Homeಚಳವಳಿಹೊಸಪೇಟೆ: ಬಿಎಂಎಂ ಕಾರ್ಖಾನೆ ವಿಸ್ತರಣೆ, ಸಿಮೆಂಟ್ ಫ್ಯಾಕ್ಟರಿ ನಿರ್ಮಾಣಕ್ಕೆ ಭಾರೀ ವಿರೋಧ

ಹೊಸಪೇಟೆ: ಬಿಎಂಎಂ ಕಾರ್ಖಾನೆ ವಿಸ್ತರಣೆ, ಸಿಮೆಂಟ್ ಫ್ಯಾಕ್ಟರಿ ನಿರ್ಮಾಣಕ್ಕೆ ಭಾರೀ ವಿರೋಧ

ಕಾರ್ಖಾನೆಯಿಂದ ಹೊರಬರುವ ಕಲುಷಿತ ತ್ಯಾಜ್ಯವನ್ನು ತುಂಗಭದ್ರ ಅಣೆಕಟ್ಟೆಗೆ ಹರಿಸಲಾಗುತ್ತಿದೆ. ಕಾರ್ಖಾನೆಯಿಂದ ಹೊರಬೀಳುತ್ತಿರುವ ಧೂಳು ಮಿಶ್ರಿತ ಹೊಗೆ ಹಾನಿಕಾರಕವಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.

- Advertisement -
- Advertisement -

ಹೊಸಪೇಟೆಯ ಬಳಿಯ ಡಣಾಪುರ ಗ್ರಾಮ ವ್ಯಾಪ್ತಿಯಲ್ಲಿರುವ ಕಳೆದ 20 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಬಿಎಂಎಂ ಇಸ್ಪಾತ್ ಸ್ಟೀಲ್ ತಯಾರಿಕಾ ಕಾರ್ಖಾನೆಯು 2.1 ಎಂಟಿಪಿಎ ಸಾಮರ್ಥ್ಯದ ಘಟಕದ ಯೋಜನೆ ವಿಸ್ತರಣೆಗೆ ಸಜ್ಜಾಗಿದೆ. ಅಲ್ಲದೆ ಸಿಮೆಂಟ್ ಕಾರ್ಖಾನೆಯನ್ನು ಸಹ ಆರಂಭಿಸಲು ಮುಂದಾಗಿದೆ. ಇದರಿಂದ ಈಗಾಗಲೇ ಹದಗೆಟ್ಟಿರುವ ಪರಿಸರ ಮತ್ತಷ್ಟು ಹಾಳಾಗಿ ನಮ್ಮ ಜೀವನ ದುಸ್ತರವಾಗುತ್ತದೆ ಎಂದು ಆರೋಪಿಸಿರುವ ಸ್ಥಳೀಯರು ಘಟಕ ವಿಸ್ತರಣೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸೆಪ್ಟಂಬರ್ 16 ರಂದು ಡಣಾಪುರದಲ್ಲಿ ಅಪರ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆದ ಪರಿಸರ ಸಾರ್ವಜನಿಕ ಆಲಿಕೆ ಕಾರ್ಯಕ್ರಮದಲ್ಲಿ ಪರ-ವಿರೋಧದ ಜಟಾಪಟಿ ನಡೆದಿದೆ. ಕಾರ್ಖಾನೆ ವಿಸ್ತರಣೆಗೆ ಮತ್ತು ಹೊಸ ಸಿಮೆಂಟ್ ಕಾರ್ಖಾನೆ ಸ್ಥಾಪನೆಗೆ ರೈತರು ಸಹಮತ ಸೂಚಿಸಿ ಪತ್ರ ಬರೆದಿದ್ದಾರೆ ಎಂದು ಅಧಿಕಾರಿಗಳು ಹೇಳಿದಾಗ ಅಲ್ಲಿ ನರೆದಿದ್ದ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಒಮ್ಮೆಲೆ ವೇದಿಕೆಯ ಮುಂಭಾಗ ಬಂದು ಫ್ಯಾಕ್ಟರಿ ವಿರುದ್ಧ ಘೋಷಣೆ ಕೂಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ಅಪರ ಜಿಲ್ಲಾಧಿಕಾರಿ ಮಹೇಶ್ ಬಾಬುರವರು, ಪರ ಮತ್ತು ವಿರೋಧದ ಎರಡು ಅಭಿಪ್ರಾಯಗಳನ್ನು ಗಮನಿಸಿದ್ದೇವೆ. ಬಂದಿರುವ ಅರ್ಜಿಗಳಲ್ಲಿಯೂ ಸಹ ಪರ-ವಿರೋಧವಿದೆ. ಈ ಕುರಿತು ಪರಿಶೀಲಿಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದಿದ್ದಾರೆ.

ಗುರುವಾರ ನಡೆದ ಪರಿಸರ ಸಾರ್ವಜನಿಕ ಆಲಿಕೆ ಸಭೆ

ಕೆಲವು ಜನರು ‘ಫ್ಯಾಕ್ಟರಿ ನಿರ್ಮಾಣವಾದರೆ ನಮ್ಮ ಮಕ್ಕಳಿಗೆ ಇಲ್ಲಿಯೇ ಉದ್ಯೋಗ ಸಿಗುತ್ತದೆ ಮತ್ತು ವಲಸೆ ಹೋಗುವುದು ತಪ್ಪುತ್ತದೆ. ಹಾಗಾಗಿ ಕಾರ್ಖಾನೆ ನಿರ್ಮಾಣವಾಗಬೇಕು’ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ‘ಉದ್ಯೋಗದ ಆಮಿಷ ತೋರಿಸಿ ಇಲ್ಲಿ ಬಂದಿರುವ ಕಾರ್ಖಾನೆಗಳು ಎಷ್ಟು ಜನರಿಗೆ ಉದ್ಯೋಗ ಕೊಟ್ಟಿವೆ? ಇಲ್ಲಿರುವ ಕಾರ್ಮಿಕರನ್ನು ಹೇಗೆ ನಡೆಸಿಕೊಳ್ಳುತ್ತಿವೆ? ಕಂಪನಿಯ ತ್ಯಾಜ್ಯ ನೀರು ಮತ್ತು ಧೂಳು ಮಿಶ್ರಿತ ಹೊಗೆಯಿಂದಾಗಿ ನಮ್ಮ ಆರೋಗ್ಯ ಹಾಳಾಗುತ್ತಿದೆ. ಹಾಗಾಗಿ ಕಾರ್ಖಾನೆ ವಿಸ್ತರಣೆ ಬೇ’ಡ ಎಂದು ಬಹಳಷ್ಟು ಜನರು ವಾದಿಸಿದ್ದಾರೆ.

ಮರಿಯಪ್ಪನಹಳ್ಳಿಯ ರಂಗಭೂಮಿ ಕಲಾವಿದ ಸರ್ದಾರ್ ನಾನುಗೌರಿ.ಕಾಂ ಜೊತೆ ಮಾತನಾಡಿ, “ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಸರ್ಕಾರದ ನಿಯಮಗಳ ಪ್ರಕಾರ ಸಂಬಳ ಕೊಡದೆ ಕಾಂಟ್ರಾಕ್ಟರ್‌ಗಳು ಮೋಸ ಮಾಡುತ್ತಿದ್ದಾರೆ. ಅಲ್ಲದೆ ಕಾರ್ಖಾನೆಯಿಂದ ಹೊರಬರುವ ಕಲುಷಿತ ತ್ಯಾಜ್ಯವನ್ನು ತುಂಗಭದ್ರ ಅಣೆಕಟ್ಟೆಗೆ ಹರಿಸಲಾಗುತ್ತಿದೆ. ಕಾರ್ಖಾನೆಯಿಂದ ಹೊರಬೀಳುತ್ತಿರುವ ಧೂಳು ಮಿಶ್ರಿತ ಹೊಗೆ ಪರಿಸರದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಸಾರ್ವಜನಿಕರ ಆರೋಗ್ಯ ಕೆಟ್ಟಿದ್ದು, ಇಲ್ಲಿನ ಜನರಿಗೆ ಶ್ವಾಸಕೋಶದ ಸಮಸ್ಯೆಗಳು ಉಂಟಾಗಿವೆ. ರೈತರ ಬೆಳೆಗಳು ನಾಶವಾಗುತ್ತಿವೆ. ಪ್ರಾಣಿ ಪಕ್ಷಗಳು ಸಂಕುಲ ನಶಿಸುತ್ತಿದೆ. ಈ ಸಣ್ಣ ಪ್ರಮಾಣದ ಘಟಕದಿಂದ ಇಷ್ಟೊಂದು ಅನಾಹುತ ನಡೆಯುತ್ತಿದೆ. ಇನ್ನು ಇದರ ಎರಡು ಪಟ್ಟು ದೊಡ್ಡದಾದ ಸ್ಟೀಲ್ ಪ್ಲಾಂಟ್ ಮತ್ತು ಸಿಮೆಂಟ್ ಕಾರ್ಖಾನೆ ಆರಂಭವಾದರೆ ನಾವು ನೆಮ್ಮದಿಯಿಂದ ಬದುಕಲು ಸಾಧ್ಯವೇ?” ಎಂದು ಪ್ರಶ್ನಿಸಿದ್ದಾರೆ.

ಈಗಿರುವ ಕಾರ್ಖಾನೆ ಸಾಕು. ಹೊಸದಾಗಿ ಕಾರ್ಖಾನೆ ಆರಂಭವಾಗುವುದಕ್ಕೆ ನಮ್ಮ ವಿರೋಧವಿದೆ. ಸದ್ಯಕ್ಕೆ ಕಾರ್ಖನೆ ಬಳಿಯಿರುವ ಜಾಗದಲ್ಲಿ ತ್ಯಾಜ್ಯ ನೀರನ್ನು ಸಂಸ್ಕರಿಸಲು, ಕಾಡು ಬೆಳೆಸಿ ಪರಿಸರ ಹಾನಿ ತಡೆಗಟ್ಟಲು ಬಳಸಬೇಕು ಎಂದು ಸರ್ದಾರ್ ಒತ್ತಾಯಿಸಿದ್ದಾರೆ.

ಇದುವರೆಗೂ ಕಾರ್ಖಾನೆ ಸ್ಥಾಪನೆಗಾಗಿ ಭೂಮಿ ಕಳೆದುಕೊಂಡ ಸ್ಥಳೀಯರೊಬ್ಬರು ಪರಿಸರ ಸಾರ್ವಜನಿಕ ಆಲಿಕೆ ಕಾರ್ಯಕ್ರಮದಲ್ಲಿ ಮಾತನಾಡಿ ತಮ್ಮ ಅಳಲು ತೋಡಿಕೊಂಡಿದ್ದಾರೆ. “ಭೂಮಿ ನೀಡುವ ಮುನ್ನ ನಮಗೆ ಉದ್ಯೋಗ ಕೊಡುವ ಭರವಸೆ ನೀಡಲಾಗಿತ್ತು. ಆದರೆ ಇದುವರೆಗೆ ನಮಗೆ ಯಾವುದೇ ಉದ್ಯೋಗ ಸಿಕ್ಕಿಲ್ಲ. ಕಾರ್ಖಾನೆಯವರು ಆಗ ಬನ್ನಿ, ಈಗ ಬನ್ನಿ ಎಂದು ಅಲೆದಾಡಿಸುತ್ತಿದ್ದಾರೆ. ಇನ್ನೊಂದೆಡೆ ಫ್ಯಾಕ್ಟರಿ ದೂಳಿನಿಂದಾಗಿ ಸುತ್ತಲಿನ 90 ಜನರಿಗೆ ಕ್ಷಯ ರೋಗಿ ಬಂದಿದೆ ಎಂದು ವಿಮುಕ್ತಿ ಎನ್‌ಜಿಓದವರು ವರದಿ ಮಾಡಿದ್ದಾರೆ. ಹಾಗಾಗಿ ಇಲ್ಲಿ ಹೊಸ ಫ್ಯಾಕ್ಟರಿ ಬೇಡವೇ ಬೇಡ” ಎಂದು ಒತ್ತಾಯಿಸಿದ್ದಾರೆ.

ಒಟ್ಟಾರೆಯಾಗಿ ಡಣಾಪುರದಲ್ಲಿನ ಬಿಎಂಎಂ ಇಸ್ಪಾತ್ ಸ್ಟೀಲ್ ಕಾರ್ಖಾನೆಯ ಹೊಸ ಘಟಕಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಸಿಮೆಂಟ್ ಫ್ಯಾಕ್ಟರಿ ಆರಂಭವಾದರೆ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಲಿದೆ. ಹಾಗಾಗಿ ಬಳ್ಳಾರಿ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳು ಯಾವುದೇ ಒತ್ತಡ, ಪ್ರಭಾವಕ್ಕೆ ಒಳಗಾಗದೆ ಎಲ್ಲಾ ಆಯಾಮಗಳಿಂದ ಪರೀಶಿಲಿಸಿ ಹೆಜ್ಜೆ ಇಡಬೇಕಾಗಿದೆ.

ಇದನ್ನೂ ಓದಿ: ಚೀತಾಗಳನ್ನೇನೋ ತಂದಾಯಿತು; ಮುಂದಿನ ಪರಿಣಾಮ ಬಲ್ಲಿರೇನು? ಪರಿಸರತಜ್ಞರು ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....