Homeಕರ್ನಾಟಕಮುಟ್ಟಿನ ರಜೆ : ಸರ್ಕಾರದ ಆದೇಶದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಹೋಟೆಲ್ ಸಂಘ

ಮುಟ್ಟಿನ ರಜೆ : ಸರ್ಕಾರದ ಆದೇಶದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಹೋಟೆಲ್ ಸಂಘ

- Advertisement -
- Advertisement -

ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್‌, ಬಹುರಾಷ್ಟ್ರೀಯ ಕಂಪನಿಗಳು, ಐಟಿ ಮತ್ತು ಇತರ ಖಾಸಗಿ ಕೈಗಾರಿಕೆಗಳು ಸೇರಿ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ಮುಟ್ಟಿನ ರಜೆ ನೀಡುವ ರಾಜ್ಯ ಸರ್ಕಾರದ ಆದೇಶದ ವಿರುದ್ದ ಬೆಂಗಳೂರು ಹೋಟೆಲ್‌ಗಳ ಸಂಘ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ಕೇರಳ, ಒಡಿಶಾ, ಬಿಹಾರ ಮತ್ತು ಸಿಕ್ಕಿಂ ರಾಜ್ಯಗಳ ಇರುವಂತೆ ಮಹಿಳಾ ಉದ್ಯೋಗಿಗಳಿಗೆ ವೇತನ ಸಹಿತ ಮುಟ್ಟಿನ ರಜೆ ನೀಡುವ ಆದೇಶಕ್ಕೆ 2025ರ ಅಕ್ಟೋಬರ್ 9ರಂದು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

“ನಾಡಿನ ಲಕ್ಷಾಂತರ ಹೆಣ್ಣುಮಕ್ಕಳು, ಮಹಿಳೆಯರಿಗೆ ಋತುಚಕ್ರದ ಸಂದರ್ಭದಲ್ಲಿ ಕೆಲಸದ ಸ್ಥಳದಲ್ಲಿ ಎದುರಾಗುವ ಸವಾಲುಗಳು, ಅವರು ಅನುಭವಿಸುವ ಮಾನಸಿಕ ಹಾಗೂ ದೈಹಿಕ ನೋವು, ಸಂಕಟವನ್ನು ಅರಿತು ಈ ವೇಳೆ ಅವರಿಗೆ ಮಾಸಿಕ 1 ದಿನ ವೇತನ ಸಹಿತ ರಜೆ ನೀಡುವ ತೀರ್ಮಾನವನ್ನು ಸರ್ಕಾರವು ಕೈಗೊಂಡಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ನವೆಂಬರ್ 12ರಂದು ರಾಜ್ಯ ಸರ್ಕಾರವು, 1948ರ ಕಾರ್ಖಾನೆ ಕಾಯ್ದೆ, 1961ರ ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸ್ಥಾಪನೆ ಕಾಯ್ದೆ, 1951ರ ಪ್ಲಾಂಟೇಶನ್ ಕಾರ್ಮಿಕ ಕಾಯ್ದೆ, 1966ರ ಬೀಡಿ ಮತ್ತು ಸಿಗಾರ್ ಕಾರ್ಮಿಕರ ಕಾಯ್ದೆ ಮತ್ತು 1961ರ ಮೋಟಾರ್ ಸಾರಿಗೆ ಕಾರ್ಮಿಕರ ಕಾಯ್ದೆಯಡಿಯಲ್ಲಿ ನಡೆಯುವ ಎಲ್ಲಾ ಸಂಸ್ಥೆಗಳಿಗೆ ಮೇಲೆ ತಿಳಿಸಿದ ನೀತಿಯನ್ನು ಅನುಸರಿಸಲು ನಿರ್ದೇಶನ ನೀಡುವ ಅಧಿಸೂಚನೆಯನ್ನು ಹೊರಡಿಸಿದೆ ಎಂದು ಹೋಟೆಲ್‌ಗಳ ಸಂಘವು ಹೇಳಿಕೆಯಲ್ಲಿ ತಿಳಿಸಿದೆ.

ಸರ್ಕಾರವು ಪಾಲುದಾರರಿಂದ ಅಭಿಪ್ರಾಯಗಳನ್ನು ಕೇಳುವ ಯಾವುದೇ ಸೂಚನೆಯನ್ನು ನೀಡಿಲ್ಲವಾದ್ದರಿಂದ, ಅಧಿಸೂಚನೆಯು ನೈಸರ್ಗಿಕ ನ್ಯಾಯಕ್ಕೆ ವಿರುದ್ಧವಾಗಿದೆ ಎಂದು ಹೋಟೆಲ್‌ ಸಂಘವು ಹೈಕೋರ್ಟ್‌ಗೆ ಸಲ್ಲಿಸಿದ ಅರ್ಜಿಯಲ್ಲಿ ಹೇಳಿದೆ. ಈ ಕಾನೂನುಗಳು (ಮೇಲೆ ಉಲ್ಲೇಖಿಸಿದ ವಿವಿಧ ಕಾಯ್ದೆಗಳು) ಸರ್ಕಾರ ಈ ರೀತಿ ರಜೆಯನ್ನು (ಮುಟ್ಟಿನ ರಜೆ) ಕಡ್ಡಾಯಗೊಳಿಸುವ ಆದೇಶವನ್ನು ಹೊರಡಿಸಲು ಅನುವು ಮಾಡಿಕೊಡುವ ನಿಬಂಧನೆಗಳನ್ನು ಹೊಂದಿಲ್ಲ. ಆದ್ದರಿಂದ ಸರ್ಕಾರ ಅಂತಹ ಕಾರ್ಯಕಾರಿ ಆದೇಶವನ್ನು ಹೊರಡಿಸಲು ಸಾಧ್ಯವಿಲ್ಲ ಎಂದು ವಾದಿಸಿದೆ.

ಈ ರೀತಿಯ ರಜೆ ನೀಡುವುದು ಉದ್ಯೋಗದಾತರ ಸ್ವತಂತ್ರ ಅಧಿಕಾರಕ್ಕೆ ಸಂಬಂಧಿಸಿದೆ. ಇದನ್ನು ಸಂಸ್ಥೆಗಳ ಮಾನವ ಸಂಪನ್ಮೂಲ ವಿಭಾಗ (ಹೆಚ್‌ಆರ್) ನಿರ್ಧರಿಸುತ್ತದೆ. ಹಾಗಾಗಿ, ಸರ್ಕಾರ ಇಂತಹ ಆಡಳಿತಾತ್ಮಕ ವಿಷಯಗಳಲ್ಲಿ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ. ಅಲ್ಲದೆ, ಮಹಿಳೆಯರಿಗೆ ಅತ್ಯಧಿಕ ಉದ್ಯೋಗ ನೀಡುವ ಸರ್ಕಾರವೇ ತನ್ನ ಉದ್ಯೋಗಿಗಳಿಗೆ ಮಾಸಿಕ ಮುಟ್ಟಿನ ರಜೆಗಳನ್ನು ನೀಡಿಲ್ಲ. ಹೀಗಿರುವಾಗ, ಸರ್ಕಾರದ ಅಧಿಸೂಚನೆ ತಾರತಮ್ಯದಿಂದ ಕೂಡಿದೆ ಮತ್ತು ಮನಬಂದಂತೆ ಹೊರಡಿಸಿದಂತೆ ಕಾಣುತ್ತಿದೆ” ಎಂದು ಹೋಟೆಲ್‌ ಸಂಘ ಹೇಳಿದೆ.

ಈ ಅರ್ಜಿಯ ವಿಚಾರಣೆ ದಿನಾಂಕವನ್ನು ಹೈಕೋರ್ಟ್ ಇನ್ನೂ ನಿಗದಿಪಡಿಸಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....

‘ಖಮೇನಿ ಹತ್ಯೆ ಬಗ್ಗೆ ಮೋದಿ ಸರ್ಕಾರದ ಮೌನ ತಟಸ್ಥವಲ್ಲ, ಬದಲಿಗೆ ಪದತ್ಯಾಗ’: ಸೋನಿಯಾ ಗಾಂಧಿ

ಮಂಗಳವಾರ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯ ಬಗ್ಗೆ ಮೋದಿಯವರ ಮೌನವು ತಟಸ್ಥವಲ್ಲ, ಬದಲಾಗಿ ತ್ಯಾಗವಾಗಿದೆ...

ಟೆಕ್ಸಾಸ್‌ನಲ್ಲಿ ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿನಿ ಸೇರಿ ನಾಲ್ವರು ಸಾವು

ಟೆಕ್ಸಾಸ್‌ನ ಆಸ್ಟಿನ್ ನಗರದ ಬಾರ್ ಒಂದರ ಹೊರಗಡೆ ನಡೆದ ಗುಂಡಿನ ದಾಳಿಯಲ್ಲಿ ಭಾರತ ಮೂಲದ ಅಮೆರಿಕನ್ ವಿದ್ಯಾರ್ಥಿನಿ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಈ ಘಟನೆಯನ್ನು ಭಯೋತ್ಪಾದನಾ ಕೃತ್ಯವಾಗಿರಬಹುದು ಎಂಬ ಶಂಕೆಯ ಮೇಲೆ ತನಿಖೆ...