Homeಮುಖಪುಟಭಾರತದ ಆರ್ಥಿಕತೆ ಕುಸಿಯುತ್ತಿದ್ದರೂ ಅದಾನಿ ಕಂಪನಿ ಮಾತ್ರ ಬೆಳೆಯುತ್ತಿರುವುದು ಹೇಗೆ?

ಭಾರತದ ಆರ್ಥಿಕತೆ ಕುಸಿಯುತ್ತಿದ್ದರೂ ಅದಾನಿ ಕಂಪನಿ ಮಾತ್ರ ಬೆಳೆಯುತ್ತಿರುವುದು ಹೇಗೆ?

ಕೊರೊನಾ ಸಾಂಕ್ರಾಮಿಕ ಈ ವರ್ಷ ಭಾರತವನ್ನು ಅಭೂತಪೂರ್ವ ಆರ್ಥಿಕ ಹಿಂಜರಿತದಲ್ಲಿ ಮುಳುಗಿಸಿದರೆ, ಅದಾನಿ ಕಂಪೆನಿ ಮಾತ್ರ ಬೆಳೆಯುತ್ತಲೇ ಇದೆ. ಅವರ ಕಂಪೆನಿಯು ಜಾಗತಿಕ ಪಾಲುದಾರರನ್ನು ಹಾಗೂ ಹೂಡಿಕೆಗಳನ್ನು ಪಡೆಯುವುದರೊಂದಿಗೆ ಹೊಸ ಕ್ಷೇತ್ರಗಳಿಗೂ ತನ್ನ ಕೈ ಚಾಚಿದೆ.

- Advertisement -
- Advertisement -

ಗೌತಮ್ ಅದಾನಿ ಬಿಕ್ಕಟ್ಟಿನಿಂದ ಬದುಕುಳಿಯುವ ಜಾಣ್ಮೆ ಹೊಂದಿದ್ದಾರೆ. ಎರಡು ದಶಕಗಳ ಹಿಂದೆ ಅವರನ್ನು ಹಣಕ್ಕಾಗಿ ಅಪಹರಣ ಮಾಡಲಾಗಿತ್ತು ಮತ್ತು 160 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದ 2008 ರ 26/11 ಎಂದೇ ಕುಖ್ಯಾತಿ ಪಡೆದ ಮುಂಬೈ ದಾಳಿಯಲ್ಲಿ ಮುಂಬೈಯ ತಾಜ್ ಮಹಲ್ ಪ್ಯಾಲೇಸ್ ಹೋಟೆಲ್‌‌ನ ಒತ್ತೆಯಾಳುಗಳಲ್ಲಿ ಅವರೊಬ್ಬರಾಗಿದ್ದರು.

ವ್ಯವಹಾರದಲ್ಲಿ ಕುಶಾಗ್ರಮತಿ ಮತ್ತು ಅಡೆತಡೆಗಳನ್ನು ನಿವಾರಿಸುವ ಅವರ ಸಾಮರ್ಥ್ಯ, ನರೇಂದ್ರ ಮೋದಿಯಂತಹ ರಾಜಕರಾರಣಿಗಳ ಸಖ್ಯ ಅವರನ್ನು ಭಾರತದ ಅತ್ಯಂತ ಶ್ರೀಮಂತರಲ್ಲೊಬ್ಬರನ್ನಾಗಿ ಮಾಡಿದೆ. ಕೊರೊನಾ ಸಾಂಕ್ರಾಮಿಕ ಈ ವರ್ಷ ಭಾರತವನ್ನು ಅಭೂತಪೂರ್ವ ಆರ್ಥಿಕ ಹಿಂಜರಿತದಲ್ಲಿ ಮುಳುಗಿಸಿದರೆ, ಅದಾನಿ ಕಂಪೆನಿ ಮಾತ್ರ ಬೆಳೆಯುತ್ತಲೇ ಇದೆ. ಅವರ ಕಂಪೆನಿಯು ಜಾಗತಿಕ ಪಾಲುದಾರರನ್ನು ಹಾಗೂ ಹೂಡಿಕೆಗಳನ್ನು ಪಡೆಯುವುದರೊಂದಿಗೆ ಹೊಸ ಕ್ಷೇತ್ರಗಳಿಗೂ ತನ್ನ ಕೈ ಚಾಚಿದೆ.

ಇದನ್ನೂ ಓದಿ: ‘ಅದಾನಿ-ಅಂಬಾನಿ ಕೃಷಿ ಕಾನೂನುಗಳನ್ನು’ ಹಿಂತೆಗೆದುಕೊಳ್ಳಿ: ರಾಹುಲ್ ಗಾಂಧಿ

ಗಣಿಗಾರಿಕೆ, ಅನಿಲ ಮತ್ತು ಬಂದರುಗಳು ಸೇರಿದಂತೆ ಅವರ ಉದ್ಯಮ ಘಟಕಗಳ ಹೆಚ್ಚಿನ ಸಂಸ್ಥೆಗಳ ಷೇರುಗಳು ಹೆಚ್ಚಾಗಿದೆ. ಅದಾನಿ ಗ್ರೀನ್ ಎನರ್ಜಿ ಲಿಮಿಟೆಡ್ ಈ ವರ್ಷ ಆರು ಪಟ್ಟು ಹೆಚ್ಚಾಗಿದೆ. ಯಾಕೆಂದರೆ ಇದು 6 ಬಿಲಿಯನ್ ಅಮೇರಿಕನ್ ಡಾಲರ್‌‌ ಸೌರಶಕ್ತಿ ಒಪ್ಪಂದವನ್ನು ಪಡೆದುಕೊಂಡಿದೆ. ಇದು 2025 ರ ವೇಳೆಗೆ ವಿಶ್ವದ ಅತಿದೊಡ್ಡ ನವೀಕರಿಸಬಹುದಾದ ಇಂಧನ ತಯಾರಕನಾಗುವ ಕಂಪನಿಯ ಗುರಿಯತ್ತ ಮತ್ತೊಂದು ಹೆಜ್ಜೆಯಾಗಿದೆ.

“ಅದಾನಿ ಷೇರುಗಳ ವಿಷಯಕ್ಕೆ ಬಂದಾಗ ಮಾರುಕಟ್ಟೆಯು ’ಫೋಮೋ ಸಿಂಡ್ರೋಮ್(ಕಳೆದು ಹೋಗುವ ಭಯ)’ ಅನ್ನು ಹೊಂದಿದೆ. ಅದಾನಿಯ ವ್ಯವಹಾರಗಳಿಗೆ ಪ್ರಸ್ತುತ ಕೇಂದ್ರ ಸರ್ಕಾರ ಪೂರ್ತಿ ಸಹಕಾರ ನೀಡುತ್ತಿದೆ ಮಾತ್ರವಲ್ಲದೆ, ಅವರಿಬ್ಬರ ನೀತಿಗಳು  ಹೊಂದಿಕೆಯಾಗಿವೆ. ಆದ್ದರಿಂದ ಅದಾನಿಗೆ ಕನಿಷ್ಠ ಐದರಿಂದ ಆರು ವರ್ಷಗಳವರೆಗೆ ಮುಂದಿನ ಹಾದಿ ಸುಗಮವಾಗಿರುತ್ತದೆ” ಎಂದು ಹೂಡಿಕೆ-ನಿರ್ವಹಣಾ ಸಂಸ್ಥೆ ಐಐಎಫ್ಎಲ್ ಸೆಕ್ಯುರಿಟೀಸ್ ಲಿಮಿಟೆಡ್‌ನ ನಿರ್ದೇಶಕ ಸಂಜೀವ್ ಭಾಸಿನ್ ಹೇಳುತ್ತಾರೆ.

32.4 ಶತಕೋಟಿ ಡಾಲರ್‌ ಮೌಲ್ಯದ ಸಂಪತ್ತಿನೊಂದಿಗೆ, ಅದಾನಿಯು ಮುಖೇಶ್ ಅಂಬಾನಿಯ ನಂತರ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದಾರೆ. ಬ್ಲೂಮ್‌ಬರ್ಗ್ ಬಿಲಿಯನೇರ್‌ಗಳ ಸೂಚ್ಯಂಕದ ಪ್ರಕಾರ, ಈ ವರ್ಷ ಅದಾನಿ ಸ್ಟಾಕ್‌‌ನ ನಿವ್ವಳ ಮೌಲ್ಯ 21.1 ಬಿಲಿಯನ್ ಡಾಲರ್‌ ಹೆಚ್ಚಾಗುತ್ತದೆ. ಇದು ಅಂಬಾನಿ ಗಳಿಸುವ ಲಾಭಕ್ಕಿಂತಲೂ ಹೆಚ್ಚಾಗುತ್ತದೆ. ಈ ವರದಿಯ ಬಗ್ಗೆ ಅದಾನಿ ಗ್ರೂಪ್ ಪ್ರತಿನಿಧಿಗಳು ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.

ಇದನ್ನೂ ಓದಿ:  ಭಾರತ-ಆಸ್ಟ್ರೇಲಿಯಾ ಏಕದಿನ ಪಂದ್ಯ: ಮೈದಾನಕ್ಕೆ ನುಗ್ಗಿ ‘ಸ್ಟಾಪ್ ಅದಾನಿ’ ಎಂದ ಪ್ರತಿಭಟನೆಗಾರ!

1980 ರ ದಶಕದ ಆರಂಭದಲ್ಲಿ ಕಾಲೇಜಿನಿಂದ ಹೊರಬಂದ ಅದಾನಿಯು ಮುಂಬೈನ ವಜ್ರ ಉದ್ಯಮದಲ್ಲಿ ತನ್ನ ಅದೃಷ್ಟವನ್ನು ಪ್ರಯತ್ನಿಸಿದರು. 1988 ರಲ್ಲಿ ಅದಾನಿ ಎಂಟರ್‌ಪ್ರೈಸಸ್ ಲಿಮಿಟೆಡ್‌ ಸ್ಥಾಪಿಸುವ ಮೊದಲು ತನ್ನ ಸಹೋದರನ ಪ್ಲಾಸ್ಟಿಕ್ ವ್ಯವಹಾರವನ್ನು ನಡೆಸಲು ಸಹಾಯ ಮಾಡಲು ತನ್ನ ಸ್ವಂತ ರಾಜ್ಯವಾದ ಗುಜರಾತ್‌ಗೆ ಹಿಂದಿರುಗಿದರು. ಇದಾಗಿ ಒಂದು ದಶಕದ ನಂತರ, ಅವರು ಅರಬ್ಬಿ ಸಮುದ್ರದ ಕರಾವಳಿಯಲ್ಲಿರುವ ಮುಂಡ್ರಾ ಬಂದರನ್ನು ನಿರ್ವಹಿಸಲು ಪ್ರಾರಂಭಿಸಿದರು, ಅಂತಿಮವಾಗಿ ಭಾರತದ ಅತಿದೊಡ್ಡ ಖಾಸಗಿ ವಲಯದ ಬಂದರನ್ನಾಗಿ ಅದನ್ನು ನಿರ್ಮಿಸಿದರು.

ಅಷ್ಟೇ ಅಲ್ಲದೆ ಅದಾನಿಯ ಗ್ರೂಪ್, ರಾಷ್ಟ್ರದ ಅತಿದೊಡ್ಡ ಖಾಸಗಿ ವಿದ್ಯುತ್ ಉತ್ಪಾದಕ ಮತ್ತು ಕಲ್ಲಿದ್ದಲು ಗಣಿಗಾರಿಕೆಯ ಮುಖ್ಯ ಸ್ಥಾನದಲ್ಲಿ ನಿಂತಿತು ಮತ್ತು ಇದನ್ನು ವಿದೇಶದಲ್ಲಿಯು ವಿಸ್ತರಿಸಿದೆ. ಆಸ್ಟ್ರೇಲಿಯಾದಲ್ಲಿ ಅದಾನಿಯು ಕಾರ್ಮೈಕಲ್ ಥರ್ಮಲ್ ಕಲ್ಲಿದ್ದಲು ಗಣಿಗಾರಿಕೆಗೆ ಕಳೆದ ವರ್ಷ ಅನುಮೋದನೆ ಪಡೆದಿದ್ದಾರೆ. ಇದರ ವಿರುದ್ದ ಪರಿಸರ ಹೋರಾಟಗಾರರು ದಶಕಗಳಿಂದ ಹೋರಾಟ ನಡೆಸುತ್ತಿದ್ದಾರೆ.

ಇತರ ಉದ್ಯಮಿಗಳಂತೆ, ಅದಾನಿ ಪದೇ ಪದೇ ಹೊಸ ಕೈಗಾರಿಕೆಗಳನ್ನು ಆರಿಸಿಕೊಂಡವರು. ಅದರಲ್ಲೂ ಸರ್ಕಾರವು ಅಭಿವೃದ್ಧಿ ಪಡಿಸಲು ಮುಂದಾಗಿರುವ ಮತ್ತು ಕಡಿಮೆ ಸ್ಪರ್ಧೆ ಇರುವಲ್ಲಿ…, ಈಗಲೂ ಕೂಡಾ ಅದಾನಿಯು “ರಾಷ್ಟ್ರ ನಿರ್ಮಾಣ” ವನ್ನು ತನ್ನ ಕಾರ್ಯತಂತ್ರದ ಪ್ರಮುಖ ವಿಷಯವಾಗಿದೆ ಎಂದು ಉಲ್ಲೇಖಿಸುತ್ತಾರೆ. ಇದು ಪ್ರಧಾನಿ ನರೇಂದ್ರ ಮೋದಿಯವರ ದೃಷ್ಟಿಕೋನಕ್ಕೆ ಹೊಂದಿಕೆಯಾಗುತ್ತದೆ. ಅದಾನಿ ಅಂಬಾನಿಗಾಗಿಯೇ ನರೇಂದ್ರ ಮೋದಿಯವರು ವಿವಾದಾತ್ಮಕ ಕೃಷಿ ಮಸೂದೆಗಳನ್ನು ಜಾರಿಗೊಳಿಸಿದ್ದಾರೆ ಎಂದು ಆರೋಪಿಸಿರುವ ರೈತರು ಭಾರೀ ಪ್ರತಿಭಟನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಮಂಗಳೂರು ವಿಮಾನ ನಿಲ್ದಾಣ ಇನ್ನು ಮುಂದೆ ಅದಾನಿ ಏರ್‌ಪೋರ್ಟ್ಸ್!: ನೆಟ್ಟಿಗರ ಕಿಡಿ

ಸ್ವತಃ ಗುಜರಾತಿ ಆಗಿರುವ ಪ್ರಧಾನಿ ಮೋದಿ ಅಧಿಕಾರ ಗಳಿಸಿದಂತೆಯೇ ಅದಾನಿ ಕೂಡಾ ಎತ್ತರಕ್ಕೆ ಏರುತ್ತಲೆ ಹೋದರು. ಅದಾನಿಯು ಮುಂಡ್ರಾ ಬಂದರಿನ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿ, ಮೋದಿ ಮುಖ್ಯಮಂತ್ರಿಯಾಗಿದ್ದಾಗ ಅದರಲ್ಲಿ ಕೈಗಾರಿಕಾ ವಲಯವನ್ನು ನಿರ್ಮಿಸಿದರು. ಅದಾನಿ ಸುಮಾರು ಎರಡು ದಶಕಗಳಿಂದ ರಾಜಕಾರಣಿಗಳ ಪ್ರಮುಖ ಬೆಂಬಲಿಗರಲ್ಲಿ ಒಬ್ಬರಾಗಿದ್ದಾರೆ.

ಅದಾನಿಯ ಕ್ಷಿಪ್ರ ಬೆಳವಣಿಗೆಯು 2015 ರ ಆಸುಪಾಸಿನಲ್ಲಿ ಪ್ರಾರಂಭವಾಯಿತು. ಸ್ಥಳೀಯವಾಗಿ ರಕ್ಷಣಾ ಸಾಧನಗಳ ಉತ್ಪಾದನೆಯನ್ನು ಅಭಿವೃದ್ಧಿಪಡಿಸುವುದಾಗಿ ಮೋದಿ ಪ್ರತಿಜ್ಞೆ ಮಾಡಿದಾಗ, ರಕ್ಷಣಾ ಕ್ಷೇತ್ರದ ಗುತ್ತಿಗೆದಾರರೊಂದಿಗೆ ಸಹಭಾಗಿತ್ವ ಮಾಡಿ ಮಿಲಿಟರಿ ಸಾಧನಗಳನ್ನು ಪೂರೈಸುವ ಸಾಮರ್ಥ್ಯವನ್ನು ಹೆಚ್ಚಿಸಿದರು. ಇದಾಗಿ ಮೂರು ವರ್ಷಗಳ ನಂತರ ಖಾಸಗಿ ಅನಿಲ ಪೂರೈಕೆಯಲ್ಲಿ ಭಾರತದ ಅತಿದೊಡ್ಡ ಚಿಲ್ಲರೆ ವ್ಯಾಪಾರಿಗಳನ್ನಾಗಿ ಮಾಡಿತು. 2019 ರಲ್ಲಿ ಅವರು ವಿಮಾನ ನಿಲ್ದಾಣಗಳತ್ತ ಗಮನಹರಿಸಲು ಪ್ರಾರಂಭಿಸಿದರು, ಮತ್ತು ಈಗ ಡೇಟಾ ಸಂಗ್ರಹಣೆ ಮತ್ತು ಹಣಕಾಸು ಸೇವೆಗಳು ಸೇರಿದಂತೆ ಹಲವು ಕ್ಷೇತ್ರಗಳನ್ನು ಪ್ರವೇಶಿಸಲು ಪ್ರಯತ್ನಿಸುತ್ತಿದ್ದಾರೆ.

ಇದನ್ನೂ ಓದಿ:  ರೈತರ ಪ್ರತಿಭಟನೆಗೆ ಹೋಗುವವರಿಗೆ 100 ಲೀ.ಪೆಟ್ರೋಲ್ ಉಚಿತ- ಹರಿಯಾಣ ಶಾಸಕ

“ಪ್ರಧಾನಿ ಮೋದಿಯ ನೀತಿಗಳು ಅವರ ಗುಜರಾತ್ ದಿನಗಳಿಂದಲೂ ವ್ಯಾಪಾರಿ ಗುಂಪುಗಳಿಗೆ ಸಹಾಯ ಮಾಡಿವೆ ಮತ್ತು ಅದಾನಿ ಗ್ರೂಪ್‌ನಂತಹ ಸಂಘಟನೆಗಳ ತ್ವರಿತ ಬೆಳವಣಿಗೆಗೆ ಇದು ಕಾರಣವಾಗಿದೆ. ಕಾರ್ಪೊರೇಟ್ ಕಾರ್ಯತಂತ್ರಗಳನ್ನು ಸರ್ಕಾರದ ಆದ್ಯತೆಗಳನ್ನಾಗಿ ಮಾಡುವುದು ಭಾರತದಲ್ಲಿ ವ್ಯವಹಾರ ಮಾಡುವ ವಿಧಾನವಾಗಿದೆ” ಎಂದು ಅಹಮದಾಬಾದ್‌ನ ಅಭಿವೃದ್ಧಿ ಪರ್ಯಾಯ ಕೇಂದ್ರದ ನಿರ್ದೇಶಕ ಇಂದಿರಾ ಹಿರ್ವೇ ಹೇಳುತ್ತಾರೆ.

 

ಇತ್ತ ಅದಾನಿ ತನ್ನ ತಾಯ್ನಾಡಿನಲ್ಲಿ ಸರ್ಕಾರದಿಂದ ಅತ್ಯಧಿಕ ಬೆಂಬಲ ಪಡೆಯುತ್ತಿರುವಾಗ, ಅತ್ತ ಆಸ್ಟ್ರೇಲಿಯಾದಲ್ಲಿ ವಿರೋಧ ಮತ್ತು ಟೀಕೆಗಳನ್ನು ಎದುರಿಸುತ್ತಿದ್ದಾರೆ. ಅಲ್ಲಿ ಚಳುವಳಿ ಹೆಚ್ಚಾಗುತ್ತಿದ್ದಂತೆ ಸಾಲದಾತರು ವಿವಾದಾತ್ಮಕ ಕಾರ್ಮೈಕಲ್ ಕಲ್ಲಿದ್ದಲು ಯೋಜನೆಯಿಂದ ದೂರ ಸರಿದರು. ಈ ಚಳುವಳಿಯು 2019 ರ ಸಂಸತ್ತಿನ ಮತದಾನದಲ್ಲಿ ಚುನಾವಣಾ ವಿಷಯವಾಗಿ ಕೂಡಾ ಮಾರ್ಪಟ್ಟಿತು.

ಅಂತರರಾಷ್ಟ್ರೀಯ ಹೂಡಿಕೆದಾರರು ಮತ್ತು ಜಾಗತಿಕ ಇಂಧನದ ದೊಡ್ಡ ಕಂಪೆನಿಗಳು ತಮ್ಮ ಬಂಡವಾಳವನ್ನು ವಿಸ್ತರಿಸಲು ಮತ್ತು ಲಾಭದಾಯಕ ಭಾರತೀಯ ಮಾರುಕಟ್ಟೆಯ ಒಂದು ಭಾಗವನ್ನು ಪಡೆಯಲು ಪ್ರಯತ್ನಿಸುತ್ತಿದ್ದಾರೆ, ಇದಕ್ಕಾಗಿ ಅದಾನಿ ಗ್ರೂಪ್ ಅವರಿಗೆ ಆಕರ್ಷಕವಾಗಿ ಕಾಣುತ್ತದೆ. ಫ್ರಾನ್ಸ್‌ನ ಇಂಧನ ದೈತ್ಯ ಟೋಟಲ್ ಎಸ್‌ಎ ಈಗಾಗಲೇ ಅದಾನಿ ಗ್ರೀನ್ ಮತ್ತು ವಿತರಕ ಅದಾನಿ ಗ್ಯಾಸ್ ಲಿಮಿಟೆಡ್‌ನಲ್ಲಿ ಹೂಡಿಕೆ ಮಾಡಿದೆ.

ಮಾಹಿತಿ ಕೃಪೆ: ದಿ ಪ್ರಿಂಟ್

ಇದನ್ನೂ ಓದಿ: ಕಲ್ಲಿದ್ದಲು ಪೂರೈಕೆ ಗುತ್ತಿಗೆಗಾಗಿ ಟೆಂಡರ್ ತಿದ್ದಿದ ಆರೋಪ: ಗೌತಮ್ ಅದಾನಿ ಕಂಪನಿ ವಿರುದ್ಧ FIR

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....