Homeಚಳವಳಿಹೊಸಪೇಟೆ: ಬಿಎಂಎಂ ಕಾರ್ಖಾನೆ ವಿಸ್ತರಣೆ, ಸಿಮೆಂಟ್ ಫ್ಯಾಕ್ಟರಿ ನಿರ್ಮಾಣಕ್ಕೆ ಭಾರೀ ವಿರೋಧ

ಹೊಸಪೇಟೆ: ಬಿಎಂಎಂ ಕಾರ್ಖಾನೆ ವಿಸ್ತರಣೆ, ಸಿಮೆಂಟ್ ಫ್ಯಾಕ್ಟರಿ ನಿರ್ಮಾಣಕ್ಕೆ ಭಾರೀ ವಿರೋಧ

ಕಾರ್ಖಾನೆಯಿಂದ ಹೊರಬರುವ ಕಲುಷಿತ ತ್ಯಾಜ್ಯವನ್ನು ತುಂಗಭದ್ರ ಅಣೆಕಟ್ಟೆಗೆ ಹರಿಸಲಾಗುತ್ತಿದೆ. ಕಾರ್ಖಾನೆಯಿಂದ ಹೊರಬೀಳುತ್ತಿರುವ ಧೂಳು ಮಿಶ್ರಿತ ಹೊಗೆ ಹಾನಿಕಾರಕವಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.

- Advertisement -
- Advertisement -

ಹೊಸಪೇಟೆಯ ಬಳಿಯ ಡಣಾಪುರ ಗ್ರಾಮ ವ್ಯಾಪ್ತಿಯಲ್ಲಿರುವ ಕಳೆದ 20 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಬಿಎಂಎಂ ಇಸ್ಪಾತ್ ಸ್ಟೀಲ್ ತಯಾರಿಕಾ ಕಾರ್ಖಾನೆಯು 2.1 ಎಂಟಿಪಿಎ ಸಾಮರ್ಥ್ಯದ ಘಟಕದ ಯೋಜನೆ ವಿಸ್ತರಣೆಗೆ ಸಜ್ಜಾಗಿದೆ. ಅಲ್ಲದೆ ಸಿಮೆಂಟ್ ಕಾರ್ಖಾನೆಯನ್ನು ಸಹ ಆರಂಭಿಸಲು ಮುಂದಾಗಿದೆ. ಇದರಿಂದ ಈಗಾಗಲೇ ಹದಗೆಟ್ಟಿರುವ ಪರಿಸರ ಮತ್ತಷ್ಟು ಹಾಳಾಗಿ ನಮ್ಮ ಜೀವನ ದುಸ್ತರವಾಗುತ್ತದೆ ಎಂದು ಆರೋಪಿಸಿರುವ ಸ್ಥಳೀಯರು ಘಟಕ ವಿಸ್ತರಣೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸೆಪ್ಟಂಬರ್ 16 ರಂದು ಡಣಾಪುರದಲ್ಲಿ ಅಪರ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆದ ಪರಿಸರ ಸಾರ್ವಜನಿಕ ಆಲಿಕೆ ಕಾರ್ಯಕ್ರಮದಲ್ಲಿ ಪರ-ವಿರೋಧದ ಜಟಾಪಟಿ ನಡೆದಿದೆ. ಕಾರ್ಖಾನೆ ವಿಸ್ತರಣೆಗೆ ಮತ್ತು ಹೊಸ ಸಿಮೆಂಟ್ ಕಾರ್ಖಾನೆ ಸ್ಥಾಪನೆಗೆ ರೈತರು ಸಹಮತ ಸೂಚಿಸಿ ಪತ್ರ ಬರೆದಿದ್ದಾರೆ ಎಂದು ಅಧಿಕಾರಿಗಳು ಹೇಳಿದಾಗ ಅಲ್ಲಿ ನರೆದಿದ್ದ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಒಮ್ಮೆಲೆ ವೇದಿಕೆಯ ಮುಂಭಾಗ ಬಂದು ಫ್ಯಾಕ್ಟರಿ ವಿರುದ್ಧ ಘೋಷಣೆ ಕೂಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ಅಪರ ಜಿಲ್ಲಾಧಿಕಾರಿ ಮಹೇಶ್ ಬಾಬುರವರು, ಪರ ಮತ್ತು ವಿರೋಧದ ಎರಡು ಅಭಿಪ್ರಾಯಗಳನ್ನು ಗಮನಿಸಿದ್ದೇವೆ. ಬಂದಿರುವ ಅರ್ಜಿಗಳಲ್ಲಿಯೂ ಸಹ ಪರ-ವಿರೋಧವಿದೆ. ಈ ಕುರಿತು ಪರಿಶೀಲಿಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದಿದ್ದಾರೆ.

ಗುರುವಾರ ನಡೆದ ಪರಿಸರ ಸಾರ್ವಜನಿಕ ಆಲಿಕೆ ಸಭೆ

ಕೆಲವು ಜನರು ‘ಫ್ಯಾಕ್ಟರಿ ನಿರ್ಮಾಣವಾದರೆ ನಮ್ಮ ಮಕ್ಕಳಿಗೆ ಇಲ್ಲಿಯೇ ಉದ್ಯೋಗ ಸಿಗುತ್ತದೆ ಮತ್ತು ವಲಸೆ ಹೋಗುವುದು ತಪ್ಪುತ್ತದೆ. ಹಾಗಾಗಿ ಕಾರ್ಖಾನೆ ನಿರ್ಮಾಣವಾಗಬೇಕು’ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ‘ಉದ್ಯೋಗದ ಆಮಿಷ ತೋರಿಸಿ ಇಲ್ಲಿ ಬಂದಿರುವ ಕಾರ್ಖಾನೆಗಳು ಎಷ್ಟು ಜನರಿಗೆ ಉದ್ಯೋಗ ಕೊಟ್ಟಿವೆ? ಇಲ್ಲಿರುವ ಕಾರ್ಮಿಕರನ್ನು ಹೇಗೆ ನಡೆಸಿಕೊಳ್ಳುತ್ತಿವೆ? ಕಂಪನಿಯ ತ್ಯಾಜ್ಯ ನೀರು ಮತ್ತು ಧೂಳು ಮಿಶ್ರಿತ ಹೊಗೆಯಿಂದಾಗಿ ನಮ್ಮ ಆರೋಗ್ಯ ಹಾಳಾಗುತ್ತಿದೆ. ಹಾಗಾಗಿ ಕಾರ್ಖಾನೆ ವಿಸ್ತರಣೆ ಬೇ’ಡ ಎಂದು ಬಹಳಷ್ಟು ಜನರು ವಾದಿಸಿದ್ದಾರೆ.

ಮರಿಯಪ್ಪನಹಳ್ಳಿಯ ರಂಗಭೂಮಿ ಕಲಾವಿದ ಸರ್ದಾರ್ ನಾನುಗೌರಿ.ಕಾಂ ಜೊತೆ ಮಾತನಾಡಿ, “ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಸರ್ಕಾರದ ನಿಯಮಗಳ ಪ್ರಕಾರ ಸಂಬಳ ಕೊಡದೆ ಕಾಂಟ್ರಾಕ್ಟರ್‌ಗಳು ಮೋಸ ಮಾಡುತ್ತಿದ್ದಾರೆ. ಅಲ್ಲದೆ ಕಾರ್ಖಾನೆಯಿಂದ ಹೊರಬರುವ ಕಲುಷಿತ ತ್ಯಾಜ್ಯವನ್ನು ತುಂಗಭದ್ರ ಅಣೆಕಟ್ಟೆಗೆ ಹರಿಸಲಾಗುತ್ತಿದೆ. ಕಾರ್ಖಾನೆಯಿಂದ ಹೊರಬೀಳುತ್ತಿರುವ ಧೂಳು ಮಿಶ್ರಿತ ಹೊಗೆ ಪರಿಸರದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಸಾರ್ವಜನಿಕರ ಆರೋಗ್ಯ ಕೆಟ್ಟಿದ್ದು, ಇಲ್ಲಿನ ಜನರಿಗೆ ಶ್ವಾಸಕೋಶದ ಸಮಸ್ಯೆಗಳು ಉಂಟಾಗಿವೆ. ರೈತರ ಬೆಳೆಗಳು ನಾಶವಾಗುತ್ತಿವೆ. ಪ್ರಾಣಿ ಪಕ್ಷಗಳು ಸಂಕುಲ ನಶಿಸುತ್ತಿದೆ. ಈ ಸಣ್ಣ ಪ್ರಮಾಣದ ಘಟಕದಿಂದ ಇಷ್ಟೊಂದು ಅನಾಹುತ ನಡೆಯುತ್ತಿದೆ. ಇನ್ನು ಇದರ ಎರಡು ಪಟ್ಟು ದೊಡ್ಡದಾದ ಸ್ಟೀಲ್ ಪ್ಲಾಂಟ್ ಮತ್ತು ಸಿಮೆಂಟ್ ಕಾರ್ಖಾನೆ ಆರಂಭವಾದರೆ ನಾವು ನೆಮ್ಮದಿಯಿಂದ ಬದುಕಲು ಸಾಧ್ಯವೇ?” ಎಂದು ಪ್ರಶ್ನಿಸಿದ್ದಾರೆ.

ಈಗಿರುವ ಕಾರ್ಖಾನೆ ಸಾಕು. ಹೊಸದಾಗಿ ಕಾರ್ಖಾನೆ ಆರಂಭವಾಗುವುದಕ್ಕೆ ನಮ್ಮ ವಿರೋಧವಿದೆ. ಸದ್ಯಕ್ಕೆ ಕಾರ್ಖನೆ ಬಳಿಯಿರುವ ಜಾಗದಲ್ಲಿ ತ್ಯಾಜ್ಯ ನೀರನ್ನು ಸಂಸ್ಕರಿಸಲು, ಕಾಡು ಬೆಳೆಸಿ ಪರಿಸರ ಹಾನಿ ತಡೆಗಟ್ಟಲು ಬಳಸಬೇಕು ಎಂದು ಸರ್ದಾರ್ ಒತ್ತಾಯಿಸಿದ್ದಾರೆ.

ಇದುವರೆಗೂ ಕಾರ್ಖಾನೆ ಸ್ಥಾಪನೆಗಾಗಿ ಭೂಮಿ ಕಳೆದುಕೊಂಡ ಸ್ಥಳೀಯರೊಬ್ಬರು ಪರಿಸರ ಸಾರ್ವಜನಿಕ ಆಲಿಕೆ ಕಾರ್ಯಕ್ರಮದಲ್ಲಿ ಮಾತನಾಡಿ ತಮ್ಮ ಅಳಲು ತೋಡಿಕೊಂಡಿದ್ದಾರೆ. “ಭೂಮಿ ನೀಡುವ ಮುನ್ನ ನಮಗೆ ಉದ್ಯೋಗ ಕೊಡುವ ಭರವಸೆ ನೀಡಲಾಗಿತ್ತು. ಆದರೆ ಇದುವರೆಗೆ ನಮಗೆ ಯಾವುದೇ ಉದ್ಯೋಗ ಸಿಕ್ಕಿಲ್ಲ. ಕಾರ್ಖಾನೆಯವರು ಆಗ ಬನ್ನಿ, ಈಗ ಬನ್ನಿ ಎಂದು ಅಲೆದಾಡಿಸುತ್ತಿದ್ದಾರೆ. ಇನ್ನೊಂದೆಡೆ ಫ್ಯಾಕ್ಟರಿ ದೂಳಿನಿಂದಾಗಿ ಸುತ್ತಲಿನ 90 ಜನರಿಗೆ ಕ್ಷಯ ರೋಗಿ ಬಂದಿದೆ ಎಂದು ವಿಮುಕ್ತಿ ಎನ್‌ಜಿಓದವರು ವರದಿ ಮಾಡಿದ್ದಾರೆ. ಹಾಗಾಗಿ ಇಲ್ಲಿ ಹೊಸ ಫ್ಯಾಕ್ಟರಿ ಬೇಡವೇ ಬೇಡ” ಎಂದು ಒತ್ತಾಯಿಸಿದ್ದಾರೆ.

ಒಟ್ಟಾರೆಯಾಗಿ ಡಣಾಪುರದಲ್ಲಿನ ಬಿಎಂಎಂ ಇಸ್ಪಾತ್ ಸ್ಟೀಲ್ ಕಾರ್ಖಾನೆಯ ಹೊಸ ಘಟಕಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಸಿಮೆಂಟ್ ಫ್ಯಾಕ್ಟರಿ ಆರಂಭವಾದರೆ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಲಿದೆ. ಹಾಗಾಗಿ ಬಳ್ಳಾರಿ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳು ಯಾವುದೇ ಒತ್ತಡ, ಪ್ರಭಾವಕ್ಕೆ ಒಳಗಾಗದೆ ಎಲ್ಲಾ ಆಯಾಮಗಳಿಂದ ಪರೀಶಿಲಿಸಿ ಹೆಜ್ಜೆ ಇಡಬೇಕಾಗಿದೆ.

ಇದನ್ನೂ ಓದಿ: ಚೀತಾಗಳನ್ನೇನೋ ತಂದಾಯಿತು; ಮುಂದಿನ ಪರಿಣಾಮ ಬಲ್ಲಿರೇನು? ಪರಿಸರತಜ್ಞರು ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...