Homeಸಿನಿಮಾಕ್ರೀಡೆಭಾರತ -ಪಾಕಿಸ್ತಾನ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಹೀಗಾದರೆ ಹೇಗೆ..?

ಭಾರತ -ಪಾಕಿಸ್ತಾನ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಹೀಗಾದರೆ ಹೇಗೆ..?

ಒಂದು ಕೊನೆ ಎಸೆತ ಇಡೀ ಮನಸ್ಸನ್ನು ಗೆಲ್ಲುವ, ಎರಡು ದೇಶಗಳ ಸಂಬಂಧಗಳನ್ನು ಬೆಸೆಯುವ ಶಕ್ತಿ ಹೊಂದಿದೆ ಎಂಬುದು ಎಲ್ಲರಿಗೂ ತಿಳಿಯಿತು.

- Advertisement -
- Advertisement -

ಭಾರತ -ಪಾಕಿಸ್ತಾನ ಕ್ರಿಕೆಟ್ ಫೈನಲ್ ಪಂದ್ಯ ನಡೆಯುತ್ತಿದೆ. ಯಾವುದಾದರೂ ಒಂದು ತಂಡ ಗೆಲ್ಲಲು ಕೊನೆ ಎಸೆತಕ್ಕೆ ಎರಡು ರನ್ ಬೇಕಿದೆ… ಬ್ಯಾಟಿಂಗ್ ಮಾಡಲು ನಿಂತವನಿಗೆ “ಶತಕ” ಗಳಿಸಲು ನಾಲ್ಕು ರನ್ ಬೇಕಿದೆ. ಇನ್ನೇನು ಬೌಂಡರಿ ಹೋಯಿತು ಎನ್ನುವಷ್ಟರಲ್ಲಿ ಅಲ್ಲೊಬ್ಬ ಫೀಲ್ಡರ್ ಇರುತ್ತಾನೆ.. ಎರಡು ರನ್ ಓಡಿ ಗೆಲುವಿನ ನಗೆ ಬೀರಿದ ತಂಡದ ಖುಷಿ ಒಂದು ಕಡೆಯಾದರೆ “ಶತಕ” ಎರಡೇ ರನ್ ಗಳಿಂದ ಶತಕ ತಪ್ಪಿಸುಕೊಳ್ಳುತ್ತಾನೆಂದು ಅಭಿಮಾನಿಗಳು ಕೈಕೈ ಹಿಸುಕಿಕೊಳ್ಳುತ್ತಿರುವ ಸಂದರ್ಭದಲ್ಲಿ…. ಒಂದು ಅಚ್ಚರಿ ನಡೆದೇ ಬಿಡುತ್ತದೆ.

ಆ ಫೀಲ್ಡರ್…. ಈಗಾಗಲೇ ಎರಡು ರನ್ ಓಡಿ ಗೆಲುವಿನ ಸಂಭ್ರಮದಲ್ಲಿ ತೇಲುತ್ತಿದ್ದವರಿಗೆ…. ಒಂದು ಟ್ವಿಸ್ಟ್ ಕೊಟ್ಟು ಇಡೀ ಅಭಿಮಾನಿಗಳ ಮನದಲ್ಲಿ ಮತ್ತೊಂದು ಕೋಲಾಹಲ ಎಬ್ಬಿಸಿ ಬಿಡುತ್ತಾನೆ.

ಸಲೀಸಾಗಿ ತನ್ನ ಕೈ ಸೇರುತ್ತಿದ್ದ ಬಾಲ್ ಅನ್ನು ಬೇಕೆಂತಲೇ ಬೌಂಡರಿಗೆ ಬಿಟ್ಟು ಬಿಡುತ್ತಾನೆ.
“ಶತಕ” ಭಾರಿಸಿದವನಿಗೆ ಅಚ್ಚರಿ ಮೇಲೆ ಅಚ್ಚರಿ. ಆತ “ಮ್ಯಾನ್ ಆಪ್ ದಿ ಮ್ಯಾಚ್” ಪ್ರಶಸ್ತಿ ಪಡೆದು ಅಭಿಪ್ರಾಯ ಹಂಚಿಕೊಳ್ಳುವಾಗ ಹೇಳುತ್ತಾನೆ, “ನಮ್ಮ ಮನೆಯಲ್ಲಿ ನನ್ನ ತಂದೆ ತಿನ್ನಲು ಹಣ್ಣು ಹಂಪಲು ತಂದಾಗ ನನ್ನ ಸಹೋದರ ತನ್ನ ಪಾಲನ್ನೂ ನನಗೆ ಕೊಟ್ಟು ಖುಷಿ ಗೊಳಿಸುತ್ತಿದ್ದ… ಆದರೆ ಇಂದು ನಮ್ಮಣ್ಣ ಮತ್ತು ನಾನು ಕಾರಣಾಂತರಗಳಿಂದ ದೂರವಾಗಿದ್ದೇವೆ. ಹೌದು. ಇಂದಲ್ಲಾ ನಾಳೆ ನಾವು ಒಂದಾಗುತ್ತೇವೆ. ನಮಗೆ ಶಾಂತಿ ಬೇಕಿದೆ. ನೆಮ್ಮದಿ ಬೇಕಿದೆ. ಇವತ್ತು ನನ್ನ ಸಹೋದರನನ್ನು ನೆನಪಿಸಿದ ನಿಮ್ಮ ತಂಡಕ್ಕೆ ನನ್ನ ಅನಂತ ಧನ್ಯವಾದಗಳು”

ನಂತರ.. ಬೌಂಡರಿಗೆ ಬಾಲ್ ಬಿಟ್ಟ ಆಟಗಾರ ತನ್ನ ಅಭಿಪ್ರಾಯ ಹೇಳುತ್ತಾನೆ.
“ನಾನು ಕೈಯಿಂದ ಬಾಲ್ ಬಿಟ್ಟು ಆಟದ ದೃಷ್ಟಿಯಿಂದ ತಪ್ಪು ಮಾಡಿರಬಹುದು. ಆದರೆ, ನೀವು ಆಗಲೇ ಪಂದ್ಯ ಗೆದ್ದಿದ್ದೀರಿ, ನಮಗೆ ಉಳಿದಿರುವುದು ನಿಮ್ಮ ಹೃದಯ ಗೆಲ್ಲುವುದೊಂದೇ ಮಾರ್ಗ… ಕೋಟ್ಯಾಂತರ ಮನಸ್ಸುಗಳನ್ನು ಬೆಸೆಯಬಹುದಾದ ಶಕ್ತಿ ನನ್ನ ಬಳಿ ಬರುತ್ತಿದ್ದ ಪುಟ್ಟ ಬಾಲ್ ಗೆ ಇದೆ ಎಂಬುದು ಆ ಕ್ಷಣ ಹೊಳೆಯಿತು. ಹೀಗಾಗಿ ನಾವು ಆಡುತ್ತಿರುವುದು ಆಟವೇ ಹೊರತು, ಯುದ್ದವಲ್ಲ ಎಂಬುದನ್ನು ನಾನು ತೋರಿಸಬೇಕಿತ್ತು. ನಾನು ಮಾಡಿದ್ದು ತಪ್ಪೇನಿಸಿದರೆ ನಮ್ಮ ತಂಡದವರ ನನಗೆ ಯಾವ ಶಿಕ್ಷೆ ವಿಧಿಸಿದರು ನಾನು ಅಭಿಮಾನದಿಂದ ಸ್ವೀಕರಿಸುತ್ತೇನೆ. ಮತ್ತೂ ಆ ಸಹೋದರರಿಬ್ಬರೂ ಆದಷ್ಟು ಬೇಗ ಒಂದಾಗಲಿ ಎಂದು ಹಾರೈಸುತ್ತೇನೆ”.

ಅಲ್ಲಿಗೆ ಎರಡು ತಂಡದ ಅಭಿಮಾನಿಗಳ ಮನದಲ್ಲಿ ಪುಟ್ಟದೊಂದು ಸ್ನೇಹದ ಸೇತುವೆ ತೆರೆದು ಕೊಂಡಿತು. ಅಭಿಮಾನಿಗಳ ಕಣ್ಣುಗಳು ಒದ್ದೆಯಾಗಿದ್ದವು. ಒಂದು ಕೊನೆ ಎಸೆತ ಇಡೀ ಮನಸ್ಸನ್ನು ಗೆಲ್ಲುವ, ಎರಡು ದೇಶಗಳ ಸಂಬಂಧಗಳನ್ನು ಬೆಸೆಯುವ ಶಕ್ತಿ ಹೊಂದಿದೆ ಎಂಬುದು ಎಲ್ಲರಿಗೂ ತಿಳಿಯಿತು. ಆಗ ಗೆಲುವಿನ ನಗೆ ಬೀರಿದ್ದು ಎರಡು ದೇಶದ ಅಭಿಮಾನಿಗಳು.

  • ಅನಿಲ್ ಕುಮಾರ್ ಗುನ್ನಾಪೂರ

(ಅನಿಲ್ ಕುಮಾರ್ ಗುನ್ನಾಪೂರ ವಿಜಯಪುರ ಜಿಲ್ಲೆಯವರು. ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ಕಲಿತ ಇವರು ಸಾಹಿತ್ಯದಲ್ಲಿ ಅಪಾರ ಆಸಕ್ತಿ ಉಳ್ಳವರು. “ಗುಬ್ಬಚ್ಚಿ ಗೂಡಿನಲ್ಲಿ…” ಇವರ ಪ್ರಕಟಿತ ಮೊದಲ ಕವನ ಸಂಕಲನ. ಅವರ ಕಥಾ ಸಂಕಲನ “ಕಲ್ಲು ಹೂವಿನ ನೆರಳು” ಇತ್ತೀಚೆಗೆ ಬಿಡುಗಡೆಯಾಗಿದೆ.)


ಇದನ್ನೂ ಓದಿ: ಪಂದ್ಯ ಸೋತರೂ ಕೋಟ್ಯಾಂತರ ಅಭಿಮಾನಿಗಳ ಮನಗೆದ್ದ ಕೊಹ್ಲಿ, ಧೋನಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...