಶೋಕ್‌ “ಅಂದು ಅಪಘಾತವಾದ ಕಾರಿನಲ್ಲಿ ನನ್ನ ಮಗ ಶರತ್‌ ಇದ್ದಿದ್ದು ನಿಜ. ಆದರೆ ಆತ ಕಾರು ಚಾಲನೆ ಮಾಡುತ್ತಿರಲ್ಲಿಲ್ಲ ಬದಲಿಗೆ ರಾಹುಲ್‌ ಎಂಬಾತ ಕಾರು ಚಾಲನೆ ಮಾಡುತ್ತಿದ್ದ” ಎಂದು ಅವರು ಹೇಳಿದ್ದಾರೆ.

ಪೊಲೀಸರ ಪಕ್ಷಪಾತ

ಈ ಘಟನೆಯಲ್ಲಿ ಪೊಲೀಸರ ಪಕ್ಷಪಾತ ಮತ್ತು ಕರ್ತವ್ಯ ಲೋಪ ಎದ್ದುಕಾಣುತ್ತಿದೆ. ಮೊದಲಿಗೆ ಆರ್‌ ಅಶೋಕ್‌ ಪುತ್ರ ಕಾರಿನಲ್ಲಿದ್ದರೂ ಸಹ ಅತನ ಹೆಸರನ್ನು ಕೈಬಿಟ್ಟಿದ್ದು ಹೇಗೆ? ಅಪಘಾತವಾದಾಗ ಬೆಂಜ್‌ ಕಾರು ಬದಲಿಗೆ ಆಡಿ ಕಾರು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಿದ್ದು ದೊಡ್ಡ ಪ್ರಮಾದವಾಗಿದೆ. ಅಲ್ಲದೇ ಕುಡಿದು ಚಾಲನೆ ಮಾಡಿದರು ಎಂಬ ಅಂಶವನ್ನು ಸಹ ಎಫ್‌ಐಆರ್‌ನಲ್ಲಿ ಸೇರಿಸಿಲ್ಲ.

ಒಟ್ಟಿನಲ್ಲಿ ಪ್ರಭಾವಿ ಸಚಿವನ ಮಗನನ್ನು ಕಾಪಾಡಲು ಪೊಲೀಸರು ತಪ್ಪುಗಳ ಮೇಲೆ ತಪ್ಪುಗಳನ್ನು ಎಸಗಿರುವುದು ಮೇಲ್ನೋಟಕ್ಕೆ ಕಾಣುತ್ತಿದೆ.

ಇನ್ನು ಸಚಿವ ಆರ್‌ ಅಶೋಕ್‌ ಸಹ ಇದುವರೆಗೂ ಸಾವಿಗೀಡಾದ ರವಿನಾಯ್ಕ್‌ರವರ ನೊಂದ ಕುಟುಂಬವನ್ನು ಮಾತಾಡಿಸಿಲ್ಲ. ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಕೇಸನ್ನು ಮುಚ್ಚಿಹಾಕಲು ಮತ್ತು ತಮ್ಮ ಮಗನನ್ನು ರಕ್ಷಿಸಲು ಮುಂದಾಗಿರುವುದು ಖಂಡನೀಯವಾಗಿದೆ.

ಕಾಂಗ್ರೆಸ್‌ ಶಾಸಕ ಹ್ಯಾರಿಸ್‌ ಮಗ ನಲಪಾಡ್‌‌ನ ಹಿಟ್‌ ಅಂಡ್‌ ರನ್‌ ಕೇಸ್‌ನಲ್ಲಿ ವಿಚಾರದಲ್ಲಿ ದಕ್ಷತೆಯಿಂದ ನಡೆದುಕೊಂಡ ಪೊಲೀಸರು ಆರ್‌ ಅಶೋಕ್‌ ಮಗನ ವಿಚಾರದಲ್ಲಿ ಅನ್ಯಾಯ ಮಾಡಿದ್ದು ಏಕೆ? ಇದು ಕೂಡ ಹಿಟ್‌ ಅಂಡ್‌ ರನ್‌ ಕೇಸ್‌ ಅಲ್ಲವೇ? ಪೊಲೀಸರ ಮೇಲೆ ಒತ್ತಡ ಹಾಕಿದವರು ಯಾರು? ಈ ರೀತಿ ನ್ಯಾಯದ ವಿಷಯದಲ್ಲಿ ಪೊಲೀಸರೇ ತಾರತಮ್ಯ ಮಾಡಿದರೆ ಹೇಗೆ ಎಂಬ ಪ್ರಶ್ನೆಗಳು ಉದ್ಭವಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...