Homeಮುಖಪುಟಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

- Advertisement -
- Advertisement -

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು ವಿಭಾಗೀಯ ಪೀಠ ಬುಧವಾರ (ನವೆಂಬರ್ 26) ವಜಾಗೊಳಿಸಿದೆ.

ನ್ಯಾಯಮೂರ್ತಿಗಳಾದ ಸುಶ್ರುತ್ ಅರವಿಂದ್ ಧರ್ಮಾಧಿಕಾರಿ ಮತ್ತು ಶ್ಯಾಮ್ ಕುಮಾರ್ ವಿ.ಎಂ ಅವರನ್ನೊಳಗೊಂಡ ವಿಭಾಗೀಯ ಪೀಠವು, 2019ರಿಂದ ಹಂತ ಹಂತವಾಗಿ ಜಾರಿಗೆ ತರಲಾದ ಕಾನೂನನ್ನು ಎತ್ತಿಹಿಡಿದಿದೆ. ಕಾಯ್ದೆಯ ನಿಬಂಧನೆಗಳು ಅಸ್ಪಷ್ಟ, ಅನಿಯಂತ್ರಿತ, ಅಪ್ರಾಯೋಗಿಕ ಮತ್ತು ಅಸಮಾನವಾಗಿವೆ ಎಂಬ ಮೇಲ್ಮನವಿಯ ವಾದಗಳನ್ನು ತಿರಸ್ಕರಿಸಿದೆ.

"ಈ ತೀರ್ಪು ಕೇವಲ ಕಾನೂನಿನ ಘೋಷಣೆಯಾಗಿ ಕಾರ್ಯನಿರ್ವಹಿಸದೆ, ಘನತೆ, ನೈತಿಕ ಮತ್ತು ಸಮಾನ ವೈದ್ಯಕೀಯ ಆರೈಕೆಯ ಹಕ್ಕಿನ ಮರುದೃಢೀಕರಣವಾಗಿರಲಿ" ಎಂದು ಪೀಠ ಹೇಳಿದೆ.

ಕಾಯ್ದೆಯ ನಿಬಂಧನೆಗಳು ಯುನೈಟೆಡ್ ಸ್ಟೇಟ್ಸ್ (ಯುಎಸ್‌) ಮತ್ತು ಯುರೋಪಿಯನ್ ಒಕ್ಕೂಟದಂತೆಯೇ ( (ಇಯು) ಜಾಗತಿಕ ಮಾನದಂಡಗಳಿಗೆ ಅನುಗುಣವಾಗಿದೆ ಎಂದು ಪೀಠವು ಅಭಿಪ್ರಾಯಪಟ್ಟಿದೆ.

ಆಸ್ಪತ್ರೆ ನೌಕರರ ವಿವರಗಳನ್ನು ಬಹಿರಂಗಪಡಿಸುವುದು ಕಡ್ಡಾಯ, ಪ್ರತಿ ಚಿಕಿತ್ಸಾ ವಸ್ತು ಮತ್ತು ಪ್ಯಾಕೇಜ್‌ಗಳಿಗೆ ವಿಧಿಸುವ ಶುಲ್ಕಗಳ ಪಟ್ಟಿಯನ್ನು ಪ್ರಕಟಿಸುವುದು ಕಡ್ಡಾಯ ಎಂಬ ಕಾಯ್ದೆಯ ನಿಬಂಧನೆಗಳನ್ನು ಮೇಲ್ಮನವಿದಾರರು ಪ್ರಾಥಮಿಕವಾಗಿ ಪ್ರಶ್ನಿಸಿದ್ದರು. ರೋಗಿಗಳಿಗೆ ಜೀವರಕ್ಷಕ ಚಿಕಿತ್ಸೆಗಳು ಮತ್ತು ಸುರಕ್ಷಿತ ಸಾರಿಗೆಯನ್ನು ಕಡ್ಡಾಯವಾಗಿ ಒದಗಿಸುವ ಕಾನೂನಿನ ಆದೇಶವನ್ನೂ ಪ್ರಶ್ನಿಸಿದ್ದರು.

ಸಾರ್ವಜನಿಕ ಆರೋಗ್ಯವನ್ನು ಕಾಪಾಡುವುದು, ರೋಗಿಗಳ ಹಕ್ಕುಗಳು ಮತ್ತು ಸುರಕ್ಷತೆಯನ್ನು ಎತ್ತಿಹಿಡಿಯುವುದು, ಕ್ಲಿನಿಕಲ್ ಅಭ್ಯಾಸದಲ್ಲಿ ಪಾರದರ್ಶಕತೆ ಮತ್ತು ನೈತಿಕ ಮಾನದಂಡಗಳನ್ನು ಉತ್ತೇಜಿಸುವುದು, ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿಗಳಿಗೆ ಆಸ್ಪತ್ರೆಗಳು ಮತ್ತು ಚಿಕಿತ್ಸಾಲಯಗಳನ್ನು ಉತ್ತಮವಾಗಿ ಸಜ್ಜುಗೊಳಿಸುವುದು, ಸ್ಥಿರ ಮತ್ತು ಉನ್ನತ ಗುಣಮಟ್ಟವನ್ನು ಕಾಯ್ದುಕೊಳ್ಳುವುದು, ಆರೋಗ್ಯ ವಲಯದಲ್ಲಿ ಸಮಾನ ಅವಕಾಶಗಳನ್ನು ಸೃಷ್ಟಿಸುವ ಉದ್ದೇಶವನ್ನು ಕಾನೂನು ಹೊಂದಿದೆ ಎಂದು ರಾಜ್ಯ ಸರ್ಕಾರ ಸಮರ್ಥಿಸಿಕೊಂಡಿತ್ತು.

ಪ್ರಶ್ನಿಸಲಾಗಿರುವ ನಿಬಂಧನೆಗಳನ್ನು ಮತ್ತು ಕಾಯ್ದೆಯ ರಚನಾತ್ಮಕ ಚೌಕಟ್ಟನ್ನು ಪರಿಶೀಲಿಸಿದ ನ್ಯಾಯಾಲಯ, ಈ ಕಾಯ್ದೆಯು ಈಗಾಗಲೇ ಅಸ್ತಿತ್ವದಲ್ಲಿರುವ ಸಾಂವಿಧಾನಿಕ ಕರ್ತವ್ಯಗಳನ್ನು ಜಾರಿಗೊಳಿಸುವ ವಿಧಾನವನ್ನು ಮಾತ್ರ ಹೊಂದಿದೆ ಎಂದು ಅಭಿಪ್ರಾಯಪಟ್ಟಿದೆ.

ಕಾಯ್ದೆಯು ಹೊಸ ನಿರ್ಬಂಧಗಳನ್ನು ಸೃಷ್ಟಿಸುವುದಿಲ್ಲ. ಬದಲಾಗಿ, ನೋಂದಣಿ ಮತ್ತು ಗುಣಮಟ್ಟದ ಮಾನದಂಡಗಳ ವ್ಯವಸ್ಥೆ, ಪಾರದರ್ಶಕತೆಯ ಕಡ್ಡಾಯ ಆದೇಶ, ತುರ್ತು ಚಿಕಿತ್ಸೆ ಮತ್ತು ರೋಗಿಯ ಸ್ಥಿರೀಕರಣಕ್ಕೆ ಜಾರಿಗೊಳಿಸಬಹುದಾದ ಕನಿಷ್ಠ ಅಗತ್ಯತೆಗಳು- ಈ ಎಲ್ಲವನ್ನೂ ಜಾರಿಗೆ ತಂದು ಸಾಂವಿಧಾನಿಕ ಜವಾಬ್ದಾರಿಗಳನ್ನು ಪ್ರಾಯೋಗಿಕವಾಗಿ ಕಾರ್ಯಗತಗೊಳಿಸುತ್ತದೆ ಎಂದು ನ್ಯಾಯಾಲಯ ಹೇಳಿದೆ.

ದರ ಪಟ್ಟಿ ಪ್ರದರ್ಶನ ಕಡ್ಡಾಯ

ಕಾಯ್ದೆಯ ಸೆಕ್ಷನ್ 39ರ ಅಡಿಯಲ್ಲಿ ಬರುವ ‘ಸೇವೆಯ ಪ್ರಕಾರಗಳು’ ಮತ್ತು ‘ಪ್ಯಾಕೇಜ್ ದರಗಳು’ ಎಂಬ ಪದಗಳು ಅಸ್ಪಷ್ಟವಾಗಿವೆ ಎಂಬ ವಾದವನ್ನು ತಿರಸ್ಕರಿಸಿದ ಪೀಠವು, ಕಾಯ್ದೆಯು ಪ್ರತಿಯೊಂದು ವೈದ್ಯಕೀಯ ಪರಿಸ್ಥಿತಿಯನ್ನು ಮೊದಲೇ ಊಹಿಸಿ ಬೆಲೆ ನಿಗದಿಪಡಿಸಬೇಕೆಂದು ಆದೇಶಿಸುವುದಿಲ್ಲ. ಗುರುತಿಸಬಹುದಾದ ಸೇವೆಗಳು ಮತ್ತು ಪ್ಯಾಕೇಜ್‌ಗಳ ಪ್ರಾಮಾಣಿಕ ಮೂಲ ಬೆಲೆ, ಹೆಚ್ಚುವರಿ ಸೇವೆಗಳು, ತೊಡಕುಗಳು ಮತ್ತು ಹೆಚ್ಚಿನ ದಿನಗಳ ವಾಸ್ತವ್ಯಕ್ಕೆ ಪ್ರತ್ಯೇಕವಾಗಿ ಐಟಂ-ವೈಸ್ ಬಿಲ್ಲಿಂಗ್ (ವಿವರವಾದ ಬಿಲ್) ನೀಡಬೇಕು ಎಂಬುವುದನ್ನು ಮಾತ್ರ ಕಡ್ಡಾಯಗೊಳಿಸುತ್ತದೆ ಎಂದಿದೆ.

ಸೇವೆಗಳ ಬೆಲೆಯನ್ನು ಸರ್ಕಾರವೇ ನಿಗದಿಪಡಿಸುವುದಕ್ಕಿಂತ, ಈ ಬೆಲೆ ಬಹಿರಂಗಪಡಿಸುವ ನಿಯಮವು ಬಹಳ ಕಡಿಮೆ ಒತ್ತಡ ಹೇರುವಂಥದ್ದು. ಜೊತೆಗೆ, ಇದು ಜನಸಾಮಾನ್ಯರ ಹಿತವನ್ನು ಕಾಪಾಡುತ್ತದೆ ಮತ್ತು ಆಸ್ಪತ್ರೆಗಳು ಅತಿಯಾದ ಶುಲ್ಕ ವಿಧಿಸುವುದರಿಂದ ರೋಗಿಗಳಿಗೆ ರಕ್ಷಣೆ ನೀಡುತ್ತದೆ. ಆದ್ದರಿಂದ ಬೆಲೆ ಬಹಿರಂಗಪಡಿಸುವುದು ಸಾರ್ವಜನಿಕ ಹಿತಕ್ಕೆ ಸಂಬಂಧಿಸಿದೆ ಎಂದು ನ್ಯಾಯಾಲಯ ಹೇಳಿದೆ.

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆಯಡಿ ‘ಪ್ಯಾಕೇಜ್ ದರಗಳು’ ಎಂದರೇನು? ಎಂಬುದನ್ನು ನ್ಯಾಯಾಲಯ ಸ್ಪಷ್ಟವಾಗಿ ವಿವರಿಸಿದೆ.

ಪ್ಯಾಕೇಜ್ ದರಗಳು ಎಂದರೆ ಸಾಮಾನ್ಯವಾಗಿ ನಡೆಸಲಾಗುವ ಶಸ್ತ್ರಚಿಕಿತ್ಸೆಗಳು ಅಥವಾ ಚಿಕಿತ್ಸಾ ಕ್ರಮಗಳಿಗೆ ನಿಗದಿಪಡಿಸಿರುವ ಮೂಲ ದರಗಳು ಮಾತ್ರ. ಇದರಲ್ಲಿ ಆ ಚಿಕಿತ್ಸೆಗೆ ಸಾಮಾನ್ಯವಾಗಿ ಬೇಕಾದ ಸೇವೆಗಳು ಸೇರಿಕೊಂಡಿರುತ್ತವೆ. ಆದರೆ ಊಹಿಸಿರದ ತೊಡಕುಗಳು, ರೋಗಿಯಲ್ಲಿ ಇರುವ ಇತರ ರೋಗಗಳ ನಿರ್ವಹಣೆ, ಐಸಿಯುವಿನಲ್ಲಿ ಹೆಚ್ಚು ದಿನಗಳ ಕಾಲ ಇರಬೇಕಾದ ಸ್ಥಿತಿ ಅಥವಾ ದುಬಾರಿ ಉಪಕರಣಗಳು/ಸಾಮಗ್ರಿಗಳ ಬಳಕೆ ಇತ್ಯಾದಿಗಳು ಪ್ಯಾಕೇಜ್‌ನಲ್ಲಿ ಸೇರಿಕೊಂಡಿರುವುದಿಲ್ಲ. ಇಂತಹ ಹೆಚ್ಚುವರಿ ವೆಚ್ಚಗಳನ್ನು ಪ್ರತ್ಯೇಕವಾಗಿ ಬಿಲ್ ಮಾಡಬಹುದು, ಆದರೆ ಎರಡು ಷರತ್ತುಗಳನ್ನು ಪೂರೈಸಲೇ ಬೇಕು: ಒಂದು, ರೋಗಿಗೆ ಅಥವಾ ಕುಟುಂಬಕ್ಕೆ ಈ ಹೆಚ್ಚುವರಿ ಶುಲ್ಕದ ಬಗ್ಗೆ ಮೊದಲೇ ಸ್ಪಷ್ಟವಾಗಿ ತಿಳಿಸಬೇಕು; ಎರಡು, ಆ ಖರ್ಚು ವೈದ್ಯಕೀಯವಾಗಿ ಅಗತ್ಯ ಎಂಬುದಕ್ಕೆ ಸಾಕ್ಷ್ಯ ಅಥವಾ ಕಾರಣ ತೋರಿಸಬೇಕು. ಈ ರೀತಿ ಪಾರದರ್ಶಕತೆ ಮತ್ತು ವೈದ್ಯಕೀಯ ಸಾಕ್ಷ್ಯ ಇದ್ದರೆ ಮಾತ್ರ ಪ್ಯಾಕೇಜ್ ಹೊರಗಿನ ಶುಲ್ಕ ವಿಧಿಸಲು ಅನುಮತಿ ಇದೆ ಎಂದು ನ್ಯಾಯಾಲಯ ಹೇಳಿದೆ.

ವೈದ್ಯರು ಮತ್ತು ಇತರ ಉದ್ಯೋಗಿಗಳ ವಿವರಗಳನ್ನು ಬಹಿರಂಗಪಡಿಸುವುದು

ವೈದ್ಯರು ಮತ್ತು ಇತರ ಸಿಬ್ಬಂದಿಯ ವೈಯಕ್ತಿಕ ಮಾಹಿತಿಯನ್ನು ಸಾರ್ವಜನಿಕರಿಗೆ ಬಹಿರಂಗಪಡಿಸುವ ಅಗತ್ಯತೆ ಇಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಆಸ್ಪತ್ರೆಯಲ್ಲಿ ಸಾಕಷ್ಟು ಸಂಖ್ಯೆಯ ಸಿಬ್ಬಂದಿ ಇದ್ದಾರೆ ಮತ್ತು ಅವರು ಸಮರ್ಥರಿದ್ದಾರೆ ಎಂಬುದನ್ನು ಜನರಿಗೆ ತೋರಿಸಲು ಸಿಬ್ಬಂದಿಯ ಪ್ರಾಥಮಿಕ ಮಾಹಿತಿ ನೀಡಬಹುದು ಎಂದಿದೆ.

ಅಂದರೆ, ವೈದ್ಯರ ಹೆಸರು, ಶೈಕ್ಷಣಿಕ ಅರ್ಹತೆ, ಅನುಭವ ಇತ್ಯಾದಿಯನ್ನು ಸರ್ಕಾರಿ ಅಧಿಕಾರಿಗಳಿಗೆ ತೋರಿಸಿ ದೃಢೀಕರಣ ಪಡೆಯಬೇಕು. ಇದನ್ನು ಜನಸಾಮಾನ್ಯರಿಗೆ ಅಥವಾ ಆನ್‌ಲೈನ್‌ನಲ್ಲಿ ಪ್ರಕಟಿಸಬೇಕೆಂಬ ಯಾವ ನಿಯಮವೂ ಇಲ್ಲ ಎಂದು ನ್ಯಾಯಾಲಯ ತಿಳಿಸಿದೆ.

ನ್ಯಾಯಪೀಠವು ಸಿಬ್ಬಂದಿಯ ಮಾಹಿತಿ ಸಂಗ್ರಹಿಸುವ ನಿಯಮವು ಸಂಪೂರ್ಣ ಸಾಂವಿಧಾನಿಕವಾಗಿ ಸಿಂಧು ಎಂದು ಸ್ಪಷ್ಟಪಡಿಸಿದೆ. ಗೌಪ್ಯತೆಯ ಹಕ್ಕಿಗೆ ಸಂಬಂಧಿಸಿದ ಐತಿಹಾಸಿಕ ಪುಟ್ಟಸ್ವಾಮಿ ತೀರ್ಪನ್ನು ಉಲ್ಲೇಖಿಸಿದ ನ್ಯಾಯಾಲಯ, ಈ ಕ್ರಮವು (1) ಕಾಯ್ದೆಯಲ್ಲಿ ಸ್ಪಷ್ಟ ಆಧಾರ ಹೊಂದಿರುವ ಕಾನೂನುಬದ್ಧ ಕ್ರಮ, (2) ರೋಗಿಗಳ ಸುರಕ್ಷತೆ ಮತ್ತು ಗುಣಮಟ್ಟದ ಚಿಕಿತ್ಸೆ ಎಂಬ ಸಮಂಜಸ ಉದ್ದೇಶವನ್ನು ಹೊಂದಿದೆ, (3) ಅತಿಯಾಗಿ ಒತ್ತಡ ಹೇರುವುದಿಲ್ಲ, ಕೇವಲ ಕೆಲಸಕ್ಕೆ ಬೇಕಾದ ಅಗತ್ಯ ಮಾಹಿತಿ ಮಾತ್ರ ಕೇಳುತ್ತದೆ ಮತ್ತು ತಪಾಸಣೆಗೆ ಮಾತ್ರ ಬಳಸುತ್ತದೆ, (4) ಮಾಹಿತಿಯ ದುರುಪಯೋಗ ತಡೆಯಲು ಮಿತಿಗಳಿವೆ ಮತ್ತು ಯಾವುದೇ ಪ್ರತಿಕೂಲ ನಿರ್ಧಾರದ ವಿರುದ್ಧ ಮೇಲ್ಮನವಿ ಅಥವಾ ಪುನರ್ವಿಚಾರಣೆ ಮಾಡುವ ಹಕ್ಕು ಇದೆ. ಈ ನಾಲ್ಕೂ ಷರತ್ತುಗಳನ್ನು ಪೂರೈಸುವ ಕಾರಣ ಈ ನಿಯಮವು ವೈಯಕ್ತಿಕ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಈಗಿರುವ ನಿಯಮಗಳು ಈಗಾಗಲೇ ಸಾಂವಿಧಾನಿಕವಾಗಿ ಸರಿಯಿದ್ದರೂ, ಇನ್ನಷ್ಟು ರಕ್ಷಣೆ ಮತ್ತು ಪಾರದರ್ಶಕತೆ ತರಲು ಸರ್ಕಾರ ಹೆಚ್ಚುವರಿ ನಿಯಮಗಳು ಅಥವಾ ಮಾರ್ಗದರ್ಶನಗಳನ್ನು ರೂಪಿಸಬಹುದು ಎಂದು ನ್ಯಾಯಾಲಯ ಸಲಹೆ ನೀಡಿದೆ.

ಸಿಬ್ಬಂದಿಯ ವೈಯಕ್ತಿಕ ವಿವರಗಳನ್ನು ಆನ್‌ಲೈನ್‌ನಲ್ಲಿ ಅಥವಾ ಬೋರ್ಡ್‌ನಲ್ಲಿ ಹಾಕುವ ಅವಶ್ಯಕತೆ ಇಲ್ಲ. ಅದನ್ನು ಕೇವಲ ಸರ್ಕಾರಿ ದಾಖಲೆಯಲ್ಲಿ ಸುರಕ್ಷಿತವಾಗಿ ಇಟ್ಟುಕೊಂಡರೆ ಸಾಕು ಎಂದು ನ್ಯಾಯಾಲಯ ಆದೇಶಿಸಿದೆ.

ಇನ್ನುಳಿದಂತೆ, ತುರ್ತು ಆರೈಕೆ ಮತ್ತು ಸುರಕ್ಷಿತ ವರ್ಗಾವಣೆ, ಪಾರದರ್ಶಕತೆ ಮತ್ತು ಸಾರ್ವಜನಿಕ ಪ್ರದರ್ಶನ, ನವೀಕರಿಸಿದ ರೋಗಿಯ ಮಾಹಿತಿ ದಾಖಲೆ, ಕುಂದುಕೊರತೆ ನಿವಾರಣಾ ಕಾರ್ಯವಿಧಾನ, ಅನುಸರಣೆ ದಾಖಲಾತಿಗಳು, ರೋಗಿಗೆ ಪರಿಹಾರ ಸೇರಿದಂತೆ ಕಾಯ್ದೆಗೆ ಸಂಬಂಧಿಸಿದ ಪ್ರತಿಯೊಂದು ಅಂಶಗಳನ್ನು ನ್ಯಾಯಾಲಯ ತನ್ನ ಆದೇಶದಲ್ಲಿ ವಿವರವಾಗಿ ವಿಶ್ಲೇಷಿಸಿದೆ. ತನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದೆ ಮತ್ತು ಕೆಲ ಸಲಹೆಗಳನ್ನು ನೀಡಿದೆ.

ಇನ್ನಷ್ಟು ಸಂಪೂರ್ಣ ಮಾಹಿತಿಗಾಗಿ ನ್ಯಾಯಾಲಯದ ತೀರ್ಪಿನ ಪ್ರತಿಯನ್ನು ಕೆಳಗಡೆ ಕೊಡಲಾಗಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...