Homeಸಿನಿಮಾಕ್ರೀಡೆಭಾರತ -ಪಾಕಿಸ್ತಾನ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಹೀಗಾದರೆ ಹೇಗೆ..?

ಭಾರತ -ಪಾಕಿಸ್ತಾನ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಹೀಗಾದರೆ ಹೇಗೆ..?

ಒಂದು ಕೊನೆ ಎಸೆತ ಇಡೀ ಮನಸ್ಸನ್ನು ಗೆಲ್ಲುವ, ಎರಡು ದೇಶಗಳ ಸಂಬಂಧಗಳನ್ನು ಬೆಸೆಯುವ ಶಕ್ತಿ ಹೊಂದಿದೆ ಎಂಬುದು ಎಲ್ಲರಿಗೂ ತಿಳಿಯಿತು.

- Advertisement -
- Advertisement -

ಭಾರತ -ಪಾಕಿಸ್ತಾನ ಕ್ರಿಕೆಟ್ ಫೈನಲ್ ಪಂದ್ಯ ನಡೆಯುತ್ತಿದೆ. ಯಾವುದಾದರೂ ಒಂದು ತಂಡ ಗೆಲ್ಲಲು ಕೊನೆ ಎಸೆತಕ್ಕೆ ಎರಡು ರನ್ ಬೇಕಿದೆ… ಬ್ಯಾಟಿಂಗ್ ಮಾಡಲು ನಿಂತವನಿಗೆ “ಶತಕ” ಗಳಿಸಲು ನಾಲ್ಕು ರನ್ ಬೇಕಿದೆ. ಇನ್ನೇನು ಬೌಂಡರಿ ಹೋಯಿತು ಎನ್ನುವಷ್ಟರಲ್ಲಿ ಅಲ್ಲೊಬ್ಬ ಫೀಲ್ಡರ್ ಇರುತ್ತಾನೆ.. ಎರಡು ರನ್ ಓಡಿ ಗೆಲುವಿನ ನಗೆ ಬೀರಿದ ತಂಡದ ಖುಷಿ ಒಂದು ಕಡೆಯಾದರೆ “ಶತಕ” ಎರಡೇ ರನ್ ಗಳಿಂದ ಶತಕ ತಪ್ಪಿಸುಕೊಳ್ಳುತ್ತಾನೆಂದು ಅಭಿಮಾನಿಗಳು ಕೈಕೈ ಹಿಸುಕಿಕೊಳ್ಳುತ್ತಿರುವ ಸಂದರ್ಭದಲ್ಲಿ…. ಒಂದು ಅಚ್ಚರಿ ನಡೆದೇ ಬಿಡುತ್ತದೆ.

ಆ ಫೀಲ್ಡರ್…. ಈಗಾಗಲೇ ಎರಡು ರನ್ ಓಡಿ ಗೆಲುವಿನ ಸಂಭ್ರಮದಲ್ಲಿ ತೇಲುತ್ತಿದ್ದವರಿಗೆ…. ಒಂದು ಟ್ವಿಸ್ಟ್ ಕೊಟ್ಟು ಇಡೀ ಅಭಿಮಾನಿಗಳ ಮನದಲ್ಲಿ ಮತ್ತೊಂದು ಕೋಲಾಹಲ ಎಬ್ಬಿಸಿ ಬಿಡುತ್ತಾನೆ.

ಸಲೀಸಾಗಿ ತನ್ನ ಕೈ ಸೇರುತ್ತಿದ್ದ ಬಾಲ್ ಅನ್ನು ಬೇಕೆಂತಲೇ ಬೌಂಡರಿಗೆ ಬಿಟ್ಟು ಬಿಡುತ್ತಾನೆ.
“ಶತಕ” ಭಾರಿಸಿದವನಿಗೆ ಅಚ್ಚರಿ ಮೇಲೆ ಅಚ್ಚರಿ. ಆತ “ಮ್ಯಾನ್ ಆಪ್ ದಿ ಮ್ಯಾಚ್” ಪ್ರಶಸ್ತಿ ಪಡೆದು ಅಭಿಪ್ರಾಯ ಹಂಚಿಕೊಳ್ಳುವಾಗ ಹೇಳುತ್ತಾನೆ, “ನಮ್ಮ ಮನೆಯಲ್ಲಿ ನನ್ನ ತಂದೆ ತಿನ್ನಲು ಹಣ್ಣು ಹಂಪಲು ತಂದಾಗ ನನ್ನ ಸಹೋದರ ತನ್ನ ಪಾಲನ್ನೂ ನನಗೆ ಕೊಟ್ಟು ಖುಷಿ ಗೊಳಿಸುತ್ತಿದ್ದ… ಆದರೆ ಇಂದು ನಮ್ಮಣ್ಣ ಮತ್ತು ನಾನು ಕಾರಣಾಂತರಗಳಿಂದ ದೂರವಾಗಿದ್ದೇವೆ. ಹೌದು. ಇಂದಲ್ಲಾ ನಾಳೆ ನಾವು ಒಂದಾಗುತ್ತೇವೆ. ನಮಗೆ ಶಾಂತಿ ಬೇಕಿದೆ. ನೆಮ್ಮದಿ ಬೇಕಿದೆ. ಇವತ್ತು ನನ್ನ ಸಹೋದರನನ್ನು ನೆನಪಿಸಿದ ನಿಮ್ಮ ತಂಡಕ್ಕೆ ನನ್ನ ಅನಂತ ಧನ್ಯವಾದಗಳು”

ನಂತರ.. ಬೌಂಡರಿಗೆ ಬಾಲ್ ಬಿಟ್ಟ ಆಟಗಾರ ತನ್ನ ಅಭಿಪ್ರಾಯ ಹೇಳುತ್ತಾನೆ.
“ನಾನು ಕೈಯಿಂದ ಬಾಲ್ ಬಿಟ್ಟು ಆಟದ ದೃಷ್ಟಿಯಿಂದ ತಪ್ಪು ಮಾಡಿರಬಹುದು. ಆದರೆ, ನೀವು ಆಗಲೇ ಪಂದ್ಯ ಗೆದ್ದಿದ್ದೀರಿ, ನಮಗೆ ಉಳಿದಿರುವುದು ನಿಮ್ಮ ಹೃದಯ ಗೆಲ್ಲುವುದೊಂದೇ ಮಾರ್ಗ… ಕೋಟ್ಯಾಂತರ ಮನಸ್ಸುಗಳನ್ನು ಬೆಸೆಯಬಹುದಾದ ಶಕ್ತಿ ನನ್ನ ಬಳಿ ಬರುತ್ತಿದ್ದ ಪುಟ್ಟ ಬಾಲ್ ಗೆ ಇದೆ ಎಂಬುದು ಆ ಕ್ಷಣ ಹೊಳೆಯಿತು. ಹೀಗಾಗಿ ನಾವು ಆಡುತ್ತಿರುವುದು ಆಟವೇ ಹೊರತು, ಯುದ್ದವಲ್ಲ ಎಂಬುದನ್ನು ನಾನು ತೋರಿಸಬೇಕಿತ್ತು. ನಾನು ಮಾಡಿದ್ದು ತಪ್ಪೇನಿಸಿದರೆ ನಮ್ಮ ತಂಡದವರ ನನಗೆ ಯಾವ ಶಿಕ್ಷೆ ವಿಧಿಸಿದರು ನಾನು ಅಭಿಮಾನದಿಂದ ಸ್ವೀಕರಿಸುತ್ತೇನೆ. ಮತ್ತೂ ಆ ಸಹೋದರರಿಬ್ಬರೂ ಆದಷ್ಟು ಬೇಗ ಒಂದಾಗಲಿ ಎಂದು ಹಾರೈಸುತ್ತೇನೆ”.

ಅಲ್ಲಿಗೆ ಎರಡು ತಂಡದ ಅಭಿಮಾನಿಗಳ ಮನದಲ್ಲಿ ಪುಟ್ಟದೊಂದು ಸ್ನೇಹದ ಸೇತುವೆ ತೆರೆದು ಕೊಂಡಿತು. ಅಭಿಮಾನಿಗಳ ಕಣ್ಣುಗಳು ಒದ್ದೆಯಾಗಿದ್ದವು. ಒಂದು ಕೊನೆ ಎಸೆತ ಇಡೀ ಮನಸ್ಸನ್ನು ಗೆಲ್ಲುವ, ಎರಡು ದೇಶಗಳ ಸಂಬಂಧಗಳನ್ನು ಬೆಸೆಯುವ ಶಕ್ತಿ ಹೊಂದಿದೆ ಎಂಬುದು ಎಲ್ಲರಿಗೂ ತಿಳಿಯಿತು. ಆಗ ಗೆಲುವಿನ ನಗೆ ಬೀರಿದ್ದು ಎರಡು ದೇಶದ ಅಭಿಮಾನಿಗಳು.

  • ಅನಿಲ್ ಕುಮಾರ್ ಗುನ್ನಾಪೂರ

(ಅನಿಲ್ ಕುಮಾರ್ ಗುನ್ನಾಪೂರ ವಿಜಯಪುರ ಜಿಲ್ಲೆಯವರು. ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ಕಲಿತ ಇವರು ಸಾಹಿತ್ಯದಲ್ಲಿ ಅಪಾರ ಆಸಕ್ತಿ ಉಳ್ಳವರು. “ಗುಬ್ಬಚ್ಚಿ ಗೂಡಿನಲ್ಲಿ…” ಇವರ ಪ್ರಕಟಿತ ಮೊದಲ ಕವನ ಸಂಕಲನ. ಅವರ ಕಥಾ ಸಂಕಲನ “ಕಲ್ಲು ಹೂವಿನ ನೆರಳು” ಇತ್ತೀಚೆಗೆ ಬಿಡುಗಡೆಯಾಗಿದೆ.)


ಇದನ್ನೂ ಓದಿ: ಪಂದ್ಯ ಸೋತರೂ ಕೋಟ್ಯಾಂತರ ಅಭಿಮಾನಿಗಳ ಮನಗೆದ್ದ ಕೊಹ್ಲಿ, ಧೋನಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...