Homeಮುಖಪುಟ'ಅತ್ಯಾಚಾರ, ಆ್ಯಸಿಡ್ ದಾಳಿ ಸಂತ್ರಸ್ತರಿಗೆ ಆಸ್ಪತ್ರೆಗಳು ಉಚಿತ ಚಿಕಿತ್ಸೆ ನಿರಾಕರಿಸುವಂತಿಲ್ಲ' : ದೆಹಲಿ ಹೈಕೋರ್ಟ್

‘ಅತ್ಯಾಚಾರ, ಆ್ಯಸಿಡ್ ದಾಳಿ ಸಂತ್ರಸ್ತರಿಗೆ ಆಸ್ಪತ್ರೆಗಳು ಉಚಿತ ಚಿಕಿತ್ಸೆ ನಿರಾಕರಿಸುವಂತಿಲ್ಲ’ : ದೆಹಲಿ ಹೈಕೋರ್ಟ್

- Advertisement -
- Advertisement -

ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಹಾಗೂ ನರ್ಸಿಂಗ್ ಹೋಂಗಳು ಅತ್ಯಾಚಾರ, ಆ್ಯಸಿಡ್ ದಾಳಿ ಮತ್ತು ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತರಿಗೆ ವೈದ್ಯಕೀಯ ಚಿಕಿತ್ಸೆಯನ್ನು ನಿರಾಕರಿಸುವಂತಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ.

16 ವರ್ಷದ ಬಾಲಕಿಯ ಮೇಲೆ ಆಕೆಯ ತಂದೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ಪ್ರತಿಭಾ ಎಂ ಸಿಂಗ್ ಮತ್ತು ಅಮಿತ್ ಶರ್ಮಾ ಅವರ ಪೀಠ ಸೋಮವಾರ (ಡಿ.23) ಹಲವು ನಿರ್ದೇಶನಗಳನ್ನು ನೀಡಿದೆ.

ಎಲ್ಲಾ ಆಸ್ಪತ್ರೆಗಳು, ನರ್ಸಿಂಗ್ ಹೋಂಗಳು, ಕ್ಲಿನಿಕ್‌ಗಳು, ವೈದ್ಯಕೀಯ ಕೇಂದ್ರಗಳು ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯಕ್ಕೊಳಗಾದವರು, ಪೋಕ್ಸೋ ಪ್ರಕರಣದ ಸಂತ್ರಸ್ತರು ಮತ್ತು ಇಂತದ್ದೇ ಪ್ರಕರಣಗಳ ಇತರ ಸಂತ್ರಸ್ತರಿಗೆ ಉಚಿತ ವೈದ್ಯಕೀಯ ಆರೈಕೆ ಮತ್ತು ಚಿಕಿತ್ಸೆ ಒದಗಿಸುವುದು ಕರ್ತವ್ಯವಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಲೈಂಗಿಕ ದೌರ್ಜನ್ಯಕ್ಕೊಳಗಾದವರಿಗೆ ಚಿಕಿತ್ಸೆ ನಿರಾಕರಿಸುವುದು ಅಪರಾಧವಾಗಿದ್ದು, ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಮತ್ತು ಆಡಳಿತ ಮಂಡಳಿಗೆ ದಂಡ ವಿಧಿಸಬಹುದು ಎಂದು ನ್ಯಾಯಾಲಯ ತಿಳಿಸಿದೆ.

ಲೈಂಗಿಕ ದೌರ್ಜನ್ಯದಂತಹ ಪ್ರಕರಣಗಳಲ್ಲಿ ಸಂತ್ರಸ್ತರು ವೈದ್ಯಕೀಯ ಚಿಕಿತ್ಸೆ ಪಡೆಯುವಲ್ಲಿ ಸಮಸ್ಯೆ ಎದುರಿಸುತ್ತಿದ್ದಾರೆ ಎಂದಿರುವ ಪೀಠ, ಉಚಿತ ಚಿಕಿತ್ಸೆ ಎಂದರೆ, ಸಂತ್ರಸ್ತರಿಗೆ ಪ್ರಾಥಮಿಕ ಚಿಕಿತ್ಸೆ, ಅಗತ್ಯವಿದ್ದರೆ ದೀರ್ಘಾವದಿಯ ಚಿಕಿತ್ಸೆ, ರೋಗ ನಿರ್ಣಯ ಪರೀಕ್ಷೆಗಳು, ಮಾನಸಿಕ ಸಮಾಲೋಚನೆ (ಆಪ್ತ ಸಮಾಲೋಚನೆ) ಯು ಸೇರಿದೆ ಎಂದು ವಿವರಿಸಿದೆ.

ವೈದ್ಯಕೀಯ ಕೇಂದ್ರಗಳಿಗೆ ನ್ಯಾಯಾಲಯದ ನಿರ್ದೇಶಿಸಿದ ಮಾರ್ಗಸೂಚಿಗಳು

  • ದೆಹಲಿಯ ಪ್ರತಿಯೊಂದು ವೈದ್ಯಕೀಯ ಕೇಂದ್ರಗಳು ‘ಲೈಂಗಿಕ ದೌರ್ಜನ್ಯ, ಅತ್ಯಾಚಾರ, ಸಾಮೂಹಿಕ ಅತ್ಯಾಚಾರ, ಆ್ಯಸಿಡ್ ದಾಳಿಯ ಸಂತ್ರಸ್ತರಗೆ ಉಚಿತ ಹೊರರೋಗಿ ಮತ್ತು ಒಳರೋಗಿ ವೈದ್ಯಕೀಯ ಚಿಕಿತ್ಸೆ’ ಲಭ್ಯವಿದೆ ಎಂದು ಬೋರ್ಡ್ ಹಾಕಬೇಕು.
  • ಅತ್ಯಾಚಾರ ಸಂತ್ರಸ್ತೆ ಆಸ್ಪತ್ರೆಗೆ ಬಂದ ತಕ್ಷಣ ಅವರನ್ನು ಪರೀಕ್ಷಿಸಿ ಚಿಕಿತ್ಸೆ ಪ್ರಾರಂಭಿಸಬೇಕು. ಅಗತ್ಯವಿದ್ದರೆ ಲೈಂಗಿಕ ಸಂಪರ್ಕದ ಮೂಲಕ ಹರಡುವ ಹೆಚ್‌ಐವಿಯಂತಹ ರೋಗಗಳನ್ನು ತಡೆಗಟ್ಟಲು ಚಿಕಿತ್ಸೆ ನೀಡಬೇಕು. ಸಂತ್ರಸ್ತೆಗೆ ಆಪ್ತ ಸಮಾಲೋಚನೆಯ ಮೂಲಕ ಮಾನಸಿಕ ಚಿಕಿತ್ಸೆ ಒದಗಿಸಬೇಕು. ಸಂತ್ರಸ್ತೆ ಗರ್ಭಿಣಿಯಾಗುವ ಸಾಧ್ಯತೆಯಿದ್ದರೆ, ಗರ್ಭ ನಿರೋಧಕ ನೀಡಬೇಕು.
  • ತುರ್ತು ಸಂದರ್ಭಗಳಲ್ಲಿ, ಸಂತ್ರಸ್ತೆಯನ್ನು ದಾಖಲಿಸಿಕೊಳ್ಳಲು ಸಂಬಂಧಪಟ್ಟ ವೈದ್ಯಕೀಯ ಕೇಂದ್ರಗಳು ಯಾವುದೇ ಗುರುತಿನ ಚೀಟಿಗಳನ್ನು, ದಾಖಲೆಗಳನ್ನು ನೀಡುವಂತೆ ಒತ್ತಾಯಿಸಬಾರದು.

ಮಗಳ ಮೇಲೆ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಅಪರಾಧಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ನ್ಯಾಯಾಲಯ ಮೇಲಿನ ನಿರ್ದೇಶನಗಳನ್ನು ನೀಡಿದೆ.

ಈ ಪ್ರಕರಣದಲ್ಲಿ ನ್ಯಾಯಾಲಯ ಮತ್ತು ದೆಹಲಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ (ಡಿಎಲ್‌ಎಸ್‌ಎ) ಹಲವು ಭಾರೀ ಹಲವು ಬಾರಿ ಮಧ್ಯ ಪ್ರವೇಶಿಸಿದ ಹೊರತಾಗಿಯೂ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆಗಾಗಿ ಸಂತ್ರಸ್ತೆ ಕಾಯಬೇಕಾಯಿತು ಎಂಬ ಅಂಶವನ್ನು ನ್ಯಾಯಾಲಯ ಗಮನಿಸಿದೆ.

ಇದನ್ನೂ ಓದಿ : ಬಿಹಾರ | ಮುಸ್ಲಿಂ ಯುವಕನಿಗೆ ಥಳಿಸಿ, ಉಗುಳು ನೆಕ್ಕುವಂತೆ ಬಲವಂತ ; ಎಫ್‌ಐಆರ್‌ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಏ.10ರಂದು ಇಸ್ಲಾಮಾಬಾದ್‌ನಲ್ಲಿ ಅಮೆರಿಕ-ಇರಾನ್ ಶಾಂತಿ ಮಾತುಕತೆ : 10 ಷರತ್ತುಗಳನ್ನು ಮುಂದಿಟ್ಟ ಇರಾನ್

ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಇಸ್ಲಾಮಾಬಾದ್‌ನಲ್ಲಿ ಶಾಂತಿ ಮಾತುಕತೆ ಆಯೋಜಿಸಲಾಗಿದೆ. ಅಮೆರಿಕ ಮತ್ತು ಇರಾನ್ ನಿಯೋಗಗಳ ನಡುವಿನ ಈ ಮಹತ್ವದ ಮಾತುಕತೆಯು 2026ರ ಏಪ್ರಿಲ್ 10ರಂದು (ಶುಕ್ರವಾರ) ಇಸ್ಲಾಮಾಬಾದ್‌ನಲ್ಲಿ ನಡೆಯಲಿದೆ ಎಂದು ಪಾಕಿಸ್ತಾನದ...

ಕದನ ವಿರಾಮ | ಟ್ರಂಪ್ ನಿರ್ಧಾರಕ್ಕೆ ಇಸ್ರೇಲ್ ಬೆಂಬಲ; ಲೆಬನಾನ್‌ಗೆ ಅನ್ವಯಿಸುವುದಿಲ್ಲ ಎಂದ ನೆತನ್ಯಾಹು!

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿರುವ ಎರಡು ವಾರಗಳ ಕದನ ವಿರಾಮಕ್ಕೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಬೆಂಬಲ ಸೂಚಿಸಿದ್ದಾರೆ. ಆದರೆ, ಈ ಕದನ ವಿರಾಮವು ಕೇವಲ ಇರಾನ್‌ಗೆ ಮಾತ್ರ ಸೀಮಿತವಾಗಿದ್ದು, ಲೆಬನಾನ್‌ಗೆ ಅನ್ವಯಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇರಾನ್ ತಕ್ಷಣವೇ ಹಾರ್ಮುಝ್...

ಹಾರ್ಮುಝ್ ಜಲಸಂಧಿಯ ಮೂಲಕ ಎರಡು ವಾರಗಳ ಸುರಕ್ಷಿತ ಸಂಚಾರಕ್ಕೆ ಅವಕಾಶ : ಇರಾನ್ ಭರವಸೆ

ಅಮೆರಿಕ ಮತ್ತು ಇರಾನ್ ನಡುವೆ ಏರ್ಪಟ್ಟಿರುವ ಎರಡು ವಾರಗಳ ತಾತ್ಕಾಲಿಕ ಕದನ ವಿರಾಮದ ಹಿನ್ನೆಲೆ, ಹಾರ್ಮುಝ್ ಜಲಸಂಧಿ  ಮೂಲಕ ಹಡಗುಗಳ ಸುರಕ್ಷಿತ ಸಂಚಾರಕ್ಕೆ ಅವಕಾಶ ನೀಡುವುದಾಗಿ ಇರಾನ್ ಭರವಸೆ ನೀಡಿದೆ. ವಿಶ್ವದ ಒಟ್ಟು ಪೆಟ್ರೋಲಿಯಂ ರಫ್ತಿನ...

ಇರಾನ್ ಮೇಲಿನ ದಾಳಿ ಸ್ಥಗಿತ : ಎರಡು ವಾರಗಳ ಕದನ ವಿರಾಮ ಘೋಷಿಸಿದ ಟ್ರಂಪ್

ಇರಾನ್ ಮೇಲೆ ನಡೆಸುತ್ತಿರುವ ಬಾಂಬ್ ದಾಳಿ ಹಾಗೂ ಮಿಲಿಟರಿ ಕಾರ್ಯಾಚರಣೆಯನ್ನು ಎರಡು ವಾರಗಳ ಕಾಲ ಸ್ಥಗಿತಗೊಳಿಸುವ ಕದನ ವಿರಾಮಕ್ಕೆ ಒಪ್ಪಿಕೊಂಡಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ (ಭಾರತೀಯ ಕಾಲಮಾನ ಏ.8) ಹೇಳಿದ್ದಾರೆ. ಪಾಕಿಸ್ತಾನ...

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...