Homeಕರ್ನಾಟಕಇಂದಿನಿಂದ ಹೋಟೆಲ್ ಊಟ-ತಿಂಡಿ ದರ ಏರಿಕೆ: ಕಾರಣವೇನು?

ಇಂದಿನಿಂದ ಹೋಟೆಲ್ ಊಟ-ತಿಂಡಿ ದರ ಏರಿಕೆ: ಕಾರಣವೇನು?

- Advertisement -
- Advertisement -

ಇಂದಿನಿಂದ ರಾಜ್ಯದಲ್ಲಿ ಹೋಟೆಲ್-ರೆಸ್ಟೋರೆಂಟ್-ಕೈಗಾಡಿಗಳಲ್ಲಿನ ಊಟ-ತಿಂಡಿ ದರ ಶೇ.10 ರಷ್ಟು ಹೆಚ್ಚಾಗಿದೆ. ಪ್ರತಿ ಪ್ಲೇಟ್ ಊಟ ತಿಂಡಿಯ ಮೇಲೆ 10 ರೂ ನಿಂದ 50 ರೂವರೆಗೆ ಏರಿಸಲಾಗಿದೆ. ಅದೇ ರೀತಿಯಾಗಿ ಕಾಫಿ-ಟೀ ಬೆಲೆ ಕೂಡ ಏರಿಕೆಯಾಗಿದೆ.

ಕಳೆದ ಮೂರು-ನಾಲ್ಕು ವರ್ಷಗಳಿಂದ ಹೋಟೆಲ್ ಊಟದ ದರದಲ್ಲಿ ತಟಸ್ಥತೆಯನ್ನು ಕಾಯ್ದುಕೊಂಡು ಬರಲಾಗಿತ್ತು. ಅದರಲ್ಲಿಯೂ ರಸ್ತೆ ಬದಿಯಲ್ಲಿರುವ ಚಿಕ್ಕ ಪುಟ್ಟ ಹೋಟೆಲ್‌ಗಳು, ಮೆಸ್‌ಗಳು ಮತ್ತು ಕೈಗಾಡಿಗಳು ಕೈಗೆಟುಕುವ ದರದಲ್ಲಿ ಊಟ- ತಿಂಡಿ ಮಾರುತ್ತಿದ್ದವು. ಈಗ ಅವುಗಳು ಸಹ ಬೆಲೆ ಏರಿಸಿವೆ. 30-35 ರೂಗಳಿಗೆಲ್ಲ ಬೆಳಗ್ಗಿನ ತಿಂಡಿ ತಿನ್ನಬಹುದಾಗಿತ್ತು. ಈಗ 50ರೂಗಳ ಗಡಿ ದಾಟಿದೆ. ಇನ್ನು ರೆಸ್ಟೋರೆಂಟ್‌ಗಲ್ಲಿ ಒಂದು ತಿಂಡಿಗೆ ಕನಿಷ್ಟ 100 ರೂ ಖರ್ಚು ಮಾಡಬೇಕಾಗಿದೆ.

ಕಾರಣವೇನು?

ಕೊರೊನಾ ಕಾರಣಕ್ಕೆ ಈ ಎರಡು ವರ್ಷ ಹೋಟೆಲ್ ಉದ್ಯಮ ಸಮರ್ಪಕವಾಗಿ ನಡೆದುದ್ದೆ ಇಲ್ಲ. ಲಾಕ್‌ಡೌನ್ ಕಾರಣಕ್ಕೆ ಹಲವಾರು ತಿಂಗಳುಗಳು ಮುಚ್ಚಿದ್ದರೆ ಇನ್ನುಳಿದ ಸಮಯದಲ್ಲಿ ಶೇ.50 ರಷ್ಟು ಜನಕ್ಕೆ ಮಾತ್ರ ಅನುಮತಿ, ಪಾರ್ಸೆಲ್ ಮಾತ್ರ ಎಂಬ ನಿಬಂಧನೆಗಳಿಗೆ ಒಳಪಟ್ಟಿತ್ತು. ಈಗ ಕೋವಿಡ್ ಮುಗಿದ ನಂತರ ಪೂರ್ಣ ಪ್ರಮಾಣದಲ್ಲಿ ಹೋಟೆಲ್‌ಗಳು ಆರಂಭವಾಗಿವೆ. ಆದರೆ ಹೋಟೆಲ್ ನಡೆಸಲು ಬೇಕಾಗುವ ಎಲ್ಲಾ ಸಾಮಾಗ್ರಿಗಳ ಬೆಲೆ ಏರಿಕೆಯಾಗಿದೆ. ಅಡುಗೆ ಎಣ್ಣೆ, ಗ್ಯಾಸ್, ತರಕಾರಿ, ದಿನಸಿ ಬೆಲೆ ದಿನೇ ದಿನೇ ಏರುತ್ತಿರುವುದರಿಂದ ಅನಿವಾರ್ಯವಾಗಿ ಬೆಲೆ ಏರಿಕೆ ಮಾಡಬೇಕಾಗಿದೆ.

ಅಡುಗೆ ಎಣ್ಣೆ:

80 ರೂಗಳಿಗೆ ಸಿಗುತ್ತಿದ್ದ ಒಂದು ಲೀಟರ್ ಅಡುಗೆ ಎಣ್ಣೆ ಈಗ 160-170 ರೂಗಳಿಗೆ ಏರಿಕೆಯಾಗಿದೆ. ಅಂದರೆ ಡಬಲ್ ಆಗಿದೆ. ಇದು ಹೋಟೆಲ್ ಉದ್ಯಮ ನಡೆಸುವವರಿಗೆ ಹೊರೆಯಾಗಿದೆ.

ವಾಣಿಜ್ಯ ಬಳಕೆಯ ಗ್ಯಾಸ್ ಬೆಲೆ ಏರಿಕೆ:

19 ಕೆಜಿಯ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಮೊನ್ನೆಯಷ್ಟೆ 250 ರೂ ಹೆಚ್ಚಳ ಮಾಡಲಾಗಿದೆ. ಹಾಗಾಗಿ ಬೆಂಗಳೂರಿನಲ್ಲಿ ಅದರ ಬೆಲೆ 2317.00 ರೂ.ಗೆ ಏರಿಕೆಯಾಗಿದೆ. ರೆಸ್ಟೋರೆಂಟ್‌ಗಳು, ಹೋಟೆಲ್‌ಗಳು, ಟೀ ಸ್ಟಾಲ್‌ಗಳು ಮತ್ತು ಇತರ ವಾಣಿಜ್ಯ ಕೆಫೆಗಳು ಇದೇ 19 ಕೆಜಿ ಸಿಲಿಂಡರ್‌ ಅನ್ನು ಬಳಸಲಾಗುತ್ತವೆ.  2021ರ ನವೆಂಬರ್ ನಲ್ಲಿ 1700 ರೂ ಇದ್ದ ಗ್ಯಾಸ್ ಬೆಲೆ ಈಗ 2300 ರೂಗೆ ಏರಿದೆ. ಅಂದರೆ ಆರು ತಿಂಗಳಲ್ಲಿ 600 ರೂ ಹೆಚ್ಚಾಗಿದೆ!

ಪೆಟ್ರೋಲ್ -ಡೀಸೆಲ್ ಬೆಲೆಯಲ್ಲಿ ನಿರಂತರ ಏರಿಕೆ

2020ರ ಜೂನ್‌ನಲ್ಲಿ ಲೀಟರ್ ಪೆಟ್ರೋಲ್ ಬೆಲೆ 73.55ರೂ ಇತ್ತು. ಈಗ ಅದು 110 ರೂಗೆ ಏರಿದೆ. ಅಂದರೆ 36.50 ರೂ ಹೆಚ್ಚಳವಾಗಿದೆ. ಅಂದರೆ ಶೇ.50 ರಷ್ಟು ಏರಿಕೆಯಾಗಿದೆ. ಡೀಸೆಲ್ ಬೆಲೆ ಸಹ 66 ರೂ ಇದ್ದುದ್ದು ಈಗ 94 ರೂಗೆ ಏರಿಕೆಯಾಗಿದೆ. ಈ ಬೆಲೆ ಏರಿಕೆಯಿಂದ ಎಲ್ಲಾ ಸಾಗಣೆ ವಾಹನಗಳು ಬಾಡಿಗೆ ಏರಿಸಬೇಕಾಗುತ್ತದೆ. ಇದರಿಂದ ಆಹಾರ, ತರಕಾರಿ, ದಿನಸಿ, ಹಣ್ಣು ಸೇರಿದಂತೆ ದಿನಬಳಕೆಯ ಪ್ರತಿಯೊಂದು ವಸ್ತುಗಳ ಬೆಲೆ ಏರುತ್ತಿದೆ.

ಅದೇ ರೀತಿಯಾಗಿ ಟ್ರ್ಯಾಕ್ಟರ್, ಟಿಲ್ಲರ್, ಲಗೇಜ್ ವಾಹನಗಳಿಗೆ ಡೀಸೆಲ್ ಬೇಕಿರುವುದರಿಂದ ಕೃಷಿಯ ಮೇಲಿನ ಹೂಡಿಕೆ ಹೆಚ್ಚಾಗುತ್ತದೆ. ರೈತರಿಗೆ ಹೊರೆಯಾಗುತ್ತಿದೆ.

ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಗೆ ಕಾರಣವೇನು?

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇಂಧನಗಳ ಮೇಲಿನ ತೆರಿಗೆ ಹೆಚ್ಚು ಮಾಡುತ್ತಿದೆ. ಒಂದು ಲೀಟರ್ ಪೆಟ್ರೋಲ್‌ನ ಮೂಲ ಬೆಲೆ 38 ರೂಪಾಯಿಗಳಿದ್ದರೆ ಅದರ ಮೇಲೆ ಕೇಂದ್ರ ಸರ್ಕಾರವೊಂದೇ 37 ರೂ ಅಬಕಾರಿ ಸುಂಕ ವಿಧಿಸುತ್ತದೆ. ರಾಜ್ಯಗಳು ಸುಮಾರು 27 ರೂಪಾಯಿಯಷ್ಟು ವ್ಯಾಟ್ ತೆರಿಗೆ ವಿಧಿಸುತ್ತವೆ. ಸಾಗಣೆ, ಸಂಸ್ಕರಣೆ ಮತ್ತು ಡೀಲರ್ ಕಮಿಷನ್ 8ರೂ ಆಗುತ್ತದೆ. ಅಲ್ಲಿಗೆ ಪೆಟ್ರೋಲ್ ಬೆಲೆ 110 ರೂ ದಾಟುತ್ತದೆ.

ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದ ನಂತರ ಇಂಧನಗಳ ಮೇಲಿನ ತೆರಿಗೆಯಿಂದಲೇ 26,51,919 ಕೋಟಿ ರೂ ಸಂಗ್ರಹಿಸಿದ್ದಾರೆ! 26 ಲಕ್ಷ ಕೋಟಿ ರೂಗಳೆಂದರೆ ಕಳೆದ 10 ವರ್ಷದ ಇಡಿ ಕರ್ನಾಟಕ ಬಜೆಟ್‌ಗೆ ಸರಿಸಮವಾಗುತ್ತದೆ.

ನಾವು ವಾಹನಗಳನ್ನು ಬಳಸುತ್ತಿಲ್ಲ, ಹೀಗಾಗಿ ಪೆಟ್ರೋಲ್ ಬೆಲೆ ಏರಿಕೆಯಿಂದ ನಮಗೆ ತೊಂದರೆ ಇಲ್ಲ ಎಂದು ಯಾರಾದರೂ ಅಂದುಕೊಂಡರೆ ಅವರ ತಿಳಿವಳಿಕೆ ತಪ್ಪು ಎನ್ನುವುದರಲ್ಲಿ ಎರಡು ಮಾತಿಲ್ಲ. ಬೇಡಿ ಬದುಕುವವರೂ ಸೇರಿದಂತೆ ಈ ದೇಶದ ಪ್ರತಿಯೊಬ್ಬ ಪ್ರಜೆಯ ಜೀವನವೂ ಪ್ರತಿದಿನ ತುಟ್ಟಿಯಾಗುತ್ತಿದೆ.

ಕರ್ನಾಟಕದಲ್ಲಿ 2 ಕೋಟಿಗೂ ಅಧಿಕ ನೋಂದಾಯಿತ ವಾಹನಗಳಿವೆ. ಇವುಗಳ ಮಾಲಿಕರು ನೇರವಾಗಿ ಪೆಟ್ರೋಲ್ ಬೆಲೆ ಏರಿಕೆಯಿಂದ ಬಾಧಿತರಾದರೆ ಕರ್ನಾಟಕದ ಉಳಿದ 5 ಕೋಟಿ ಜನರು ಸಹ ಪೆಟ್ರೋಲ್ ಬೆಲೆ ಏರಿಕೆಯ ದುಷ್ಪರಿಣಾಮಗಳನ್ನು ಅನುಭವಿಸಬೇಕಾಗಿದೆ. ಇದರಿಂದ ಪಾರಾಗಲು ಇಂಧನಗಳ ಮೇಲಿನ ತೆರಿಗೆ ಇಳಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರುವುದೊಂದೆ ಜನರಿಗೆ ಉಳಿದಿರುವ ದಾರಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿ: ಮತ್ತೆ ಇಂಧನ ಬೆಲೆ ಏರಿಕೆ; ಎರಡು ವಾರಗಳಲ್ಲಿ ಪೆಟ್ರೋಲ್‌ ಬೆಲೆ 10 ರೂ. ಹೆಚ್ಚಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...