Homeಮುಖಪುಟಭಾರತದ ಆರ್ಥಿಕತೆ ಕುಸಿಯುತ್ತಿದ್ದರೂ ಅದಾನಿ ಕಂಪನಿ ಮಾತ್ರ ಬೆಳೆಯುತ್ತಿರುವುದು ಹೇಗೆ?

ಭಾರತದ ಆರ್ಥಿಕತೆ ಕುಸಿಯುತ್ತಿದ್ದರೂ ಅದಾನಿ ಕಂಪನಿ ಮಾತ್ರ ಬೆಳೆಯುತ್ತಿರುವುದು ಹೇಗೆ?

ಕೊರೊನಾ ಸಾಂಕ್ರಾಮಿಕ ಈ ವರ್ಷ ಭಾರತವನ್ನು ಅಭೂತಪೂರ್ವ ಆರ್ಥಿಕ ಹಿಂಜರಿತದಲ್ಲಿ ಮುಳುಗಿಸಿದರೆ, ಅದಾನಿ ಕಂಪೆನಿ ಮಾತ್ರ ಬೆಳೆಯುತ್ತಲೇ ಇದೆ. ಅವರ ಕಂಪೆನಿಯು ಜಾಗತಿಕ ಪಾಲುದಾರರನ್ನು ಹಾಗೂ ಹೂಡಿಕೆಗಳನ್ನು ಪಡೆಯುವುದರೊಂದಿಗೆ ಹೊಸ ಕ್ಷೇತ್ರಗಳಿಗೂ ತನ್ನ ಕೈ ಚಾಚಿದೆ.

- Advertisement -
- Advertisement -

ಗೌತಮ್ ಅದಾನಿ ಬಿಕ್ಕಟ್ಟಿನಿಂದ ಬದುಕುಳಿಯುವ ಜಾಣ್ಮೆ ಹೊಂದಿದ್ದಾರೆ. ಎರಡು ದಶಕಗಳ ಹಿಂದೆ ಅವರನ್ನು ಹಣಕ್ಕಾಗಿ ಅಪಹರಣ ಮಾಡಲಾಗಿತ್ತು ಮತ್ತು 160 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದ 2008 ರ 26/11 ಎಂದೇ ಕುಖ್ಯಾತಿ ಪಡೆದ ಮುಂಬೈ ದಾಳಿಯಲ್ಲಿ ಮುಂಬೈಯ ತಾಜ್ ಮಹಲ್ ಪ್ಯಾಲೇಸ್ ಹೋಟೆಲ್‌‌ನ ಒತ್ತೆಯಾಳುಗಳಲ್ಲಿ ಅವರೊಬ್ಬರಾಗಿದ್ದರು.

ವ್ಯವಹಾರದಲ್ಲಿ ಕುಶಾಗ್ರಮತಿ ಮತ್ತು ಅಡೆತಡೆಗಳನ್ನು ನಿವಾರಿಸುವ ಅವರ ಸಾಮರ್ಥ್ಯ, ನರೇಂದ್ರ ಮೋದಿಯಂತಹ ರಾಜಕರಾರಣಿಗಳ ಸಖ್ಯ ಅವರನ್ನು ಭಾರತದ ಅತ್ಯಂತ ಶ್ರೀಮಂತರಲ್ಲೊಬ್ಬರನ್ನಾಗಿ ಮಾಡಿದೆ. ಕೊರೊನಾ ಸಾಂಕ್ರಾಮಿಕ ಈ ವರ್ಷ ಭಾರತವನ್ನು ಅಭೂತಪೂರ್ವ ಆರ್ಥಿಕ ಹಿಂಜರಿತದಲ್ಲಿ ಮುಳುಗಿಸಿದರೆ, ಅದಾನಿ ಕಂಪೆನಿ ಮಾತ್ರ ಬೆಳೆಯುತ್ತಲೇ ಇದೆ. ಅವರ ಕಂಪೆನಿಯು ಜಾಗತಿಕ ಪಾಲುದಾರರನ್ನು ಹಾಗೂ ಹೂಡಿಕೆಗಳನ್ನು ಪಡೆಯುವುದರೊಂದಿಗೆ ಹೊಸ ಕ್ಷೇತ್ರಗಳಿಗೂ ತನ್ನ ಕೈ ಚಾಚಿದೆ.

ಇದನ್ನೂ ಓದಿ: ‘ಅದಾನಿ-ಅಂಬಾನಿ ಕೃಷಿ ಕಾನೂನುಗಳನ್ನು’ ಹಿಂತೆಗೆದುಕೊಳ್ಳಿ: ರಾಹುಲ್ ಗಾಂಧಿ

ಗಣಿಗಾರಿಕೆ, ಅನಿಲ ಮತ್ತು ಬಂದರುಗಳು ಸೇರಿದಂತೆ ಅವರ ಉದ್ಯಮ ಘಟಕಗಳ ಹೆಚ್ಚಿನ ಸಂಸ್ಥೆಗಳ ಷೇರುಗಳು ಹೆಚ್ಚಾಗಿದೆ. ಅದಾನಿ ಗ್ರೀನ್ ಎನರ್ಜಿ ಲಿಮಿಟೆಡ್ ಈ ವರ್ಷ ಆರು ಪಟ್ಟು ಹೆಚ್ಚಾಗಿದೆ. ಯಾಕೆಂದರೆ ಇದು 6 ಬಿಲಿಯನ್ ಅಮೇರಿಕನ್ ಡಾಲರ್‌‌ ಸೌರಶಕ್ತಿ ಒಪ್ಪಂದವನ್ನು ಪಡೆದುಕೊಂಡಿದೆ. ಇದು 2025 ರ ವೇಳೆಗೆ ವಿಶ್ವದ ಅತಿದೊಡ್ಡ ನವೀಕರಿಸಬಹುದಾದ ಇಂಧನ ತಯಾರಕನಾಗುವ ಕಂಪನಿಯ ಗುರಿಯತ್ತ ಮತ್ತೊಂದು ಹೆಜ್ಜೆಯಾಗಿದೆ.

“ಅದಾನಿ ಷೇರುಗಳ ವಿಷಯಕ್ಕೆ ಬಂದಾಗ ಮಾರುಕಟ್ಟೆಯು ’ಫೋಮೋ ಸಿಂಡ್ರೋಮ್(ಕಳೆದು ಹೋಗುವ ಭಯ)’ ಅನ್ನು ಹೊಂದಿದೆ. ಅದಾನಿಯ ವ್ಯವಹಾರಗಳಿಗೆ ಪ್ರಸ್ತುತ ಕೇಂದ್ರ ಸರ್ಕಾರ ಪೂರ್ತಿ ಸಹಕಾರ ನೀಡುತ್ತಿದೆ ಮಾತ್ರವಲ್ಲದೆ, ಅವರಿಬ್ಬರ ನೀತಿಗಳು  ಹೊಂದಿಕೆಯಾಗಿವೆ. ಆದ್ದರಿಂದ ಅದಾನಿಗೆ ಕನಿಷ್ಠ ಐದರಿಂದ ಆರು ವರ್ಷಗಳವರೆಗೆ ಮುಂದಿನ ಹಾದಿ ಸುಗಮವಾಗಿರುತ್ತದೆ” ಎಂದು ಹೂಡಿಕೆ-ನಿರ್ವಹಣಾ ಸಂಸ್ಥೆ ಐಐಎಫ್ಎಲ್ ಸೆಕ್ಯುರಿಟೀಸ್ ಲಿಮಿಟೆಡ್‌ನ ನಿರ್ದೇಶಕ ಸಂಜೀವ್ ಭಾಸಿನ್ ಹೇಳುತ್ತಾರೆ.

32.4 ಶತಕೋಟಿ ಡಾಲರ್‌ ಮೌಲ್ಯದ ಸಂಪತ್ತಿನೊಂದಿಗೆ, ಅದಾನಿಯು ಮುಖೇಶ್ ಅಂಬಾನಿಯ ನಂತರ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದಾರೆ. ಬ್ಲೂಮ್‌ಬರ್ಗ್ ಬಿಲಿಯನೇರ್‌ಗಳ ಸೂಚ್ಯಂಕದ ಪ್ರಕಾರ, ಈ ವರ್ಷ ಅದಾನಿ ಸ್ಟಾಕ್‌‌ನ ನಿವ್ವಳ ಮೌಲ್ಯ 21.1 ಬಿಲಿಯನ್ ಡಾಲರ್‌ ಹೆಚ್ಚಾಗುತ್ತದೆ. ಇದು ಅಂಬಾನಿ ಗಳಿಸುವ ಲಾಭಕ್ಕಿಂತಲೂ ಹೆಚ್ಚಾಗುತ್ತದೆ. ಈ ವರದಿಯ ಬಗ್ಗೆ ಅದಾನಿ ಗ್ರೂಪ್ ಪ್ರತಿನಿಧಿಗಳು ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.

ಇದನ್ನೂ ಓದಿ:  ಭಾರತ-ಆಸ್ಟ್ರೇಲಿಯಾ ಏಕದಿನ ಪಂದ್ಯ: ಮೈದಾನಕ್ಕೆ ನುಗ್ಗಿ ‘ಸ್ಟಾಪ್ ಅದಾನಿ’ ಎಂದ ಪ್ರತಿಭಟನೆಗಾರ!

1980 ರ ದಶಕದ ಆರಂಭದಲ್ಲಿ ಕಾಲೇಜಿನಿಂದ ಹೊರಬಂದ ಅದಾನಿಯು ಮುಂಬೈನ ವಜ್ರ ಉದ್ಯಮದಲ್ಲಿ ತನ್ನ ಅದೃಷ್ಟವನ್ನು ಪ್ರಯತ್ನಿಸಿದರು. 1988 ರಲ್ಲಿ ಅದಾನಿ ಎಂಟರ್‌ಪ್ರೈಸಸ್ ಲಿಮಿಟೆಡ್‌ ಸ್ಥಾಪಿಸುವ ಮೊದಲು ತನ್ನ ಸಹೋದರನ ಪ್ಲಾಸ್ಟಿಕ್ ವ್ಯವಹಾರವನ್ನು ನಡೆಸಲು ಸಹಾಯ ಮಾಡಲು ತನ್ನ ಸ್ವಂತ ರಾಜ್ಯವಾದ ಗುಜರಾತ್‌ಗೆ ಹಿಂದಿರುಗಿದರು. ಇದಾಗಿ ಒಂದು ದಶಕದ ನಂತರ, ಅವರು ಅರಬ್ಬಿ ಸಮುದ್ರದ ಕರಾವಳಿಯಲ್ಲಿರುವ ಮುಂಡ್ರಾ ಬಂದರನ್ನು ನಿರ್ವಹಿಸಲು ಪ್ರಾರಂಭಿಸಿದರು, ಅಂತಿಮವಾಗಿ ಭಾರತದ ಅತಿದೊಡ್ಡ ಖಾಸಗಿ ವಲಯದ ಬಂದರನ್ನಾಗಿ ಅದನ್ನು ನಿರ್ಮಿಸಿದರು.

ಅಷ್ಟೇ ಅಲ್ಲದೆ ಅದಾನಿಯ ಗ್ರೂಪ್, ರಾಷ್ಟ್ರದ ಅತಿದೊಡ್ಡ ಖಾಸಗಿ ವಿದ್ಯುತ್ ಉತ್ಪಾದಕ ಮತ್ತು ಕಲ್ಲಿದ್ದಲು ಗಣಿಗಾರಿಕೆಯ ಮುಖ್ಯ ಸ್ಥಾನದಲ್ಲಿ ನಿಂತಿತು ಮತ್ತು ಇದನ್ನು ವಿದೇಶದಲ್ಲಿಯು ವಿಸ್ತರಿಸಿದೆ. ಆಸ್ಟ್ರೇಲಿಯಾದಲ್ಲಿ ಅದಾನಿಯು ಕಾರ್ಮೈಕಲ್ ಥರ್ಮಲ್ ಕಲ್ಲಿದ್ದಲು ಗಣಿಗಾರಿಕೆಗೆ ಕಳೆದ ವರ್ಷ ಅನುಮೋದನೆ ಪಡೆದಿದ್ದಾರೆ. ಇದರ ವಿರುದ್ದ ಪರಿಸರ ಹೋರಾಟಗಾರರು ದಶಕಗಳಿಂದ ಹೋರಾಟ ನಡೆಸುತ್ತಿದ್ದಾರೆ.

ಇತರ ಉದ್ಯಮಿಗಳಂತೆ, ಅದಾನಿ ಪದೇ ಪದೇ ಹೊಸ ಕೈಗಾರಿಕೆಗಳನ್ನು ಆರಿಸಿಕೊಂಡವರು. ಅದರಲ್ಲೂ ಸರ್ಕಾರವು ಅಭಿವೃದ್ಧಿ ಪಡಿಸಲು ಮುಂದಾಗಿರುವ ಮತ್ತು ಕಡಿಮೆ ಸ್ಪರ್ಧೆ ಇರುವಲ್ಲಿ…, ಈಗಲೂ ಕೂಡಾ ಅದಾನಿಯು “ರಾಷ್ಟ್ರ ನಿರ್ಮಾಣ” ವನ್ನು ತನ್ನ ಕಾರ್ಯತಂತ್ರದ ಪ್ರಮುಖ ವಿಷಯವಾಗಿದೆ ಎಂದು ಉಲ್ಲೇಖಿಸುತ್ತಾರೆ. ಇದು ಪ್ರಧಾನಿ ನರೇಂದ್ರ ಮೋದಿಯವರ ದೃಷ್ಟಿಕೋನಕ್ಕೆ ಹೊಂದಿಕೆಯಾಗುತ್ತದೆ. ಅದಾನಿ ಅಂಬಾನಿಗಾಗಿಯೇ ನರೇಂದ್ರ ಮೋದಿಯವರು ವಿವಾದಾತ್ಮಕ ಕೃಷಿ ಮಸೂದೆಗಳನ್ನು ಜಾರಿಗೊಳಿಸಿದ್ದಾರೆ ಎಂದು ಆರೋಪಿಸಿರುವ ರೈತರು ಭಾರೀ ಪ್ರತಿಭಟನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಮಂಗಳೂರು ವಿಮಾನ ನಿಲ್ದಾಣ ಇನ್ನು ಮುಂದೆ ಅದಾನಿ ಏರ್‌ಪೋರ್ಟ್ಸ್!: ನೆಟ್ಟಿಗರ ಕಿಡಿ

ಸ್ವತಃ ಗುಜರಾತಿ ಆಗಿರುವ ಪ್ರಧಾನಿ ಮೋದಿ ಅಧಿಕಾರ ಗಳಿಸಿದಂತೆಯೇ ಅದಾನಿ ಕೂಡಾ ಎತ್ತರಕ್ಕೆ ಏರುತ್ತಲೆ ಹೋದರು. ಅದಾನಿಯು ಮುಂಡ್ರಾ ಬಂದರಿನ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿ, ಮೋದಿ ಮುಖ್ಯಮಂತ್ರಿಯಾಗಿದ್ದಾಗ ಅದರಲ್ಲಿ ಕೈಗಾರಿಕಾ ವಲಯವನ್ನು ನಿರ್ಮಿಸಿದರು. ಅದಾನಿ ಸುಮಾರು ಎರಡು ದಶಕಗಳಿಂದ ರಾಜಕಾರಣಿಗಳ ಪ್ರಮುಖ ಬೆಂಬಲಿಗರಲ್ಲಿ ಒಬ್ಬರಾಗಿದ್ದಾರೆ.

ಅದಾನಿಯ ಕ್ಷಿಪ್ರ ಬೆಳವಣಿಗೆಯು 2015 ರ ಆಸುಪಾಸಿನಲ್ಲಿ ಪ್ರಾರಂಭವಾಯಿತು. ಸ್ಥಳೀಯವಾಗಿ ರಕ್ಷಣಾ ಸಾಧನಗಳ ಉತ್ಪಾದನೆಯನ್ನು ಅಭಿವೃದ್ಧಿಪಡಿಸುವುದಾಗಿ ಮೋದಿ ಪ್ರತಿಜ್ಞೆ ಮಾಡಿದಾಗ, ರಕ್ಷಣಾ ಕ್ಷೇತ್ರದ ಗುತ್ತಿಗೆದಾರರೊಂದಿಗೆ ಸಹಭಾಗಿತ್ವ ಮಾಡಿ ಮಿಲಿಟರಿ ಸಾಧನಗಳನ್ನು ಪೂರೈಸುವ ಸಾಮರ್ಥ್ಯವನ್ನು ಹೆಚ್ಚಿಸಿದರು. ಇದಾಗಿ ಮೂರು ವರ್ಷಗಳ ನಂತರ ಖಾಸಗಿ ಅನಿಲ ಪೂರೈಕೆಯಲ್ಲಿ ಭಾರತದ ಅತಿದೊಡ್ಡ ಚಿಲ್ಲರೆ ವ್ಯಾಪಾರಿಗಳನ್ನಾಗಿ ಮಾಡಿತು. 2019 ರಲ್ಲಿ ಅವರು ವಿಮಾನ ನಿಲ್ದಾಣಗಳತ್ತ ಗಮನಹರಿಸಲು ಪ್ರಾರಂಭಿಸಿದರು, ಮತ್ತು ಈಗ ಡೇಟಾ ಸಂಗ್ರಹಣೆ ಮತ್ತು ಹಣಕಾಸು ಸೇವೆಗಳು ಸೇರಿದಂತೆ ಹಲವು ಕ್ಷೇತ್ರಗಳನ್ನು ಪ್ರವೇಶಿಸಲು ಪ್ರಯತ್ನಿಸುತ್ತಿದ್ದಾರೆ.

ಇದನ್ನೂ ಓದಿ:  ರೈತರ ಪ್ರತಿಭಟನೆಗೆ ಹೋಗುವವರಿಗೆ 100 ಲೀ.ಪೆಟ್ರೋಲ್ ಉಚಿತ- ಹರಿಯಾಣ ಶಾಸಕ

“ಪ್ರಧಾನಿ ಮೋದಿಯ ನೀತಿಗಳು ಅವರ ಗುಜರಾತ್ ದಿನಗಳಿಂದಲೂ ವ್ಯಾಪಾರಿ ಗುಂಪುಗಳಿಗೆ ಸಹಾಯ ಮಾಡಿವೆ ಮತ್ತು ಅದಾನಿ ಗ್ರೂಪ್‌ನಂತಹ ಸಂಘಟನೆಗಳ ತ್ವರಿತ ಬೆಳವಣಿಗೆಗೆ ಇದು ಕಾರಣವಾಗಿದೆ. ಕಾರ್ಪೊರೇಟ್ ಕಾರ್ಯತಂತ್ರಗಳನ್ನು ಸರ್ಕಾರದ ಆದ್ಯತೆಗಳನ್ನಾಗಿ ಮಾಡುವುದು ಭಾರತದಲ್ಲಿ ವ್ಯವಹಾರ ಮಾಡುವ ವಿಧಾನವಾಗಿದೆ” ಎಂದು ಅಹಮದಾಬಾದ್‌ನ ಅಭಿವೃದ್ಧಿ ಪರ್ಯಾಯ ಕೇಂದ್ರದ ನಿರ್ದೇಶಕ ಇಂದಿರಾ ಹಿರ್ವೇ ಹೇಳುತ್ತಾರೆ.

 

ಇತ್ತ ಅದಾನಿ ತನ್ನ ತಾಯ್ನಾಡಿನಲ್ಲಿ ಸರ್ಕಾರದಿಂದ ಅತ್ಯಧಿಕ ಬೆಂಬಲ ಪಡೆಯುತ್ತಿರುವಾಗ, ಅತ್ತ ಆಸ್ಟ್ರೇಲಿಯಾದಲ್ಲಿ ವಿರೋಧ ಮತ್ತು ಟೀಕೆಗಳನ್ನು ಎದುರಿಸುತ್ತಿದ್ದಾರೆ. ಅಲ್ಲಿ ಚಳುವಳಿ ಹೆಚ್ಚಾಗುತ್ತಿದ್ದಂತೆ ಸಾಲದಾತರು ವಿವಾದಾತ್ಮಕ ಕಾರ್ಮೈಕಲ್ ಕಲ್ಲಿದ್ದಲು ಯೋಜನೆಯಿಂದ ದೂರ ಸರಿದರು. ಈ ಚಳುವಳಿಯು 2019 ರ ಸಂಸತ್ತಿನ ಮತದಾನದಲ್ಲಿ ಚುನಾವಣಾ ವಿಷಯವಾಗಿ ಕೂಡಾ ಮಾರ್ಪಟ್ಟಿತು.

ಅಂತರರಾಷ್ಟ್ರೀಯ ಹೂಡಿಕೆದಾರರು ಮತ್ತು ಜಾಗತಿಕ ಇಂಧನದ ದೊಡ್ಡ ಕಂಪೆನಿಗಳು ತಮ್ಮ ಬಂಡವಾಳವನ್ನು ವಿಸ್ತರಿಸಲು ಮತ್ತು ಲಾಭದಾಯಕ ಭಾರತೀಯ ಮಾರುಕಟ್ಟೆಯ ಒಂದು ಭಾಗವನ್ನು ಪಡೆಯಲು ಪ್ರಯತ್ನಿಸುತ್ತಿದ್ದಾರೆ, ಇದಕ್ಕಾಗಿ ಅದಾನಿ ಗ್ರೂಪ್ ಅವರಿಗೆ ಆಕರ್ಷಕವಾಗಿ ಕಾಣುತ್ತದೆ. ಫ್ರಾನ್ಸ್‌ನ ಇಂಧನ ದೈತ್ಯ ಟೋಟಲ್ ಎಸ್‌ಎ ಈಗಾಗಲೇ ಅದಾನಿ ಗ್ರೀನ್ ಮತ್ತು ವಿತರಕ ಅದಾನಿ ಗ್ಯಾಸ್ ಲಿಮಿಟೆಡ್‌ನಲ್ಲಿ ಹೂಡಿಕೆ ಮಾಡಿದೆ.

ಮಾಹಿತಿ ಕೃಪೆ: ದಿ ಪ್ರಿಂಟ್

ಇದನ್ನೂ ಓದಿ: ಕಲ್ಲಿದ್ದಲು ಪೂರೈಕೆ ಗುತ್ತಿಗೆಗಾಗಿ ಟೆಂಡರ್ ತಿದ್ದಿದ ಆರೋಪ: ಗೌತಮ್ ಅದಾನಿ ಕಂಪನಿ ವಿರುದ್ಧ FIR

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...