Homeಮುಖಪುಟಜಿಎಸ್‌ಟಿ ಕುರಿತ ಟೀಕೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕ್ಷಮೆ ಕೋರಿದ ಹೋಟೆಲ್ ಮಾಲೀಕ :...

ಜಿಎಸ್‌ಟಿ ಕುರಿತ ಟೀಕೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕ್ಷಮೆ ಕೋರಿದ ಹೋಟೆಲ್ ಮಾಲೀಕ : ವಿಡಿಯೋ ವೈರಲ್

- Advertisement -
- Advertisement -

ಜಿಎಸ್‌ಟಿ ಸಂಬಂಧಿತ ಸಮಸ್ಯೆಗಳ ಕುರಿತು ಪ್ರಶ್ನೆಯೆತ್ತಿ ತುಂಬಿದ ಸಭೆಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಮಾಡಿದ್ದಕ್ಕೆ ತಮಿಳುನಾಡಿನ ಕೊಯಮತ್ತೂರಿನ ಹೋಟೆಲ್ ಮಾಲೀಕರೊಬ್ಬರು ಕ್ಷಮೆ ಕೇಳಿದ್ದಾರೆ ಎನ್ನಲಾದ ವಿಡಿಯೋವೊಂದು ವೈರಲ್ ಆಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ ಹಲವರು, ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕ್ಷಮೆ ಕೇಳಿಸಿದ್ದಾರೆ ಎಂದು ಆರೋಪಿಸಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಎಕ್ಸ್‌ನಲ್ಲಿ ವಿಡಿಯೋಗಳನ್ನು ಹಂಚಿಕೊಂಡಿರುವ ಕೇರಳ ಕಾಂಗ್ರೆಸ್ “ಶ್ರೀ ಅನ್ನಪೂರ್ಣ ಕೊಯಮತ್ತೂರಿನ ಪ್ರಸಿದ್ಧ ಸಸ್ಯಾಹಾರಿ ರೆಸ್ಟೋರೆಂಟ್ ಸರಪಳಿಯಾಗಿದೆ. ಬುಧವಾರ, ರೆಸ್ಟೋರೆಂಟ್‌ನ ಮಾಲೀಕ ಶ್ರೀನಿವಾಸನ್ ಅವರು ಹಣಕಾಸು ಸಚಿವರ ಜೊತೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು. ಅಲ್ಲಿ ಜಿಎಸ್‌ಟಿಯ ಸಮಸ್ಯೆಗಳ ಬಗ್ಗೆ ಬಹಳ ನಯವಾಗಿ ಅವರು ಪ್ರಶ್ನೆಗಳನ್ನು ಕೇಳಿದ್ದರು” ಎಂದು ತಿಳಿಸಿದೆ.

“ಸಮಸ್ಯೆಯೆಂದರೆ ಪ್ರತಿಯೊಂದು ವಸ್ತುವಿಗೂ ವಿಭಿನ್ನವಾಗಿ ಜಿಎಸ್‌ಟಿ ಅನ್ವಯಿಸಲಾಗುತ್ತದೆ. ಉದಾಹರಣೆಗೆ : ಬನ್ ಮೇಲೆ ಯಾವುದೇ ಜಿಎಸ್‌ಟಿ ಇಲ್ಲ. ನೀವು ಅದರಲ್ಲಿ ಕ್ರೀಮ್ ಹಾಕಿದರೆ ಶೇ.18 ಜಿಎಸ್‌ಟಿ ಬೀಳುತ್ತದೆ. ಹಾಗಾಗಿ, ಬನ್ ಮತ್ತು ಕ್ರೀಮ್ ಅನ್ನು ಪ್ರತ್ಯೇಕವಾಗಿ ಕೊಡಿ ಎಂದು ಗ್ರಾಹಕರು ಕೇಳುತ್ತಾರೆ. ಹಣ ಉಳಿಸಲು ಅವರೇ ಬನ್‌ ಮೇಲೆ ಕ್ರೀಂ ಹಾಕಿಕೊಳ್ಳುತ್ತಾರೆ. ಉತ್ತರ ಭಾರತದಲ್ಲಿ ಜನರು ಹೆಚ್ಚು ಸಿಹಿ ತಿನ್ನುತ್ತಾರೆ ಎಂಬ ಕಾರಣಕ್ಕೆ ಹಣಕಾಸು ಇಲಾಖೆ ಸಿಹಿ ಮೇಲೆ ಶೇ.5 ಮತ್ತು ನಮ್ಕೀನ್ ಮೇಲೆ ಶೇ.12 ಜಿಎಸ್‌ಟಿ ಹಾಕಿದೆ ಎಂದು ಜನರು ಹೇಳುತ್ತಾರೆ. ತಮಿಳುನಾಡಿನಲ್ಲಿ ಸಿಹಿ, ನಮ್ಕೀನ್ ಮತ್ತು ಕಾಫಿ ಒಟ್ಟಿಗೆ ಹೋಗುತ್ತದೆ. ಆದ್ದರಿಂದ, ದಯವಿಟ್ಟು ಇವುಗಳಿಗೆ ಏಕರೂಪದ ಜಿಎಸ್‌ಟಿಯನ್ನು ವಿಧಿಸಿ. ಈ ಜಿಎಸ್‌ಟಿ ಗೊಂದಲದಿಂದಾಗಿ ಕಂಪ್ಯೂಟರೇ ಸ್ಟ್ರಕ್ ಆಗುತ್ತಿವೆ” ಎಂದು ಶ್ರೀನಿವಾಸನ್ ಅವರ ಮಾತುಗಳನ್ನು ವಿವರಿಸಿದೆ.

“ಶ್ರೀನಿವಾಸನ್ ಅವರ ಮಾತಿಗೆ ವೇದಿಕೆಯಲ್ಲಿ ಸೀತಾರಾಮನ್ ಮೇಡಂ ನಕ್ಕಿದ್ದರು. ಆದರೆ ನಂತರ ಶ್ರೀನಿವಾಸನ್ ಅವರು “ನಾನು ಯಾವುದೇ ಪಕ್ಷದ ಪರ ಇರುವವನಲ್ಲ” ಎಂದು ಸೀತಾರಾಮನ್ ಮುಂದೆ ಕ್ಷಮೆ ಯಾಚಿಸಿರುವುದು ವಿಡಿಯೋದಲ್ಲಿ ಕಂಡು ಬಂದಿದೆ. ಮಾಸ್ಟರ್ ಜೀ ಶ್ರೀನಿವಾಸನ್ ಅವರ ಟೀಕೆಗೆ ಕೋಪಗೊಂಡಿದ್ದಾರೆ ಮತ್ತು ಅವರ ಹಿಂಬಾಲಕರು ಕೂಡ ಅವರಂತೆ ವರ್ತಿಸುತ್ತಿದ್ದಾರೆ. ಟೀಕೆಗೆ ಅತ್ಯಂತ ಕೋಪಗೊಂಡಿದ್ದಾರೆ” ಎಂದು ಕೇರಳ ಕಾಂಗ್ರೆಸ್ ಹೇಳಿದೆ.

ತಮಿಳುನಾಡು ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಬಾಲಾಜಿ ಎಂ.ಎಸ್‌ ತನ್ನ ಎಕ್ಸ್‌ ಖಾತೆಯಲ್ಲಿ ವೈರಲ್ ವಿಡಿಯೋ ಹಂಚಿಕೊಂಡು “ಕೊಯಮತ್ತೂರು ಅನ್ನಪೂರ್ಣ ಶ್ರೀನಿವಾಸನ್ ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಅವರನ್ನು ಕೊಯಮತ್ತೂರು ದಕ್ಷಿಣ ಸದಸ್ಯೆ ವನತಿ ಜೊತೆ ಭೇಟಿಯಾಗಿ, ಸಭೆಯಲ್ಲಿ ತಾನು ಆಡಿದ ಮಾತುಗಳು ತಪ್ಪಾಗಿದೆ ಎಂದು ಕ್ಷಮೆ ಕೋರಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ : ತೆರಿಗೆಯಲ್ಲಿ ಶೇ.50ರಷ್ಟು ಪಾಲು ಕೊಡಿ : ಪ್ರತಿಪಕ್ಷಗಳ ಆಡಳಿತ ರಾಜ್ಯಗಳಿಂದ ಕೇಂದ್ರಕ್ಕೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...