Homeಮುಖಪುಟಮಾನಸಿಕ ಅಸ್ವಸ್ಥ ರೋಗಿಗಳನ್ನು ಬಿಸಾಡಿದ ಆಸ್ಪತ್ರೆ:  ಒಂದು ಶವ ಪತ್ತೆ

ಮಾನಸಿಕ ಅಸ್ವಸ್ಥ ರೋಗಿಗಳನ್ನು ಬಿಸಾಡಿದ ಆಸ್ಪತ್ರೆ:  ಒಂದು ಶವ ಪತ್ತೆ

- Advertisement -
- Advertisement -

ಔರಂಗಾಬಾದ್: ಬಿಹಾರದ ಔರಂಗಾಬಾದ್ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಗಳು ಇಬ್ಬರು ಮಾನಸಿಕ ಅಸ್ವಸ್ಥ ರೋಗಿಗಳನ್ನು ಬೆಡ್‌ಶೀಟ್‌ಗಳಿಂದ ಸುತ್ತಿಕೊಂಡು ಕಟ್ಟಿಹಾಕಿ ಆಸ್ಪತ್ರೆಯಿಂದ ಸುಮಾರು 20 ಕಿ.ಮೀ. ದೂರದಲ್ಲಿ ಎಸೆದು ಬಂದಿದ್ದು, ಇದರಲ್ಲಿ ಒಬ್ಬ ರೋಗಿಯು ಸಾವನ್ನಪ್ಪಿದ್ದು, ಇನ್ನೊಬ್ಬ ಕಾಣೆಯಾಗಿದ್ದಾನೆ ಎಂದು ರಾಜ್ಯ ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸ್ವಾಸ್ಥ್ಯ ಮಿಷನ್ ಎಂದು ಬರೆದಿರುವ ಕೆಂಪು ಮತ್ತು ಬಿಳಿ ಬೆಡ್ ಶೀಟ್‌ನಲ್ಲಿ ಸುತ್ತಿದ 50 ವರ್ಷದ ವ್ಯಕ್ತಿಯ ಅಪರಿಚಿತ ಶವವನ್ನು ಪೊಲೀಸರು ಪತ್ತೆ ಮಾಡಿದಾಗ ಈ ಘಟನೆ ಬೆಳಕಿಗೆ ಬಂದಿದೆ.

ಔರಂಗಾಬಾದ್‌ನ ಮಾಡೆಲ್ ಸದರ್ ಆಸ್ಪತ್ರೆಯ ಇಬ್ಬರು ಸಿಬ್ಬಂದಿಗಳಾದ ಹರೇಂದ್ರ ಕುಮಾರ್- ರೋಗಿಗಳನ್ನು ಸ್ಟ್ರೆಚರ್‌ನಲ್ಲಿ ತುಂಬಿಕೊಂಡರೆ ಮತ್ತು ಸ್ಟ್ರೆಚರ್ ಸಿಬ್ಬಂದಿ ಸ್ರಂಜನ್ ಕುಮಾರ್- ಇಬ್ಬರು ಮಾನಸಿಕ ಅಸ್ವಸ್ಥ ರೋಗಿಗಳಿಗೆ ಬೆಡ್‌ಶೀಟ್‌ಗಳನ್ನು ಸುತ್ತಿ ಆಸ್ಪತ್ರೆಯ ಆಂಬ್ಯುಲೆನ್ಸ್‌ಗೆ ಹಾಕಿದರು ಮತ್ತು ಕುಗ್ರಾಮವೊಂದರಲ್ಲಿ ಅವರನ್ನು ಬಿಟ್ಟು ತೆರಳಿದ್ದರು ಎಂದು  ಪೊಲೀಸರು ಹೇಳಿದ್ದಾರೆ.

ಸ್ಟ್ರೆಚರ್ ಮೇಲೆ ಕರೆದೊಯ್ಯುವಾಗ ಇಬ್ಬರು ಜೀವಂತವಾಗಿದ್ದರು ಎಂದು ಸುರಂಜನ್ ಕುಮಾರ್ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ. ರೋಗಿಗಳಲ್ಲಿ ಒಬ್ಬರು ನಂತರ ಸಾವನ್ನಪ್ಪಿದರು, ಇನ್ನೊಬ್ಬರು ಇನ್ನೂ ಪತ್ತೆಯಾಗಿಲ್ಲ. ತನಿಖೆ ಮುಂದುವರಿದಿದ್ದು, ನಾಪತ್ತೆಯಾಗಿರುವ ರೋಗಿಗಾಗಿ ಶೋಧ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಸ್ಪತ್ರೆಯ ಡೆಪ್ಯುಟಿ ಸೂಪರಿಂಟೆಂಡೆಂಟ್ ಕುಮಾರ್ ಅಶುತೋಷ್ ಮತ್ತು ಮ್ಯಾನೇಜರ್ ಹೇಮಂತ್ ರಾಜನ್ ಅವರ ಆದೇಶವನ್ನು ಪಾಲಿಸಿದ್ದೇವೆ. ಅವರನ್ನು ದೂರದ ಪ್ರದೇಶಗಳಿಗೆ ಬಿಡುವಂತೆ ಆಸ್ಪತ್ರೆಯ ಅಧಿಕಾರಿಗಳು ನಮ್ಮನ್ನು ಕೇಳಿಕೊಂಡರು ಎಂದು ಹರೇಂದ್ರ ಮತ್ತು ಸುರಂಜನ್ ತನಿಖೆಯ ಸಮಯದಲ್ಲಿ ಪೊಲೀಸರಿಗೆ ತಿಳಿಸಿದ್ದಾರೆ.

ಆರರಿಂದ ಏಳು ದಿನಗಳ ಹಿಂದೆ ಇಬ್ಬರು ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಮತ್ತು ಇಬ್ಬರೂ ಆಸ್ಪತ್ರೆಯ ಆವರಣವನ್ನು ಕೊಳಕು ಮಾಡುತ್ತಿದ್ದರು ಎಂದು ಆಸ್ಪತ್ರೆಯ ಆಡಳಿತ ಮಂಡಳಿ ತಿಳಿಸಿದೆ.

ಆಸ್ಪತ್ರೆಯ ಕುಮಾರ್ ಅಶುತೋಷ್, ಹೇಮಂತ್ ರಾಜನ್, ಮೇಲ್ವಿಚಾರಕ ಶೈಲೇಶ್ ಕುಮಾರ್ ಮಿಶ್ರಾ, ಹರೇಂದರ್ ಕುಮಾರ್, ಆಂಬ್ಯುಲೆನ್ಸ್ ಚಾಲಕ ಶಿವಶಂಕರ್ ಕುಮಾರ್ ಮತ್ತು ಸ್ಟ್ರೆಚರ್ ಸಿಬ್ಬಂದಿ ಸುರಂಜನ್ ಮತ್ತು ಧರ್ಮಪಾಲ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 105 ಅಡಿಯಲ್ಲಿ ಸಬ್ ಇನ್ಸ್‌ಪೆಕ್ಟರ್ ದೀಪಕ್ ಕುಮಾರ್ ರೈ ಅವರ ಹೇಳಿಕೆಯ ಆಧಾರದ ಮೇಲೆ ಪೊಲೀಸ್ ದೂರು ದಾಖಲಿಸಲಾಗಿದೆ.

ನಾವು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದೇವೆ. ಈವರೆಗೆ ಯಾರ ಬಂಧನವೂ ಆಗಿಲ್ಲ. ಎರಡನೇ ರೋಗಿಯ ಹುಡುಕಾಟವೂ ನಡೆಯುತ್ತಿದೆ ಎಂದು ಔರಂಗಾಬಾದ್ ಎಸ್ಪಿ ಅಂಬರೀಷ್ ರಾಹುಲ್ ಹೇಳಿದ್ದಾರೆ.

ನವೆಂಬರ್ 12ರ ಬೆಳ್ಳಂಬೆಳಗ್ಗೆ ಪೋಖ್ರಾಹಿ ದೇವಸ್ಥಾನದ ಬಳಿ ಆಂಬ್ಯುಲೆನ್ಸ್ ನಿಂದ ಬೆಡ್‌ ಶೀಟ್ ತುಂಬಿದ್ದ ದೇಹಗಳನ್ನು ಎಸೆಯುವುದನ್ನು ನೋಡಿದ್ದೇನೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿರುವುದು ಪ್ರಕರಣಕ್ಕೆ ತಿರುವು ನೀಡಿದೆ.

“ನವೆಂಬರ್ 14 ರಂದು ಪೊಲೀಸ್ ಠಾಣೆಯಲ್ಲಿಈ ಕುರಿತು ಅಸ್ವಾಭಾವಿಕ ಸಾವಿನ ಪ್ರಕರಣವನ್ನು ದಾಖಲಿಸಲಾಗಿತ್ತು. ಆದರೆ ಪೊಲೀಸರು ಶವವಾಗಿ ಬಿದ್ದಿದ್ದ ಅಪರಿಚಿತ ವ್ಯಕ್ತಿಯ ವಿವರಗಳನ್ನು ಅವನ ಗುರುತಿಗೆ ಪ್ರಕಟನೆಯನ್ನು ಹೊರಡಿಸಲಾಗಿತ್ತು ಎಂದು ಬರುನ್ ಪೊಲೀಸ್ ಠಾಣೆಯ ಠಾಣಾಧಿಕಾರಿ ಸೌರಭ್ ಕುಮಾರ್ ಹೇಳಿದರು. .

ಜಿಲ್ಲಾಡಳಿತವು ತನಿಖೆಗೆ ಆದೇಶಿಸಿ ತ್ರಿಸದಸ್ಯ ತಂಡವನ್ನು ರಚಿಸಿದ್ದು, ವರದಿ ಸಲ್ಲಿಸಿದೆ. ಪೊಲೀಸ್ ತಂಡವು ಘಟನಾ ಸ್ಥಳದಲ್ಲಿ ಮತ್ತು ಆಸ್ಪತ್ರೆಯ ಆವರಣದಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ಮಾಡಿದ್ದು, ಇದರಲ್ಲಿ ಸಿಬ್ಬಂದಿ ಆಂಬ್ಯುಲೆನ್ಸ್‌ನೊಳಗೆ ಇಬ್ಬರು ರೋಗಿಗಳನ್ನು ಹಾಕಿರುವುದನ್ನು ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಆಸ್ಪತ್ರೆಯ ಮ್ಯಾನೇಜರ್ ಹೇಮಂತ್ ರಾಜನ್ ಅವರನ್ನು ಪ್ರಶ್ನಿಸಿದಾಗ, ಇಬ್ಬರು ರೋಗಿಗಳನ್ನು ಸಸಾರಾಮ್ ಮೂಲದ ನಾರಾಯಣ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಶಿಫಾರಸ್ಸು ಮಾಡಲಾಗಿತ್ತು ಎಂದರು. ಇದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕೇಳಿದಾಗ  ಅವರಿಗೆ ನೀಡಲು ಸಾಧ್ಯವಾಗಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಉತ್ತಮ ಸ್ಥಿತಿಯಲ್ಲಿದ್ದ ರೋಗಿಯನ್ನು ಆಸ್ಪತ್ರೆಯಿಂದ 20 ಕಿಮೀ ದೂರದಲ್ಲಿರುವ ಟೆಂಗ್ರಾ ಮೋರ್‌ನಲ್ಲಿ ಬಿಡಲಾಗಿತ್ತು, ಹೆಚ್ಚು ಗಂಭೀರವಾದ ಎರಡನೇ ರೋಗಿಯನ್ನು 20 ಕಿಮೀ, ಪೊಖ್ರಾಹಿ ಗ್ರಾಮದ ಬಳಿಯ ದೇವಸ್ಥಾನದ ಬಳಿ ಬಿಡಲಾಗಿತ್ತುಎಂದು ಹೇಳಿರುವ ಆಸ್ಪತ್ರೆಯ ಸಿಬ್ಬಂದಿ ಹರೇಂದ್ರ ಕುಮಾರ್ ಮತ್ತು ಸ್ರಂಜನ್ ಅವರನ್ನುಪೊಲೀಸರು  ಬಂಧಿಸಿದ್ದಾರೆ.

ಸಾವಿನ ನಿಖರವಾದ ಕಾರಣವನ್ನು ಕಂಡುಹಿಡಿಯಲು ವಿಧಿ ವಿಜ್ಞಾನ ಸಂಸ್ಥೆಗೆ ಕಳುಹಿಸಲಾಗಿದ್ದು ಶವವನ್ನು ಸಂರಕ್ಷಿಸಲಾಗಿದೆ ಎಂದು ಪೋಸ್ಟ್‌ಮಾರ್ಟಮ್ ವರದಿ ಹೇಳಿದೆ.

ಇದನ್ನೂ ಓದಿ…ರೈತರ ಹೋರಾಟಕ್ಕೆ ಜಯ : ಎಲ್ಲಾ ಕೃಷಿ ಉತ್ಪನ್ನಗಳಿಗೆ ‘ಎಂಎಸ್‌ಪಿ’ ಘೋಷಿಸಿದ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...