Homeಮುಖಪುಟ‘ಡಿಜಿಟಲ್ ಕುದುರೆಯ ಮೇಲೆ ಕನಸಿನ ಪ್ರವಾಸ’ ಬಜೆಟ್ ಟೀಕಿಸಿದ ಶಿವಸೇನೆ

‘ಡಿಜಿಟಲ್ ಕುದುರೆಯ ಮೇಲೆ ಕನಸಿನ ಪ್ರವಾಸ’ ಬಜೆಟ್ ಟೀಕಿಸಿದ ಶಿವಸೇನೆ

ಚುನಾವಣೆಯನ್ನು ಗೆಲ್ಲಲು ಬಜೆಟ್ ಅನ್ನು ಆಯುಧವಾಗಿ ಬಳಸುವುದು ಎಷ್ಟು ಸೂಕ್ತ? ದೇಶದಲ್ಲಿ ಹೆಚ್ಚು ತೆರಿಗೆ ಪಾವತಿಸುವ ಮಹಾರಾಷ್ಟ್ರವನ್ನು ನಿರ್ಲಕ್ಷಿಸಿದೆ -‘ಸಾಮ್ನಾ’

- Advertisement -
- Advertisement -

ಮಹಾರಾಷ್ಟ್ರವನ್ನು ಕಡೆಗಣಿಸಿದ್ದಕ್ಕಾಗಿ ಮತ್ತು ಚುನಾವಣೆ ಇರುವ ರಾಜ್ಯಗಳ ಮೇಲೆ ಮಾತ್ರ ಗಮನಹರಿಸಿದ್ದಕ್ಕಾಗಿ ಶಿವಸೇನೆ ಇಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಕೇಂದ್ರ ಬಜೆಟ್-2021 ವಿರುದ್ಧ ವಾಗ್ದಾಳಿ ನಡೆಸಿದೆ. ಹಣಕಾಸು ಸಚಿವರು ಡಿಜಿಟಲ್ ಕುದುರೆ ಸವಾರಿ ಮಾಡುತ್ತ, ಕನಸುಗಳ ಸಾರ್ವಜನಿಕ ಪ್ರವಾಸ’ ಕೈಗೊಂಡಿದ್ದಾರೆ ಎಂದು ಅದು ಲೇವಡಿ ಮಾಡಿದೆ.

ಅಸ್ಸಾಂ, ಕೇರಳ, ತಮಿಳುನಾಡು, ಮತ್ತು ಪಶ್ಚಿಮ ಬಂಗಾಳಗಳು ನಿರ್ಮಲಾ ಸೀತಾರಾಮನ್ ಅವರಿಂದ ಭಾರಿ ಮೂಲಸೌಕರ್ಯ ಯೋಜನೆಗಳನ್ನು ಪಡೆದಿವೆ ಎಂದು ಶಿವಸೇನೆಯ ಮುಖವಾಣಿ “ಸಾಮ್ನಾ’ ದ ಸಂಪಾದಕೀಯದಲ್ಲಿ ತಿಳಿಸಲಾಗಿದೆ. ಈ ರಾಜ್ಯಗಳಲ್ಲಿ ಕೆಲವೇ ತಿಂಗಳುಗಳಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ.

“ಚುನಾವಣೆಯನ್ನು ಗೆಲ್ಲಲು ಬಜೆಟ್ ಅನ್ನು ಆಯುಧವಾಗಿ ಬಳಸುವುದು ಎಷ್ಟು ಸೂಕ್ತವಾಗಿದೆ? ಈ ಮತದಾನದ ವ್ಯಾಪ್ತಿಯ ರಾಜ್ಯಗಳಿಗೆ ಸಾಕಷ್ಟು ಯೋಜನೆಗಳನ್ನು ವಿತರಿಸಿದ ಕೇಂದ್ರ ಸರ್ಕಾರವು, ದೇಶದಲ್ಲಿ ಹೆಚ್ಚು ತೆರಿಗೆ ಪಾವತಿಸುವ ಮಹಾರಾಷ್ಟ್ರವನ್ನು ನಿರ್ಲಕ್ಷಿಸಿದೆ” ಎಂದು ಸಂಪಾದಕೀಯದಲ್ಲಿ ಟೀಕಿಸಿದೆ.

ರಾಜ್ಯದ ಬಗ್ಗೆ ಬಜೆಟ್ ಪ್ರತೀಕಾರದ ಮನೋಭಾವವನ್ನು ತೋರಿಸಿದೆ ಎಂದು ಅದು ಆರೋಪಿಸಿದೆ. ಸೀತಾರಾಮನ್ ಕೆಲವು ರಾಜ್ಯಗಳಿಗಷ್ಟೇ ಅಲ್ಲ, ಇಡೀ ದೇಶದ ಹಣಕಾಸು ಸಚಿವರು ಎಂದು ಸಂಪಾದಕಿತದಲ್ಲಿ ನೆನಪಿಸಲಾಗಿದೆ. “ನಾಗ್ಪುರ ಮತ್ತು ನಾಸಿಕ್ ಮೆಟ್ರೋ ಯೋಜನೆಗಳ ಪ್ರಸ್ತಾಪ ಮಾಡಿದ್ದರ ಹೊರತುಪಡಿಸಿ, ಮುಂಬೈ ಮತ್ತು ಮಹಾರಾಷ್ಟ್ರಕ್ಕೆ ಏನನ್ನೂ ನೀಡಿಲ್ಲ” ಎಂದು ಅದು ಹೇಳಿದೆ. “ಈ ತಾರತಮ್ಯ ಏಕೆ? ದೇಶದ ಹಣಕಾಸು ಇಲಾಖೆ ಇಡೀ ದೇಶವನ್ನು ಪರಿಗಣಿಸಬೇಕು” ಎಂದು ಸಂಪಾದಕೀಯ ಆಗ್ರಹಿಸಿದೆ.

ಸಾಂಕ್ರಾಮಿಕ ಪೀಡಿತ ಕೈಗಾರಿಕೆಗಳಿಗೆ ಬಜೆಟ್‌ನಲ್ಲಿ ಏನೂ ಇಲ್ಲ ಎಂದು ಸಂಪಾದಕೀಯವು ಹೇಳಿದೆ. “ಕೋವಿಡ್ -19 ಕಾರಣಕ್ಕೆ ಸಾವಿರಾರು ಕೈಗಾರಿಕೆಗಳಿಗೆ ನಷ್ಟವಾಗಿದೆ. ಅನೇಕ ಜನರು ಉದ್ಯೋಗ ಕಳೆದುಕೊಂಡರು, ನಿರುದ್ಯೋಗ ಹೆಚ್ಚಾಗಿದೆ. ಆದರೆ ಹಣಕಾಸು ಸಚಿವರು ಈ ವಿಷಯದಲ್ಲಿ ಏನನ್ನೂ ಹೇಳಿಲ್ಲ” ಎಂದು ಅದು ಟೀಕಿಸಿದೆ.

ಸಾಮಾನ್ಯ ಜನರು, ತಮ್ಮ ಜೇಬುಗಳಿಗೆ ಎಷ್ಟು ಬಂದಿತು ಎಂದು ಕಾಳಜಿ ವಹಿಸುತ್ತಾರೆ. “ಸ್ವಾವಲಂಬಿ ಭಾರತ” ಮತ್ತು ‘ಸ್ಟಾರ್ಟ್-ಅಪ್’ನಂತಹ “ಹಳೆಯ-ಶೈಲಿಯ ಗುಳ್ಳೆಗಳು” ಮತ್ತು “ಮೂಲಸೌಕರ್ಯ ಮತ್ತು ಕೃಷಿ ಅಭಿವೃದ್ಧಿ”ಯಂತಹ ಕೆಲವು ಹೊಸ “ಟ್ರಿಕ್ ಪದಗಳನ್ನು” ಹೊರತುಪಡಿಸಿ, ಈ ಬಜೆಟ್‌ನಲ್ಲಿ ಸಾರ್ವಜನಿಕರಿಗೆ ಏನೂ ಸಿಕ್ಕಿಲ್ಲ ಎಂದು ಸಾಮ್ನಾ ವರದಿ ಮಾಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಶಿವಸೇನೆಯ ಪ್ರಕಾರ, ಬಜೆಟ್‌ನ “ಕಾಗದದ ಕುದುರೆಗಳು” ಕೇವಲ “ಡಿಜಿಟಲ್ ಕುದುರೆಗಳು” ಆಗಲಿವೆ. ಬಾವಿಯಲ್ಲಿ ಒಂದು ಹನಿ ನೀರು ಕೂಡ ಇಲ್ಲದಿದ್ದರೂ, ಜನರಿಗೆ ಸಾಕಷ್ಟು ನೀರು ಕೊಡುವುದಾಗಿ ಭರವಸೆ ನೀಡಿದ್ದಾರೆ ಎಂದು ಎಎನ್‌ಐ ವರದಿ ತಿಳಿಸಿದೆ.


ಇದನ್ನೂ ಓದಿ: ಟಿಆರ್‌ಎಸ್ ಶಾಸಕನ ಮನೆಗೆ ದಾಳಿ: 39 ಬಿಜೆಪಿ ಕಾರ್ಯಕರ್ತರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...