Homeಸಿನಿಮಾಕ್ರೀಡೆಭಾರತ -ಪಾಕಿಸ್ತಾನ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಹೀಗಾದರೆ ಹೇಗೆ..?

ಭಾರತ -ಪಾಕಿಸ್ತಾನ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಹೀಗಾದರೆ ಹೇಗೆ..?

ಒಂದು ಕೊನೆ ಎಸೆತ ಇಡೀ ಮನಸ್ಸನ್ನು ಗೆಲ್ಲುವ, ಎರಡು ದೇಶಗಳ ಸಂಬಂಧಗಳನ್ನು ಬೆಸೆಯುವ ಶಕ್ತಿ ಹೊಂದಿದೆ ಎಂಬುದು ಎಲ್ಲರಿಗೂ ತಿಳಿಯಿತು.

- Advertisement -
- Advertisement -

ಭಾರತ -ಪಾಕಿಸ್ತಾನ ಕ್ರಿಕೆಟ್ ಫೈನಲ್ ಪಂದ್ಯ ನಡೆಯುತ್ತಿದೆ. ಯಾವುದಾದರೂ ಒಂದು ತಂಡ ಗೆಲ್ಲಲು ಕೊನೆ ಎಸೆತಕ್ಕೆ ಎರಡು ರನ್ ಬೇಕಿದೆ… ಬ್ಯಾಟಿಂಗ್ ಮಾಡಲು ನಿಂತವನಿಗೆ “ಶತಕ” ಗಳಿಸಲು ನಾಲ್ಕು ರನ್ ಬೇಕಿದೆ. ಇನ್ನೇನು ಬೌಂಡರಿ ಹೋಯಿತು ಎನ್ನುವಷ್ಟರಲ್ಲಿ ಅಲ್ಲೊಬ್ಬ ಫೀಲ್ಡರ್ ಇರುತ್ತಾನೆ.. ಎರಡು ರನ್ ಓಡಿ ಗೆಲುವಿನ ನಗೆ ಬೀರಿದ ತಂಡದ ಖುಷಿ ಒಂದು ಕಡೆಯಾದರೆ “ಶತಕ” ಎರಡೇ ರನ್ ಗಳಿಂದ ಶತಕ ತಪ್ಪಿಸುಕೊಳ್ಳುತ್ತಾನೆಂದು ಅಭಿಮಾನಿಗಳು ಕೈಕೈ ಹಿಸುಕಿಕೊಳ್ಳುತ್ತಿರುವ ಸಂದರ್ಭದಲ್ಲಿ…. ಒಂದು ಅಚ್ಚರಿ ನಡೆದೇ ಬಿಡುತ್ತದೆ.

ಆ ಫೀಲ್ಡರ್…. ಈಗಾಗಲೇ ಎರಡು ರನ್ ಓಡಿ ಗೆಲುವಿನ ಸಂಭ್ರಮದಲ್ಲಿ ತೇಲುತ್ತಿದ್ದವರಿಗೆ…. ಒಂದು ಟ್ವಿಸ್ಟ್ ಕೊಟ್ಟು ಇಡೀ ಅಭಿಮಾನಿಗಳ ಮನದಲ್ಲಿ ಮತ್ತೊಂದು ಕೋಲಾಹಲ ಎಬ್ಬಿಸಿ ಬಿಡುತ್ತಾನೆ.

ಸಲೀಸಾಗಿ ತನ್ನ ಕೈ ಸೇರುತ್ತಿದ್ದ ಬಾಲ್ ಅನ್ನು ಬೇಕೆಂತಲೇ ಬೌಂಡರಿಗೆ ಬಿಟ್ಟು ಬಿಡುತ್ತಾನೆ.
“ಶತಕ” ಭಾರಿಸಿದವನಿಗೆ ಅಚ್ಚರಿ ಮೇಲೆ ಅಚ್ಚರಿ. ಆತ “ಮ್ಯಾನ್ ಆಪ್ ದಿ ಮ್ಯಾಚ್” ಪ್ರಶಸ್ತಿ ಪಡೆದು ಅಭಿಪ್ರಾಯ ಹಂಚಿಕೊಳ್ಳುವಾಗ ಹೇಳುತ್ತಾನೆ, “ನಮ್ಮ ಮನೆಯಲ್ಲಿ ನನ್ನ ತಂದೆ ತಿನ್ನಲು ಹಣ್ಣು ಹಂಪಲು ತಂದಾಗ ನನ್ನ ಸಹೋದರ ತನ್ನ ಪಾಲನ್ನೂ ನನಗೆ ಕೊಟ್ಟು ಖುಷಿ ಗೊಳಿಸುತ್ತಿದ್ದ… ಆದರೆ ಇಂದು ನಮ್ಮಣ್ಣ ಮತ್ತು ನಾನು ಕಾರಣಾಂತರಗಳಿಂದ ದೂರವಾಗಿದ್ದೇವೆ. ಹೌದು. ಇಂದಲ್ಲಾ ನಾಳೆ ನಾವು ಒಂದಾಗುತ್ತೇವೆ. ನಮಗೆ ಶಾಂತಿ ಬೇಕಿದೆ. ನೆಮ್ಮದಿ ಬೇಕಿದೆ. ಇವತ್ತು ನನ್ನ ಸಹೋದರನನ್ನು ನೆನಪಿಸಿದ ನಿಮ್ಮ ತಂಡಕ್ಕೆ ನನ್ನ ಅನಂತ ಧನ್ಯವಾದಗಳು”

ನಂತರ.. ಬೌಂಡರಿಗೆ ಬಾಲ್ ಬಿಟ್ಟ ಆಟಗಾರ ತನ್ನ ಅಭಿಪ್ರಾಯ ಹೇಳುತ್ತಾನೆ.
“ನಾನು ಕೈಯಿಂದ ಬಾಲ್ ಬಿಟ್ಟು ಆಟದ ದೃಷ್ಟಿಯಿಂದ ತಪ್ಪು ಮಾಡಿರಬಹುದು. ಆದರೆ, ನೀವು ಆಗಲೇ ಪಂದ್ಯ ಗೆದ್ದಿದ್ದೀರಿ, ನಮಗೆ ಉಳಿದಿರುವುದು ನಿಮ್ಮ ಹೃದಯ ಗೆಲ್ಲುವುದೊಂದೇ ಮಾರ್ಗ… ಕೋಟ್ಯಾಂತರ ಮನಸ್ಸುಗಳನ್ನು ಬೆಸೆಯಬಹುದಾದ ಶಕ್ತಿ ನನ್ನ ಬಳಿ ಬರುತ್ತಿದ್ದ ಪುಟ್ಟ ಬಾಲ್ ಗೆ ಇದೆ ಎಂಬುದು ಆ ಕ್ಷಣ ಹೊಳೆಯಿತು. ಹೀಗಾಗಿ ನಾವು ಆಡುತ್ತಿರುವುದು ಆಟವೇ ಹೊರತು, ಯುದ್ದವಲ್ಲ ಎಂಬುದನ್ನು ನಾನು ತೋರಿಸಬೇಕಿತ್ತು. ನಾನು ಮಾಡಿದ್ದು ತಪ್ಪೇನಿಸಿದರೆ ನಮ್ಮ ತಂಡದವರ ನನಗೆ ಯಾವ ಶಿಕ್ಷೆ ವಿಧಿಸಿದರು ನಾನು ಅಭಿಮಾನದಿಂದ ಸ್ವೀಕರಿಸುತ್ತೇನೆ. ಮತ್ತೂ ಆ ಸಹೋದರರಿಬ್ಬರೂ ಆದಷ್ಟು ಬೇಗ ಒಂದಾಗಲಿ ಎಂದು ಹಾರೈಸುತ್ತೇನೆ”.

ಅಲ್ಲಿಗೆ ಎರಡು ತಂಡದ ಅಭಿಮಾನಿಗಳ ಮನದಲ್ಲಿ ಪುಟ್ಟದೊಂದು ಸ್ನೇಹದ ಸೇತುವೆ ತೆರೆದು ಕೊಂಡಿತು. ಅಭಿಮಾನಿಗಳ ಕಣ್ಣುಗಳು ಒದ್ದೆಯಾಗಿದ್ದವು. ಒಂದು ಕೊನೆ ಎಸೆತ ಇಡೀ ಮನಸ್ಸನ್ನು ಗೆಲ್ಲುವ, ಎರಡು ದೇಶಗಳ ಸಂಬಂಧಗಳನ್ನು ಬೆಸೆಯುವ ಶಕ್ತಿ ಹೊಂದಿದೆ ಎಂಬುದು ಎಲ್ಲರಿಗೂ ತಿಳಿಯಿತು. ಆಗ ಗೆಲುವಿನ ನಗೆ ಬೀರಿದ್ದು ಎರಡು ದೇಶದ ಅಭಿಮಾನಿಗಳು.

  • ಅನಿಲ್ ಕುಮಾರ್ ಗುನ್ನಾಪೂರ

(ಅನಿಲ್ ಕುಮಾರ್ ಗುನ್ನಾಪೂರ ವಿಜಯಪುರ ಜಿಲ್ಲೆಯವರು. ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ಕಲಿತ ಇವರು ಸಾಹಿತ್ಯದಲ್ಲಿ ಅಪಾರ ಆಸಕ್ತಿ ಉಳ್ಳವರು. “ಗುಬ್ಬಚ್ಚಿ ಗೂಡಿನಲ್ಲಿ…” ಇವರ ಪ್ರಕಟಿತ ಮೊದಲ ಕವನ ಸಂಕಲನ. ಅವರ ಕಥಾ ಸಂಕಲನ “ಕಲ್ಲು ಹೂವಿನ ನೆರಳು” ಇತ್ತೀಚೆಗೆ ಬಿಡುಗಡೆಯಾಗಿದೆ.)


ಇದನ್ನೂ ಓದಿ: ಪಂದ್ಯ ಸೋತರೂ ಕೋಟ್ಯಾಂತರ ಅಭಿಮಾನಿಗಳ ಮನಗೆದ್ದ ಕೊಹ್ಲಿ, ಧೋನಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...