Homeಮುಖಪುಟ'ಅತ್ಯಾಚಾರ, ಆ್ಯಸಿಡ್ ದಾಳಿ ಸಂತ್ರಸ್ತರಿಗೆ ಆಸ್ಪತ್ರೆಗಳು ಉಚಿತ ಚಿಕಿತ್ಸೆ ನಿರಾಕರಿಸುವಂತಿಲ್ಲ' : ದೆಹಲಿ ಹೈಕೋರ್ಟ್

‘ಅತ್ಯಾಚಾರ, ಆ್ಯಸಿಡ್ ದಾಳಿ ಸಂತ್ರಸ್ತರಿಗೆ ಆಸ್ಪತ್ರೆಗಳು ಉಚಿತ ಚಿಕಿತ್ಸೆ ನಿರಾಕರಿಸುವಂತಿಲ್ಲ’ : ದೆಹಲಿ ಹೈಕೋರ್ಟ್

- Advertisement -
- Advertisement -

ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಹಾಗೂ ನರ್ಸಿಂಗ್ ಹೋಂಗಳು ಅತ್ಯಾಚಾರ, ಆ್ಯಸಿಡ್ ದಾಳಿ ಮತ್ತು ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತರಿಗೆ ವೈದ್ಯಕೀಯ ಚಿಕಿತ್ಸೆಯನ್ನು ನಿರಾಕರಿಸುವಂತಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ.

16 ವರ್ಷದ ಬಾಲಕಿಯ ಮೇಲೆ ಆಕೆಯ ತಂದೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ಪ್ರತಿಭಾ ಎಂ ಸಿಂಗ್ ಮತ್ತು ಅಮಿತ್ ಶರ್ಮಾ ಅವರ ಪೀಠ ಸೋಮವಾರ (ಡಿ.23) ಹಲವು ನಿರ್ದೇಶನಗಳನ್ನು ನೀಡಿದೆ.

ಎಲ್ಲಾ ಆಸ್ಪತ್ರೆಗಳು, ನರ್ಸಿಂಗ್ ಹೋಂಗಳು, ಕ್ಲಿನಿಕ್‌ಗಳು, ವೈದ್ಯಕೀಯ ಕೇಂದ್ರಗಳು ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯಕ್ಕೊಳಗಾದವರು, ಪೋಕ್ಸೋ ಪ್ರಕರಣದ ಸಂತ್ರಸ್ತರು ಮತ್ತು ಇಂತದ್ದೇ ಪ್ರಕರಣಗಳ ಇತರ ಸಂತ್ರಸ್ತರಿಗೆ ಉಚಿತ ವೈದ್ಯಕೀಯ ಆರೈಕೆ ಮತ್ತು ಚಿಕಿತ್ಸೆ ಒದಗಿಸುವುದು ಕರ್ತವ್ಯವಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಲೈಂಗಿಕ ದೌರ್ಜನ್ಯಕ್ಕೊಳಗಾದವರಿಗೆ ಚಿಕಿತ್ಸೆ ನಿರಾಕರಿಸುವುದು ಅಪರಾಧವಾಗಿದ್ದು, ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಮತ್ತು ಆಡಳಿತ ಮಂಡಳಿಗೆ ದಂಡ ವಿಧಿಸಬಹುದು ಎಂದು ನ್ಯಾಯಾಲಯ ತಿಳಿಸಿದೆ.

ಲೈಂಗಿಕ ದೌರ್ಜನ್ಯದಂತಹ ಪ್ರಕರಣಗಳಲ್ಲಿ ಸಂತ್ರಸ್ತರು ವೈದ್ಯಕೀಯ ಚಿಕಿತ್ಸೆ ಪಡೆಯುವಲ್ಲಿ ಸಮಸ್ಯೆ ಎದುರಿಸುತ್ತಿದ್ದಾರೆ ಎಂದಿರುವ ಪೀಠ, ಉಚಿತ ಚಿಕಿತ್ಸೆ ಎಂದರೆ, ಸಂತ್ರಸ್ತರಿಗೆ ಪ್ರಾಥಮಿಕ ಚಿಕಿತ್ಸೆ, ಅಗತ್ಯವಿದ್ದರೆ ದೀರ್ಘಾವದಿಯ ಚಿಕಿತ್ಸೆ, ರೋಗ ನಿರ್ಣಯ ಪರೀಕ್ಷೆಗಳು, ಮಾನಸಿಕ ಸಮಾಲೋಚನೆ (ಆಪ್ತ ಸಮಾಲೋಚನೆ) ಯು ಸೇರಿದೆ ಎಂದು ವಿವರಿಸಿದೆ.

ವೈದ್ಯಕೀಯ ಕೇಂದ್ರಗಳಿಗೆ ನ್ಯಾಯಾಲಯದ ನಿರ್ದೇಶಿಸಿದ ಮಾರ್ಗಸೂಚಿಗಳು

  • ದೆಹಲಿಯ ಪ್ರತಿಯೊಂದು ವೈದ್ಯಕೀಯ ಕೇಂದ್ರಗಳು ‘ಲೈಂಗಿಕ ದೌರ್ಜನ್ಯ, ಅತ್ಯಾಚಾರ, ಸಾಮೂಹಿಕ ಅತ್ಯಾಚಾರ, ಆ್ಯಸಿಡ್ ದಾಳಿಯ ಸಂತ್ರಸ್ತರಗೆ ಉಚಿತ ಹೊರರೋಗಿ ಮತ್ತು ಒಳರೋಗಿ ವೈದ್ಯಕೀಯ ಚಿಕಿತ್ಸೆ’ ಲಭ್ಯವಿದೆ ಎಂದು ಬೋರ್ಡ್ ಹಾಕಬೇಕು.
  • ಅತ್ಯಾಚಾರ ಸಂತ್ರಸ್ತೆ ಆಸ್ಪತ್ರೆಗೆ ಬಂದ ತಕ್ಷಣ ಅವರನ್ನು ಪರೀಕ್ಷಿಸಿ ಚಿಕಿತ್ಸೆ ಪ್ರಾರಂಭಿಸಬೇಕು. ಅಗತ್ಯವಿದ್ದರೆ ಲೈಂಗಿಕ ಸಂಪರ್ಕದ ಮೂಲಕ ಹರಡುವ ಹೆಚ್‌ಐವಿಯಂತಹ ರೋಗಗಳನ್ನು ತಡೆಗಟ್ಟಲು ಚಿಕಿತ್ಸೆ ನೀಡಬೇಕು. ಸಂತ್ರಸ್ತೆಗೆ ಆಪ್ತ ಸಮಾಲೋಚನೆಯ ಮೂಲಕ ಮಾನಸಿಕ ಚಿಕಿತ್ಸೆ ಒದಗಿಸಬೇಕು. ಸಂತ್ರಸ್ತೆ ಗರ್ಭಿಣಿಯಾಗುವ ಸಾಧ್ಯತೆಯಿದ್ದರೆ, ಗರ್ಭ ನಿರೋಧಕ ನೀಡಬೇಕು.
  • ತುರ್ತು ಸಂದರ್ಭಗಳಲ್ಲಿ, ಸಂತ್ರಸ್ತೆಯನ್ನು ದಾಖಲಿಸಿಕೊಳ್ಳಲು ಸಂಬಂಧಪಟ್ಟ ವೈದ್ಯಕೀಯ ಕೇಂದ್ರಗಳು ಯಾವುದೇ ಗುರುತಿನ ಚೀಟಿಗಳನ್ನು, ದಾಖಲೆಗಳನ್ನು ನೀಡುವಂತೆ ಒತ್ತಾಯಿಸಬಾರದು.

ಮಗಳ ಮೇಲೆ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಅಪರಾಧಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ನ್ಯಾಯಾಲಯ ಮೇಲಿನ ನಿರ್ದೇಶನಗಳನ್ನು ನೀಡಿದೆ.

ಈ ಪ್ರಕರಣದಲ್ಲಿ ನ್ಯಾಯಾಲಯ ಮತ್ತು ದೆಹಲಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ (ಡಿಎಲ್‌ಎಸ್‌ಎ) ಹಲವು ಭಾರೀ ಹಲವು ಬಾರಿ ಮಧ್ಯ ಪ್ರವೇಶಿಸಿದ ಹೊರತಾಗಿಯೂ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆಗಾಗಿ ಸಂತ್ರಸ್ತೆ ಕಾಯಬೇಕಾಯಿತು ಎಂಬ ಅಂಶವನ್ನು ನ್ಯಾಯಾಲಯ ಗಮನಿಸಿದೆ.

ಇದನ್ನೂ ಓದಿ : ಬಿಹಾರ | ಮುಸ್ಲಿಂ ಯುವಕನಿಗೆ ಥಳಿಸಿ, ಉಗುಳು ನೆಕ್ಕುವಂತೆ ಬಲವಂತ ; ಎಫ್‌ಐಆರ್‌ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...