Homeಚಳವಳಿಹೊಸಪೇಟೆ: ಬಿಎಂಎಂ ಕಾರ್ಖಾನೆ ವಿಸ್ತರಣೆ, ಸಿಮೆಂಟ್ ಫ್ಯಾಕ್ಟರಿ ನಿರ್ಮಾಣಕ್ಕೆ ಭಾರೀ ವಿರೋಧ

ಹೊಸಪೇಟೆ: ಬಿಎಂಎಂ ಕಾರ್ಖಾನೆ ವಿಸ್ತರಣೆ, ಸಿಮೆಂಟ್ ಫ್ಯಾಕ್ಟರಿ ನಿರ್ಮಾಣಕ್ಕೆ ಭಾರೀ ವಿರೋಧ

ಕಾರ್ಖಾನೆಯಿಂದ ಹೊರಬರುವ ಕಲುಷಿತ ತ್ಯಾಜ್ಯವನ್ನು ತುಂಗಭದ್ರ ಅಣೆಕಟ್ಟೆಗೆ ಹರಿಸಲಾಗುತ್ತಿದೆ. ಕಾರ್ಖಾನೆಯಿಂದ ಹೊರಬೀಳುತ್ತಿರುವ ಧೂಳು ಮಿಶ್ರಿತ ಹೊಗೆ ಹಾನಿಕಾರಕವಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.

- Advertisement -
- Advertisement -

ಹೊಸಪೇಟೆಯ ಬಳಿಯ ಡಣಾಪುರ ಗ್ರಾಮ ವ್ಯಾಪ್ತಿಯಲ್ಲಿರುವ ಕಳೆದ 20 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಬಿಎಂಎಂ ಇಸ್ಪಾತ್ ಸ್ಟೀಲ್ ತಯಾರಿಕಾ ಕಾರ್ಖಾನೆಯು 2.1 ಎಂಟಿಪಿಎ ಸಾಮರ್ಥ್ಯದ ಘಟಕದ ಯೋಜನೆ ವಿಸ್ತರಣೆಗೆ ಸಜ್ಜಾಗಿದೆ. ಅಲ್ಲದೆ ಸಿಮೆಂಟ್ ಕಾರ್ಖಾನೆಯನ್ನು ಸಹ ಆರಂಭಿಸಲು ಮುಂದಾಗಿದೆ. ಇದರಿಂದ ಈಗಾಗಲೇ ಹದಗೆಟ್ಟಿರುವ ಪರಿಸರ ಮತ್ತಷ್ಟು ಹಾಳಾಗಿ ನಮ್ಮ ಜೀವನ ದುಸ್ತರವಾಗುತ್ತದೆ ಎಂದು ಆರೋಪಿಸಿರುವ ಸ್ಥಳೀಯರು ಘಟಕ ವಿಸ್ತರಣೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸೆಪ್ಟಂಬರ್ 16 ರಂದು ಡಣಾಪುರದಲ್ಲಿ ಅಪರ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆದ ಪರಿಸರ ಸಾರ್ವಜನಿಕ ಆಲಿಕೆ ಕಾರ್ಯಕ್ರಮದಲ್ಲಿ ಪರ-ವಿರೋಧದ ಜಟಾಪಟಿ ನಡೆದಿದೆ. ಕಾರ್ಖಾನೆ ವಿಸ್ತರಣೆಗೆ ಮತ್ತು ಹೊಸ ಸಿಮೆಂಟ್ ಕಾರ್ಖಾನೆ ಸ್ಥಾಪನೆಗೆ ರೈತರು ಸಹಮತ ಸೂಚಿಸಿ ಪತ್ರ ಬರೆದಿದ್ದಾರೆ ಎಂದು ಅಧಿಕಾರಿಗಳು ಹೇಳಿದಾಗ ಅಲ್ಲಿ ನರೆದಿದ್ದ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಒಮ್ಮೆಲೆ ವೇದಿಕೆಯ ಮುಂಭಾಗ ಬಂದು ಫ್ಯಾಕ್ಟರಿ ವಿರುದ್ಧ ಘೋಷಣೆ ಕೂಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ಅಪರ ಜಿಲ್ಲಾಧಿಕಾರಿ ಮಹೇಶ್ ಬಾಬುರವರು, ಪರ ಮತ್ತು ವಿರೋಧದ ಎರಡು ಅಭಿಪ್ರಾಯಗಳನ್ನು ಗಮನಿಸಿದ್ದೇವೆ. ಬಂದಿರುವ ಅರ್ಜಿಗಳಲ್ಲಿಯೂ ಸಹ ಪರ-ವಿರೋಧವಿದೆ. ಈ ಕುರಿತು ಪರಿಶೀಲಿಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದಿದ್ದಾರೆ.

ಗುರುವಾರ ನಡೆದ ಪರಿಸರ ಸಾರ್ವಜನಿಕ ಆಲಿಕೆ ಸಭೆ

ಕೆಲವು ಜನರು ‘ಫ್ಯಾಕ್ಟರಿ ನಿರ್ಮಾಣವಾದರೆ ನಮ್ಮ ಮಕ್ಕಳಿಗೆ ಇಲ್ಲಿಯೇ ಉದ್ಯೋಗ ಸಿಗುತ್ತದೆ ಮತ್ತು ವಲಸೆ ಹೋಗುವುದು ತಪ್ಪುತ್ತದೆ. ಹಾಗಾಗಿ ಕಾರ್ಖಾನೆ ನಿರ್ಮಾಣವಾಗಬೇಕು’ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ‘ಉದ್ಯೋಗದ ಆಮಿಷ ತೋರಿಸಿ ಇಲ್ಲಿ ಬಂದಿರುವ ಕಾರ್ಖಾನೆಗಳು ಎಷ್ಟು ಜನರಿಗೆ ಉದ್ಯೋಗ ಕೊಟ್ಟಿವೆ? ಇಲ್ಲಿರುವ ಕಾರ್ಮಿಕರನ್ನು ಹೇಗೆ ನಡೆಸಿಕೊಳ್ಳುತ್ತಿವೆ? ಕಂಪನಿಯ ತ್ಯಾಜ್ಯ ನೀರು ಮತ್ತು ಧೂಳು ಮಿಶ್ರಿತ ಹೊಗೆಯಿಂದಾಗಿ ನಮ್ಮ ಆರೋಗ್ಯ ಹಾಳಾಗುತ್ತಿದೆ. ಹಾಗಾಗಿ ಕಾರ್ಖಾನೆ ವಿಸ್ತರಣೆ ಬೇ’ಡ ಎಂದು ಬಹಳಷ್ಟು ಜನರು ವಾದಿಸಿದ್ದಾರೆ.

ಮರಿಯಪ್ಪನಹಳ್ಳಿಯ ರಂಗಭೂಮಿ ಕಲಾವಿದ ಸರ್ದಾರ್ ನಾನುಗೌರಿ.ಕಾಂ ಜೊತೆ ಮಾತನಾಡಿ, “ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಸರ್ಕಾರದ ನಿಯಮಗಳ ಪ್ರಕಾರ ಸಂಬಳ ಕೊಡದೆ ಕಾಂಟ್ರಾಕ್ಟರ್‌ಗಳು ಮೋಸ ಮಾಡುತ್ತಿದ್ದಾರೆ. ಅಲ್ಲದೆ ಕಾರ್ಖಾನೆಯಿಂದ ಹೊರಬರುವ ಕಲುಷಿತ ತ್ಯಾಜ್ಯವನ್ನು ತುಂಗಭದ್ರ ಅಣೆಕಟ್ಟೆಗೆ ಹರಿಸಲಾಗುತ್ತಿದೆ. ಕಾರ್ಖಾನೆಯಿಂದ ಹೊರಬೀಳುತ್ತಿರುವ ಧೂಳು ಮಿಶ್ರಿತ ಹೊಗೆ ಪರಿಸರದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಸಾರ್ವಜನಿಕರ ಆರೋಗ್ಯ ಕೆಟ್ಟಿದ್ದು, ಇಲ್ಲಿನ ಜನರಿಗೆ ಶ್ವಾಸಕೋಶದ ಸಮಸ್ಯೆಗಳು ಉಂಟಾಗಿವೆ. ರೈತರ ಬೆಳೆಗಳು ನಾಶವಾಗುತ್ತಿವೆ. ಪ್ರಾಣಿ ಪಕ್ಷಗಳು ಸಂಕುಲ ನಶಿಸುತ್ತಿದೆ. ಈ ಸಣ್ಣ ಪ್ರಮಾಣದ ಘಟಕದಿಂದ ಇಷ್ಟೊಂದು ಅನಾಹುತ ನಡೆಯುತ್ತಿದೆ. ಇನ್ನು ಇದರ ಎರಡು ಪಟ್ಟು ದೊಡ್ಡದಾದ ಸ್ಟೀಲ್ ಪ್ಲಾಂಟ್ ಮತ್ತು ಸಿಮೆಂಟ್ ಕಾರ್ಖಾನೆ ಆರಂಭವಾದರೆ ನಾವು ನೆಮ್ಮದಿಯಿಂದ ಬದುಕಲು ಸಾಧ್ಯವೇ?” ಎಂದು ಪ್ರಶ್ನಿಸಿದ್ದಾರೆ.

ಈಗಿರುವ ಕಾರ್ಖಾನೆ ಸಾಕು. ಹೊಸದಾಗಿ ಕಾರ್ಖಾನೆ ಆರಂಭವಾಗುವುದಕ್ಕೆ ನಮ್ಮ ವಿರೋಧವಿದೆ. ಸದ್ಯಕ್ಕೆ ಕಾರ್ಖನೆ ಬಳಿಯಿರುವ ಜಾಗದಲ್ಲಿ ತ್ಯಾಜ್ಯ ನೀರನ್ನು ಸಂಸ್ಕರಿಸಲು, ಕಾಡು ಬೆಳೆಸಿ ಪರಿಸರ ಹಾನಿ ತಡೆಗಟ್ಟಲು ಬಳಸಬೇಕು ಎಂದು ಸರ್ದಾರ್ ಒತ್ತಾಯಿಸಿದ್ದಾರೆ.

ಇದುವರೆಗೂ ಕಾರ್ಖಾನೆ ಸ್ಥಾಪನೆಗಾಗಿ ಭೂಮಿ ಕಳೆದುಕೊಂಡ ಸ್ಥಳೀಯರೊಬ್ಬರು ಪರಿಸರ ಸಾರ್ವಜನಿಕ ಆಲಿಕೆ ಕಾರ್ಯಕ್ರಮದಲ್ಲಿ ಮಾತನಾಡಿ ತಮ್ಮ ಅಳಲು ತೋಡಿಕೊಂಡಿದ್ದಾರೆ. “ಭೂಮಿ ನೀಡುವ ಮುನ್ನ ನಮಗೆ ಉದ್ಯೋಗ ಕೊಡುವ ಭರವಸೆ ನೀಡಲಾಗಿತ್ತು. ಆದರೆ ಇದುವರೆಗೆ ನಮಗೆ ಯಾವುದೇ ಉದ್ಯೋಗ ಸಿಕ್ಕಿಲ್ಲ. ಕಾರ್ಖಾನೆಯವರು ಆಗ ಬನ್ನಿ, ಈಗ ಬನ್ನಿ ಎಂದು ಅಲೆದಾಡಿಸುತ್ತಿದ್ದಾರೆ. ಇನ್ನೊಂದೆಡೆ ಫ್ಯಾಕ್ಟರಿ ದೂಳಿನಿಂದಾಗಿ ಸುತ್ತಲಿನ 90 ಜನರಿಗೆ ಕ್ಷಯ ರೋಗಿ ಬಂದಿದೆ ಎಂದು ವಿಮುಕ್ತಿ ಎನ್‌ಜಿಓದವರು ವರದಿ ಮಾಡಿದ್ದಾರೆ. ಹಾಗಾಗಿ ಇಲ್ಲಿ ಹೊಸ ಫ್ಯಾಕ್ಟರಿ ಬೇಡವೇ ಬೇಡ” ಎಂದು ಒತ್ತಾಯಿಸಿದ್ದಾರೆ.

ಒಟ್ಟಾರೆಯಾಗಿ ಡಣಾಪುರದಲ್ಲಿನ ಬಿಎಂಎಂ ಇಸ್ಪಾತ್ ಸ್ಟೀಲ್ ಕಾರ್ಖಾನೆಯ ಹೊಸ ಘಟಕಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಸಿಮೆಂಟ್ ಫ್ಯಾಕ್ಟರಿ ಆರಂಭವಾದರೆ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಲಿದೆ. ಹಾಗಾಗಿ ಬಳ್ಳಾರಿ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳು ಯಾವುದೇ ಒತ್ತಡ, ಪ್ರಭಾವಕ್ಕೆ ಒಳಗಾಗದೆ ಎಲ್ಲಾ ಆಯಾಮಗಳಿಂದ ಪರೀಶಿಲಿಸಿ ಹೆಜ್ಜೆ ಇಡಬೇಕಾಗಿದೆ.

ಇದನ್ನೂ ಓದಿ: ಚೀತಾಗಳನ್ನೇನೋ ತಂದಾಯಿತು; ಮುಂದಿನ ಪರಿಣಾಮ ಬಲ್ಲಿರೇನು? ಪರಿಸರತಜ್ಞರು ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...