Homeಕರ್ನಾಟಕಆಸ್ಪತ್ರೆಗಳ ಸೇವಾ ಶುಲ್ಕ ಸರ್ಕಾರಕ್ಕೆ ಸಂದಾಯವಾಗಲ್ಲ - ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಆಸ್ಪತ್ರೆಗಳ ಸೇವಾ ಶುಲ್ಕ ಸರ್ಕಾರಕ್ಕೆ ಸಂದಾಯವಾಗಲ್ಲ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

- Advertisement -
- Advertisement -

ಆಸ್ಪತ್ರೆಗಳಲ್ಲಿ ಸಂಗ್ರಹವಾಗುವ ಸೇವಾ ಶುಲ್ಕ ಸರ್ಕಾರಕ್ಕೆ ಸಂದಾಯವಾಗುವುದಿಲ್ಲ, ಅದಕ್ಕೂ ಗ್ಯಾರಂಟಿ ಯೋಜನೆಗಳಿಗೆ ತಳುಕು ಹಾಕುವುದರಲ್ಲಿ ಯಾವುದೆ ಅರ್ಥವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಗುರುವಾರ ಹೇಳಿದ್ದಾರೆ. ಆಸ್ಪತ್ರೆಗಳ ಸೇವಾ ಶುಲ್ಕ ಪರಿಷ್ಕರಣೆ ಒಂದು ಪ್ರಕ್ರಿಯೆಯಾಗಿದ್ದು, ಆ ಹಣವನ್ನು ಆಯಾ ಆಸ್ಪತ್ರೆಗಳ ಅಭಿವೃದ್ಧಿಗೆ ಬಳಸಲಾಗುತ್ತದೆ ಎಂದು ಅವರು ಹೇಳಿದ್ದಾರೆ. ಆಸ್ಪತ್ರೆಗಳ ಸೇವಾ ಶುಲ್ಕ

ಈ ಕುರಿತು ಮಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವರು ಗುಂಡೂರಾವ್, “ಆಸ್ಪತ್ರೆಗಳಲ್ಲಿ ಸಂಗ್ರಹವಾಗುವ ಸೇವಾ ಶುಲ್ಕ ಸರ್ಕಾರಕ್ಕೆ ಸಂದಾಯವಾಗುವುದಿಲ್ಲ. ಶುಲ್ಕ ಹೆಚ್ಚಳ ಮಾಡುವ ಮೂಲಕ ಗ್ಯಾರಂಟಿಗಳಿಗೆ ಹಣ ಹೊಂದಿಸಬೇಕಾದ ಪರಿಸ್ಥಿತಿ ಸರ್ಕಾರಕ್ಕೆ ಎದುರಾಗಿಲ್ಲ. ಅಷ್ಟಕ್ಕೂ ಆಸ್ಪತ್ರೆಗಳಲ್ಲಿ ಸಂಗ್ರಹವಾಗುವ ಸೇವಾ ಶುಲ್ಕವನ್ನು ಸರ್ಕಾರ ತೆಗೆದುಕೊಳ್ಳುವುದಿಲ್ಲ. ಆಯಾ ಆಸ್ಪತ್ರೆಗಳ ಅಭಿವೃದ್ಧಿಗೆ ಬಳಕೆ ಮಾಡಲು ಅವಕಾಶ ಕಲ್ಪಿಸಿಕೊಡಲಾಗಿದೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಮೂರು, ನಾಲ್ಕು ವರ್ಷಗಳಿಗೊಮ್ಮೆ ಶುಲ್ಕ ಪರಿಷ್ಕರಣೆಯಾಗುವುದು ಸಹಜ ಪ್ರಕ್ರಿಯೆಯಾಗಿದೆ. ಇದನ್ನೇ ಮುಂದಿಟ್ಟುಕೊಂಡು ಗ್ಯಾರಂಟಿಗಳಿಗೆ ತಳುಕು ಹಾಕಿ ನೋಡುವುದು ಸರಿಯಲ್ಲ. ಆಸ್ಪತ್ರೆಗಳಲ್ಲಿ ಸಂಗ್ರಹವಾಗುವ ಸೇವಾ ಶುಲ್ಕದ ಹಣವನ್ನು ಆಯಾ ಆಸ್ಪತ್ರೆಗಳ ಎಆರ್‌ಎಸ್‌ ಸಮಿತಿಗಳು ಚರ್ಚೆ ನಡೆಸಿ ಆಸ್ಪತ್ರೆಯ ಅಭಿವೃದ್ಧಿಗೆ ಬಳಕೆ ಮಾಡುತ್ತವೆ” ಎಂದು ಅವರು ಹೇಳಿದ್ದಾರೆ. ಆಸ್ಪತ್ರೆಗಳ ಸೇವಾ ಶುಲ್ಕ

“ಆಸ್ಪತ್ರೆಯ ಎಆರ್‌ಎಸ್‌ ಫಂಡ್‌ ಹೆಸರಲ್ಲಿ ಅನುದಾನ ಲಭ್ಯವಿರುತ್ತದೆ. ಆಸ್ಪತ್ರೆಯ ಸ್ವಚ್ಛತೆ, ದುರಸ್ಥಿ ಕಾರ್ಯಗಳು ಸೇರಿದಂತೆ ಆಸ್ಪತ್ರೆಗಳ ಅಭಿವೃದ್ಧಿಗಳಿಗೆ ಬಳಕೆ ಮಾಡಲಾಗುತ್ತದೆ. ಸರ್ಕಾರ ಕೇವಲ ಅನುಮತಿ ನೀಡುತ್ತದೆ ಅಷ್ಟೇ” ಎಂದು ಗುಂಡೂರಾವ್ ಹೇಳಿದ್ದಾರೆ.

“ಆರೋಗ್ಯ ಇಲಾಖೆ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಪರಿಷ್ಕರಣೆ ಇನ್ನೂ ಪ್ರಾಥಮಿಕ ಹಂತದ ಚರ್ಚೆಯಲ್ಲಿದೆ. ಇಲ್ಲಿಯ ವರೆಗೂ ಸಾಮೂಹಿಕವಾಗಿ ಯಾವುದೇ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಹೆಚ್ಚಳ ಮಾಡಿಲ್ಲ. ಜನರಿಗೆ ಹೊರೆಯಾಗದಂತೆ ಸೇವಾ ಶುಲ್ಕ ಪರಿಷ್ಕರಣೆ ಮಾಡುವ ಬಗ್ಗೆ ಚಿಂತನೆ ನಡೆಸಲಾಗಿದೆ. 15% ದಿಂದ 20% ದಷ್ಟು ಶುಲ್ಕ ಹೆಚ್ಚಳದ ಬಗ್ಗೆ ಚರ್ಚೆಗಳಿವೆ” ಎಂದು ಅವರು ತಿಳಿಸಿದ್ದಾರೆ.

“ಈ ಹಿಂದೆ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಮಾತ್ರ ಆರೋಗ್ಯ ಇಲಾಖೆಯ ಆಯುಕ್ತರ ಅನುಮತಿ ಪಡೆದು ಶುಲ್ಕ ಪರಿಷ್ಕರಣೆ ಮಾಡಲಾಗಿದೆ. ಉಳಿದ ಯಾವುದೇ ಆಸ್ಪತ್ರೆಗಳಲ್ಲಾಗಲಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಾಗಲಿ ಇಲ್ಲಿಯವರೆಗೂ ಸೇವಾ ಶುಲ್ಕದಲ್ಲಿ ಹೆಚ್ಚಳವಾಗಿಲ್ಲ. ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಜನರಿಗೆ ಹೊರೆಯಾಗದಂತೆ ಸೂಕ್ತ ರೀತಿಯಲ್ಲಿ ಶುಲ್ಕ ಪರಿಷ್ಕರಣೆ ಮಾಡುತ್ತೇವೆ” ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಇದನ್ನೂ ಓದಿ: ನಬಾರ್ಡ್ ಸಾಲ ಕಡಿತ : ರೈತರಿಗಾದ ಅನ್ಯಾಯ ಸರಿಪಡಿಸಲು ಸಿಎಂ ಸಿದ್ದರಾಮಯ್ಯ ಮನವಿ

ನಬಾರ್ಡ್ ಸಾಲ ಕಡಿತ : ರೈತರಿಗಾದ ಅನ್ಯಾಯ ಸರಿಪಡಿಸಲು ಸಿಎಂ ಸಿದ್ದರಾಮಯ್ಯ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೃಹ ಬಳಕೆಯ ಎಲ್‌ಪಿಜಿ ದರ 60 ರೂ. ಹೆಚ್ಚಳ : 11 ತಿಂಗಳಲ್ಲಿ ಎರಡನೇ ಬಾರಿ ಬೆಲೆ ಏರಿಕೆ

ತೈಲ ಮಾರುಕಟ್ಟೆ ಕಂಪನಿಗಳು ಶನಿವಾರ (ಮಾ.7) ದೇಶದಲ್ಲಿ ಗೃಹ ಬಳಕೆಯ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕ್ರಮವಾಗಿ ರೂ. 60 ಮತ್ತು ರೂ. 115 ಹೆಚ್ಚಿಸಿವೆ. ಈ ಹೆಚ್ಚಳದ ನಂತರ ರಾಷ್ಟ್ರ ರಾಜಧಾನಿ...

ಟಿವಿ ನ್ಯೂಸ್ ಚಾನೆಲ್‌ಗಳಲ್ಲಿ ಅನಗತ್ಯ ಯುದ್ಧೋನ್ಮಾದ, ಸುಳ್ಳು ವರದಿ : ನಾಲ್ಕು ವಾರ TRP ಸ್ಥಗಿತಕ್ಕೆ ಕೇಂದ್ರ ಆದೇಶ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದ ಕುರಿತು ಟಿವಿ ನ್ಯೂಸ್‌ ಚಾನೆಲ್‌ಗಳು ಅನಗತ್ಯ ಯುದ್ಧೋನ್ಮಾದ ಸೃಷ್ಟಿಸುತ್ತಿರುವ ಹಾಗೂ ಸುಳ್ಳು ವರದಿಗಳನ್ನು ಪ್ರಸಾರ ಮಾಡುತ್ತಿರುವ ಹಿನ್ನೆಲೆ, ಮುಂದಿನ ನಾಲ್ಕು ವಾರಗಳ ಕಾಲ...

‘ಮಿಯಾ ಮುಸ್ಲಿಮರು ನಮ್ಮ ಶತ್ರುಗಳಲ್ಲ..’; ಚುನಾವಣೆ ಸನಿಹದಲ್ಲಿ ಮಾತು ಬದಲಿಸಿದ ಅಸ್ಸಾಂ ಸಿಎಂ

ಭಾರತೀಯ ಜನತಾ ಪಕ್ಷವು (ಬಿಜೆಪಿ) ಅಸ್ಸಾಂನಲ್ಲಿರುವ ಬಂಗಾಳಿ ಮೂಲದ ಮುಸ್ಲಿಂ ಸಮುದಾಯವಾದ ಮಿಯಾ ಮುಸ್ಲಿಮರನ್ನು ತನ್ನ ಶತ್ರುಗಳೆಂದು ಪರಿಗಣಿಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ. ಇದೇ ವರ್ಷದ...

ಜೈಲಿನಲ್ಲಿರುವ ಪಿಎಫ್‌ಐ ನಾಯಕ ಇ ಅಬೂಬಕರ್ ಆರೋಗ್ಯ ಸ್ಥಿತಿ ಗಂಭೀರ

ಸುಮಾರು ನಾಲ್ಕು ವರ್ಷಗಳ ಕಾಲ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸ್ಥಾಪಕ ಅಧ್ಯಕ್ಷ ಎರಪ್ಪುಂಗಲ್ ಅಬೂಬಕರ್ ಅವರ ಆರೋಗ್ಯ ಹದಗೆಟ್ಟ ನಂತರ ಬುಧವಾರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ...

‘ಭಾರತ ನಮ್ಮನ್ನು ಹಿಂದುಕ್ಕುವುದಕ್ಕೆ ಬಿಡಲ್ಲ; ಅಮೆರಿಕದ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ..’; ಕ್ರಿಸ್ಟೋಫರ್ ಲ್ಯಾಂಡೌ

ನಮ್ಮ ಪ್ರಮುಖ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಲು ಚೀನಾಗೆ ಮಾಡಿಕೊಟ್ಟ ಆರ್ಥಿಕ ಅನುಕೂಲಗಳನ್ನು ನಾವು ಭಾರತಕ್ಕೆ ನೀಡುವುದಿಲ್ಲ ಎಂದು ಯುನೈಟೆಡ್ ಸ್ಟೇಟ್ಸ್‌ (ಯುಎಸ್‌) ಉಪ ಕಾರ್ಯದರ್ಶಿ ಕ್ರಿಸ್ಟೋಫರ್ ಲ್ಯಾಂಡೌ ಗುರುವಾರ ಹೇಳಿದ್ದಾರೆ. ಅಮೆರಿಕ ಮತ್ತು ಭಾರತ...

ರೋಹಿತ್ ಆ್ಯಕ್ಟ್| ಸರ್ಕಾರದ ನಿರ್ಧಾರ ಸ್ವಾಗತಿಸಿದ ಹೋರಾಟಗಾರರು; ಕಾಯ್ದೆ ಪರಿಣಾಮಕಾರಿ ಜಾರಿಗೆ ಆಗ್ರಹ

“ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು” ಎಂದು...

Karnataka Budget 2026| ಸಮಾಜ ಕಲ್ಯಾಣ ಇಲಾಖೆಯಡಿ ‘ಬೌದ್ಧ ಅಭಿವೃದ್ಧಿ ನಿಗಮ’ ಸ್ಥಾಪನೆ

ಸಮಾಜ ಕಲ್ಯಾಣ ಇಲಾಖೆಯಡಿ 'ಬೌದ್ಧ ಅಭಿವೃದ್ಧಿ ನಿಗಮ' ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದರು. "ನಮ್ಮ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ...

Karnataka Budget 2026| ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲು; ದೇವದಾಸಿ-ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಅರಿಯಲು ಸಮೀಕ್ಷೆ

2026-27 ಸಾಲಿನ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಾಕಷ್ಟು ಅನುದಾನ ಘೋಷಣೆ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲಿಡಲಾಗಿದ್ದು, ಮಾಜಿ ದೇವದಾಸಿ ಮಹಿಳೆಯರು...

ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್ ವಿಧಾನಸಭಾ ಚುನಾವಣೆಗೆ ಮುನ್ನ ರಾಜೀನಾಮೆ; ರಾಜಕೀಯ ಒತ್ತಡದ ಆರೋಪ

ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಸುಮಾರು ಮೂರುವರೆ ವರ್ಷಗಳ ಕಾಲ ಅಧಿಕಾರದಲ್ಲಿದ್ದ ನಂತರ ಗುರುವಾರ ರಾಜೀನಾಮೆ ನೀಡಿದ್ದಾರೆ. ಈ ಕ್ರಮವು ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ...

Karnataka Budget 2026| ವಿಕ್ಟೋರಿಯಾ ಹೆಸರು ಬದಲಾವಣೆ; ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯನ್ನು ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಬಜೆಟ್‌ ಭಾಷಣದಲ್ಲಿ ಘೋಷಿಸಿದರು. ತಮ್ಮ ಆಯವ್ಯಯದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಘೋಷಣೆಗಳನ್ನು ಮಾಡಿದ...