Homeಮುಖಪುಟಭಾರತದ ಆರ್ಥಿಕತೆ ಕುಸಿಯುತ್ತಿದ್ದರೂ ಅದಾನಿ ಕಂಪನಿ ಮಾತ್ರ ಬೆಳೆಯುತ್ತಿರುವುದು ಹೇಗೆ?

ಭಾರತದ ಆರ್ಥಿಕತೆ ಕುಸಿಯುತ್ತಿದ್ದರೂ ಅದಾನಿ ಕಂಪನಿ ಮಾತ್ರ ಬೆಳೆಯುತ್ತಿರುವುದು ಹೇಗೆ?

ಕೊರೊನಾ ಸಾಂಕ್ರಾಮಿಕ ಈ ವರ್ಷ ಭಾರತವನ್ನು ಅಭೂತಪೂರ್ವ ಆರ್ಥಿಕ ಹಿಂಜರಿತದಲ್ಲಿ ಮುಳುಗಿಸಿದರೆ, ಅದಾನಿ ಕಂಪೆನಿ ಮಾತ್ರ ಬೆಳೆಯುತ್ತಲೇ ಇದೆ. ಅವರ ಕಂಪೆನಿಯು ಜಾಗತಿಕ ಪಾಲುದಾರರನ್ನು ಹಾಗೂ ಹೂಡಿಕೆಗಳನ್ನು ಪಡೆಯುವುದರೊಂದಿಗೆ ಹೊಸ ಕ್ಷೇತ್ರಗಳಿಗೂ ತನ್ನ ಕೈ ಚಾಚಿದೆ.

- Advertisement -
- Advertisement -

ಗೌತಮ್ ಅದಾನಿ ಬಿಕ್ಕಟ್ಟಿನಿಂದ ಬದುಕುಳಿಯುವ ಜಾಣ್ಮೆ ಹೊಂದಿದ್ದಾರೆ. ಎರಡು ದಶಕಗಳ ಹಿಂದೆ ಅವರನ್ನು ಹಣಕ್ಕಾಗಿ ಅಪಹರಣ ಮಾಡಲಾಗಿತ್ತು ಮತ್ತು 160 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದ 2008 ರ 26/11 ಎಂದೇ ಕುಖ್ಯಾತಿ ಪಡೆದ ಮುಂಬೈ ದಾಳಿಯಲ್ಲಿ ಮುಂಬೈಯ ತಾಜ್ ಮಹಲ್ ಪ್ಯಾಲೇಸ್ ಹೋಟೆಲ್‌‌ನ ಒತ್ತೆಯಾಳುಗಳಲ್ಲಿ ಅವರೊಬ್ಬರಾಗಿದ್ದರು.

ವ್ಯವಹಾರದಲ್ಲಿ ಕುಶಾಗ್ರಮತಿ ಮತ್ತು ಅಡೆತಡೆಗಳನ್ನು ನಿವಾರಿಸುವ ಅವರ ಸಾಮರ್ಥ್ಯ, ನರೇಂದ್ರ ಮೋದಿಯಂತಹ ರಾಜಕರಾರಣಿಗಳ ಸಖ್ಯ ಅವರನ್ನು ಭಾರತದ ಅತ್ಯಂತ ಶ್ರೀಮಂತರಲ್ಲೊಬ್ಬರನ್ನಾಗಿ ಮಾಡಿದೆ. ಕೊರೊನಾ ಸಾಂಕ್ರಾಮಿಕ ಈ ವರ್ಷ ಭಾರತವನ್ನು ಅಭೂತಪೂರ್ವ ಆರ್ಥಿಕ ಹಿಂಜರಿತದಲ್ಲಿ ಮುಳುಗಿಸಿದರೆ, ಅದಾನಿ ಕಂಪೆನಿ ಮಾತ್ರ ಬೆಳೆಯುತ್ತಲೇ ಇದೆ. ಅವರ ಕಂಪೆನಿಯು ಜಾಗತಿಕ ಪಾಲುದಾರರನ್ನು ಹಾಗೂ ಹೂಡಿಕೆಗಳನ್ನು ಪಡೆಯುವುದರೊಂದಿಗೆ ಹೊಸ ಕ್ಷೇತ್ರಗಳಿಗೂ ತನ್ನ ಕೈ ಚಾಚಿದೆ.

ಇದನ್ನೂ ಓದಿ: ‘ಅದಾನಿ-ಅಂಬಾನಿ ಕೃಷಿ ಕಾನೂನುಗಳನ್ನು’ ಹಿಂತೆಗೆದುಕೊಳ್ಳಿ: ರಾಹುಲ್ ಗಾಂಧಿ

ಗಣಿಗಾರಿಕೆ, ಅನಿಲ ಮತ್ತು ಬಂದರುಗಳು ಸೇರಿದಂತೆ ಅವರ ಉದ್ಯಮ ಘಟಕಗಳ ಹೆಚ್ಚಿನ ಸಂಸ್ಥೆಗಳ ಷೇರುಗಳು ಹೆಚ್ಚಾಗಿದೆ. ಅದಾನಿ ಗ್ರೀನ್ ಎನರ್ಜಿ ಲಿಮಿಟೆಡ್ ಈ ವರ್ಷ ಆರು ಪಟ್ಟು ಹೆಚ್ಚಾಗಿದೆ. ಯಾಕೆಂದರೆ ಇದು 6 ಬಿಲಿಯನ್ ಅಮೇರಿಕನ್ ಡಾಲರ್‌‌ ಸೌರಶಕ್ತಿ ಒಪ್ಪಂದವನ್ನು ಪಡೆದುಕೊಂಡಿದೆ. ಇದು 2025 ರ ವೇಳೆಗೆ ವಿಶ್ವದ ಅತಿದೊಡ್ಡ ನವೀಕರಿಸಬಹುದಾದ ಇಂಧನ ತಯಾರಕನಾಗುವ ಕಂಪನಿಯ ಗುರಿಯತ್ತ ಮತ್ತೊಂದು ಹೆಜ್ಜೆಯಾಗಿದೆ.

“ಅದಾನಿ ಷೇರುಗಳ ವಿಷಯಕ್ಕೆ ಬಂದಾಗ ಮಾರುಕಟ್ಟೆಯು ’ಫೋಮೋ ಸಿಂಡ್ರೋಮ್(ಕಳೆದು ಹೋಗುವ ಭಯ)’ ಅನ್ನು ಹೊಂದಿದೆ. ಅದಾನಿಯ ವ್ಯವಹಾರಗಳಿಗೆ ಪ್ರಸ್ತುತ ಕೇಂದ್ರ ಸರ್ಕಾರ ಪೂರ್ತಿ ಸಹಕಾರ ನೀಡುತ್ತಿದೆ ಮಾತ್ರವಲ್ಲದೆ, ಅವರಿಬ್ಬರ ನೀತಿಗಳು  ಹೊಂದಿಕೆಯಾಗಿವೆ. ಆದ್ದರಿಂದ ಅದಾನಿಗೆ ಕನಿಷ್ಠ ಐದರಿಂದ ಆರು ವರ್ಷಗಳವರೆಗೆ ಮುಂದಿನ ಹಾದಿ ಸುಗಮವಾಗಿರುತ್ತದೆ” ಎಂದು ಹೂಡಿಕೆ-ನಿರ್ವಹಣಾ ಸಂಸ್ಥೆ ಐಐಎಫ್ಎಲ್ ಸೆಕ್ಯುರಿಟೀಸ್ ಲಿಮಿಟೆಡ್‌ನ ನಿರ್ದೇಶಕ ಸಂಜೀವ್ ಭಾಸಿನ್ ಹೇಳುತ್ತಾರೆ.

32.4 ಶತಕೋಟಿ ಡಾಲರ್‌ ಮೌಲ್ಯದ ಸಂಪತ್ತಿನೊಂದಿಗೆ, ಅದಾನಿಯು ಮುಖೇಶ್ ಅಂಬಾನಿಯ ನಂತರ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದಾರೆ. ಬ್ಲೂಮ್‌ಬರ್ಗ್ ಬಿಲಿಯನೇರ್‌ಗಳ ಸೂಚ್ಯಂಕದ ಪ್ರಕಾರ, ಈ ವರ್ಷ ಅದಾನಿ ಸ್ಟಾಕ್‌‌ನ ನಿವ್ವಳ ಮೌಲ್ಯ 21.1 ಬಿಲಿಯನ್ ಡಾಲರ್‌ ಹೆಚ್ಚಾಗುತ್ತದೆ. ಇದು ಅಂಬಾನಿ ಗಳಿಸುವ ಲಾಭಕ್ಕಿಂತಲೂ ಹೆಚ್ಚಾಗುತ್ತದೆ. ಈ ವರದಿಯ ಬಗ್ಗೆ ಅದಾನಿ ಗ್ರೂಪ್ ಪ್ರತಿನಿಧಿಗಳು ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.

ಇದನ್ನೂ ಓದಿ:  ಭಾರತ-ಆಸ್ಟ್ರೇಲಿಯಾ ಏಕದಿನ ಪಂದ್ಯ: ಮೈದಾನಕ್ಕೆ ನುಗ್ಗಿ ‘ಸ್ಟಾಪ್ ಅದಾನಿ’ ಎಂದ ಪ್ರತಿಭಟನೆಗಾರ!

1980 ರ ದಶಕದ ಆರಂಭದಲ್ಲಿ ಕಾಲೇಜಿನಿಂದ ಹೊರಬಂದ ಅದಾನಿಯು ಮುಂಬೈನ ವಜ್ರ ಉದ್ಯಮದಲ್ಲಿ ತನ್ನ ಅದೃಷ್ಟವನ್ನು ಪ್ರಯತ್ನಿಸಿದರು. 1988 ರಲ್ಲಿ ಅದಾನಿ ಎಂಟರ್‌ಪ್ರೈಸಸ್ ಲಿಮಿಟೆಡ್‌ ಸ್ಥಾಪಿಸುವ ಮೊದಲು ತನ್ನ ಸಹೋದರನ ಪ್ಲಾಸ್ಟಿಕ್ ವ್ಯವಹಾರವನ್ನು ನಡೆಸಲು ಸಹಾಯ ಮಾಡಲು ತನ್ನ ಸ್ವಂತ ರಾಜ್ಯವಾದ ಗುಜರಾತ್‌ಗೆ ಹಿಂದಿರುಗಿದರು. ಇದಾಗಿ ಒಂದು ದಶಕದ ನಂತರ, ಅವರು ಅರಬ್ಬಿ ಸಮುದ್ರದ ಕರಾವಳಿಯಲ್ಲಿರುವ ಮುಂಡ್ರಾ ಬಂದರನ್ನು ನಿರ್ವಹಿಸಲು ಪ್ರಾರಂಭಿಸಿದರು, ಅಂತಿಮವಾಗಿ ಭಾರತದ ಅತಿದೊಡ್ಡ ಖಾಸಗಿ ವಲಯದ ಬಂದರನ್ನಾಗಿ ಅದನ್ನು ನಿರ್ಮಿಸಿದರು.

ಅಷ್ಟೇ ಅಲ್ಲದೆ ಅದಾನಿಯ ಗ್ರೂಪ್, ರಾಷ್ಟ್ರದ ಅತಿದೊಡ್ಡ ಖಾಸಗಿ ವಿದ್ಯುತ್ ಉತ್ಪಾದಕ ಮತ್ತು ಕಲ್ಲಿದ್ದಲು ಗಣಿಗಾರಿಕೆಯ ಮುಖ್ಯ ಸ್ಥಾನದಲ್ಲಿ ನಿಂತಿತು ಮತ್ತು ಇದನ್ನು ವಿದೇಶದಲ್ಲಿಯು ವಿಸ್ತರಿಸಿದೆ. ಆಸ್ಟ್ರೇಲಿಯಾದಲ್ಲಿ ಅದಾನಿಯು ಕಾರ್ಮೈಕಲ್ ಥರ್ಮಲ್ ಕಲ್ಲಿದ್ದಲು ಗಣಿಗಾರಿಕೆಗೆ ಕಳೆದ ವರ್ಷ ಅನುಮೋದನೆ ಪಡೆದಿದ್ದಾರೆ. ಇದರ ವಿರುದ್ದ ಪರಿಸರ ಹೋರಾಟಗಾರರು ದಶಕಗಳಿಂದ ಹೋರಾಟ ನಡೆಸುತ್ತಿದ್ದಾರೆ.

ಇತರ ಉದ್ಯಮಿಗಳಂತೆ, ಅದಾನಿ ಪದೇ ಪದೇ ಹೊಸ ಕೈಗಾರಿಕೆಗಳನ್ನು ಆರಿಸಿಕೊಂಡವರು. ಅದರಲ್ಲೂ ಸರ್ಕಾರವು ಅಭಿವೃದ್ಧಿ ಪಡಿಸಲು ಮುಂದಾಗಿರುವ ಮತ್ತು ಕಡಿಮೆ ಸ್ಪರ್ಧೆ ಇರುವಲ್ಲಿ…, ಈಗಲೂ ಕೂಡಾ ಅದಾನಿಯು “ರಾಷ್ಟ್ರ ನಿರ್ಮಾಣ” ವನ್ನು ತನ್ನ ಕಾರ್ಯತಂತ್ರದ ಪ್ರಮುಖ ವಿಷಯವಾಗಿದೆ ಎಂದು ಉಲ್ಲೇಖಿಸುತ್ತಾರೆ. ಇದು ಪ್ರಧಾನಿ ನರೇಂದ್ರ ಮೋದಿಯವರ ದೃಷ್ಟಿಕೋನಕ್ಕೆ ಹೊಂದಿಕೆಯಾಗುತ್ತದೆ. ಅದಾನಿ ಅಂಬಾನಿಗಾಗಿಯೇ ನರೇಂದ್ರ ಮೋದಿಯವರು ವಿವಾದಾತ್ಮಕ ಕೃಷಿ ಮಸೂದೆಗಳನ್ನು ಜಾರಿಗೊಳಿಸಿದ್ದಾರೆ ಎಂದು ಆರೋಪಿಸಿರುವ ರೈತರು ಭಾರೀ ಪ್ರತಿಭಟನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಮಂಗಳೂರು ವಿಮಾನ ನಿಲ್ದಾಣ ಇನ್ನು ಮುಂದೆ ಅದಾನಿ ಏರ್‌ಪೋರ್ಟ್ಸ್!: ನೆಟ್ಟಿಗರ ಕಿಡಿ

ಸ್ವತಃ ಗುಜರಾತಿ ಆಗಿರುವ ಪ್ರಧಾನಿ ಮೋದಿ ಅಧಿಕಾರ ಗಳಿಸಿದಂತೆಯೇ ಅದಾನಿ ಕೂಡಾ ಎತ್ತರಕ್ಕೆ ಏರುತ್ತಲೆ ಹೋದರು. ಅದಾನಿಯು ಮುಂಡ್ರಾ ಬಂದರಿನ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿ, ಮೋದಿ ಮುಖ್ಯಮಂತ್ರಿಯಾಗಿದ್ದಾಗ ಅದರಲ್ಲಿ ಕೈಗಾರಿಕಾ ವಲಯವನ್ನು ನಿರ್ಮಿಸಿದರು. ಅದಾನಿ ಸುಮಾರು ಎರಡು ದಶಕಗಳಿಂದ ರಾಜಕಾರಣಿಗಳ ಪ್ರಮುಖ ಬೆಂಬಲಿಗರಲ್ಲಿ ಒಬ್ಬರಾಗಿದ್ದಾರೆ.

ಅದಾನಿಯ ಕ್ಷಿಪ್ರ ಬೆಳವಣಿಗೆಯು 2015 ರ ಆಸುಪಾಸಿನಲ್ಲಿ ಪ್ರಾರಂಭವಾಯಿತು. ಸ್ಥಳೀಯವಾಗಿ ರಕ್ಷಣಾ ಸಾಧನಗಳ ಉತ್ಪಾದನೆಯನ್ನು ಅಭಿವೃದ್ಧಿಪಡಿಸುವುದಾಗಿ ಮೋದಿ ಪ್ರತಿಜ್ಞೆ ಮಾಡಿದಾಗ, ರಕ್ಷಣಾ ಕ್ಷೇತ್ರದ ಗುತ್ತಿಗೆದಾರರೊಂದಿಗೆ ಸಹಭಾಗಿತ್ವ ಮಾಡಿ ಮಿಲಿಟರಿ ಸಾಧನಗಳನ್ನು ಪೂರೈಸುವ ಸಾಮರ್ಥ್ಯವನ್ನು ಹೆಚ್ಚಿಸಿದರು. ಇದಾಗಿ ಮೂರು ವರ್ಷಗಳ ನಂತರ ಖಾಸಗಿ ಅನಿಲ ಪೂರೈಕೆಯಲ್ಲಿ ಭಾರತದ ಅತಿದೊಡ್ಡ ಚಿಲ್ಲರೆ ವ್ಯಾಪಾರಿಗಳನ್ನಾಗಿ ಮಾಡಿತು. 2019 ರಲ್ಲಿ ಅವರು ವಿಮಾನ ನಿಲ್ದಾಣಗಳತ್ತ ಗಮನಹರಿಸಲು ಪ್ರಾರಂಭಿಸಿದರು, ಮತ್ತು ಈಗ ಡೇಟಾ ಸಂಗ್ರಹಣೆ ಮತ್ತು ಹಣಕಾಸು ಸೇವೆಗಳು ಸೇರಿದಂತೆ ಹಲವು ಕ್ಷೇತ್ರಗಳನ್ನು ಪ್ರವೇಶಿಸಲು ಪ್ರಯತ್ನಿಸುತ್ತಿದ್ದಾರೆ.

ಇದನ್ನೂ ಓದಿ:  ರೈತರ ಪ್ರತಿಭಟನೆಗೆ ಹೋಗುವವರಿಗೆ 100 ಲೀ.ಪೆಟ್ರೋಲ್ ಉಚಿತ- ಹರಿಯಾಣ ಶಾಸಕ

“ಪ್ರಧಾನಿ ಮೋದಿಯ ನೀತಿಗಳು ಅವರ ಗುಜರಾತ್ ದಿನಗಳಿಂದಲೂ ವ್ಯಾಪಾರಿ ಗುಂಪುಗಳಿಗೆ ಸಹಾಯ ಮಾಡಿವೆ ಮತ್ತು ಅದಾನಿ ಗ್ರೂಪ್‌ನಂತಹ ಸಂಘಟನೆಗಳ ತ್ವರಿತ ಬೆಳವಣಿಗೆಗೆ ಇದು ಕಾರಣವಾಗಿದೆ. ಕಾರ್ಪೊರೇಟ್ ಕಾರ್ಯತಂತ್ರಗಳನ್ನು ಸರ್ಕಾರದ ಆದ್ಯತೆಗಳನ್ನಾಗಿ ಮಾಡುವುದು ಭಾರತದಲ್ಲಿ ವ್ಯವಹಾರ ಮಾಡುವ ವಿಧಾನವಾಗಿದೆ” ಎಂದು ಅಹಮದಾಬಾದ್‌ನ ಅಭಿವೃದ್ಧಿ ಪರ್ಯಾಯ ಕೇಂದ್ರದ ನಿರ್ದೇಶಕ ಇಂದಿರಾ ಹಿರ್ವೇ ಹೇಳುತ್ತಾರೆ.

 

ಇತ್ತ ಅದಾನಿ ತನ್ನ ತಾಯ್ನಾಡಿನಲ್ಲಿ ಸರ್ಕಾರದಿಂದ ಅತ್ಯಧಿಕ ಬೆಂಬಲ ಪಡೆಯುತ್ತಿರುವಾಗ, ಅತ್ತ ಆಸ್ಟ್ರೇಲಿಯಾದಲ್ಲಿ ವಿರೋಧ ಮತ್ತು ಟೀಕೆಗಳನ್ನು ಎದುರಿಸುತ್ತಿದ್ದಾರೆ. ಅಲ್ಲಿ ಚಳುವಳಿ ಹೆಚ್ಚಾಗುತ್ತಿದ್ದಂತೆ ಸಾಲದಾತರು ವಿವಾದಾತ್ಮಕ ಕಾರ್ಮೈಕಲ್ ಕಲ್ಲಿದ್ದಲು ಯೋಜನೆಯಿಂದ ದೂರ ಸರಿದರು. ಈ ಚಳುವಳಿಯು 2019 ರ ಸಂಸತ್ತಿನ ಮತದಾನದಲ್ಲಿ ಚುನಾವಣಾ ವಿಷಯವಾಗಿ ಕೂಡಾ ಮಾರ್ಪಟ್ಟಿತು.

ಅಂತರರಾಷ್ಟ್ರೀಯ ಹೂಡಿಕೆದಾರರು ಮತ್ತು ಜಾಗತಿಕ ಇಂಧನದ ದೊಡ್ಡ ಕಂಪೆನಿಗಳು ತಮ್ಮ ಬಂಡವಾಳವನ್ನು ವಿಸ್ತರಿಸಲು ಮತ್ತು ಲಾಭದಾಯಕ ಭಾರತೀಯ ಮಾರುಕಟ್ಟೆಯ ಒಂದು ಭಾಗವನ್ನು ಪಡೆಯಲು ಪ್ರಯತ್ನಿಸುತ್ತಿದ್ದಾರೆ, ಇದಕ್ಕಾಗಿ ಅದಾನಿ ಗ್ರೂಪ್ ಅವರಿಗೆ ಆಕರ್ಷಕವಾಗಿ ಕಾಣುತ್ತದೆ. ಫ್ರಾನ್ಸ್‌ನ ಇಂಧನ ದೈತ್ಯ ಟೋಟಲ್ ಎಸ್‌ಎ ಈಗಾಗಲೇ ಅದಾನಿ ಗ್ರೀನ್ ಮತ್ತು ವಿತರಕ ಅದಾನಿ ಗ್ಯಾಸ್ ಲಿಮಿಟೆಡ್‌ನಲ್ಲಿ ಹೂಡಿಕೆ ಮಾಡಿದೆ.

ಮಾಹಿತಿ ಕೃಪೆ: ದಿ ಪ್ರಿಂಟ್

ಇದನ್ನೂ ಓದಿ: ಕಲ್ಲಿದ್ದಲು ಪೂರೈಕೆ ಗುತ್ತಿಗೆಗಾಗಿ ಟೆಂಡರ್ ತಿದ್ದಿದ ಆರೋಪ: ಗೌತಮ್ ಅದಾನಿ ಕಂಪನಿ ವಿರುದ್ಧ FIR

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...