Homeಕರ್ನಾಟಕಮುಟ್ಟಿನ ರಜೆ : ಸರ್ಕಾರದ ಆದೇಶದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಹೋಟೆಲ್ ಸಂಘ

ಮುಟ್ಟಿನ ರಜೆ : ಸರ್ಕಾರದ ಆದೇಶದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಹೋಟೆಲ್ ಸಂಘ

- Advertisement -
- Advertisement -

ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್‌, ಬಹುರಾಷ್ಟ್ರೀಯ ಕಂಪನಿಗಳು, ಐಟಿ ಮತ್ತು ಇತರ ಖಾಸಗಿ ಕೈಗಾರಿಕೆಗಳು ಸೇರಿ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ಮುಟ್ಟಿನ ರಜೆ ನೀಡುವ ರಾಜ್ಯ ಸರ್ಕಾರದ ಆದೇಶದ ವಿರುದ್ದ ಬೆಂಗಳೂರು ಹೋಟೆಲ್‌ಗಳ ಸಂಘ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ಕೇರಳ, ಒಡಿಶಾ, ಬಿಹಾರ ಮತ್ತು ಸಿಕ್ಕಿಂ ರಾಜ್ಯಗಳ ಇರುವಂತೆ ಮಹಿಳಾ ಉದ್ಯೋಗಿಗಳಿಗೆ ವೇತನ ಸಹಿತ ಮುಟ್ಟಿನ ರಜೆ ನೀಡುವ ಆದೇಶಕ್ಕೆ 2025ರ ಅಕ್ಟೋಬರ್ 9ರಂದು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

“ನಾಡಿನ ಲಕ್ಷಾಂತರ ಹೆಣ್ಣುಮಕ್ಕಳು, ಮಹಿಳೆಯರಿಗೆ ಋತುಚಕ್ರದ ಸಂದರ್ಭದಲ್ಲಿ ಕೆಲಸದ ಸ್ಥಳದಲ್ಲಿ ಎದುರಾಗುವ ಸವಾಲುಗಳು, ಅವರು ಅನುಭವಿಸುವ ಮಾನಸಿಕ ಹಾಗೂ ದೈಹಿಕ ನೋವು, ಸಂಕಟವನ್ನು ಅರಿತು ಈ ವೇಳೆ ಅವರಿಗೆ ಮಾಸಿಕ 1 ದಿನ ವೇತನ ಸಹಿತ ರಜೆ ನೀಡುವ ತೀರ್ಮಾನವನ್ನು ಸರ್ಕಾರವು ಕೈಗೊಂಡಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ನವೆಂಬರ್ 12ರಂದು ರಾಜ್ಯ ಸರ್ಕಾರವು, 1948ರ ಕಾರ್ಖಾನೆ ಕಾಯ್ದೆ, 1961ರ ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸ್ಥಾಪನೆ ಕಾಯ್ದೆ, 1951ರ ಪ್ಲಾಂಟೇಶನ್ ಕಾರ್ಮಿಕ ಕಾಯ್ದೆ, 1966ರ ಬೀಡಿ ಮತ್ತು ಸಿಗಾರ್ ಕಾರ್ಮಿಕರ ಕಾಯ್ದೆ ಮತ್ತು 1961ರ ಮೋಟಾರ್ ಸಾರಿಗೆ ಕಾರ್ಮಿಕರ ಕಾಯ್ದೆಯಡಿಯಲ್ಲಿ ನಡೆಯುವ ಎಲ್ಲಾ ಸಂಸ್ಥೆಗಳಿಗೆ ಮೇಲೆ ತಿಳಿಸಿದ ನೀತಿಯನ್ನು ಅನುಸರಿಸಲು ನಿರ್ದೇಶನ ನೀಡುವ ಅಧಿಸೂಚನೆಯನ್ನು ಹೊರಡಿಸಿದೆ ಎಂದು ಹೋಟೆಲ್‌ಗಳ ಸಂಘವು ಹೇಳಿಕೆಯಲ್ಲಿ ತಿಳಿಸಿದೆ.

ಸರ್ಕಾರವು ಪಾಲುದಾರರಿಂದ ಅಭಿಪ್ರಾಯಗಳನ್ನು ಕೇಳುವ ಯಾವುದೇ ಸೂಚನೆಯನ್ನು ನೀಡಿಲ್ಲವಾದ್ದರಿಂದ, ಅಧಿಸೂಚನೆಯು ನೈಸರ್ಗಿಕ ನ್ಯಾಯಕ್ಕೆ ವಿರುದ್ಧವಾಗಿದೆ ಎಂದು ಹೋಟೆಲ್‌ ಸಂಘವು ಹೈಕೋರ್ಟ್‌ಗೆ ಸಲ್ಲಿಸಿದ ಅರ್ಜಿಯಲ್ಲಿ ಹೇಳಿದೆ. ಈ ಕಾನೂನುಗಳು (ಮೇಲೆ ಉಲ್ಲೇಖಿಸಿದ ವಿವಿಧ ಕಾಯ್ದೆಗಳು) ಸರ್ಕಾರ ಈ ರೀತಿ ರಜೆಯನ್ನು (ಮುಟ್ಟಿನ ರಜೆ) ಕಡ್ಡಾಯಗೊಳಿಸುವ ಆದೇಶವನ್ನು ಹೊರಡಿಸಲು ಅನುವು ಮಾಡಿಕೊಡುವ ನಿಬಂಧನೆಗಳನ್ನು ಹೊಂದಿಲ್ಲ. ಆದ್ದರಿಂದ ಸರ್ಕಾರ ಅಂತಹ ಕಾರ್ಯಕಾರಿ ಆದೇಶವನ್ನು ಹೊರಡಿಸಲು ಸಾಧ್ಯವಿಲ್ಲ ಎಂದು ವಾದಿಸಿದೆ.

ಈ ರೀತಿಯ ರಜೆ ನೀಡುವುದು ಉದ್ಯೋಗದಾತರ ಸ್ವತಂತ್ರ ಅಧಿಕಾರಕ್ಕೆ ಸಂಬಂಧಿಸಿದೆ. ಇದನ್ನು ಸಂಸ್ಥೆಗಳ ಮಾನವ ಸಂಪನ್ಮೂಲ ವಿಭಾಗ (ಹೆಚ್‌ಆರ್) ನಿರ್ಧರಿಸುತ್ತದೆ. ಹಾಗಾಗಿ, ಸರ್ಕಾರ ಇಂತಹ ಆಡಳಿತಾತ್ಮಕ ವಿಷಯಗಳಲ್ಲಿ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ. ಅಲ್ಲದೆ, ಮಹಿಳೆಯರಿಗೆ ಅತ್ಯಧಿಕ ಉದ್ಯೋಗ ನೀಡುವ ಸರ್ಕಾರವೇ ತನ್ನ ಉದ್ಯೋಗಿಗಳಿಗೆ ಮಾಸಿಕ ಮುಟ್ಟಿನ ರಜೆಗಳನ್ನು ನೀಡಿಲ್ಲ. ಹೀಗಿರುವಾಗ, ಸರ್ಕಾರದ ಅಧಿಸೂಚನೆ ತಾರತಮ್ಯದಿಂದ ಕೂಡಿದೆ ಮತ್ತು ಮನಬಂದಂತೆ ಹೊರಡಿಸಿದಂತೆ ಕಾಣುತ್ತಿದೆ” ಎಂದು ಹೋಟೆಲ್‌ ಸಂಘ ಹೇಳಿದೆ.

ಈ ಅರ್ಜಿಯ ವಿಚಾರಣೆ ದಿನಾಂಕವನ್ನು ಹೈಕೋರ್ಟ್ ಇನ್ನೂ ನಿಗದಿಪಡಿಸಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಿಕ್ಷೆ ಮುಗಿದ 3 ವರ್ಷಗಳ ನಂತರ ಪಾಕಿಸ್ತಾನ ಜೈಲಿನಲ್ಲಿ ಗುಜರಾತ್ ಮೀನುಗಾರ ಸಾವು

2022 ರಲ್ಲಿ ಅಜಾಗರೂಕತೆಯಿಂದ ಅಂತರರಾಷ್ಟ್ರೀಯ ಗಡಿ ರೇಖೆಯನ್ನು ದಾಟಿದ ನಂತರ ಪಾಕಿಸ್ತಾನ ಏಜೆನ್ಸಿಗಳಿಂದ ಬಂಧಿಸಲ್ಪಟ್ಟ ಗುಜರಾತ್‌ನ ಮೀನುಗಾರನೊಬ್ಬ ಜನವರಿ 16 ರಂದು ಕರಾಚಿ ಜೈಲಿನಲ್ಲಿ ಸಾವನ್ನಪ್ಪಿದ್ದಾನೆ. ಮೂರು ವರ್ಷಗಳ ಹಿಂದೆ ಆತನ ಶಿಕ್ಷೆಯನ್ನು...

ಸ್ಥಳದಲ್ಲೇ ದಂಡ ಪಾವತಿಸುವಂತೆ ಸಂಚಾರ ಪೊಲೀಸರು ಒತ್ತಾಯಿಸುವಂತಿಲ್ಲ: ತೆಲಂಗಾಣ ಹೈಕೋರ್ಟ್

ಸಂಚಾರ ನಿಯಮ ಉಲ್ಲಂಘಿಸುವವರ ಬ್ಯಾಂಕ್ ಖಾತೆಗಳಿಂದ ಸ್ವಯಂಚಾಲಿತವಾಗಿ ದಂಡ ಕಡಿತಗೊಳಿಸಬೇಕೆಂದು ಮುಖ್ಯಮಂತ್ರಿ ರೇವಂತ್ ರೆಡ್ಡಿ ಸೂಚಿಸಿದ ಕೆಲವು ದಿನಗಳ ನಂತರ ಮಹತ್ವದ ತೀರ್ಪು ನೀಡಿರುವ ತೆಲಂಗಾಣ ಹೈಕೋರ್ಟ್, ಪೊಲೀಸರು ನಾಗರಿಕರನ್ನು ರಸ್ತೆಯಲ್ಲಿ ನಿಲ್ಲಿಸಿ...

ಎಸ್‌ಸಿ/ಎಸ್‌ಟಿ ಶಾಲೆಗಳ ನವೀಕರಣಕ್ಕೆ ಹಣ ಮಂಜೂರು ಮಾಡದಂತೆ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಮದ್ರಾಸ್ ಹೈಕೋರ್ಟ್ 

ಮಧುರೈ: ತಮಿಳುನಾಡಿನ ಸುಮಾರು 170 ಎಸ್‌ಸಿ/ಎಸ್‌ಟಿ ಶಾಲೆ ಮತ್ತು ಹಾಸ್ಟೆಲ್ ಕಟ್ಟಡಗಳ ದುರಸ್ತಿ ಮತ್ತು ನಿರ್ಮಾಣ ಕಾರ್ಯಗಳಿಗೆ ತಮಿಳುನಾಡು ಆದಿ ದ್ರಾವಿಡರ್ ವಸತಿ ಅಭಿವೃದ್ಧಿ ನಿಗಮ (ಟಿಎಎಚ್‌ಡಿಸಿಒ) 50 ಕೋಟಿ ರೂ.ಗಳನ್ನು ಖರ್ಚು...

ಕೇಂದ್ರ ಸರ್ಕಾರಿ ಅಧಿಕಾರಿಗಳ ವಿರುದ್ಧದ ಭ್ರಷ್ಟಾಚಾರ ಪ್ರಕರಣಗಳನ್ನು ರಾಜ್ಯ ಸಂಸ್ಥೆ ತನಿಖೆ ಮಾಡಬಹುದು : ಸುಪ್ರೀಂ ಕೋರ್ಟ್

ಕೇಂದ್ರ ಸರ್ಕಾರಿ ನೌಕರರು ಮಾಡುವ ಭ್ರಷ್ಟಾಚಾರ ತಡೆ ಕಾಯ್ದೆಯಡಿಯ ಶಿಕ್ಷಾರ್ಹ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ರಾಜ್ಯ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸಲು ಮತ್ತು ಆರೋಪಪಟ್ಟಿ ಸಲ್ಲಿಸಲು ಸಮರ್ಥರು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಗ್ಯಾಂಗ್‌ಸ್ಟರ್‌ಗಳ ವಿರುದ್ಧ ರಾಜ್ಯಾದ್ಯಂತ ಕಾರ್ಯಚರಣೆ ಆರಂಭಿಸಿದ ಪಂಜಾಬ್ ಸರ್ಕಾರ

ಮಾದಕ ವಸ್ತುಗಳ ವಿರುದ್ಧದ ತನ್ನ ಕಾರ್ಯಾಚರಣೆಯಿಂದ ಸ್ಫೂರ್ತಿ ಪಡೆದು, ಪಂಜಾಬ್ ಸರ್ಕಾರ ಮಂಗಳವಾರ ಗ್ಯಾಂಗ್‌ಸ್ಟರ್‌ಗಳ ವಿರುದ್ಧ ರಾಜ್ಯಾದ್ಯಂತ ಅಭಿಯಾನ ಆರಂಭಿಸಿದ್ದು, ಶಸ್ತ್ರಾಸ್ತ್ರ ಪೂರೈಕೆ ಸರಪಳಿಗಳು, ಲಾಜಿಸ್ಟಿಕ್ಸ್, ಅಡಗುತಾಣಗಳು ಮತ್ತು ಸಂವಹನ ಜಾಲಗಳು ಸೇರಿದಂತೆ...

‘ಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ‘ನನ್ನ ಹೆಸರೇ’ ಆಸರೆ’: ಪ್ರಿಯಾಂಕ್ ಖರ್ಗೆ ಆಕ್ರೋಶ 

ಬೆಂಗಳೂರು: ಮುಳುಗುವವನಿಗೆ ಹುಲ್ಲು ಕಡ್ಡಿಯ ಆಸರೆ ಎನ್ನುವಂತೆ, ಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ನನ್ನ ಹೆಸರೇ ಆಸರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ "ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು...

ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣ ರದ್ದುಗೊಳಿಸಲು ಸಾಂವಿಧಾನಿಕ ತಿದ್ದುಪಡಿಗೆ ಒತ್ತಾಯ : ತಮಿಳುನಾಡು ಸಿಎಂ ಸ್ಟಾಲಿನ್

ವಿಧಾನಸಭೆ ಅಧಿವೇಶನದಲ್ಲಿ ರಾಜ್ಯಪಾಲರು ವಾರ್ಷಿಕ ಭಾಷಣ ಮಾಡುವ ಸಂಪ್ರದಾಯವನ್ನು ರದ್ದುಗೊಳಿಸುವ ಸಾಂವಿಧಾನಿಕ ತಿದ್ದುಪಡಿಗೆ ಒತ್ತಾಯಿಸುವುದಾಗಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಘೋಷಿಸಿದ್ದಾರೆ. ತಮಿಳುನಾಡು ಸರ್ಕಾರ ಮತ್ತು ರಾಜ್ಯಪಾಲ ಆರ್‌.ಎನ್‌ ರವಿ ನಡುವೆ ಜಟಾಪಟಿ ನಡೆದು,...

ಅಸ್ಸಾಂ| ದನ ಕಳ್ಳತನದ ಶಂಕೆಯಿಂದ ಗುಂಪು ದಾಳಿ; ಓರ್ವ ಸಾವು-ನಾಲ್ವರ ಸ್ಥಿತಿ ಗಂಭೀರ

ದನ ಕಳ್ಳತನದ ಶಂಕೆಯ ಮೇಲೆ ಗುಂಪೊಂದು ದಾಳಿ ಮಾಡಿದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿ, ಇತರ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ (ಜ.19) ಅಸ್ಸಾಂನ ಕೊಕ್ರಜಾರ್‌ನಲ್ಲಿ ನಡೆದಿದೆ. ಬಲಿಪಶುಗಳು, ರಸ್ತೆ ನಿರ್ಮಾಣ ಯೋಜನೆಯೊಮದರಲ್ಲಿ...

ಕರ್ನಾಟಕ: ಐದು ವರ್ಷಗಳಲ್ಲಿ ಎಸ್‌ಸಿ/ಎಸ್‌ಟಿಗಳ ಮೇಲಿನ ಅಪರಾಧಗಳು ಶೇ. 37.7 ರಷ್ಟು ಏರಿಕೆ; ಬೆಂಗಳೂರಿನದೇ ಅಗ್ರಸ್ಥಾನ

ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (SC/ST) ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ಕಠಿಣ ಕಾನೂನುಗಳಿದ್ದರೂ, ಈ ಸಮುದಾಯಗಳ ಮೇಲಿನ ಅಪರಾಧಗಳು ಕಳೆದ ಐದು ವರ್ಷಗಳಲ್ಲಿ ಶೇ. 37.74 ರಷ್ಟು ಹೆಚ್ಚಾಗಿದ್ದು,...

‘ನಿತಿನ್ ನಬಿನ್ ನನ್ನ ಬಾಸ್, ನಾನು ಕೆಲಸಗಾರ..’; ಬಿಜೆಪಿ ನೂತನ ಮುಖ್ಯಸ್ಥರನ್ನು ಸ್ವಾಗತಿಸಿದ ಪ್ರಧಾನಿ ಮೋದಿ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಅತ್ಯಂತ ಕಿರಿಯ ವಯಸ್ಸಿನ ನಿತಿನ್ ನಬಿನ್ ಅವರನ್ನು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದರು. ಪಕ್ಷದ ಪರಂಪರೆಯನ್ನು ಮುಂದುವರಿಸುವ 'ಸಹಸ್ರಮಾನದ' ವ್ಯಕ್ತಿ ಎಂದು ಕರೆದರು. "ಪಕ್ಷದ...