Homeಚಳವಳಿಹೊಸಪೇಟೆ: ಬಿಎಂಎಂ ಕಾರ್ಖಾನೆ ವಿಸ್ತರಣೆ, ಸಿಮೆಂಟ್ ಫ್ಯಾಕ್ಟರಿ ನಿರ್ಮಾಣಕ್ಕೆ ಭಾರೀ ವಿರೋಧ

ಹೊಸಪೇಟೆ: ಬಿಎಂಎಂ ಕಾರ್ಖಾನೆ ವಿಸ್ತರಣೆ, ಸಿಮೆಂಟ್ ಫ್ಯಾಕ್ಟರಿ ನಿರ್ಮಾಣಕ್ಕೆ ಭಾರೀ ವಿರೋಧ

ಕಾರ್ಖಾನೆಯಿಂದ ಹೊರಬರುವ ಕಲುಷಿತ ತ್ಯಾಜ್ಯವನ್ನು ತುಂಗಭದ್ರ ಅಣೆಕಟ್ಟೆಗೆ ಹರಿಸಲಾಗುತ್ತಿದೆ. ಕಾರ್ಖಾನೆಯಿಂದ ಹೊರಬೀಳುತ್ತಿರುವ ಧೂಳು ಮಿಶ್ರಿತ ಹೊಗೆ ಹಾನಿಕಾರಕವಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.

- Advertisement -
- Advertisement -

ಹೊಸಪೇಟೆಯ ಬಳಿಯ ಡಣಾಪುರ ಗ್ರಾಮ ವ್ಯಾಪ್ತಿಯಲ್ಲಿರುವ ಕಳೆದ 20 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಬಿಎಂಎಂ ಇಸ್ಪಾತ್ ಸ್ಟೀಲ್ ತಯಾರಿಕಾ ಕಾರ್ಖಾನೆಯು 2.1 ಎಂಟಿಪಿಎ ಸಾಮರ್ಥ್ಯದ ಘಟಕದ ಯೋಜನೆ ವಿಸ್ತರಣೆಗೆ ಸಜ್ಜಾಗಿದೆ. ಅಲ್ಲದೆ ಸಿಮೆಂಟ್ ಕಾರ್ಖಾನೆಯನ್ನು ಸಹ ಆರಂಭಿಸಲು ಮುಂದಾಗಿದೆ. ಇದರಿಂದ ಈಗಾಗಲೇ ಹದಗೆಟ್ಟಿರುವ ಪರಿಸರ ಮತ್ತಷ್ಟು ಹಾಳಾಗಿ ನಮ್ಮ ಜೀವನ ದುಸ್ತರವಾಗುತ್ತದೆ ಎಂದು ಆರೋಪಿಸಿರುವ ಸ್ಥಳೀಯರು ಘಟಕ ವಿಸ್ತರಣೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸೆಪ್ಟಂಬರ್ 16 ರಂದು ಡಣಾಪುರದಲ್ಲಿ ಅಪರ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆದ ಪರಿಸರ ಸಾರ್ವಜನಿಕ ಆಲಿಕೆ ಕಾರ್ಯಕ್ರಮದಲ್ಲಿ ಪರ-ವಿರೋಧದ ಜಟಾಪಟಿ ನಡೆದಿದೆ. ಕಾರ್ಖಾನೆ ವಿಸ್ತರಣೆಗೆ ಮತ್ತು ಹೊಸ ಸಿಮೆಂಟ್ ಕಾರ್ಖಾನೆ ಸ್ಥಾಪನೆಗೆ ರೈತರು ಸಹಮತ ಸೂಚಿಸಿ ಪತ್ರ ಬರೆದಿದ್ದಾರೆ ಎಂದು ಅಧಿಕಾರಿಗಳು ಹೇಳಿದಾಗ ಅಲ್ಲಿ ನರೆದಿದ್ದ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಒಮ್ಮೆಲೆ ವೇದಿಕೆಯ ಮುಂಭಾಗ ಬಂದು ಫ್ಯಾಕ್ಟರಿ ವಿರುದ್ಧ ಘೋಷಣೆ ಕೂಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ಅಪರ ಜಿಲ್ಲಾಧಿಕಾರಿ ಮಹೇಶ್ ಬಾಬುರವರು, ಪರ ಮತ್ತು ವಿರೋಧದ ಎರಡು ಅಭಿಪ್ರಾಯಗಳನ್ನು ಗಮನಿಸಿದ್ದೇವೆ. ಬಂದಿರುವ ಅರ್ಜಿಗಳಲ್ಲಿಯೂ ಸಹ ಪರ-ವಿರೋಧವಿದೆ. ಈ ಕುರಿತು ಪರಿಶೀಲಿಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದಿದ್ದಾರೆ.

ಗುರುವಾರ ನಡೆದ ಪರಿಸರ ಸಾರ್ವಜನಿಕ ಆಲಿಕೆ ಸಭೆ

ಕೆಲವು ಜನರು ‘ಫ್ಯಾಕ್ಟರಿ ನಿರ್ಮಾಣವಾದರೆ ನಮ್ಮ ಮಕ್ಕಳಿಗೆ ಇಲ್ಲಿಯೇ ಉದ್ಯೋಗ ಸಿಗುತ್ತದೆ ಮತ್ತು ವಲಸೆ ಹೋಗುವುದು ತಪ್ಪುತ್ತದೆ. ಹಾಗಾಗಿ ಕಾರ್ಖಾನೆ ನಿರ್ಮಾಣವಾಗಬೇಕು’ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ‘ಉದ್ಯೋಗದ ಆಮಿಷ ತೋರಿಸಿ ಇಲ್ಲಿ ಬಂದಿರುವ ಕಾರ್ಖಾನೆಗಳು ಎಷ್ಟು ಜನರಿಗೆ ಉದ್ಯೋಗ ಕೊಟ್ಟಿವೆ? ಇಲ್ಲಿರುವ ಕಾರ್ಮಿಕರನ್ನು ಹೇಗೆ ನಡೆಸಿಕೊಳ್ಳುತ್ತಿವೆ? ಕಂಪನಿಯ ತ್ಯಾಜ್ಯ ನೀರು ಮತ್ತು ಧೂಳು ಮಿಶ್ರಿತ ಹೊಗೆಯಿಂದಾಗಿ ನಮ್ಮ ಆರೋಗ್ಯ ಹಾಳಾಗುತ್ತಿದೆ. ಹಾಗಾಗಿ ಕಾರ್ಖಾನೆ ವಿಸ್ತರಣೆ ಬೇ’ಡ ಎಂದು ಬಹಳಷ್ಟು ಜನರು ವಾದಿಸಿದ್ದಾರೆ.

ಮರಿಯಪ್ಪನಹಳ್ಳಿಯ ರಂಗಭೂಮಿ ಕಲಾವಿದ ಸರ್ದಾರ್ ನಾನುಗೌರಿ.ಕಾಂ ಜೊತೆ ಮಾತನಾಡಿ, “ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಸರ್ಕಾರದ ನಿಯಮಗಳ ಪ್ರಕಾರ ಸಂಬಳ ಕೊಡದೆ ಕಾಂಟ್ರಾಕ್ಟರ್‌ಗಳು ಮೋಸ ಮಾಡುತ್ತಿದ್ದಾರೆ. ಅಲ್ಲದೆ ಕಾರ್ಖಾನೆಯಿಂದ ಹೊರಬರುವ ಕಲುಷಿತ ತ್ಯಾಜ್ಯವನ್ನು ತುಂಗಭದ್ರ ಅಣೆಕಟ್ಟೆಗೆ ಹರಿಸಲಾಗುತ್ತಿದೆ. ಕಾರ್ಖಾನೆಯಿಂದ ಹೊರಬೀಳುತ್ತಿರುವ ಧೂಳು ಮಿಶ್ರಿತ ಹೊಗೆ ಪರಿಸರದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಸಾರ್ವಜನಿಕರ ಆರೋಗ್ಯ ಕೆಟ್ಟಿದ್ದು, ಇಲ್ಲಿನ ಜನರಿಗೆ ಶ್ವಾಸಕೋಶದ ಸಮಸ್ಯೆಗಳು ಉಂಟಾಗಿವೆ. ರೈತರ ಬೆಳೆಗಳು ನಾಶವಾಗುತ್ತಿವೆ. ಪ್ರಾಣಿ ಪಕ್ಷಗಳು ಸಂಕುಲ ನಶಿಸುತ್ತಿದೆ. ಈ ಸಣ್ಣ ಪ್ರಮಾಣದ ಘಟಕದಿಂದ ಇಷ್ಟೊಂದು ಅನಾಹುತ ನಡೆಯುತ್ತಿದೆ. ಇನ್ನು ಇದರ ಎರಡು ಪಟ್ಟು ದೊಡ್ಡದಾದ ಸ್ಟೀಲ್ ಪ್ಲಾಂಟ್ ಮತ್ತು ಸಿಮೆಂಟ್ ಕಾರ್ಖಾನೆ ಆರಂಭವಾದರೆ ನಾವು ನೆಮ್ಮದಿಯಿಂದ ಬದುಕಲು ಸಾಧ್ಯವೇ?” ಎಂದು ಪ್ರಶ್ನಿಸಿದ್ದಾರೆ.

ಈಗಿರುವ ಕಾರ್ಖಾನೆ ಸಾಕು. ಹೊಸದಾಗಿ ಕಾರ್ಖಾನೆ ಆರಂಭವಾಗುವುದಕ್ಕೆ ನಮ್ಮ ವಿರೋಧವಿದೆ. ಸದ್ಯಕ್ಕೆ ಕಾರ್ಖನೆ ಬಳಿಯಿರುವ ಜಾಗದಲ್ಲಿ ತ್ಯಾಜ್ಯ ನೀರನ್ನು ಸಂಸ್ಕರಿಸಲು, ಕಾಡು ಬೆಳೆಸಿ ಪರಿಸರ ಹಾನಿ ತಡೆಗಟ್ಟಲು ಬಳಸಬೇಕು ಎಂದು ಸರ್ದಾರ್ ಒತ್ತಾಯಿಸಿದ್ದಾರೆ.

ಇದುವರೆಗೂ ಕಾರ್ಖಾನೆ ಸ್ಥಾಪನೆಗಾಗಿ ಭೂಮಿ ಕಳೆದುಕೊಂಡ ಸ್ಥಳೀಯರೊಬ್ಬರು ಪರಿಸರ ಸಾರ್ವಜನಿಕ ಆಲಿಕೆ ಕಾರ್ಯಕ್ರಮದಲ್ಲಿ ಮಾತನಾಡಿ ತಮ್ಮ ಅಳಲು ತೋಡಿಕೊಂಡಿದ್ದಾರೆ. “ಭೂಮಿ ನೀಡುವ ಮುನ್ನ ನಮಗೆ ಉದ್ಯೋಗ ಕೊಡುವ ಭರವಸೆ ನೀಡಲಾಗಿತ್ತು. ಆದರೆ ಇದುವರೆಗೆ ನಮಗೆ ಯಾವುದೇ ಉದ್ಯೋಗ ಸಿಕ್ಕಿಲ್ಲ. ಕಾರ್ಖಾನೆಯವರು ಆಗ ಬನ್ನಿ, ಈಗ ಬನ್ನಿ ಎಂದು ಅಲೆದಾಡಿಸುತ್ತಿದ್ದಾರೆ. ಇನ್ನೊಂದೆಡೆ ಫ್ಯಾಕ್ಟರಿ ದೂಳಿನಿಂದಾಗಿ ಸುತ್ತಲಿನ 90 ಜನರಿಗೆ ಕ್ಷಯ ರೋಗಿ ಬಂದಿದೆ ಎಂದು ವಿಮುಕ್ತಿ ಎನ್‌ಜಿಓದವರು ವರದಿ ಮಾಡಿದ್ದಾರೆ. ಹಾಗಾಗಿ ಇಲ್ಲಿ ಹೊಸ ಫ್ಯಾಕ್ಟರಿ ಬೇಡವೇ ಬೇಡ” ಎಂದು ಒತ್ತಾಯಿಸಿದ್ದಾರೆ.

ಒಟ್ಟಾರೆಯಾಗಿ ಡಣಾಪುರದಲ್ಲಿನ ಬಿಎಂಎಂ ಇಸ್ಪಾತ್ ಸ್ಟೀಲ್ ಕಾರ್ಖಾನೆಯ ಹೊಸ ಘಟಕಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಸಿಮೆಂಟ್ ಫ್ಯಾಕ್ಟರಿ ಆರಂಭವಾದರೆ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಲಿದೆ. ಹಾಗಾಗಿ ಬಳ್ಳಾರಿ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳು ಯಾವುದೇ ಒತ್ತಡ, ಪ್ರಭಾವಕ್ಕೆ ಒಳಗಾಗದೆ ಎಲ್ಲಾ ಆಯಾಮಗಳಿಂದ ಪರೀಶಿಲಿಸಿ ಹೆಜ್ಜೆ ಇಡಬೇಕಾಗಿದೆ.

ಇದನ್ನೂ ಓದಿ: ಚೀತಾಗಳನ್ನೇನೋ ತಂದಾಯಿತು; ಮುಂದಿನ ಪರಿಣಾಮ ಬಲ್ಲಿರೇನು? ಪರಿಸರತಜ್ಞರು ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...