Homeಮುಖಪುಟಹೊಸಪೇಟೆ ಅಪಘಾತ ಪ್ರಕರಣ: ನನ್ನ ಮಗ ಕಾರಿನಲ್ಲಿದ್ದು ನಿಜ, ಆದರೆ ಕಾರು ಚಲಾಯಿಸುತ್ತಿರಲ್ಲಿಲ್ಲ - ಸಚಿವ...

ಹೊಸಪೇಟೆ ಅಪಘಾತ ಪ್ರಕರಣ: ನನ್ನ ಮಗ ಕಾರಿನಲ್ಲಿದ್ದು ನಿಜ, ಆದರೆ ಕಾರು ಚಲಾಯಿಸುತ್ತಿರಲ್ಲಿಲ್ಲ – ಸಚಿವ ಆರ್‌ ಅಶೋಕ್‌

ಮೊದಲಿಗೆ ಆರ್‌ ಅಶೋಕ್‌ ಪುತ್ರ ಕಾರಿನಲ್ಲಿದ್ದರೂ ಸಹ ಅತನ ಹೆಸರನ್ನು ಎಫ್‌ಐಆರ್‌ನಲ್ಲಿ ಕೈಬಿಟ್ಟಿದ್ದು ಏಕೆ? ಅಪಘಾತವಾದಾಗ ಬೆಂಜ್‌ ಕಾರು ಬದಲಿಗೆ ಆಡಿ ಕಾರು ಎಂದು ಉಲ್ಲೇಖಿಸಿದ್ದು ಏಕೆ?? ಅಲ್ಲದೇ ಕುಡಿದು ಚಾಲನೆ ಮಾಡಿದರು ಎಂಬ ಅಂಶವನ್ನು ಮರೆಮಾಚಿದ್ದು ಏಕೆ???

- Advertisement -
- Advertisement -

ಹೊಸಪೇಟೆಯ ಬಳಿಯ ಮರಿಯಮ್ಮನಹಳ್ಳಿಯಲ್ಲಿ ಫೆ.10 ರಂದು ಸಂಭವಿಸಿದ ಅಪಘಾತ ಪ್ರಕರಣದಲ್ಲಿ ಸಚಿವ ಆರ್‌ ಅಶೋಕ್‌ ಪುತ್ರನ ಪಾತ್ರವಿದೆಯೆಂಬ ಸುದ್ದಿ ಹರಿದಾಡಿದ್ದು ಹೊಸ ವಿವಾದಕ್ಕೆ ಕಾರಣವಾಗಿದೆ.

ಈ ಮೊದಲು ಬೆಂಗಳೂರಿನಿಂದ ಹಂಪಿಗೆ ಪ್ರವಾಸಕ್ಕೆಂದು ತೆರಳಿದ್ದ ಸಚಿನ್‌, ರಾಹುಲ್‌ ಸೇರಿದಂತೆ ಐವರು ಗೆಳೆಯರು ಕುಡಿದ ಮತ್ತಿನಲ್ಲಿ ಅತೀವೇಗದಲ್ಲಿ ಕಾರು ಚಲಾಯಿಸಿದ ಕಾರಣಕ್ಕೆ ರಸ್ತೆ ಬದಿ ನಿಂತಿದ್ದ ರವಿನಾಯ್ಕ್‌ ಎಂಬುವವರಿಗೆ ಗುದ್ದಿ, ಕಾರು ಮಗುಚಿಕೊಂಡಿತ್ತು. ಸ್ಥಳದಲ್ಲಿಯೇ ರವಿನಾಯ್ಕ್‌ ಸೇರಿದಂತೆ ಕಾರಿನಲ್ಲಿದ್ದ ಸಚಿನ್‌ ಎಂಬುವವರು ಮೃತಪಟ್ಟಿದ್ದರು.

ಆದರೆ ಘಟನೆ ನಡೆದು ಮೂರು ದಿನಗಳು ಕಳೆದರೂ ಇದರಲ್ಲಿ ಸಚಿವ ಆರ್‌ ಅಶೋಕ್‌ ಮತ್ತು ಆತನ ಪುತ್ರನ ಹೆಸರು ಬಹಿರಂಗಗೊಳ್ಳದಂತೆ ಪೊಲೀಸರು ಕೆಲಸ ಮಾಡಿದ್ದಾರೆ. ಬೆಂಜ್‌ ಕಾರು ಅಪಘಾತದಲ್ಲಿದ್ದರೆ ಪೊಲೀಸರು ಆಡಿ ಕಾರು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಿ ಕೇಸನ್ನು ತಿರುಚಲು ಮುಂದಾಗಿದ್ದಾರೆ.

ಈಗ ಬಂದ ಸುದ್ದಿಯ ಪ್ರಕಾರ ಆರ್‌ ಅಶೋಕ್‌ರವರ ಮಗ ಶರತ್‌ ಕಾರು ಓಡಿಸುತ್ತಿದ್ದು ಆತನೇ ಅಪಘಾತಕ್ಕೆ ಕಾರಣವೆಂದು ಹೇಳಲಾಗುತ್ತಿದೆ. ಅಪಘಾತವಾದ ಕೂಡಲೇ ಆತನನ್ನು ಬೇರೊಂದು ಕಾರಿನಲ್ಲಿ ಬೆಂಗಳೂರಿಗೆ ಕಳುಹಿಸಿಕೊಟ್ಟಿದ್ದು ಎಲ್ಲಿಯೂ ಆತನ ಹೆಸರು ಬಹಿರಂಗವಾಗದಂತೆ ಮೋಸ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

ಇಂದು ಬೆಳಿಗ್ಗೆಯಿಂದಲೇ ದಿನಪತ್ರಿಕೆಗಳಲ್ಲಿ ಈ ವಿಷಯ ಬಹಿರಂಗಗೊಂಡಂತೆ ಆರ್‌.ಅಶೋಕ್‌ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಅಲ್ಲದೇ ಅಪಘಾತದಲ್ಲಿ ಒಳಗೊಂಡ ಕಾರು ಆ‌ರ್‌ ಅಶೋಕ್‌ ಒಡೆತನದ ನ್ಯಾಷನಲ್ ಪಬ್ಲಿಕ್ ಶಾಲೆಗೆ ಸೇರಿದ್ದು ಎಂಬುದು ಸ್ಪಷ್ಟವಾಗಿದೆ.

ಈ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿರುವ ಕಂದಾಯ ಸಚಿವ ಆರ್‌. ಅಶೋಕ್‌ “ಅಂದು ಅಪಘಾತವಾದ ಕಾರಿನಲ್ಲಿ ನನ್ನ ಮಗ ಶರತ್‌ ಇದ್ದಿದ್ದು ನಿಜ. ಆದರೆ ಆತ ಕಾರು ಚಾಲನೆ ಮಾಡುತ್ತಿರಲ್ಲಿಲ್ಲ ಬದಲಿಗೆ ರಾಹುಲ್‌ ಎಂಬಾತ ಕಾರು ಚಾಲನೆ ಮಾಡುತ್ತಿದ್ದ” ಎಂದು ಅವರು ಹೇಳಿದ್ದಾರೆ.

ಪೊಲೀಸರ ಪಕ್ಷಪಾತ

ಈ ಘಟನೆಯಲ್ಲಿ ಪೊಲೀಸರ ಪಕ್ಷಪಾತ ಮತ್ತು ಕರ್ತವ್ಯ ಲೋಪ ಎದ್ದುಕಾಣುತ್ತಿದೆ. ಮೊದಲಿಗೆ ಆರ್‌ ಅಶೋಕ್‌ ಪುತ್ರ ಕಾರಿನಲ್ಲಿದ್ದರೂ ಸಹ ಅತನ ಹೆಸರನ್ನು ಕೈಬಿಟ್ಟಿದ್ದು ಹೇಗೆ? ಅಪಘಾತವಾದಾಗ ಬೆಂಜ್‌ ಕಾರು ಬದಲಿಗೆ ಆಡಿ ಕಾರು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಿದ್ದು ದೊಡ್ಡ ಪ್ರಮಾದವಾಗಿದೆ. ಅಲ್ಲದೇ ಕುಡಿದು ಚಾಲನೆ ಮಾಡಿದರು ಎಂಬ ಅಂಶವನ್ನು ಸಹ ಎಫ್‌ಐಆರ್‌ನಲ್ಲಿ ಸೇರಿಸಿಲ್ಲ.

ಒಟ್ಟಿನಲ್ಲಿ ಪ್ರಭಾವಿ ಸಚಿವನ ಮಗನನ್ನು ಕಾಪಾಡಲು ಪೊಲೀಸರು ತಪ್ಪುಗಳ ಮೇಲೆ ತಪ್ಪುಗಳನ್ನು ಎಸಗಿರುವುದು ಮೇಲ್ನೋಟಕ್ಕೆ ಕಾಣುತ್ತಿದೆ.

ಇನ್ನು ಸಚಿವ ಆರ್‌ ಅಶೋಕ್‌ ಸಹ ಇದುವರೆಗೂ ಸಾವಿಗೀಡಾದ ರವಿನಾಯ್ಕ್‌ರವರ ನೊಂದ ಕುಟುಂಬವನ್ನು ಮಾತಾಡಿಸಿಲ್ಲ. ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಕೇಸನ್ನು ಮುಚ್ಚಿಹಾಕಲು ಮತ್ತು ತಮ್ಮ ಮಗನನ್ನು ರಕ್ಷಿಸಲು ಮುಂದಾಗಿರುವುದು ಖಂಡನೀಯವಾಗಿದೆ.

ಕಾಂಗ್ರೆಸ್‌ ಶಾಸಕ ಹ್ಯಾರಿಸ್‌ ಮಗ ನಲಪಾಡ್‌‌ನ ಹಿಟ್‌ ಅಂಡ್‌ ರನ್‌ ಕೇಸ್‌ನಲ್ಲಿ ವಿಚಾರದಲ್ಲಿ ದಕ್ಷತೆಯಿಂದ ನಡೆದುಕೊಂಡ ಪೊಲೀಸರು ಆರ್‌ ಅಶೋಕ್‌ ಮಗನ ವಿಚಾರದಲ್ಲಿ ಅನ್ಯಾಯ ಮಾಡಿದ್ದು ಏಕೆ? ಇದು ಕೂಡ ಹಿಟ್‌ ಅಂಡ್‌ ರನ್‌ ಕೇಸ್‌ ಅಲ್ಲವೇ? ಪೊಲೀಸರ ಮೇಲೆ ಒತ್ತಡ ಹಾಕಿದವರು ಯಾರು? ಈ ರೀತಿ ನ್ಯಾಯದ ವಿಷಯದಲ್ಲಿ ಪೊಲೀಸರೇ ತಾರತಮ್ಯ ಮಾಡಿದರೆ ಹೇಗೆ ಎಂಬ ಪ್ರಶ್ನೆಗಳು ಉದ್ಭವಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...