Homeಮುಖಪುಟಜಿಎಸ್‌ಟಿ ಕುರಿತ ಟೀಕೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕ್ಷಮೆ ಕೋರಿದ ಹೋಟೆಲ್ ಮಾಲೀಕ :...

ಜಿಎಸ್‌ಟಿ ಕುರಿತ ಟೀಕೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕ್ಷಮೆ ಕೋರಿದ ಹೋಟೆಲ್ ಮಾಲೀಕ : ವಿಡಿಯೋ ವೈರಲ್

- Advertisement -
- Advertisement -

ಜಿಎಸ್‌ಟಿ ಸಂಬಂಧಿತ ಸಮಸ್ಯೆಗಳ ಕುರಿತು ಪ್ರಶ್ನೆಯೆತ್ತಿ ತುಂಬಿದ ಸಭೆಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಮಾಡಿದ್ದಕ್ಕೆ ತಮಿಳುನಾಡಿನ ಕೊಯಮತ್ತೂರಿನ ಹೋಟೆಲ್ ಮಾಲೀಕರೊಬ್ಬರು ಕ್ಷಮೆ ಕೇಳಿದ್ದಾರೆ ಎನ್ನಲಾದ ವಿಡಿಯೋವೊಂದು ವೈರಲ್ ಆಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ ಹಲವರು, ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕ್ಷಮೆ ಕೇಳಿಸಿದ್ದಾರೆ ಎಂದು ಆರೋಪಿಸಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಎಕ್ಸ್‌ನಲ್ಲಿ ವಿಡಿಯೋಗಳನ್ನು ಹಂಚಿಕೊಂಡಿರುವ ಕೇರಳ ಕಾಂಗ್ರೆಸ್ “ಶ್ರೀ ಅನ್ನಪೂರ್ಣ ಕೊಯಮತ್ತೂರಿನ ಪ್ರಸಿದ್ಧ ಸಸ್ಯಾಹಾರಿ ರೆಸ್ಟೋರೆಂಟ್ ಸರಪಳಿಯಾಗಿದೆ. ಬುಧವಾರ, ರೆಸ್ಟೋರೆಂಟ್‌ನ ಮಾಲೀಕ ಶ್ರೀನಿವಾಸನ್ ಅವರು ಹಣಕಾಸು ಸಚಿವರ ಜೊತೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು. ಅಲ್ಲಿ ಜಿಎಸ್‌ಟಿಯ ಸಮಸ್ಯೆಗಳ ಬಗ್ಗೆ ಬಹಳ ನಯವಾಗಿ ಅವರು ಪ್ರಶ್ನೆಗಳನ್ನು ಕೇಳಿದ್ದರು” ಎಂದು ತಿಳಿಸಿದೆ.

“ಸಮಸ್ಯೆಯೆಂದರೆ ಪ್ರತಿಯೊಂದು ವಸ್ತುವಿಗೂ ವಿಭಿನ್ನವಾಗಿ ಜಿಎಸ್‌ಟಿ ಅನ್ವಯಿಸಲಾಗುತ್ತದೆ. ಉದಾಹರಣೆಗೆ : ಬನ್ ಮೇಲೆ ಯಾವುದೇ ಜಿಎಸ್‌ಟಿ ಇಲ್ಲ. ನೀವು ಅದರಲ್ಲಿ ಕ್ರೀಮ್ ಹಾಕಿದರೆ ಶೇ.18 ಜಿಎಸ್‌ಟಿ ಬೀಳುತ್ತದೆ. ಹಾಗಾಗಿ, ಬನ್ ಮತ್ತು ಕ್ರೀಮ್ ಅನ್ನು ಪ್ರತ್ಯೇಕವಾಗಿ ಕೊಡಿ ಎಂದು ಗ್ರಾಹಕರು ಕೇಳುತ್ತಾರೆ. ಹಣ ಉಳಿಸಲು ಅವರೇ ಬನ್‌ ಮೇಲೆ ಕ್ರೀಂ ಹಾಕಿಕೊಳ್ಳುತ್ತಾರೆ. ಉತ್ತರ ಭಾರತದಲ್ಲಿ ಜನರು ಹೆಚ್ಚು ಸಿಹಿ ತಿನ್ನುತ್ತಾರೆ ಎಂಬ ಕಾರಣಕ್ಕೆ ಹಣಕಾಸು ಇಲಾಖೆ ಸಿಹಿ ಮೇಲೆ ಶೇ.5 ಮತ್ತು ನಮ್ಕೀನ್ ಮೇಲೆ ಶೇ.12 ಜಿಎಸ್‌ಟಿ ಹಾಕಿದೆ ಎಂದು ಜನರು ಹೇಳುತ್ತಾರೆ. ತಮಿಳುನಾಡಿನಲ್ಲಿ ಸಿಹಿ, ನಮ್ಕೀನ್ ಮತ್ತು ಕಾಫಿ ಒಟ್ಟಿಗೆ ಹೋಗುತ್ತದೆ. ಆದ್ದರಿಂದ, ದಯವಿಟ್ಟು ಇವುಗಳಿಗೆ ಏಕರೂಪದ ಜಿಎಸ್‌ಟಿಯನ್ನು ವಿಧಿಸಿ. ಈ ಜಿಎಸ್‌ಟಿ ಗೊಂದಲದಿಂದಾಗಿ ಕಂಪ್ಯೂಟರೇ ಸ್ಟ್ರಕ್ ಆಗುತ್ತಿವೆ” ಎಂದು ಶ್ರೀನಿವಾಸನ್ ಅವರ ಮಾತುಗಳನ್ನು ವಿವರಿಸಿದೆ.

“ಶ್ರೀನಿವಾಸನ್ ಅವರ ಮಾತಿಗೆ ವೇದಿಕೆಯಲ್ಲಿ ಸೀತಾರಾಮನ್ ಮೇಡಂ ನಕ್ಕಿದ್ದರು. ಆದರೆ ನಂತರ ಶ್ರೀನಿವಾಸನ್ ಅವರು “ನಾನು ಯಾವುದೇ ಪಕ್ಷದ ಪರ ಇರುವವನಲ್ಲ” ಎಂದು ಸೀತಾರಾಮನ್ ಮುಂದೆ ಕ್ಷಮೆ ಯಾಚಿಸಿರುವುದು ವಿಡಿಯೋದಲ್ಲಿ ಕಂಡು ಬಂದಿದೆ. ಮಾಸ್ಟರ್ ಜೀ ಶ್ರೀನಿವಾಸನ್ ಅವರ ಟೀಕೆಗೆ ಕೋಪಗೊಂಡಿದ್ದಾರೆ ಮತ್ತು ಅವರ ಹಿಂಬಾಲಕರು ಕೂಡ ಅವರಂತೆ ವರ್ತಿಸುತ್ತಿದ್ದಾರೆ. ಟೀಕೆಗೆ ಅತ್ಯಂತ ಕೋಪಗೊಂಡಿದ್ದಾರೆ” ಎಂದು ಕೇರಳ ಕಾಂಗ್ರೆಸ್ ಹೇಳಿದೆ.

ತಮಿಳುನಾಡು ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಬಾಲಾಜಿ ಎಂ.ಎಸ್‌ ತನ್ನ ಎಕ್ಸ್‌ ಖಾತೆಯಲ್ಲಿ ವೈರಲ್ ವಿಡಿಯೋ ಹಂಚಿಕೊಂಡು “ಕೊಯಮತ್ತೂರು ಅನ್ನಪೂರ್ಣ ಶ್ರೀನಿವಾಸನ್ ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಅವರನ್ನು ಕೊಯಮತ್ತೂರು ದಕ್ಷಿಣ ಸದಸ್ಯೆ ವನತಿ ಜೊತೆ ಭೇಟಿಯಾಗಿ, ಸಭೆಯಲ್ಲಿ ತಾನು ಆಡಿದ ಮಾತುಗಳು ತಪ್ಪಾಗಿದೆ ಎಂದು ಕ್ಷಮೆ ಕೋರಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ : ತೆರಿಗೆಯಲ್ಲಿ ಶೇ.50ರಷ್ಟು ಪಾಲು ಕೊಡಿ : ಪ್ರತಿಪಕ್ಷಗಳ ಆಡಳಿತ ರಾಜ್ಯಗಳಿಂದ ಕೇಂದ್ರಕ್ಕೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...