Homeಸಿನಿಮಾಕ್ರೀಡೆಭಾರತ -ಪಾಕಿಸ್ತಾನ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಹೀಗಾದರೆ ಹೇಗೆ..?

ಭಾರತ -ಪಾಕಿಸ್ತಾನ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಹೀಗಾದರೆ ಹೇಗೆ..?

ಒಂದು ಕೊನೆ ಎಸೆತ ಇಡೀ ಮನಸ್ಸನ್ನು ಗೆಲ್ಲುವ, ಎರಡು ದೇಶಗಳ ಸಂಬಂಧಗಳನ್ನು ಬೆಸೆಯುವ ಶಕ್ತಿ ಹೊಂದಿದೆ ಎಂಬುದು ಎಲ್ಲರಿಗೂ ತಿಳಿಯಿತು.

- Advertisement -
- Advertisement -

ಭಾರತ -ಪಾಕಿಸ್ತಾನ ಕ್ರಿಕೆಟ್ ಫೈನಲ್ ಪಂದ್ಯ ನಡೆಯುತ್ತಿದೆ. ಯಾವುದಾದರೂ ಒಂದು ತಂಡ ಗೆಲ್ಲಲು ಕೊನೆ ಎಸೆತಕ್ಕೆ ಎರಡು ರನ್ ಬೇಕಿದೆ… ಬ್ಯಾಟಿಂಗ್ ಮಾಡಲು ನಿಂತವನಿಗೆ “ಶತಕ” ಗಳಿಸಲು ನಾಲ್ಕು ರನ್ ಬೇಕಿದೆ. ಇನ್ನೇನು ಬೌಂಡರಿ ಹೋಯಿತು ಎನ್ನುವಷ್ಟರಲ್ಲಿ ಅಲ್ಲೊಬ್ಬ ಫೀಲ್ಡರ್ ಇರುತ್ತಾನೆ.. ಎರಡು ರನ್ ಓಡಿ ಗೆಲುವಿನ ನಗೆ ಬೀರಿದ ತಂಡದ ಖುಷಿ ಒಂದು ಕಡೆಯಾದರೆ “ಶತಕ” ಎರಡೇ ರನ್ ಗಳಿಂದ ಶತಕ ತಪ್ಪಿಸುಕೊಳ್ಳುತ್ತಾನೆಂದು ಅಭಿಮಾನಿಗಳು ಕೈಕೈ ಹಿಸುಕಿಕೊಳ್ಳುತ್ತಿರುವ ಸಂದರ್ಭದಲ್ಲಿ…. ಒಂದು ಅಚ್ಚರಿ ನಡೆದೇ ಬಿಡುತ್ತದೆ.

ಆ ಫೀಲ್ಡರ್…. ಈಗಾಗಲೇ ಎರಡು ರನ್ ಓಡಿ ಗೆಲುವಿನ ಸಂಭ್ರಮದಲ್ಲಿ ತೇಲುತ್ತಿದ್ದವರಿಗೆ…. ಒಂದು ಟ್ವಿಸ್ಟ್ ಕೊಟ್ಟು ಇಡೀ ಅಭಿಮಾನಿಗಳ ಮನದಲ್ಲಿ ಮತ್ತೊಂದು ಕೋಲಾಹಲ ಎಬ್ಬಿಸಿ ಬಿಡುತ್ತಾನೆ.

ಸಲೀಸಾಗಿ ತನ್ನ ಕೈ ಸೇರುತ್ತಿದ್ದ ಬಾಲ್ ಅನ್ನು ಬೇಕೆಂತಲೇ ಬೌಂಡರಿಗೆ ಬಿಟ್ಟು ಬಿಡುತ್ತಾನೆ.
“ಶತಕ” ಭಾರಿಸಿದವನಿಗೆ ಅಚ್ಚರಿ ಮೇಲೆ ಅಚ್ಚರಿ. ಆತ “ಮ್ಯಾನ್ ಆಪ್ ದಿ ಮ್ಯಾಚ್” ಪ್ರಶಸ್ತಿ ಪಡೆದು ಅಭಿಪ್ರಾಯ ಹಂಚಿಕೊಳ್ಳುವಾಗ ಹೇಳುತ್ತಾನೆ, “ನಮ್ಮ ಮನೆಯಲ್ಲಿ ನನ್ನ ತಂದೆ ತಿನ್ನಲು ಹಣ್ಣು ಹಂಪಲು ತಂದಾಗ ನನ್ನ ಸಹೋದರ ತನ್ನ ಪಾಲನ್ನೂ ನನಗೆ ಕೊಟ್ಟು ಖುಷಿ ಗೊಳಿಸುತ್ತಿದ್ದ… ಆದರೆ ಇಂದು ನಮ್ಮಣ್ಣ ಮತ್ತು ನಾನು ಕಾರಣಾಂತರಗಳಿಂದ ದೂರವಾಗಿದ್ದೇವೆ. ಹೌದು. ಇಂದಲ್ಲಾ ನಾಳೆ ನಾವು ಒಂದಾಗುತ್ತೇವೆ. ನಮಗೆ ಶಾಂತಿ ಬೇಕಿದೆ. ನೆಮ್ಮದಿ ಬೇಕಿದೆ. ಇವತ್ತು ನನ್ನ ಸಹೋದರನನ್ನು ನೆನಪಿಸಿದ ನಿಮ್ಮ ತಂಡಕ್ಕೆ ನನ್ನ ಅನಂತ ಧನ್ಯವಾದಗಳು”

ನಂತರ.. ಬೌಂಡರಿಗೆ ಬಾಲ್ ಬಿಟ್ಟ ಆಟಗಾರ ತನ್ನ ಅಭಿಪ್ರಾಯ ಹೇಳುತ್ತಾನೆ.
“ನಾನು ಕೈಯಿಂದ ಬಾಲ್ ಬಿಟ್ಟು ಆಟದ ದೃಷ್ಟಿಯಿಂದ ತಪ್ಪು ಮಾಡಿರಬಹುದು. ಆದರೆ, ನೀವು ಆಗಲೇ ಪಂದ್ಯ ಗೆದ್ದಿದ್ದೀರಿ, ನಮಗೆ ಉಳಿದಿರುವುದು ನಿಮ್ಮ ಹೃದಯ ಗೆಲ್ಲುವುದೊಂದೇ ಮಾರ್ಗ… ಕೋಟ್ಯಾಂತರ ಮನಸ್ಸುಗಳನ್ನು ಬೆಸೆಯಬಹುದಾದ ಶಕ್ತಿ ನನ್ನ ಬಳಿ ಬರುತ್ತಿದ್ದ ಪುಟ್ಟ ಬಾಲ್ ಗೆ ಇದೆ ಎಂಬುದು ಆ ಕ್ಷಣ ಹೊಳೆಯಿತು. ಹೀಗಾಗಿ ನಾವು ಆಡುತ್ತಿರುವುದು ಆಟವೇ ಹೊರತು, ಯುದ್ದವಲ್ಲ ಎಂಬುದನ್ನು ನಾನು ತೋರಿಸಬೇಕಿತ್ತು. ನಾನು ಮಾಡಿದ್ದು ತಪ್ಪೇನಿಸಿದರೆ ನಮ್ಮ ತಂಡದವರ ನನಗೆ ಯಾವ ಶಿಕ್ಷೆ ವಿಧಿಸಿದರು ನಾನು ಅಭಿಮಾನದಿಂದ ಸ್ವೀಕರಿಸುತ್ತೇನೆ. ಮತ್ತೂ ಆ ಸಹೋದರರಿಬ್ಬರೂ ಆದಷ್ಟು ಬೇಗ ಒಂದಾಗಲಿ ಎಂದು ಹಾರೈಸುತ್ತೇನೆ”.

ಅಲ್ಲಿಗೆ ಎರಡು ತಂಡದ ಅಭಿಮಾನಿಗಳ ಮನದಲ್ಲಿ ಪುಟ್ಟದೊಂದು ಸ್ನೇಹದ ಸೇತುವೆ ತೆರೆದು ಕೊಂಡಿತು. ಅಭಿಮಾನಿಗಳ ಕಣ್ಣುಗಳು ಒದ್ದೆಯಾಗಿದ್ದವು. ಒಂದು ಕೊನೆ ಎಸೆತ ಇಡೀ ಮನಸ್ಸನ್ನು ಗೆಲ್ಲುವ, ಎರಡು ದೇಶಗಳ ಸಂಬಂಧಗಳನ್ನು ಬೆಸೆಯುವ ಶಕ್ತಿ ಹೊಂದಿದೆ ಎಂಬುದು ಎಲ್ಲರಿಗೂ ತಿಳಿಯಿತು. ಆಗ ಗೆಲುವಿನ ನಗೆ ಬೀರಿದ್ದು ಎರಡು ದೇಶದ ಅಭಿಮಾನಿಗಳು.

  • ಅನಿಲ್ ಕುಮಾರ್ ಗುನ್ನಾಪೂರ

(ಅನಿಲ್ ಕುಮಾರ್ ಗುನ್ನಾಪೂರ ವಿಜಯಪುರ ಜಿಲ್ಲೆಯವರು. ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ಕಲಿತ ಇವರು ಸಾಹಿತ್ಯದಲ್ಲಿ ಅಪಾರ ಆಸಕ್ತಿ ಉಳ್ಳವರು. “ಗುಬ್ಬಚ್ಚಿ ಗೂಡಿನಲ್ಲಿ…” ಇವರ ಪ್ರಕಟಿತ ಮೊದಲ ಕವನ ಸಂಕಲನ. ಅವರ ಕಥಾ ಸಂಕಲನ “ಕಲ್ಲು ಹೂವಿನ ನೆರಳು” ಇತ್ತೀಚೆಗೆ ಬಿಡುಗಡೆಯಾಗಿದೆ.)


ಇದನ್ನೂ ಓದಿ: ಪಂದ್ಯ ಸೋತರೂ ಕೋಟ್ಯಾಂತರ ಅಭಿಮಾನಿಗಳ ಮನಗೆದ್ದ ಕೊಹ್ಲಿ, ಧೋನಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...