Homeಮುಖಪುಟಮಾನಸಿಕ ಅಸ್ವಸ್ಥ ರೋಗಿಗಳನ್ನು ಬಿಸಾಡಿದ ಆಸ್ಪತ್ರೆ:  ಒಂದು ಶವ ಪತ್ತೆ

ಮಾನಸಿಕ ಅಸ್ವಸ್ಥ ರೋಗಿಗಳನ್ನು ಬಿಸಾಡಿದ ಆಸ್ಪತ್ರೆ:  ಒಂದು ಶವ ಪತ್ತೆ

- Advertisement -
- Advertisement -

ಔರಂಗಾಬಾದ್: ಬಿಹಾರದ ಔರಂಗಾಬಾದ್ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಗಳು ಇಬ್ಬರು ಮಾನಸಿಕ ಅಸ್ವಸ್ಥ ರೋಗಿಗಳನ್ನು ಬೆಡ್‌ಶೀಟ್‌ಗಳಿಂದ ಸುತ್ತಿಕೊಂಡು ಕಟ್ಟಿಹಾಕಿ ಆಸ್ಪತ್ರೆಯಿಂದ ಸುಮಾರು 20 ಕಿ.ಮೀ. ದೂರದಲ್ಲಿ ಎಸೆದು ಬಂದಿದ್ದು, ಇದರಲ್ಲಿ ಒಬ್ಬ ರೋಗಿಯು ಸಾವನ್ನಪ್ಪಿದ್ದು, ಇನ್ನೊಬ್ಬ ಕಾಣೆಯಾಗಿದ್ದಾನೆ ಎಂದು ರಾಜ್ಯ ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸ್ವಾಸ್ಥ್ಯ ಮಿಷನ್ ಎಂದು ಬರೆದಿರುವ ಕೆಂಪು ಮತ್ತು ಬಿಳಿ ಬೆಡ್ ಶೀಟ್‌ನಲ್ಲಿ ಸುತ್ತಿದ 50 ವರ್ಷದ ವ್ಯಕ್ತಿಯ ಅಪರಿಚಿತ ಶವವನ್ನು ಪೊಲೀಸರು ಪತ್ತೆ ಮಾಡಿದಾಗ ಈ ಘಟನೆ ಬೆಳಕಿಗೆ ಬಂದಿದೆ.

ಔರಂಗಾಬಾದ್‌ನ ಮಾಡೆಲ್ ಸದರ್ ಆಸ್ಪತ್ರೆಯ ಇಬ್ಬರು ಸಿಬ್ಬಂದಿಗಳಾದ ಹರೇಂದ್ರ ಕುಮಾರ್- ರೋಗಿಗಳನ್ನು ಸ್ಟ್ರೆಚರ್‌ನಲ್ಲಿ ತುಂಬಿಕೊಂಡರೆ ಮತ್ತು ಸ್ಟ್ರೆಚರ್ ಸಿಬ್ಬಂದಿ ಸ್ರಂಜನ್ ಕುಮಾರ್- ಇಬ್ಬರು ಮಾನಸಿಕ ಅಸ್ವಸ್ಥ ರೋಗಿಗಳಿಗೆ ಬೆಡ್‌ಶೀಟ್‌ಗಳನ್ನು ಸುತ್ತಿ ಆಸ್ಪತ್ರೆಯ ಆಂಬ್ಯುಲೆನ್ಸ್‌ಗೆ ಹಾಕಿದರು ಮತ್ತು ಕುಗ್ರಾಮವೊಂದರಲ್ಲಿ ಅವರನ್ನು ಬಿಟ್ಟು ತೆರಳಿದ್ದರು ಎಂದು  ಪೊಲೀಸರು ಹೇಳಿದ್ದಾರೆ.

ಸ್ಟ್ರೆಚರ್ ಮೇಲೆ ಕರೆದೊಯ್ಯುವಾಗ ಇಬ್ಬರು ಜೀವಂತವಾಗಿದ್ದರು ಎಂದು ಸುರಂಜನ್ ಕುಮಾರ್ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ. ರೋಗಿಗಳಲ್ಲಿ ಒಬ್ಬರು ನಂತರ ಸಾವನ್ನಪ್ಪಿದರು, ಇನ್ನೊಬ್ಬರು ಇನ್ನೂ ಪತ್ತೆಯಾಗಿಲ್ಲ. ತನಿಖೆ ಮುಂದುವರಿದಿದ್ದು, ನಾಪತ್ತೆಯಾಗಿರುವ ರೋಗಿಗಾಗಿ ಶೋಧ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಸ್ಪತ್ರೆಯ ಡೆಪ್ಯುಟಿ ಸೂಪರಿಂಟೆಂಡೆಂಟ್ ಕುಮಾರ್ ಅಶುತೋಷ್ ಮತ್ತು ಮ್ಯಾನೇಜರ್ ಹೇಮಂತ್ ರಾಜನ್ ಅವರ ಆದೇಶವನ್ನು ಪಾಲಿಸಿದ್ದೇವೆ. ಅವರನ್ನು ದೂರದ ಪ್ರದೇಶಗಳಿಗೆ ಬಿಡುವಂತೆ ಆಸ್ಪತ್ರೆಯ ಅಧಿಕಾರಿಗಳು ನಮ್ಮನ್ನು ಕೇಳಿಕೊಂಡರು ಎಂದು ಹರೇಂದ್ರ ಮತ್ತು ಸುರಂಜನ್ ತನಿಖೆಯ ಸಮಯದಲ್ಲಿ ಪೊಲೀಸರಿಗೆ ತಿಳಿಸಿದ್ದಾರೆ.

ಆರರಿಂದ ಏಳು ದಿನಗಳ ಹಿಂದೆ ಇಬ್ಬರು ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಮತ್ತು ಇಬ್ಬರೂ ಆಸ್ಪತ್ರೆಯ ಆವರಣವನ್ನು ಕೊಳಕು ಮಾಡುತ್ತಿದ್ದರು ಎಂದು ಆಸ್ಪತ್ರೆಯ ಆಡಳಿತ ಮಂಡಳಿ ತಿಳಿಸಿದೆ.

ಆಸ್ಪತ್ರೆಯ ಕುಮಾರ್ ಅಶುತೋಷ್, ಹೇಮಂತ್ ರಾಜನ್, ಮೇಲ್ವಿಚಾರಕ ಶೈಲೇಶ್ ಕುಮಾರ್ ಮಿಶ್ರಾ, ಹರೇಂದರ್ ಕುಮಾರ್, ಆಂಬ್ಯುಲೆನ್ಸ್ ಚಾಲಕ ಶಿವಶಂಕರ್ ಕುಮಾರ್ ಮತ್ತು ಸ್ಟ್ರೆಚರ್ ಸಿಬ್ಬಂದಿ ಸುರಂಜನ್ ಮತ್ತು ಧರ್ಮಪಾಲ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 105 ಅಡಿಯಲ್ಲಿ ಸಬ್ ಇನ್ಸ್‌ಪೆಕ್ಟರ್ ದೀಪಕ್ ಕುಮಾರ್ ರೈ ಅವರ ಹೇಳಿಕೆಯ ಆಧಾರದ ಮೇಲೆ ಪೊಲೀಸ್ ದೂರು ದಾಖಲಿಸಲಾಗಿದೆ.

ನಾವು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದೇವೆ. ಈವರೆಗೆ ಯಾರ ಬಂಧನವೂ ಆಗಿಲ್ಲ. ಎರಡನೇ ರೋಗಿಯ ಹುಡುಕಾಟವೂ ನಡೆಯುತ್ತಿದೆ ಎಂದು ಔರಂಗಾಬಾದ್ ಎಸ್ಪಿ ಅಂಬರೀಷ್ ರಾಹುಲ್ ಹೇಳಿದ್ದಾರೆ.

ನವೆಂಬರ್ 12ರ ಬೆಳ್ಳಂಬೆಳಗ್ಗೆ ಪೋಖ್ರಾಹಿ ದೇವಸ್ಥಾನದ ಬಳಿ ಆಂಬ್ಯುಲೆನ್ಸ್ ನಿಂದ ಬೆಡ್‌ ಶೀಟ್ ತುಂಬಿದ್ದ ದೇಹಗಳನ್ನು ಎಸೆಯುವುದನ್ನು ನೋಡಿದ್ದೇನೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿರುವುದು ಪ್ರಕರಣಕ್ಕೆ ತಿರುವು ನೀಡಿದೆ.

“ನವೆಂಬರ್ 14 ರಂದು ಪೊಲೀಸ್ ಠಾಣೆಯಲ್ಲಿಈ ಕುರಿತು ಅಸ್ವಾಭಾವಿಕ ಸಾವಿನ ಪ್ರಕರಣವನ್ನು ದಾಖಲಿಸಲಾಗಿತ್ತು. ಆದರೆ ಪೊಲೀಸರು ಶವವಾಗಿ ಬಿದ್ದಿದ್ದ ಅಪರಿಚಿತ ವ್ಯಕ್ತಿಯ ವಿವರಗಳನ್ನು ಅವನ ಗುರುತಿಗೆ ಪ್ರಕಟನೆಯನ್ನು ಹೊರಡಿಸಲಾಗಿತ್ತು ಎಂದು ಬರುನ್ ಪೊಲೀಸ್ ಠಾಣೆಯ ಠಾಣಾಧಿಕಾರಿ ಸೌರಭ್ ಕುಮಾರ್ ಹೇಳಿದರು. .

ಜಿಲ್ಲಾಡಳಿತವು ತನಿಖೆಗೆ ಆದೇಶಿಸಿ ತ್ರಿಸದಸ್ಯ ತಂಡವನ್ನು ರಚಿಸಿದ್ದು, ವರದಿ ಸಲ್ಲಿಸಿದೆ. ಪೊಲೀಸ್ ತಂಡವು ಘಟನಾ ಸ್ಥಳದಲ್ಲಿ ಮತ್ತು ಆಸ್ಪತ್ರೆಯ ಆವರಣದಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ಮಾಡಿದ್ದು, ಇದರಲ್ಲಿ ಸಿಬ್ಬಂದಿ ಆಂಬ್ಯುಲೆನ್ಸ್‌ನೊಳಗೆ ಇಬ್ಬರು ರೋಗಿಗಳನ್ನು ಹಾಕಿರುವುದನ್ನು ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಆಸ್ಪತ್ರೆಯ ಮ್ಯಾನೇಜರ್ ಹೇಮಂತ್ ರಾಜನ್ ಅವರನ್ನು ಪ್ರಶ್ನಿಸಿದಾಗ, ಇಬ್ಬರು ರೋಗಿಗಳನ್ನು ಸಸಾರಾಮ್ ಮೂಲದ ನಾರಾಯಣ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಶಿಫಾರಸ್ಸು ಮಾಡಲಾಗಿತ್ತು ಎಂದರು. ಇದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕೇಳಿದಾಗ  ಅವರಿಗೆ ನೀಡಲು ಸಾಧ್ಯವಾಗಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಉತ್ತಮ ಸ್ಥಿತಿಯಲ್ಲಿದ್ದ ರೋಗಿಯನ್ನು ಆಸ್ಪತ್ರೆಯಿಂದ 20 ಕಿಮೀ ದೂರದಲ್ಲಿರುವ ಟೆಂಗ್ರಾ ಮೋರ್‌ನಲ್ಲಿ ಬಿಡಲಾಗಿತ್ತು, ಹೆಚ್ಚು ಗಂಭೀರವಾದ ಎರಡನೇ ರೋಗಿಯನ್ನು 20 ಕಿಮೀ, ಪೊಖ್ರಾಹಿ ಗ್ರಾಮದ ಬಳಿಯ ದೇವಸ್ಥಾನದ ಬಳಿ ಬಿಡಲಾಗಿತ್ತುಎಂದು ಹೇಳಿರುವ ಆಸ್ಪತ್ರೆಯ ಸಿಬ್ಬಂದಿ ಹರೇಂದ್ರ ಕುಮಾರ್ ಮತ್ತು ಸ್ರಂಜನ್ ಅವರನ್ನುಪೊಲೀಸರು  ಬಂಧಿಸಿದ್ದಾರೆ.

ಸಾವಿನ ನಿಖರವಾದ ಕಾರಣವನ್ನು ಕಂಡುಹಿಡಿಯಲು ವಿಧಿ ವಿಜ್ಞಾನ ಸಂಸ್ಥೆಗೆ ಕಳುಹಿಸಲಾಗಿದ್ದು ಶವವನ್ನು ಸಂರಕ್ಷಿಸಲಾಗಿದೆ ಎಂದು ಪೋಸ್ಟ್‌ಮಾರ್ಟಮ್ ವರದಿ ಹೇಳಿದೆ.

ಇದನ್ನೂ ಓದಿ…ರೈತರ ಹೋರಾಟಕ್ಕೆ ಜಯ : ಎಲ್ಲಾ ಕೃಷಿ ಉತ್ಪನ್ನಗಳಿಗೆ ‘ಎಂಎಸ್‌ಪಿ’ ಘೋಷಿಸಿದ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...