Homeಮುಖಪುಟಮುಡಾ ಹಗರಣ ಚರ್ಚೆಗೆ ಆಗ್ರಹಿಸಿ 'ಕಮಲ-ದಳ' ಶಾಸಕರಿಂದ ಅಹೋರಾತ್ರಿ ಧರಣಿ; ವಿಧಾನಸೌಧ ಕಾರಿಡಾರ್‌ನಲ್ಲಿ ಭಜನೆ

ಮುಡಾ ಹಗರಣ ಚರ್ಚೆಗೆ ಆಗ್ರಹಿಸಿ ‘ಕಮಲ-ದಳ’ ಶಾಸಕರಿಂದ ಅಹೋರಾತ್ರಿ ಧರಣಿ; ವಿಧಾನಸೌಧ ಕಾರಿಡಾರ್‌ನಲ್ಲಿ ಭಜನೆ

- Advertisement -
- Advertisement -

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಹಗರಣದ ಕುರಿತು ವಿಧಾನಸಭೆಯಲ್ಲಿ ಪ್ರತಿಪಕ್ಷಗಳ ಶಾಸಕರು ಚರ್ಚೆಗೆ ಒತ್ತಾಯಿಸಿದ್ದು, ವಿಧಾನ ಪರಿಷತ್ತಿನಲ್ಲೂ ಇಂತಹದ್ದೇ ದೃಶ್ಯ ಕಂಡು ಬಂತು. ಚರ್ಚೆಗೆ ಒತ್ತಾಯಿಸಿದ  ಬಿಜೆಪಿ ಮತ್ತು ಜೆಡಿಎಸ್ ಶಾಸಕರು, ಬುಧವಾರ ವಿಧಾನಸಭೆಯಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯ ಭಾಗವಾಗಿ, ಅವರು ಚರ್ಚೆಗೆ ಅವಕಾಶ ನೀಡದ ಕಾಂಗ್ರೆಸ್ ಸರ್ಕಾರ, ಸಿದ್ದರಾಮಯ್ಯ ಮತ್ತು ಸ್ಪೀಕರ್ ಯು ಟಿ ಖಾದರ್ ವಿರುದ್ಧ ಘೋಷಣಾ ಫಲಕಗಳನ್ನು ಹಿಡಿದುಕೊಂಡು ಪ್ರತಿಭಟನೆ ನಡೆಸಿದರು. ನಂತರ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ, ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ಸೇರಿದಂತೆ ಶಾಸಕರು ವಿಧಾನಸೌಧದ ಆವರಣದಲ್ಲಿಯೇ ಮಲಗಿದರು.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳ ಮುಂದೂಡಿಕೆ ಸೂಚನೆಯನ್ನು ವಿಧಾನಸಭಾಧ್ಯಕ್ಷ ಖಾದರ್ ತಿರಸ್ಕರಿಸಿದ್ದು, ವಿಪಕ್ಷ ಶಾಸಕರು ವಿಧಾನಸಭೆಯೊಳಗೆ ಅಹೋರಾತ್ರಿ ಧರಣಿ ನಡೆಸಿದರು. ಪ್ರತಿಭಟನೆಯಲ್ಲಿ ವಿಧಾನಸಭೆ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಿ.ಟಿ.ರವಿ ಸೇರಿದಂತೆ ಬಿಜೆಪಿ, ಜೆಡಿಎಸ್‌ ಸೇರಿದಂತೆ ಹಲವು ವಿಧಾನಪರಿಷತ್‌ ಸದಸ್ಯರು ಭಾಗವಹಿಸಿದ್ದರು.

ಪ್ರತಿಭಟನಾ ನಿರತ ಶಾಸಕರು ಕರ್ನಾಟಕ ವಿಧಾನಸಭೆಯೊಳಗೆ ಮಲಗಿರುವ ವಿಡಿಯೋಗಳು ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗಿದ್ದು, ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ರಾತ್ರಿಯಿಡೀ ನಡೆದ ಧರಣಿಯಲ್ಲಿ ಅವರು ಭಕ್ತಿಗೀತೆಗಳನ್ನು ಹಾಡಿದರು.

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಕರ್ನಾಟಕ ಬಿಜೆಪಿ ಆಗ್ರಹ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ‘ಮುಡಾ ಹಗರಣದ ಪಿತಾಮಹ’ ಎಂದು ಆರೋಪಿಸಿ ಕರ್ನಾಟಕ ಬಿಜೆಪಿ ಘಟಕವು ಅವರ ರಾಜೀನಾಮೆಗೆ ಒತ್ತಾಯಿಸುತ್ತಿದೆ.

“ಸಿದ್ದರಾಮಯ್ಯ ನವರು ಭಾಗಿಯಾಗಿರುವ ಮೈಸೂರು ಮೂಡಾ ಹಗರಣ ಖಂಡಿಸಿ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಭ್ರಷ್ಟಾಚಾರ ಸೇರಿದಂತೆ ಅಭಿವೃದ್ಧಿ ಶೂನ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸೌಧದಲ್ಲಿ ಉಭಯ ಸದನಗಳ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರೊಂದಿಗೆ ಅಹೋರಾತ್ರಿ ಧರಣಿ ಸತ್ಯಾಗ್ರಹ ಆರಂಭಿಸಲಾಗಿದೆ” ಎಂದು ಬಿವೈ ವಿಜಯೇಂದ್ರ ಹೇಳಿದ್ದಾರೆ.

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಸಿದ್ದರಾಮಯ್ಯನವರೇ ಹಾಗೂ ಕಾಂಗ್ರೆಸ್ಸಿಗರೇ…….” ಪರಿಶಿಷ್ಟ ಪಂಗಡದ ಕಲ್ಯಾಣಕ್ಕೆ ಮೀಸಲಾಗಿದ್ದ ಮಹರ್ಷಿ ವಾಲ್ಮೀಕಿ ನಿಗಮದ ₹187 ಕೋಟಿ ಹಣ ದರೋಡೆ ಮಾಡಿ ಈಗಾಗಲೇ ‘ಇಡಿ ಇಕ್ಕಳ’ಕ್ಕೆ ಸಿಲುಕಿ ಶಾಸಕ ಬಿ ನಾಗೇಂದ್ರ ಜೈಲು ಸೇರಿರುವುದರ ಹಿಂದೆಯೇ ಸರತಿ ಸಾಲಿನಲ್ಲಿ ನಿಂತು ಜೈಲಿನ ಬಾಗಿಲು ತಟ್ಟುತ್ತಿದ್ದೀರಿ. ವಿತ್ತ ಖಾತೆಯನ್ನು ಹೊತ್ತ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಈ ಹಗರಣದ ಬಗ್ಗೆ ತಮಗೇನೂ ತಿಳಿದಿಲ್ಲ’ ಗುಳುಂ’ಆಗಿರುವ ವಾಲ್ಮೀಕಿ ನಿಗಮದ 187 ಕೋಟಿ ರೂಗಳ ರಕ್ಷಣೆಯ ಹೊಣೆ ನನ್ನದಲ್ಲ ಎಂದು ಹೇಳುತ್ತಿರುವುದು ಬರೀ ನೈತಿಕತೆಯ ಪ್ರಶ್ನೆ ಅಲ್ಲವೇ ಅಲ್ಲ. ಜವಾಬ್ದಾರಿಯಿಂದ ನುಣುಕಿಕೊಳ್ಳುವ ಕುತಂತ್ರದ ಯೋಚನೆಯಾಗಿದೆ, ಇದಕ್ಕೆ ತನಿಖೆಯ ಹಾದಿಯಲ್ಲಿ ನಿಮಗೆ ತಕ್ಕ ಉತ್ತರ ದೊರಕಲಿದೆ” ಎಂದಿದ್ದಾರೆ.

“ಪರಿಶಿಷ್ಟ ಜಾತಿಗಳ ಕಲ್ಯಾಣ ಕಾರ್ಯಕ್ಕೆ ಮಾತ್ರ ಬಳಸಬೇಕಿದ್ದ ಸಾವಿರಾರು ಕೋಟಿ ರೂಪಾಯಿಗಳನ್ನು ಅನ್ಯ ಕಾರ್ಯಗಳಿಗೆ ಬಳಸಿ ನೀವು ಮತ್ತು ನಿಮ್ಮ ಸರ್ಕಾರ ಪರಿಶಿಷ್ಟರ ದ್ರೋಹಿಯಾಗಿದ್ದೀರಿ, ನಿಮಗೆ ಪರಿಶಿಷ್ಟ ಸಮುದಾಯಗಳೇ ಪಾಠ ಕಲಿಸಲಿವೆ. ನಿಮ್ಮ ತವರು ಜಿಲ್ಲೆ ಮೈಸೂರಿನಲ್ಲಿ ಸೂರು ಹೊಂದುವ ಜೀವಮಾನದ ಕನಸನ್ನು ನನಸು ಮಾಡಿಕೊಳ್ಳಲು ದಶಕಗಳಿಂದ ಕಾದು ಕುಳಿತಿದ್ದ ಲಕ್ಷಕ್ಕೂ ಹೆಚ್ಚಿನ ಅರ್ಜಿದಾರ ವಸತಿ ರಹಿತರು ಹಾಗೂ ಬಡವರಿಗೆ ದಕ್ಕಬೇಕಾದ ಮೂಡಾ ನಿವೇಶನಗಳನ್ನು ಬಲಾಢ್ಯರು, ನೆಲಬಾಕರು, ಪ್ರಭಾವಿಗಳಿಗೆ ನೀತಿ ನಿಯಮಗಳನ್ನು ಮೀರಿ ಕೋಟ್ಯಂತರ ರೂಪಾಯಿ ಬೆಲೆಬಾಳುವ 5000ಕ್ಕೂ ಹೆಚ್ಚು ನಿವೇಶನಗಳನ್ನು ಧಾರೆ ಎರೆದು ಕೊಟ್ಟಿರುವ ನಿವೇಶನ ಅಕ್ರಮದ ಹಗರಣವನ್ನು ಸಿಬಿಐ ತನಿಖೆಗೆ ವಹಿಸಲು ನೀವು ಏಕೆ ಹಿಂದೇಟು ಹಾಕುತ್ತಿದ್ದೀರಿ” ಎಂದು ಪ್ರಶ್ನಿಸಿದ್ದಾರೆ.

“ಏಕೆಂದರೆ, ಈ ಹಗರಣದ ಪಿತಾಮಹ ನೀವೇ ಆಗಿದ್ದೀರಿ, ನಿಮ್ಮ ಪತ್ನಿಯವರ ಹೆಸರಿನಲ್ಲಿ ಬೆಳೆಬಾಳುವ 14 ನಿವೇಶನಗಳನ್ನು ನಿಯಮ ಬಾಹಿರವಾಗಿ ಪಡೆದುಕೊಂಡು ನೈಜ ಫಲಾನು ಭವಿ ಪರಿಶಿಷ್ಟ ಕುಟುಂಬವನ್ನು ವಂಚಿಸಿ ನಾಡಿನ ಮುಖ್ಯಮಂತ್ರಿ ಸ್ಥಾನದ ಘನತೆ ಗೌರವಗಳನ್ನು ಗಾಳಿಗೆ ತೂರಿ, ಸ್ವಜನ ಪಕ್ಷಪಾತ ಹಾಗೂ ಭ್ರಷ್ಟತೆಯ ಕಿರೀಟ ಧರಿಸಿ ಭಂಡತನದಿಂದ ನಿಮ್ಮನ್ನು ನೀವೇ ಸಮರ್ಥಿಸಿಕೊಳ್ಳುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ನಿಮ್ಮ ಅಕ್ರಮಗಳ ವಿರುದ್ಧ ಪ್ರಜಾಸತ್ತಾತ್ಮಕ ರೀತಿಯಲ್ಲಿ ಹೋರಾಡಲು ಅವಕಾಶ ನೀಡದೇ ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ದಮನ ಮಾಡುತ್ತಿದ್ದೀರಿ, ಮತ್ತೊಂದೆಡೆ ಪ್ರಜಾಪ್ರಭುತ್ವದ ದೇಗುಲ ವಿಧಾನಸೌಧದ ಉಭಯ ಸದನಗಳಲ್ಲೂ ವಿರೋಧ ಪಕ್ಷವಾಗಿ ಜನಪರ ದನಿಯಾಗಿ ನಿಂತು ಹಗರಣವನ್ನು ಬಯಲು ಮಾಡಲು ಅವಕಾಶ ನೀಡದೆ ಸಾಂವಿಧಾನಿಕ ಹಕ್ಕಿನ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದೀರಿ. ಪಕ್ಷಪಾತಿ ಸ್ಪೀಕರ್ ಅವರು ನಿಮ್ಮ ತಾಳಕ್ಕೆ ತಕ್ಕಂತೆ ಕುಣಿಯುತ್ತಿರುವುದು ಶಾಸಕಾಂಗ ವ್ಯವಸ್ಥೆಯ ಕಪ್ಪು ಚುಕ್ಕೆಯಾಗಿದೆ” ಎಂದಿದ್ದಾರೆ.

ಏನಿದು ಮುಡಾ ಹಗರಣ?

ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮೈಸೂರಿನ ಕೆಸರೆ ಗ್ರಾಮದಲ್ಲಿ 3 ಎಕರೆ ಜಮೀನು ಹೊಂದಿದ್ದರು. ಈ ಭೂಮಿಯನ್ನು ಮುಡಾ ಅಭಿವೃದ್ಧಿಗಾಗಿ ಸ್ವಾಧೀನಪಡಿಸಿಕೊಂಡಿದ್ದು, ಮೈಸೂರಿನ ಮೇಲ್ಮಟ್ಟದ ಪ್ರದೇಶದಲ್ಲಿ ಸಿದ್ದರಾಮಯ್ಯ ಅವರ ಪತ್ನಿಗೆ ಪರಿಹಾರದ ನಿವೇಶನಗಳನ್ನು ಮಂಜೂರು ಮಾಡಲಾಗಿದೆ. ಮುಡಾದಿಂದ ಸ್ವಾಧೀನಪಡಿಸಿಕೊಂಡಿರುವ ಪಾರ್ವತಿ ಅವರ ಜಮೀನಿಗೆ ಹೋಲಿಸಿದರೆ ಪಾರ್ವತಿ ಅವರಿಗೆ ನೀಡಲಾದ ನಿವೇಶನವು ಹೆಚ್ಚಿನ ಆಸ್ತಿ ಮೌಲ್ಯವನ್ನು ಹೊಂದಿದೆ ಎಂದು ಆರೋಪಿಸಲಾಗಿದೆ.

ಮುಡಾ ಪಾರ್ವತಿ ಅವರಿಗೆ 50:50 ಅನುಪಾತದ ಯೋಜನೆಯಡಿ ಅವರ 3.16 ಎಕರೆ ಜಮೀನಿಗೆ ಬದಲಾಗಿ ನಿವೇಶನಗಳನ್ನು ಮಂಜೂರು ಮಾಡಿತ್ತು, ಅಲ್ಲಿ ಮುಡಾ ವಸತಿ ಬಡಾವಣೆಯನ್ನು ಅಭಿವೃದ್ಧಿಪಡಿಸಿತು.

ಮುಡಾದಿಂದ ಪರಿಹಾರ ಪಡೆಯಲು ನಕಲಿ ದಾಖಲೆ ಸೃಷ್ಟಿಸಿದ ಆರೋಪದ ಮೇಲೆ ಸಿಎಂ ಸಿದ್ದರಾಮಯ್ಯ ಹಾಗೂ ಇತರ ಒಂಬತ್ತು ಮಂದಿ ವಿರುದ್ಧ ಸಾಮಾಜಿಕ ಕಾರ್ಯಕರ್ತೆ ಸ್ನೇಹಮಯಿ ಕೃಷ್ಣ ಅವರು ದೂರು ದಾಖಲಿಸಿದ್ದರು. ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಅವರ ಸೋದರ ಮಾವ ಮಲಿಕಾರ್ಜುನ ಸ್ವಾಮಿ ದೇವರಾಜ್ ಮತ್ತು ಅವರ ಕುಟುಂಬದವರು ಅಕ್ರಮ ಎಸಗಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ. ಮುಡಾ ನಕಲಿ ದಾಖಲೆಗಳನ್ನು ಸೃಷ್ಟಿಸಿ ಕೋಟ್ಯಂತರ ರೂಪಾಯಿ ಮೌಲ್ಯದ ನಿವೇಶನಗಳನ್ನು ಪಡೆದು ವಂಚಿಸಿದೆ ಎಂದು ಆರೋಪಿಸಿದೆ.

ಸ್ನೇಹಮಯಿ ಕೃಷ್ಣ ಅವರು ತಮ್ಮ ದೂರಿನಲ್ಲಿ ಹಲವು ಪ್ರಶ್ನೆಗಳನ್ನು ಎತ್ತಿದ್ದಾರೆ. ಮುಡಾ ಹಗರಣದಲ್ಲಿ 5000 ಕೋಟಿ ರೂ.ಗೂ ಹೆಚ್ಚು ಹಗರಣ ನಡೆದಿದೆ ಎಂದು ಬಿಜೆಪಿ ಆರೋಪಿಸಿದ್ದು, ತನಿಖೆಯನ್ನು ಸಿಬಿಐಗೆ ಒಪ್ಪಿಸುವಂತೆ ಒತ್ತಾಯಿಸಿದೆ.

ಇದನ್ನೂ ಓದಿ; ಕನ್ನಡಿಗರಿಗೆ ಉದ್ಯೋಗ ಮೀಸಲು ಮಸೂದೆ ಪ್ರಶ್ನಿಸಿ ಹೈಕೋರ್ಟ್‌ಗೆ ಪಿಐಎಲ್‌ ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...