Homeಕರ್ನಾಟಕಇಂದಿನಿಂದ ಹೋಟೆಲ್ ಊಟ-ತಿಂಡಿ ದರ ಏರಿಕೆ: ಕಾರಣವೇನು?

ಇಂದಿನಿಂದ ಹೋಟೆಲ್ ಊಟ-ತಿಂಡಿ ದರ ಏರಿಕೆ: ಕಾರಣವೇನು?

- Advertisement -
- Advertisement -

ಇಂದಿನಿಂದ ರಾಜ್ಯದಲ್ಲಿ ಹೋಟೆಲ್-ರೆಸ್ಟೋರೆಂಟ್-ಕೈಗಾಡಿಗಳಲ್ಲಿನ ಊಟ-ತಿಂಡಿ ದರ ಶೇ.10 ರಷ್ಟು ಹೆಚ್ಚಾಗಿದೆ. ಪ್ರತಿ ಪ್ಲೇಟ್ ಊಟ ತಿಂಡಿಯ ಮೇಲೆ 10 ರೂ ನಿಂದ 50 ರೂವರೆಗೆ ಏರಿಸಲಾಗಿದೆ. ಅದೇ ರೀತಿಯಾಗಿ ಕಾಫಿ-ಟೀ ಬೆಲೆ ಕೂಡ ಏರಿಕೆಯಾಗಿದೆ.

ಕಳೆದ ಮೂರು-ನಾಲ್ಕು ವರ್ಷಗಳಿಂದ ಹೋಟೆಲ್ ಊಟದ ದರದಲ್ಲಿ ತಟಸ್ಥತೆಯನ್ನು ಕಾಯ್ದುಕೊಂಡು ಬರಲಾಗಿತ್ತು. ಅದರಲ್ಲಿಯೂ ರಸ್ತೆ ಬದಿಯಲ್ಲಿರುವ ಚಿಕ್ಕ ಪುಟ್ಟ ಹೋಟೆಲ್‌ಗಳು, ಮೆಸ್‌ಗಳು ಮತ್ತು ಕೈಗಾಡಿಗಳು ಕೈಗೆಟುಕುವ ದರದಲ್ಲಿ ಊಟ- ತಿಂಡಿ ಮಾರುತ್ತಿದ್ದವು. ಈಗ ಅವುಗಳು ಸಹ ಬೆಲೆ ಏರಿಸಿವೆ. 30-35 ರೂಗಳಿಗೆಲ್ಲ ಬೆಳಗ್ಗಿನ ತಿಂಡಿ ತಿನ್ನಬಹುದಾಗಿತ್ತು. ಈಗ 50ರೂಗಳ ಗಡಿ ದಾಟಿದೆ. ಇನ್ನು ರೆಸ್ಟೋರೆಂಟ್‌ಗಲ್ಲಿ ಒಂದು ತಿಂಡಿಗೆ ಕನಿಷ್ಟ 100 ರೂ ಖರ್ಚು ಮಾಡಬೇಕಾಗಿದೆ.

ಕಾರಣವೇನು?

ಕೊರೊನಾ ಕಾರಣಕ್ಕೆ ಈ ಎರಡು ವರ್ಷ ಹೋಟೆಲ್ ಉದ್ಯಮ ಸಮರ್ಪಕವಾಗಿ ನಡೆದುದ್ದೆ ಇಲ್ಲ. ಲಾಕ್‌ಡೌನ್ ಕಾರಣಕ್ಕೆ ಹಲವಾರು ತಿಂಗಳುಗಳು ಮುಚ್ಚಿದ್ದರೆ ಇನ್ನುಳಿದ ಸಮಯದಲ್ಲಿ ಶೇ.50 ರಷ್ಟು ಜನಕ್ಕೆ ಮಾತ್ರ ಅನುಮತಿ, ಪಾರ್ಸೆಲ್ ಮಾತ್ರ ಎಂಬ ನಿಬಂಧನೆಗಳಿಗೆ ಒಳಪಟ್ಟಿತ್ತು. ಈಗ ಕೋವಿಡ್ ಮುಗಿದ ನಂತರ ಪೂರ್ಣ ಪ್ರಮಾಣದಲ್ಲಿ ಹೋಟೆಲ್‌ಗಳು ಆರಂಭವಾಗಿವೆ. ಆದರೆ ಹೋಟೆಲ್ ನಡೆಸಲು ಬೇಕಾಗುವ ಎಲ್ಲಾ ಸಾಮಾಗ್ರಿಗಳ ಬೆಲೆ ಏರಿಕೆಯಾಗಿದೆ. ಅಡುಗೆ ಎಣ್ಣೆ, ಗ್ಯಾಸ್, ತರಕಾರಿ, ದಿನಸಿ ಬೆಲೆ ದಿನೇ ದಿನೇ ಏರುತ್ತಿರುವುದರಿಂದ ಅನಿವಾರ್ಯವಾಗಿ ಬೆಲೆ ಏರಿಕೆ ಮಾಡಬೇಕಾಗಿದೆ.

ಅಡುಗೆ ಎಣ್ಣೆ:

80 ರೂಗಳಿಗೆ ಸಿಗುತ್ತಿದ್ದ ಒಂದು ಲೀಟರ್ ಅಡುಗೆ ಎಣ್ಣೆ ಈಗ 160-170 ರೂಗಳಿಗೆ ಏರಿಕೆಯಾಗಿದೆ. ಅಂದರೆ ಡಬಲ್ ಆಗಿದೆ. ಇದು ಹೋಟೆಲ್ ಉದ್ಯಮ ನಡೆಸುವವರಿಗೆ ಹೊರೆಯಾಗಿದೆ.

ವಾಣಿಜ್ಯ ಬಳಕೆಯ ಗ್ಯಾಸ್ ಬೆಲೆ ಏರಿಕೆ:

19 ಕೆಜಿಯ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಮೊನ್ನೆಯಷ್ಟೆ 250 ರೂ ಹೆಚ್ಚಳ ಮಾಡಲಾಗಿದೆ. ಹಾಗಾಗಿ ಬೆಂಗಳೂರಿನಲ್ಲಿ ಅದರ ಬೆಲೆ 2317.00 ರೂ.ಗೆ ಏರಿಕೆಯಾಗಿದೆ. ರೆಸ್ಟೋರೆಂಟ್‌ಗಳು, ಹೋಟೆಲ್‌ಗಳು, ಟೀ ಸ್ಟಾಲ್‌ಗಳು ಮತ್ತು ಇತರ ವಾಣಿಜ್ಯ ಕೆಫೆಗಳು ಇದೇ 19 ಕೆಜಿ ಸಿಲಿಂಡರ್‌ ಅನ್ನು ಬಳಸಲಾಗುತ್ತವೆ.  2021ರ ನವೆಂಬರ್ ನಲ್ಲಿ 1700 ರೂ ಇದ್ದ ಗ್ಯಾಸ್ ಬೆಲೆ ಈಗ 2300 ರೂಗೆ ಏರಿದೆ. ಅಂದರೆ ಆರು ತಿಂಗಳಲ್ಲಿ 600 ರೂ ಹೆಚ್ಚಾಗಿದೆ!

ಪೆಟ್ರೋಲ್ -ಡೀಸೆಲ್ ಬೆಲೆಯಲ್ಲಿ ನಿರಂತರ ಏರಿಕೆ

2020ರ ಜೂನ್‌ನಲ್ಲಿ ಲೀಟರ್ ಪೆಟ್ರೋಲ್ ಬೆಲೆ 73.55ರೂ ಇತ್ತು. ಈಗ ಅದು 110 ರೂಗೆ ಏರಿದೆ. ಅಂದರೆ 36.50 ರೂ ಹೆಚ್ಚಳವಾಗಿದೆ. ಅಂದರೆ ಶೇ.50 ರಷ್ಟು ಏರಿಕೆಯಾಗಿದೆ. ಡೀಸೆಲ್ ಬೆಲೆ ಸಹ 66 ರೂ ಇದ್ದುದ್ದು ಈಗ 94 ರೂಗೆ ಏರಿಕೆಯಾಗಿದೆ. ಈ ಬೆಲೆ ಏರಿಕೆಯಿಂದ ಎಲ್ಲಾ ಸಾಗಣೆ ವಾಹನಗಳು ಬಾಡಿಗೆ ಏರಿಸಬೇಕಾಗುತ್ತದೆ. ಇದರಿಂದ ಆಹಾರ, ತರಕಾರಿ, ದಿನಸಿ, ಹಣ್ಣು ಸೇರಿದಂತೆ ದಿನಬಳಕೆಯ ಪ್ರತಿಯೊಂದು ವಸ್ತುಗಳ ಬೆಲೆ ಏರುತ್ತಿದೆ.

ಅದೇ ರೀತಿಯಾಗಿ ಟ್ರ್ಯಾಕ್ಟರ್, ಟಿಲ್ಲರ್, ಲಗೇಜ್ ವಾಹನಗಳಿಗೆ ಡೀಸೆಲ್ ಬೇಕಿರುವುದರಿಂದ ಕೃಷಿಯ ಮೇಲಿನ ಹೂಡಿಕೆ ಹೆಚ್ಚಾಗುತ್ತದೆ. ರೈತರಿಗೆ ಹೊರೆಯಾಗುತ್ತಿದೆ.

ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಗೆ ಕಾರಣವೇನು?

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇಂಧನಗಳ ಮೇಲಿನ ತೆರಿಗೆ ಹೆಚ್ಚು ಮಾಡುತ್ತಿದೆ. ಒಂದು ಲೀಟರ್ ಪೆಟ್ರೋಲ್‌ನ ಮೂಲ ಬೆಲೆ 38 ರೂಪಾಯಿಗಳಿದ್ದರೆ ಅದರ ಮೇಲೆ ಕೇಂದ್ರ ಸರ್ಕಾರವೊಂದೇ 37 ರೂ ಅಬಕಾರಿ ಸುಂಕ ವಿಧಿಸುತ್ತದೆ. ರಾಜ್ಯಗಳು ಸುಮಾರು 27 ರೂಪಾಯಿಯಷ್ಟು ವ್ಯಾಟ್ ತೆರಿಗೆ ವಿಧಿಸುತ್ತವೆ. ಸಾಗಣೆ, ಸಂಸ್ಕರಣೆ ಮತ್ತು ಡೀಲರ್ ಕಮಿಷನ್ 8ರೂ ಆಗುತ್ತದೆ. ಅಲ್ಲಿಗೆ ಪೆಟ್ರೋಲ್ ಬೆಲೆ 110 ರೂ ದಾಟುತ್ತದೆ.

ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದ ನಂತರ ಇಂಧನಗಳ ಮೇಲಿನ ತೆರಿಗೆಯಿಂದಲೇ 26,51,919 ಕೋಟಿ ರೂ ಸಂಗ್ರಹಿಸಿದ್ದಾರೆ! 26 ಲಕ್ಷ ಕೋಟಿ ರೂಗಳೆಂದರೆ ಕಳೆದ 10 ವರ್ಷದ ಇಡಿ ಕರ್ನಾಟಕ ಬಜೆಟ್‌ಗೆ ಸರಿಸಮವಾಗುತ್ತದೆ.

ನಾವು ವಾಹನಗಳನ್ನು ಬಳಸುತ್ತಿಲ್ಲ, ಹೀಗಾಗಿ ಪೆಟ್ರೋಲ್ ಬೆಲೆ ಏರಿಕೆಯಿಂದ ನಮಗೆ ತೊಂದರೆ ಇಲ್ಲ ಎಂದು ಯಾರಾದರೂ ಅಂದುಕೊಂಡರೆ ಅವರ ತಿಳಿವಳಿಕೆ ತಪ್ಪು ಎನ್ನುವುದರಲ್ಲಿ ಎರಡು ಮಾತಿಲ್ಲ. ಬೇಡಿ ಬದುಕುವವರೂ ಸೇರಿದಂತೆ ಈ ದೇಶದ ಪ್ರತಿಯೊಬ್ಬ ಪ್ರಜೆಯ ಜೀವನವೂ ಪ್ರತಿದಿನ ತುಟ್ಟಿಯಾಗುತ್ತಿದೆ.

ಕರ್ನಾಟಕದಲ್ಲಿ 2 ಕೋಟಿಗೂ ಅಧಿಕ ನೋಂದಾಯಿತ ವಾಹನಗಳಿವೆ. ಇವುಗಳ ಮಾಲಿಕರು ನೇರವಾಗಿ ಪೆಟ್ರೋಲ್ ಬೆಲೆ ಏರಿಕೆಯಿಂದ ಬಾಧಿತರಾದರೆ ಕರ್ನಾಟಕದ ಉಳಿದ 5 ಕೋಟಿ ಜನರು ಸಹ ಪೆಟ್ರೋಲ್ ಬೆಲೆ ಏರಿಕೆಯ ದುಷ್ಪರಿಣಾಮಗಳನ್ನು ಅನುಭವಿಸಬೇಕಾಗಿದೆ. ಇದರಿಂದ ಪಾರಾಗಲು ಇಂಧನಗಳ ಮೇಲಿನ ತೆರಿಗೆ ಇಳಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರುವುದೊಂದೆ ಜನರಿಗೆ ಉಳಿದಿರುವ ದಾರಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿ: ಮತ್ತೆ ಇಂಧನ ಬೆಲೆ ಏರಿಕೆ; ಎರಡು ವಾರಗಳಲ್ಲಿ ಪೆಟ್ರೋಲ್‌ ಬೆಲೆ 10 ರೂ. ಹೆಚ್ಚಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...