Homeಕರ್ನಾಟಕಮಧ್ಯಪ್ರದೇಶ: ಅತ್ಯಾಚಾರ ಆರೋಪಿಯ ಮನೆ ನೆಲಸಮ

ಮಧ್ಯಪ್ರದೇಶ: ಅತ್ಯಾಚಾರ ಆರೋಪಿಯ ಮನೆ ನೆಲಸಮ

- Advertisement -
- Advertisement -

ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಹದಿಹರೆಯದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯ ಮನೆಯನ್ನು ಅಕ್ರಮವಾಗಿ ನಿರ್ಮಿಸಲಾಗಿದೆ ಎಂದು ಆರೋಪಿಸಿ ನೆಲಸಮ ಮಾಡಲು ಆಡಳಿತ ಮುಂದಾಗಿದೆ.

15 ವರ್ಷದ ಬಾಲಕಿಯೊಬ್ಬಳು, ಅರೆಬೆತ್ತಲೆಯಾಗಿ ರಕ್ತಸ್ರಾವದೊಂದಿಗೆ ಸಹಾಯಕ್ಕಾಗಿ ಮನೆ-ಮನೆಗೆ ತೆರಳಿದ ವೀಡಿಯೊಗಳು ಕಳೆದ ವಾರ ಭಾರೀ ವೈರಲ್‌ ಆಗಿತ್ತು.

ಈ ಪ್ರಕರಣದಲ್ಲಿ ಆರೋಪಿ ಭರತ್ ಸೋನಿ ಎಂಬ ಆಟೋ ರಿಕ್ಷಾ ಚಾಲಕನನ್ನು ಗುರುವಾರ ಬಂಧಿಸಲಾಗಿದೆ. ಸದ್ಯ ಭರತ್ ಪೊಲೀಸರ ವಶದಲ್ಲಿದ್ದು, ವಿಚಾರಣೆ ನಡೆಯುತ್ತಿದೆ. ಅವರ ಕುಟುಂಬವು ಸರ್ಕಾರಿ ಭೂಮಿಯಲ್ಲಿ ಮನೆಯನ್ನು ನಿರ್ಮಿಸಿ ಹಲವು ವರ್ಷಗಳಿಂದ ವಾಸಿಸುತ್ತಿದೆ ಎಂದು ಉಜ್ಜಯಿನಿ ಮಹಾನಗರ ಪಾಲಿಕೆ ತಿಳಿಸಿದೆ.

ಈ ಜಮೀನು ಸರ್ಕಾರಕ್ಕೆ ಸೇರಿದ್ದು, ಆದ್ದರಿಂದ ಅದನ್ನು ಕೆಡವಲು ಯಾವುದೇ ಸೂಚನೆ ಅಗತ್ಯವಿಲ್ಲ ಎಂದು ಪಾಲಿಕೆ ಆಯುಕ್ತ ರೋಷನ್ ಸಿಂಗ್ ಹೇಳಿದ್ದಾರೆ. ಮಧ್ಯಪ್ರದೇಶ ಪೊಲೀಸರ ಸಹಯೋಗದಲ್ಲಿ ಮುನ್ಸಿಪಲ್ ಕಾರ್ಪೋರೇಷನ್ ನಾಳೆ ಮನೆ ನೆಲಸಮ ಕಾರ್ಯವನ್ನು ಮಾಡಲಿದ್ದಾರೆ ಎಂದು ಹೇಳಿದ್ದಾರೆ.

ಸುಮಾರು 700 ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಿ ಸುದೀರ್ಘ ತನಿಖೆಯ ನಂತರ ಭರತ್‌ಗೆ ಬಂಧಿಸಲಾಗಿದೆ. ತನಿಖೆಯ ತಂಡದಲ್ಲಿ 30-35 ಜನರು ಭಾಗಿಯಾಗಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿ ಅಜಯ್ ವರ್ಮಾ ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಸೆ. 26 ರಂದು ಅಪ್ರಾಪ್ತ ಬಾಲಕಿ ಬೆತ್ತಲೆಯಾಗಿ ರಕ್ತಸ್ರಾವದೊಂದಿಗೆ ಸಹಾಯಕ್ಕಾಗಿ ಬೇಡಿಕೊಳ್ಳುತ್ತಿರುವ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದವು. ಉಜ್ಜಯಿನಿಯಿಂದ ಸುಮಾರು 15 ಕಿ.ಮೀ ದೂರದಲ್ಲಿರುವ ಬದ್‌ನಗರ ರಸ್ತೆಯಲ್ಲಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಬಾಲಕಿ ಚಿಂದಿ ಬಟ್ಟೆಯನ್ನು ಹೊದ್ದುಕೊಂಡು ಮನೆ-ಮನೆಗೆ ತೆರಳಿ ನೆರವು ಕೇಳುವ ದೃಶ್ಯ ಸೆರೆಯಾಗಿತ್ತು.

ಆಕೆಯನ್ನು ಕಂಡ ಪಾದ್ರಿಯೊಬ್ಬರು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದನ್ನು ಮನಗಂಡು ಆಕೆಯನ್ನು ಟವೆಲ್‌ನಲ್ಲಿ ಹೊದಿಸಿ ಹತ್ತಿರದ ಆಸ್ಪತ್ರೆಗೆ ಸಾಗಿಸಿದರು. ವೈದ್ಯಕೀಯ ಪರೀಕ್ಷೆಯಲ್ಲಿ ಅತ್ಯಾಚಾರ  ಬಯಲಾಗಿತ್ತು. ಬಾಲಕಿ ಈ ವೇಳೆ ತೀವ್ರವಾಗಿ ಅಸ್ವಸ್ಥರಾಗಿದ್ದರು. ವಿಶೇಷ ವೈದ್ಯಕೀಯ ಆರೈಕೆಗಾಗಿ ಆಕೆಯನ್ನು ಇಂದೋರ್‌ಗೆ ರವಾನಿಸಲಾಗಿದೆ. ಪೊಲೀಸ್ ಅಧಿಕಾರಿಗಳು ಸ್ವಯಂಪ್ರೇರಿತರಾಗಿ ಆಕೆಗೆ ರಕ್ತದಾನವನ್ನು ಮಾಡಿದ್ದಾರೆ.

ಘಟನೆ ನಡೆದ ಮೂರು ದಿನಗಳ ಬಳಿಕ ಆರೋಪಿ ಭರತ್‌ನನ್ನು ಬಂಧಿಸಲಾಗಿತ್ತು. ಪೊಲೀಸರು ಸ್ಥಳ ಪರಿಶೀಲನೆ ಮಾಡುವಾಗ ಆರೋಪಿ ಓಡಿಹೋಗಲು ಪ್ರಯತ್ನಿಸಿದ್ದಾನೆ. ಆದರೆ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.

ಕೃತ್ಯದ ಬಗ್ಗೆ ಪ್ರತಿಕ್ರಿಯಿಸಿದ ಭರತ್‌ನ ತಂದೆ, ತನ್ನ ಮಗ ಈ ಅಪರಾಧ ಮಾಡಿರುವುದಾದರೆ ಅವನಿಗೆ ಮರಣದಂಡನೆ ಶಿಕ್ಷೆ ವಿಧಿಸಬೇಕೆಂದು ಹೇಳಿದ್ದಾರೆ. ಇದಲ್ಲದೆ ಸ್ಥಳೀಯ ವಕೀಲರ ಸಂಘವು ನ್ಯಾಯಾಲಯದಲ್ಲಿ ಆರೋಪಿಯ ಪರ ವಕಾಲತ್ತು ವಹಿಸದಂತೆ ವಕೀಲರಿಗೆ ಆಗ್ರಹಿಸಿತ್ತು.

ಇದನ್ನು ಓದಿ: ಉ.ಪ್ರದೇಶ: ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳ ಮೇಲೆ ತಂದೆಯಿಂದಲೇ ನಿರಂತರವಾಗಿ ಅತ್ಯಾಚಾರ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಂದೆಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...