Homeಚಳವಳಿಹೊಸಪೇಟೆ: ಬಿಎಂಎಂ ಕಾರ್ಖಾನೆ ವಿಸ್ತರಣೆ, ಸಿಮೆಂಟ್ ಫ್ಯಾಕ್ಟರಿ ನಿರ್ಮಾಣಕ್ಕೆ ಭಾರೀ ವಿರೋಧ

ಹೊಸಪೇಟೆ: ಬಿಎಂಎಂ ಕಾರ್ಖಾನೆ ವಿಸ್ತರಣೆ, ಸಿಮೆಂಟ್ ಫ್ಯಾಕ್ಟರಿ ನಿರ್ಮಾಣಕ್ಕೆ ಭಾರೀ ವಿರೋಧ

ಕಾರ್ಖಾನೆಯಿಂದ ಹೊರಬರುವ ಕಲುಷಿತ ತ್ಯಾಜ್ಯವನ್ನು ತುಂಗಭದ್ರ ಅಣೆಕಟ್ಟೆಗೆ ಹರಿಸಲಾಗುತ್ತಿದೆ. ಕಾರ್ಖಾನೆಯಿಂದ ಹೊರಬೀಳುತ್ತಿರುವ ಧೂಳು ಮಿಶ್ರಿತ ಹೊಗೆ ಹಾನಿಕಾರಕವಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.

- Advertisement -
- Advertisement -

ಹೊಸಪೇಟೆಯ ಬಳಿಯ ಡಣಾಪುರ ಗ್ರಾಮ ವ್ಯಾಪ್ತಿಯಲ್ಲಿರುವ ಕಳೆದ 20 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಬಿಎಂಎಂ ಇಸ್ಪಾತ್ ಸ್ಟೀಲ್ ತಯಾರಿಕಾ ಕಾರ್ಖಾನೆಯು 2.1 ಎಂಟಿಪಿಎ ಸಾಮರ್ಥ್ಯದ ಘಟಕದ ಯೋಜನೆ ವಿಸ್ತರಣೆಗೆ ಸಜ್ಜಾಗಿದೆ. ಅಲ್ಲದೆ ಸಿಮೆಂಟ್ ಕಾರ್ಖಾನೆಯನ್ನು ಸಹ ಆರಂಭಿಸಲು ಮುಂದಾಗಿದೆ. ಇದರಿಂದ ಈಗಾಗಲೇ ಹದಗೆಟ್ಟಿರುವ ಪರಿಸರ ಮತ್ತಷ್ಟು ಹಾಳಾಗಿ ನಮ್ಮ ಜೀವನ ದುಸ್ತರವಾಗುತ್ತದೆ ಎಂದು ಆರೋಪಿಸಿರುವ ಸ್ಥಳೀಯರು ಘಟಕ ವಿಸ್ತರಣೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸೆಪ್ಟಂಬರ್ 16 ರಂದು ಡಣಾಪುರದಲ್ಲಿ ಅಪರ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆದ ಪರಿಸರ ಸಾರ್ವಜನಿಕ ಆಲಿಕೆ ಕಾರ್ಯಕ್ರಮದಲ್ಲಿ ಪರ-ವಿರೋಧದ ಜಟಾಪಟಿ ನಡೆದಿದೆ. ಕಾರ್ಖಾನೆ ವಿಸ್ತರಣೆಗೆ ಮತ್ತು ಹೊಸ ಸಿಮೆಂಟ್ ಕಾರ್ಖಾನೆ ಸ್ಥಾಪನೆಗೆ ರೈತರು ಸಹಮತ ಸೂಚಿಸಿ ಪತ್ರ ಬರೆದಿದ್ದಾರೆ ಎಂದು ಅಧಿಕಾರಿಗಳು ಹೇಳಿದಾಗ ಅಲ್ಲಿ ನರೆದಿದ್ದ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಒಮ್ಮೆಲೆ ವೇದಿಕೆಯ ಮುಂಭಾಗ ಬಂದು ಫ್ಯಾಕ್ಟರಿ ವಿರುದ್ಧ ಘೋಷಣೆ ಕೂಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ಅಪರ ಜಿಲ್ಲಾಧಿಕಾರಿ ಮಹೇಶ್ ಬಾಬುರವರು, ಪರ ಮತ್ತು ವಿರೋಧದ ಎರಡು ಅಭಿಪ್ರಾಯಗಳನ್ನು ಗಮನಿಸಿದ್ದೇವೆ. ಬಂದಿರುವ ಅರ್ಜಿಗಳಲ್ಲಿಯೂ ಸಹ ಪರ-ವಿರೋಧವಿದೆ. ಈ ಕುರಿತು ಪರಿಶೀಲಿಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದಿದ್ದಾರೆ.

ಗುರುವಾರ ನಡೆದ ಪರಿಸರ ಸಾರ್ವಜನಿಕ ಆಲಿಕೆ ಸಭೆ

ಕೆಲವು ಜನರು ‘ಫ್ಯಾಕ್ಟರಿ ನಿರ್ಮಾಣವಾದರೆ ನಮ್ಮ ಮಕ್ಕಳಿಗೆ ಇಲ್ಲಿಯೇ ಉದ್ಯೋಗ ಸಿಗುತ್ತದೆ ಮತ್ತು ವಲಸೆ ಹೋಗುವುದು ತಪ್ಪುತ್ತದೆ. ಹಾಗಾಗಿ ಕಾರ್ಖಾನೆ ನಿರ್ಮಾಣವಾಗಬೇಕು’ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ‘ಉದ್ಯೋಗದ ಆಮಿಷ ತೋರಿಸಿ ಇಲ್ಲಿ ಬಂದಿರುವ ಕಾರ್ಖಾನೆಗಳು ಎಷ್ಟು ಜನರಿಗೆ ಉದ್ಯೋಗ ಕೊಟ್ಟಿವೆ? ಇಲ್ಲಿರುವ ಕಾರ್ಮಿಕರನ್ನು ಹೇಗೆ ನಡೆಸಿಕೊಳ್ಳುತ್ತಿವೆ? ಕಂಪನಿಯ ತ್ಯಾಜ್ಯ ನೀರು ಮತ್ತು ಧೂಳು ಮಿಶ್ರಿತ ಹೊಗೆಯಿಂದಾಗಿ ನಮ್ಮ ಆರೋಗ್ಯ ಹಾಳಾಗುತ್ತಿದೆ. ಹಾಗಾಗಿ ಕಾರ್ಖಾನೆ ವಿಸ್ತರಣೆ ಬೇ’ಡ ಎಂದು ಬಹಳಷ್ಟು ಜನರು ವಾದಿಸಿದ್ದಾರೆ.

ಮರಿಯಪ್ಪನಹಳ್ಳಿಯ ರಂಗಭೂಮಿ ಕಲಾವಿದ ಸರ್ದಾರ್ ನಾನುಗೌರಿ.ಕಾಂ ಜೊತೆ ಮಾತನಾಡಿ, “ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಸರ್ಕಾರದ ನಿಯಮಗಳ ಪ್ರಕಾರ ಸಂಬಳ ಕೊಡದೆ ಕಾಂಟ್ರಾಕ್ಟರ್‌ಗಳು ಮೋಸ ಮಾಡುತ್ತಿದ್ದಾರೆ. ಅಲ್ಲದೆ ಕಾರ್ಖಾನೆಯಿಂದ ಹೊರಬರುವ ಕಲುಷಿತ ತ್ಯಾಜ್ಯವನ್ನು ತುಂಗಭದ್ರ ಅಣೆಕಟ್ಟೆಗೆ ಹರಿಸಲಾಗುತ್ತಿದೆ. ಕಾರ್ಖಾನೆಯಿಂದ ಹೊರಬೀಳುತ್ತಿರುವ ಧೂಳು ಮಿಶ್ರಿತ ಹೊಗೆ ಪರಿಸರದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಸಾರ್ವಜನಿಕರ ಆರೋಗ್ಯ ಕೆಟ್ಟಿದ್ದು, ಇಲ್ಲಿನ ಜನರಿಗೆ ಶ್ವಾಸಕೋಶದ ಸಮಸ್ಯೆಗಳು ಉಂಟಾಗಿವೆ. ರೈತರ ಬೆಳೆಗಳು ನಾಶವಾಗುತ್ತಿವೆ. ಪ್ರಾಣಿ ಪಕ್ಷಗಳು ಸಂಕುಲ ನಶಿಸುತ್ತಿದೆ. ಈ ಸಣ್ಣ ಪ್ರಮಾಣದ ಘಟಕದಿಂದ ಇಷ್ಟೊಂದು ಅನಾಹುತ ನಡೆಯುತ್ತಿದೆ. ಇನ್ನು ಇದರ ಎರಡು ಪಟ್ಟು ದೊಡ್ಡದಾದ ಸ್ಟೀಲ್ ಪ್ಲಾಂಟ್ ಮತ್ತು ಸಿಮೆಂಟ್ ಕಾರ್ಖಾನೆ ಆರಂಭವಾದರೆ ನಾವು ನೆಮ್ಮದಿಯಿಂದ ಬದುಕಲು ಸಾಧ್ಯವೇ?” ಎಂದು ಪ್ರಶ್ನಿಸಿದ್ದಾರೆ.

ಈಗಿರುವ ಕಾರ್ಖಾನೆ ಸಾಕು. ಹೊಸದಾಗಿ ಕಾರ್ಖಾನೆ ಆರಂಭವಾಗುವುದಕ್ಕೆ ನಮ್ಮ ವಿರೋಧವಿದೆ. ಸದ್ಯಕ್ಕೆ ಕಾರ್ಖನೆ ಬಳಿಯಿರುವ ಜಾಗದಲ್ಲಿ ತ್ಯಾಜ್ಯ ನೀರನ್ನು ಸಂಸ್ಕರಿಸಲು, ಕಾಡು ಬೆಳೆಸಿ ಪರಿಸರ ಹಾನಿ ತಡೆಗಟ್ಟಲು ಬಳಸಬೇಕು ಎಂದು ಸರ್ದಾರ್ ಒತ್ತಾಯಿಸಿದ್ದಾರೆ.

ಇದುವರೆಗೂ ಕಾರ್ಖಾನೆ ಸ್ಥಾಪನೆಗಾಗಿ ಭೂಮಿ ಕಳೆದುಕೊಂಡ ಸ್ಥಳೀಯರೊಬ್ಬರು ಪರಿಸರ ಸಾರ್ವಜನಿಕ ಆಲಿಕೆ ಕಾರ್ಯಕ್ರಮದಲ್ಲಿ ಮಾತನಾಡಿ ತಮ್ಮ ಅಳಲು ತೋಡಿಕೊಂಡಿದ್ದಾರೆ. “ಭೂಮಿ ನೀಡುವ ಮುನ್ನ ನಮಗೆ ಉದ್ಯೋಗ ಕೊಡುವ ಭರವಸೆ ನೀಡಲಾಗಿತ್ತು. ಆದರೆ ಇದುವರೆಗೆ ನಮಗೆ ಯಾವುದೇ ಉದ್ಯೋಗ ಸಿಕ್ಕಿಲ್ಲ. ಕಾರ್ಖಾನೆಯವರು ಆಗ ಬನ್ನಿ, ಈಗ ಬನ್ನಿ ಎಂದು ಅಲೆದಾಡಿಸುತ್ತಿದ್ದಾರೆ. ಇನ್ನೊಂದೆಡೆ ಫ್ಯಾಕ್ಟರಿ ದೂಳಿನಿಂದಾಗಿ ಸುತ್ತಲಿನ 90 ಜನರಿಗೆ ಕ್ಷಯ ರೋಗಿ ಬಂದಿದೆ ಎಂದು ವಿಮುಕ್ತಿ ಎನ್‌ಜಿಓದವರು ವರದಿ ಮಾಡಿದ್ದಾರೆ. ಹಾಗಾಗಿ ಇಲ್ಲಿ ಹೊಸ ಫ್ಯಾಕ್ಟರಿ ಬೇಡವೇ ಬೇಡ” ಎಂದು ಒತ್ತಾಯಿಸಿದ್ದಾರೆ.

ಒಟ್ಟಾರೆಯಾಗಿ ಡಣಾಪುರದಲ್ಲಿನ ಬಿಎಂಎಂ ಇಸ್ಪಾತ್ ಸ್ಟೀಲ್ ಕಾರ್ಖಾನೆಯ ಹೊಸ ಘಟಕಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಸಿಮೆಂಟ್ ಫ್ಯಾಕ್ಟರಿ ಆರಂಭವಾದರೆ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಲಿದೆ. ಹಾಗಾಗಿ ಬಳ್ಳಾರಿ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳು ಯಾವುದೇ ಒತ್ತಡ, ಪ್ರಭಾವಕ್ಕೆ ಒಳಗಾಗದೆ ಎಲ್ಲಾ ಆಯಾಮಗಳಿಂದ ಪರೀಶಿಲಿಸಿ ಹೆಜ್ಜೆ ಇಡಬೇಕಾಗಿದೆ.

ಇದನ್ನೂ ಓದಿ: ಚೀತಾಗಳನ್ನೇನೋ ತಂದಾಯಿತು; ಮುಂದಿನ ಪರಿಣಾಮ ಬಲ್ಲಿರೇನು? ಪರಿಸರತಜ್ಞರು ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....