Homeಮುಖಪುಟಜಿಎಸ್‌ಟಿ ಕುರಿತ ಟೀಕೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕ್ಷಮೆ ಕೋರಿದ ಹೋಟೆಲ್ ಮಾಲೀಕ :...

ಜಿಎಸ್‌ಟಿ ಕುರಿತ ಟೀಕೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕ್ಷಮೆ ಕೋರಿದ ಹೋಟೆಲ್ ಮಾಲೀಕ : ವಿಡಿಯೋ ವೈರಲ್

- Advertisement -
- Advertisement -

ಜಿಎಸ್‌ಟಿ ಸಂಬಂಧಿತ ಸಮಸ್ಯೆಗಳ ಕುರಿತು ಪ್ರಶ್ನೆಯೆತ್ತಿ ತುಂಬಿದ ಸಭೆಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಮಾಡಿದ್ದಕ್ಕೆ ತಮಿಳುನಾಡಿನ ಕೊಯಮತ್ತೂರಿನ ಹೋಟೆಲ್ ಮಾಲೀಕರೊಬ್ಬರು ಕ್ಷಮೆ ಕೇಳಿದ್ದಾರೆ ಎನ್ನಲಾದ ವಿಡಿಯೋವೊಂದು ವೈರಲ್ ಆಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ ಹಲವರು, ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕ್ಷಮೆ ಕೇಳಿಸಿದ್ದಾರೆ ಎಂದು ಆರೋಪಿಸಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಎಕ್ಸ್‌ನಲ್ಲಿ ವಿಡಿಯೋಗಳನ್ನು ಹಂಚಿಕೊಂಡಿರುವ ಕೇರಳ ಕಾಂಗ್ರೆಸ್ “ಶ್ರೀ ಅನ್ನಪೂರ್ಣ ಕೊಯಮತ್ತೂರಿನ ಪ್ರಸಿದ್ಧ ಸಸ್ಯಾಹಾರಿ ರೆಸ್ಟೋರೆಂಟ್ ಸರಪಳಿಯಾಗಿದೆ. ಬುಧವಾರ, ರೆಸ್ಟೋರೆಂಟ್‌ನ ಮಾಲೀಕ ಶ್ರೀನಿವಾಸನ್ ಅವರು ಹಣಕಾಸು ಸಚಿವರ ಜೊತೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು. ಅಲ್ಲಿ ಜಿಎಸ್‌ಟಿಯ ಸಮಸ್ಯೆಗಳ ಬಗ್ಗೆ ಬಹಳ ನಯವಾಗಿ ಅವರು ಪ್ರಶ್ನೆಗಳನ್ನು ಕೇಳಿದ್ದರು” ಎಂದು ತಿಳಿಸಿದೆ.

“ಸಮಸ್ಯೆಯೆಂದರೆ ಪ್ರತಿಯೊಂದು ವಸ್ತುವಿಗೂ ವಿಭಿನ್ನವಾಗಿ ಜಿಎಸ್‌ಟಿ ಅನ್ವಯಿಸಲಾಗುತ್ತದೆ. ಉದಾಹರಣೆಗೆ : ಬನ್ ಮೇಲೆ ಯಾವುದೇ ಜಿಎಸ್‌ಟಿ ಇಲ್ಲ. ನೀವು ಅದರಲ್ಲಿ ಕ್ರೀಮ್ ಹಾಕಿದರೆ ಶೇ.18 ಜಿಎಸ್‌ಟಿ ಬೀಳುತ್ತದೆ. ಹಾಗಾಗಿ, ಬನ್ ಮತ್ತು ಕ್ರೀಮ್ ಅನ್ನು ಪ್ರತ್ಯೇಕವಾಗಿ ಕೊಡಿ ಎಂದು ಗ್ರಾಹಕರು ಕೇಳುತ್ತಾರೆ. ಹಣ ಉಳಿಸಲು ಅವರೇ ಬನ್‌ ಮೇಲೆ ಕ್ರೀಂ ಹಾಕಿಕೊಳ್ಳುತ್ತಾರೆ. ಉತ್ತರ ಭಾರತದಲ್ಲಿ ಜನರು ಹೆಚ್ಚು ಸಿಹಿ ತಿನ್ನುತ್ತಾರೆ ಎಂಬ ಕಾರಣಕ್ಕೆ ಹಣಕಾಸು ಇಲಾಖೆ ಸಿಹಿ ಮೇಲೆ ಶೇ.5 ಮತ್ತು ನಮ್ಕೀನ್ ಮೇಲೆ ಶೇ.12 ಜಿಎಸ್‌ಟಿ ಹಾಕಿದೆ ಎಂದು ಜನರು ಹೇಳುತ್ತಾರೆ. ತಮಿಳುನಾಡಿನಲ್ಲಿ ಸಿಹಿ, ನಮ್ಕೀನ್ ಮತ್ತು ಕಾಫಿ ಒಟ್ಟಿಗೆ ಹೋಗುತ್ತದೆ. ಆದ್ದರಿಂದ, ದಯವಿಟ್ಟು ಇವುಗಳಿಗೆ ಏಕರೂಪದ ಜಿಎಸ್‌ಟಿಯನ್ನು ವಿಧಿಸಿ. ಈ ಜಿಎಸ್‌ಟಿ ಗೊಂದಲದಿಂದಾಗಿ ಕಂಪ್ಯೂಟರೇ ಸ್ಟ್ರಕ್ ಆಗುತ್ತಿವೆ” ಎಂದು ಶ್ರೀನಿವಾಸನ್ ಅವರ ಮಾತುಗಳನ್ನು ವಿವರಿಸಿದೆ.

“ಶ್ರೀನಿವಾಸನ್ ಅವರ ಮಾತಿಗೆ ವೇದಿಕೆಯಲ್ಲಿ ಸೀತಾರಾಮನ್ ಮೇಡಂ ನಕ್ಕಿದ್ದರು. ಆದರೆ ನಂತರ ಶ್ರೀನಿವಾಸನ್ ಅವರು “ನಾನು ಯಾವುದೇ ಪಕ್ಷದ ಪರ ಇರುವವನಲ್ಲ” ಎಂದು ಸೀತಾರಾಮನ್ ಮುಂದೆ ಕ್ಷಮೆ ಯಾಚಿಸಿರುವುದು ವಿಡಿಯೋದಲ್ಲಿ ಕಂಡು ಬಂದಿದೆ. ಮಾಸ್ಟರ್ ಜೀ ಶ್ರೀನಿವಾಸನ್ ಅವರ ಟೀಕೆಗೆ ಕೋಪಗೊಂಡಿದ್ದಾರೆ ಮತ್ತು ಅವರ ಹಿಂಬಾಲಕರು ಕೂಡ ಅವರಂತೆ ವರ್ತಿಸುತ್ತಿದ್ದಾರೆ. ಟೀಕೆಗೆ ಅತ್ಯಂತ ಕೋಪಗೊಂಡಿದ್ದಾರೆ” ಎಂದು ಕೇರಳ ಕಾಂಗ್ರೆಸ್ ಹೇಳಿದೆ.

ತಮಿಳುನಾಡು ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಬಾಲಾಜಿ ಎಂ.ಎಸ್‌ ತನ್ನ ಎಕ್ಸ್‌ ಖಾತೆಯಲ್ಲಿ ವೈರಲ್ ವಿಡಿಯೋ ಹಂಚಿಕೊಂಡು “ಕೊಯಮತ್ತೂರು ಅನ್ನಪೂರ್ಣ ಶ್ರೀನಿವಾಸನ್ ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಅವರನ್ನು ಕೊಯಮತ್ತೂರು ದಕ್ಷಿಣ ಸದಸ್ಯೆ ವನತಿ ಜೊತೆ ಭೇಟಿಯಾಗಿ, ಸಭೆಯಲ್ಲಿ ತಾನು ಆಡಿದ ಮಾತುಗಳು ತಪ್ಪಾಗಿದೆ ಎಂದು ಕ್ಷಮೆ ಕೋರಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ : ತೆರಿಗೆಯಲ್ಲಿ ಶೇ.50ರಷ್ಟು ಪಾಲು ಕೊಡಿ : ಪ್ರತಿಪಕ್ಷಗಳ ಆಡಳಿತ ರಾಜ್ಯಗಳಿಂದ ಕೇಂದ್ರಕ್ಕೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...