Homeಸಿನಿಮಾಕ್ರೀಡೆಭಾರತ -ಪಾಕಿಸ್ತಾನ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಹೀಗಾದರೆ ಹೇಗೆ..?

ಭಾರತ -ಪಾಕಿಸ್ತಾನ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಹೀಗಾದರೆ ಹೇಗೆ..?

ಒಂದು ಕೊನೆ ಎಸೆತ ಇಡೀ ಮನಸ್ಸನ್ನು ಗೆಲ್ಲುವ, ಎರಡು ದೇಶಗಳ ಸಂಬಂಧಗಳನ್ನು ಬೆಸೆಯುವ ಶಕ್ತಿ ಹೊಂದಿದೆ ಎಂಬುದು ಎಲ್ಲರಿಗೂ ತಿಳಿಯಿತು.

- Advertisement -
- Advertisement -

ಭಾರತ -ಪಾಕಿಸ್ತಾನ ಕ್ರಿಕೆಟ್ ಫೈನಲ್ ಪಂದ್ಯ ನಡೆಯುತ್ತಿದೆ. ಯಾವುದಾದರೂ ಒಂದು ತಂಡ ಗೆಲ್ಲಲು ಕೊನೆ ಎಸೆತಕ್ಕೆ ಎರಡು ರನ್ ಬೇಕಿದೆ… ಬ್ಯಾಟಿಂಗ್ ಮಾಡಲು ನಿಂತವನಿಗೆ “ಶತಕ” ಗಳಿಸಲು ನಾಲ್ಕು ರನ್ ಬೇಕಿದೆ. ಇನ್ನೇನು ಬೌಂಡರಿ ಹೋಯಿತು ಎನ್ನುವಷ್ಟರಲ್ಲಿ ಅಲ್ಲೊಬ್ಬ ಫೀಲ್ಡರ್ ಇರುತ್ತಾನೆ.. ಎರಡು ರನ್ ಓಡಿ ಗೆಲುವಿನ ನಗೆ ಬೀರಿದ ತಂಡದ ಖುಷಿ ಒಂದು ಕಡೆಯಾದರೆ “ಶತಕ” ಎರಡೇ ರನ್ ಗಳಿಂದ ಶತಕ ತಪ್ಪಿಸುಕೊಳ್ಳುತ್ತಾನೆಂದು ಅಭಿಮಾನಿಗಳು ಕೈಕೈ ಹಿಸುಕಿಕೊಳ್ಳುತ್ತಿರುವ ಸಂದರ್ಭದಲ್ಲಿ…. ಒಂದು ಅಚ್ಚರಿ ನಡೆದೇ ಬಿಡುತ್ತದೆ.

ಆ ಫೀಲ್ಡರ್…. ಈಗಾಗಲೇ ಎರಡು ರನ್ ಓಡಿ ಗೆಲುವಿನ ಸಂಭ್ರಮದಲ್ಲಿ ತೇಲುತ್ತಿದ್ದವರಿಗೆ…. ಒಂದು ಟ್ವಿಸ್ಟ್ ಕೊಟ್ಟು ಇಡೀ ಅಭಿಮಾನಿಗಳ ಮನದಲ್ಲಿ ಮತ್ತೊಂದು ಕೋಲಾಹಲ ಎಬ್ಬಿಸಿ ಬಿಡುತ್ತಾನೆ.

ಸಲೀಸಾಗಿ ತನ್ನ ಕೈ ಸೇರುತ್ತಿದ್ದ ಬಾಲ್ ಅನ್ನು ಬೇಕೆಂತಲೇ ಬೌಂಡರಿಗೆ ಬಿಟ್ಟು ಬಿಡುತ್ತಾನೆ.
“ಶತಕ” ಭಾರಿಸಿದವನಿಗೆ ಅಚ್ಚರಿ ಮೇಲೆ ಅಚ್ಚರಿ. ಆತ “ಮ್ಯಾನ್ ಆಪ್ ದಿ ಮ್ಯಾಚ್” ಪ್ರಶಸ್ತಿ ಪಡೆದು ಅಭಿಪ್ರಾಯ ಹಂಚಿಕೊಳ್ಳುವಾಗ ಹೇಳುತ್ತಾನೆ, “ನಮ್ಮ ಮನೆಯಲ್ಲಿ ನನ್ನ ತಂದೆ ತಿನ್ನಲು ಹಣ್ಣು ಹಂಪಲು ತಂದಾಗ ನನ್ನ ಸಹೋದರ ತನ್ನ ಪಾಲನ್ನೂ ನನಗೆ ಕೊಟ್ಟು ಖುಷಿ ಗೊಳಿಸುತ್ತಿದ್ದ… ಆದರೆ ಇಂದು ನಮ್ಮಣ್ಣ ಮತ್ತು ನಾನು ಕಾರಣಾಂತರಗಳಿಂದ ದೂರವಾಗಿದ್ದೇವೆ. ಹೌದು. ಇಂದಲ್ಲಾ ನಾಳೆ ನಾವು ಒಂದಾಗುತ್ತೇವೆ. ನಮಗೆ ಶಾಂತಿ ಬೇಕಿದೆ. ನೆಮ್ಮದಿ ಬೇಕಿದೆ. ಇವತ್ತು ನನ್ನ ಸಹೋದರನನ್ನು ನೆನಪಿಸಿದ ನಿಮ್ಮ ತಂಡಕ್ಕೆ ನನ್ನ ಅನಂತ ಧನ್ಯವಾದಗಳು”

ನಂತರ.. ಬೌಂಡರಿಗೆ ಬಾಲ್ ಬಿಟ್ಟ ಆಟಗಾರ ತನ್ನ ಅಭಿಪ್ರಾಯ ಹೇಳುತ್ತಾನೆ.
“ನಾನು ಕೈಯಿಂದ ಬಾಲ್ ಬಿಟ್ಟು ಆಟದ ದೃಷ್ಟಿಯಿಂದ ತಪ್ಪು ಮಾಡಿರಬಹುದು. ಆದರೆ, ನೀವು ಆಗಲೇ ಪಂದ್ಯ ಗೆದ್ದಿದ್ದೀರಿ, ನಮಗೆ ಉಳಿದಿರುವುದು ನಿಮ್ಮ ಹೃದಯ ಗೆಲ್ಲುವುದೊಂದೇ ಮಾರ್ಗ… ಕೋಟ್ಯಾಂತರ ಮನಸ್ಸುಗಳನ್ನು ಬೆಸೆಯಬಹುದಾದ ಶಕ್ತಿ ನನ್ನ ಬಳಿ ಬರುತ್ತಿದ್ದ ಪುಟ್ಟ ಬಾಲ್ ಗೆ ಇದೆ ಎಂಬುದು ಆ ಕ್ಷಣ ಹೊಳೆಯಿತು. ಹೀಗಾಗಿ ನಾವು ಆಡುತ್ತಿರುವುದು ಆಟವೇ ಹೊರತು, ಯುದ್ದವಲ್ಲ ಎಂಬುದನ್ನು ನಾನು ತೋರಿಸಬೇಕಿತ್ತು. ನಾನು ಮಾಡಿದ್ದು ತಪ್ಪೇನಿಸಿದರೆ ನಮ್ಮ ತಂಡದವರ ನನಗೆ ಯಾವ ಶಿಕ್ಷೆ ವಿಧಿಸಿದರು ನಾನು ಅಭಿಮಾನದಿಂದ ಸ್ವೀಕರಿಸುತ್ತೇನೆ. ಮತ್ತೂ ಆ ಸಹೋದರರಿಬ್ಬರೂ ಆದಷ್ಟು ಬೇಗ ಒಂದಾಗಲಿ ಎಂದು ಹಾರೈಸುತ್ತೇನೆ”.

ಅಲ್ಲಿಗೆ ಎರಡು ತಂಡದ ಅಭಿಮಾನಿಗಳ ಮನದಲ್ಲಿ ಪುಟ್ಟದೊಂದು ಸ್ನೇಹದ ಸೇತುವೆ ತೆರೆದು ಕೊಂಡಿತು. ಅಭಿಮಾನಿಗಳ ಕಣ್ಣುಗಳು ಒದ್ದೆಯಾಗಿದ್ದವು. ಒಂದು ಕೊನೆ ಎಸೆತ ಇಡೀ ಮನಸ್ಸನ್ನು ಗೆಲ್ಲುವ, ಎರಡು ದೇಶಗಳ ಸಂಬಂಧಗಳನ್ನು ಬೆಸೆಯುವ ಶಕ್ತಿ ಹೊಂದಿದೆ ಎಂಬುದು ಎಲ್ಲರಿಗೂ ತಿಳಿಯಿತು. ಆಗ ಗೆಲುವಿನ ನಗೆ ಬೀರಿದ್ದು ಎರಡು ದೇಶದ ಅಭಿಮಾನಿಗಳು.

  • ಅನಿಲ್ ಕುಮಾರ್ ಗುನ್ನಾಪೂರ

(ಅನಿಲ್ ಕುಮಾರ್ ಗುನ್ನಾಪೂರ ವಿಜಯಪುರ ಜಿಲ್ಲೆಯವರು. ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ಕಲಿತ ಇವರು ಸಾಹಿತ್ಯದಲ್ಲಿ ಅಪಾರ ಆಸಕ್ತಿ ಉಳ್ಳವರು. “ಗುಬ್ಬಚ್ಚಿ ಗೂಡಿನಲ್ಲಿ…” ಇವರ ಪ್ರಕಟಿತ ಮೊದಲ ಕವನ ಸಂಕಲನ. ಅವರ ಕಥಾ ಸಂಕಲನ “ಕಲ್ಲು ಹೂವಿನ ನೆರಳು” ಇತ್ತೀಚೆಗೆ ಬಿಡುಗಡೆಯಾಗಿದೆ.)


ಇದನ್ನೂ ಓದಿ: ಪಂದ್ಯ ಸೋತರೂ ಕೋಟ್ಯಾಂತರ ಅಭಿಮಾನಿಗಳ ಮನಗೆದ್ದ ಕೊಹ್ಲಿ, ಧೋನಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...