Homeಮುಖಪುಟ‘ಡಿಜಿಟಲ್ ಕುದುರೆಯ ಮೇಲೆ ಕನಸಿನ ಪ್ರವಾಸ’ ಬಜೆಟ್ ಟೀಕಿಸಿದ ಶಿವಸೇನೆ

‘ಡಿಜಿಟಲ್ ಕುದುರೆಯ ಮೇಲೆ ಕನಸಿನ ಪ್ರವಾಸ’ ಬಜೆಟ್ ಟೀಕಿಸಿದ ಶಿವಸೇನೆ

ಚುನಾವಣೆಯನ್ನು ಗೆಲ್ಲಲು ಬಜೆಟ್ ಅನ್ನು ಆಯುಧವಾಗಿ ಬಳಸುವುದು ಎಷ್ಟು ಸೂಕ್ತ? ದೇಶದಲ್ಲಿ ಹೆಚ್ಚು ತೆರಿಗೆ ಪಾವತಿಸುವ ಮಹಾರಾಷ್ಟ್ರವನ್ನು ನಿರ್ಲಕ್ಷಿಸಿದೆ -‘ಸಾಮ್ನಾ’

- Advertisement -
- Advertisement -

ಮಹಾರಾಷ್ಟ್ರವನ್ನು ಕಡೆಗಣಿಸಿದ್ದಕ್ಕಾಗಿ ಮತ್ತು ಚುನಾವಣೆ ಇರುವ ರಾಜ್ಯಗಳ ಮೇಲೆ ಮಾತ್ರ ಗಮನಹರಿಸಿದ್ದಕ್ಕಾಗಿ ಶಿವಸೇನೆ ಇಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಕೇಂದ್ರ ಬಜೆಟ್-2021 ವಿರುದ್ಧ ವಾಗ್ದಾಳಿ ನಡೆಸಿದೆ. ಹಣಕಾಸು ಸಚಿವರು ಡಿಜಿಟಲ್ ಕುದುರೆ ಸವಾರಿ ಮಾಡುತ್ತ, ಕನಸುಗಳ ಸಾರ್ವಜನಿಕ ಪ್ರವಾಸ’ ಕೈಗೊಂಡಿದ್ದಾರೆ ಎಂದು ಅದು ಲೇವಡಿ ಮಾಡಿದೆ.

ಅಸ್ಸಾಂ, ಕೇರಳ, ತಮಿಳುನಾಡು, ಮತ್ತು ಪಶ್ಚಿಮ ಬಂಗಾಳಗಳು ನಿರ್ಮಲಾ ಸೀತಾರಾಮನ್ ಅವರಿಂದ ಭಾರಿ ಮೂಲಸೌಕರ್ಯ ಯೋಜನೆಗಳನ್ನು ಪಡೆದಿವೆ ಎಂದು ಶಿವಸೇನೆಯ ಮುಖವಾಣಿ “ಸಾಮ್ನಾ’ ದ ಸಂಪಾದಕೀಯದಲ್ಲಿ ತಿಳಿಸಲಾಗಿದೆ. ಈ ರಾಜ್ಯಗಳಲ್ಲಿ ಕೆಲವೇ ತಿಂಗಳುಗಳಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ.

“ಚುನಾವಣೆಯನ್ನು ಗೆಲ್ಲಲು ಬಜೆಟ್ ಅನ್ನು ಆಯುಧವಾಗಿ ಬಳಸುವುದು ಎಷ್ಟು ಸೂಕ್ತವಾಗಿದೆ? ಈ ಮತದಾನದ ವ್ಯಾಪ್ತಿಯ ರಾಜ್ಯಗಳಿಗೆ ಸಾಕಷ್ಟು ಯೋಜನೆಗಳನ್ನು ವಿತರಿಸಿದ ಕೇಂದ್ರ ಸರ್ಕಾರವು, ದೇಶದಲ್ಲಿ ಹೆಚ್ಚು ತೆರಿಗೆ ಪಾವತಿಸುವ ಮಹಾರಾಷ್ಟ್ರವನ್ನು ನಿರ್ಲಕ್ಷಿಸಿದೆ” ಎಂದು ಸಂಪಾದಕೀಯದಲ್ಲಿ ಟೀಕಿಸಿದೆ.

ರಾಜ್ಯದ ಬಗ್ಗೆ ಬಜೆಟ್ ಪ್ರತೀಕಾರದ ಮನೋಭಾವವನ್ನು ತೋರಿಸಿದೆ ಎಂದು ಅದು ಆರೋಪಿಸಿದೆ. ಸೀತಾರಾಮನ್ ಕೆಲವು ರಾಜ್ಯಗಳಿಗಷ್ಟೇ ಅಲ್ಲ, ಇಡೀ ದೇಶದ ಹಣಕಾಸು ಸಚಿವರು ಎಂದು ಸಂಪಾದಕಿತದಲ್ಲಿ ನೆನಪಿಸಲಾಗಿದೆ. “ನಾಗ್ಪುರ ಮತ್ತು ನಾಸಿಕ್ ಮೆಟ್ರೋ ಯೋಜನೆಗಳ ಪ್ರಸ್ತಾಪ ಮಾಡಿದ್ದರ ಹೊರತುಪಡಿಸಿ, ಮುಂಬೈ ಮತ್ತು ಮಹಾರಾಷ್ಟ್ರಕ್ಕೆ ಏನನ್ನೂ ನೀಡಿಲ್ಲ” ಎಂದು ಅದು ಹೇಳಿದೆ. “ಈ ತಾರತಮ್ಯ ಏಕೆ? ದೇಶದ ಹಣಕಾಸು ಇಲಾಖೆ ಇಡೀ ದೇಶವನ್ನು ಪರಿಗಣಿಸಬೇಕು” ಎಂದು ಸಂಪಾದಕೀಯ ಆಗ್ರಹಿಸಿದೆ.

ಸಾಂಕ್ರಾಮಿಕ ಪೀಡಿತ ಕೈಗಾರಿಕೆಗಳಿಗೆ ಬಜೆಟ್‌ನಲ್ಲಿ ಏನೂ ಇಲ್ಲ ಎಂದು ಸಂಪಾದಕೀಯವು ಹೇಳಿದೆ. “ಕೋವಿಡ್ -19 ಕಾರಣಕ್ಕೆ ಸಾವಿರಾರು ಕೈಗಾರಿಕೆಗಳಿಗೆ ನಷ್ಟವಾಗಿದೆ. ಅನೇಕ ಜನರು ಉದ್ಯೋಗ ಕಳೆದುಕೊಂಡರು, ನಿರುದ್ಯೋಗ ಹೆಚ್ಚಾಗಿದೆ. ಆದರೆ ಹಣಕಾಸು ಸಚಿವರು ಈ ವಿಷಯದಲ್ಲಿ ಏನನ್ನೂ ಹೇಳಿಲ್ಲ” ಎಂದು ಅದು ಟೀಕಿಸಿದೆ.

ಸಾಮಾನ್ಯ ಜನರು, ತಮ್ಮ ಜೇಬುಗಳಿಗೆ ಎಷ್ಟು ಬಂದಿತು ಎಂದು ಕಾಳಜಿ ವಹಿಸುತ್ತಾರೆ. “ಸ್ವಾವಲಂಬಿ ಭಾರತ” ಮತ್ತು ‘ಸ್ಟಾರ್ಟ್-ಅಪ್’ನಂತಹ “ಹಳೆಯ-ಶೈಲಿಯ ಗುಳ್ಳೆಗಳು” ಮತ್ತು “ಮೂಲಸೌಕರ್ಯ ಮತ್ತು ಕೃಷಿ ಅಭಿವೃದ್ಧಿ”ಯಂತಹ ಕೆಲವು ಹೊಸ “ಟ್ರಿಕ್ ಪದಗಳನ್ನು” ಹೊರತುಪಡಿಸಿ, ಈ ಬಜೆಟ್‌ನಲ್ಲಿ ಸಾರ್ವಜನಿಕರಿಗೆ ಏನೂ ಸಿಕ್ಕಿಲ್ಲ ಎಂದು ಸಾಮ್ನಾ ವರದಿ ಮಾಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಶಿವಸೇನೆಯ ಪ್ರಕಾರ, ಬಜೆಟ್‌ನ “ಕಾಗದದ ಕುದುರೆಗಳು” ಕೇವಲ “ಡಿಜಿಟಲ್ ಕುದುರೆಗಳು” ಆಗಲಿವೆ. ಬಾವಿಯಲ್ಲಿ ಒಂದು ಹನಿ ನೀರು ಕೂಡ ಇಲ್ಲದಿದ್ದರೂ, ಜನರಿಗೆ ಸಾಕಷ್ಟು ನೀರು ಕೊಡುವುದಾಗಿ ಭರವಸೆ ನೀಡಿದ್ದಾರೆ ಎಂದು ಎಎನ್‌ಐ ವರದಿ ತಿಳಿಸಿದೆ.


ಇದನ್ನೂ ಓದಿ: ಟಿಆರ್‌ಎಸ್ ಶಾಸಕನ ಮನೆಗೆ ದಾಳಿ: 39 ಬಿಜೆಪಿ ಕಾರ್ಯಕರ್ತರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...