Homeಮುಖಪುಟ‘ಡಿಜಿಟಲ್ ಕುದುರೆಯ ಮೇಲೆ ಕನಸಿನ ಪ್ರವಾಸ’ ಬಜೆಟ್ ಟೀಕಿಸಿದ ಶಿವಸೇನೆ

‘ಡಿಜಿಟಲ್ ಕುದುರೆಯ ಮೇಲೆ ಕನಸಿನ ಪ್ರವಾಸ’ ಬಜೆಟ್ ಟೀಕಿಸಿದ ಶಿವಸೇನೆ

ಚುನಾವಣೆಯನ್ನು ಗೆಲ್ಲಲು ಬಜೆಟ್ ಅನ್ನು ಆಯುಧವಾಗಿ ಬಳಸುವುದು ಎಷ್ಟು ಸೂಕ್ತ? ದೇಶದಲ್ಲಿ ಹೆಚ್ಚು ತೆರಿಗೆ ಪಾವತಿಸುವ ಮಹಾರಾಷ್ಟ್ರವನ್ನು ನಿರ್ಲಕ್ಷಿಸಿದೆ -‘ಸಾಮ್ನಾ’

- Advertisement -
- Advertisement -

ಮಹಾರಾಷ್ಟ್ರವನ್ನು ಕಡೆಗಣಿಸಿದ್ದಕ್ಕಾಗಿ ಮತ್ತು ಚುನಾವಣೆ ಇರುವ ರಾಜ್ಯಗಳ ಮೇಲೆ ಮಾತ್ರ ಗಮನಹರಿಸಿದ್ದಕ್ಕಾಗಿ ಶಿವಸೇನೆ ಇಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಕೇಂದ್ರ ಬಜೆಟ್-2021 ವಿರುದ್ಧ ವಾಗ್ದಾಳಿ ನಡೆಸಿದೆ. ಹಣಕಾಸು ಸಚಿವರು ಡಿಜಿಟಲ್ ಕುದುರೆ ಸವಾರಿ ಮಾಡುತ್ತ, ಕನಸುಗಳ ಸಾರ್ವಜನಿಕ ಪ್ರವಾಸ’ ಕೈಗೊಂಡಿದ್ದಾರೆ ಎಂದು ಅದು ಲೇವಡಿ ಮಾಡಿದೆ.

ಅಸ್ಸಾಂ, ಕೇರಳ, ತಮಿಳುನಾಡು, ಮತ್ತು ಪಶ್ಚಿಮ ಬಂಗಾಳಗಳು ನಿರ್ಮಲಾ ಸೀತಾರಾಮನ್ ಅವರಿಂದ ಭಾರಿ ಮೂಲಸೌಕರ್ಯ ಯೋಜನೆಗಳನ್ನು ಪಡೆದಿವೆ ಎಂದು ಶಿವಸೇನೆಯ ಮುಖವಾಣಿ “ಸಾಮ್ನಾ’ ದ ಸಂಪಾದಕೀಯದಲ್ಲಿ ತಿಳಿಸಲಾಗಿದೆ. ಈ ರಾಜ್ಯಗಳಲ್ಲಿ ಕೆಲವೇ ತಿಂಗಳುಗಳಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ.

“ಚುನಾವಣೆಯನ್ನು ಗೆಲ್ಲಲು ಬಜೆಟ್ ಅನ್ನು ಆಯುಧವಾಗಿ ಬಳಸುವುದು ಎಷ್ಟು ಸೂಕ್ತವಾಗಿದೆ? ಈ ಮತದಾನದ ವ್ಯಾಪ್ತಿಯ ರಾಜ್ಯಗಳಿಗೆ ಸಾಕಷ್ಟು ಯೋಜನೆಗಳನ್ನು ವಿತರಿಸಿದ ಕೇಂದ್ರ ಸರ್ಕಾರವು, ದೇಶದಲ್ಲಿ ಹೆಚ್ಚು ತೆರಿಗೆ ಪಾವತಿಸುವ ಮಹಾರಾಷ್ಟ್ರವನ್ನು ನಿರ್ಲಕ್ಷಿಸಿದೆ” ಎಂದು ಸಂಪಾದಕೀಯದಲ್ಲಿ ಟೀಕಿಸಿದೆ.

ರಾಜ್ಯದ ಬಗ್ಗೆ ಬಜೆಟ್ ಪ್ರತೀಕಾರದ ಮನೋಭಾವವನ್ನು ತೋರಿಸಿದೆ ಎಂದು ಅದು ಆರೋಪಿಸಿದೆ. ಸೀತಾರಾಮನ್ ಕೆಲವು ರಾಜ್ಯಗಳಿಗಷ್ಟೇ ಅಲ್ಲ, ಇಡೀ ದೇಶದ ಹಣಕಾಸು ಸಚಿವರು ಎಂದು ಸಂಪಾದಕಿತದಲ್ಲಿ ನೆನಪಿಸಲಾಗಿದೆ. “ನಾಗ್ಪುರ ಮತ್ತು ನಾಸಿಕ್ ಮೆಟ್ರೋ ಯೋಜನೆಗಳ ಪ್ರಸ್ತಾಪ ಮಾಡಿದ್ದರ ಹೊರತುಪಡಿಸಿ, ಮುಂಬೈ ಮತ್ತು ಮಹಾರಾಷ್ಟ್ರಕ್ಕೆ ಏನನ್ನೂ ನೀಡಿಲ್ಲ” ಎಂದು ಅದು ಹೇಳಿದೆ. “ಈ ತಾರತಮ್ಯ ಏಕೆ? ದೇಶದ ಹಣಕಾಸು ಇಲಾಖೆ ಇಡೀ ದೇಶವನ್ನು ಪರಿಗಣಿಸಬೇಕು” ಎಂದು ಸಂಪಾದಕೀಯ ಆಗ್ರಹಿಸಿದೆ.

ಸಾಂಕ್ರಾಮಿಕ ಪೀಡಿತ ಕೈಗಾರಿಕೆಗಳಿಗೆ ಬಜೆಟ್‌ನಲ್ಲಿ ಏನೂ ಇಲ್ಲ ಎಂದು ಸಂಪಾದಕೀಯವು ಹೇಳಿದೆ. “ಕೋವಿಡ್ -19 ಕಾರಣಕ್ಕೆ ಸಾವಿರಾರು ಕೈಗಾರಿಕೆಗಳಿಗೆ ನಷ್ಟವಾಗಿದೆ. ಅನೇಕ ಜನರು ಉದ್ಯೋಗ ಕಳೆದುಕೊಂಡರು, ನಿರುದ್ಯೋಗ ಹೆಚ್ಚಾಗಿದೆ. ಆದರೆ ಹಣಕಾಸು ಸಚಿವರು ಈ ವಿಷಯದಲ್ಲಿ ಏನನ್ನೂ ಹೇಳಿಲ್ಲ” ಎಂದು ಅದು ಟೀಕಿಸಿದೆ.

ಸಾಮಾನ್ಯ ಜನರು, ತಮ್ಮ ಜೇಬುಗಳಿಗೆ ಎಷ್ಟು ಬಂದಿತು ಎಂದು ಕಾಳಜಿ ವಹಿಸುತ್ತಾರೆ. “ಸ್ವಾವಲಂಬಿ ಭಾರತ” ಮತ್ತು ‘ಸ್ಟಾರ್ಟ್-ಅಪ್’ನಂತಹ “ಹಳೆಯ-ಶೈಲಿಯ ಗುಳ್ಳೆಗಳು” ಮತ್ತು “ಮೂಲಸೌಕರ್ಯ ಮತ್ತು ಕೃಷಿ ಅಭಿವೃದ್ಧಿ”ಯಂತಹ ಕೆಲವು ಹೊಸ “ಟ್ರಿಕ್ ಪದಗಳನ್ನು” ಹೊರತುಪಡಿಸಿ, ಈ ಬಜೆಟ್‌ನಲ್ಲಿ ಸಾರ್ವಜನಿಕರಿಗೆ ಏನೂ ಸಿಕ್ಕಿಲ್ಲ ಎಂದು ಸಾಮ್ನಾ ವರದಿ ಮಾಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಶಿವಸೇನೆಯ ಪ್ರಕಾರ, ಬಜೆಟ್‌ನ “ಕಾಗದದ ಕುದುರೆಗಳು” ಕೇವಲ “ಡಿಜಿಟಲ್ ಕುದುರೆಗಳು” ಆಗಲಿವೆ. ಬಾವಿಯಲ್ಲಿ ಒಂದು ಹನಿ ನೀರು ಕೂಡ ಇಲ್ಲದಿದ್ದರೂ, ಜನರಿಗೆ ಸಾಕಷ್ಟು ನೀರು ಕೊಡುವುದಾಗಿ ಭರವಸೆ ನೀಡಿದ್ದಾರೆ ಎಂದು ಎಎನ್‌ಐ ವರದಿ ತಿಳಿಸಿದೆ.


ಇದನ್ನೂ ಓದಿ: ಟಿಆರ್‌ಎಸ್ ಶಾಸಕನ ಮನೆಗೆ ದಾಳಿ: 39 ಬಿಜೆಪಿ ಕಾರ್ಯಕರ್ತರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...