Homeಮುಖಪುಟ‘ಡಿಜಿಟಲ್ ಕುದುರೆಯ ಮೇಲೆ ಕನಸಿನ ಪ್ರವಾಸ’ ಬಜೆಟ್ ಟೀಕಿಸಿದ ಶಿವಸೇನೆ

‘ಡಿಜಿಟಲ್ ಕುದುರೆಯ ಮೇಲೆ ಕನಸಿನ ಪ್ರವಾಸ’ ಬಜೆಟ್ ಟೀಕಿಸಿದ ಶಿವಸೇನೆ

ಚುನಾವಣೆಯನ್ನು ಗೆಲ್ಲಲು ಬಜೆಟ್ ಅನ್ನು ಆಯುಧವಾಗಿ ಬಳಸುವುದು ಎಷ್ಟು ಸೂಕ್ತ? ದೇಶದಲ್ಲಿ ಹೆಚ್ಚು ತೆರಿಗೆ ಪಾವತಿಸುವ ಮಹಾರಾಷ್ಟ್ರವನ್ನು ನಿರ್ಲಕ್ಷಿಸಿದೆ -‘ಸಾಮ್ನಾ’

- Advertisement -
- Advertisement -

ಮಹಾರಾಷ್ಟ್ರವನ್ನು ಕಡೆಗಣಿಸಿದ್ದಕ್ಕಾಗಿ ಮತ್ತು ಚುನಾವಣೆ ಇರುವ ರಾಜ್ಯಗಳ ಮೇಲೆ ಮಾತ್ರ ಗಮನಹರಿಸಿದ್ದಕ್ಕಾಗಿ ಶಿವಸೇನೆ ಇಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಕೇಂದ್ರ ಬಜೆಟ್-2021 ವಿರುದ್ಧ ವಾಗ್ದಾಳಿ ನಡೆಸಿದೆ. ಹಣಕಾಸು ಸಚಿವರು ಡಿಜಿಟಲ್ ಕುದುರೆ ಸವಾರಿ ಮಾಡುತ್ತ, ಕನಸುಗಳ ಸಾರ್ವಜನಿಕ ಪ್ರವಾಸ’ ಕೈಗೊಂಡಿದ್ದಾರೆ ಎಂದು ಅದು ಲೇವಡಿ ಮಾಡಿದೆ.

ಅಸ್ಸಾಂ, ಕೇರಳ, ತಮಿಳುನಾಡು, ಮತ್ತು ಪಶ್ಚಿಮ ಬಂಗಾಳಗಳು ನಿರ್ಮಲಾ ಸೀತಾರಾಮನ್ ಅವರಿಂದ ಭಾರಿ ಮೂಲಸೌಕರ್ಯ ಯೋಜನೆಗಳನ್ನು ಪಡೆದಿವೆ ಎಂದು ಶಿವಸೇನೆಯ ಮುಖವಾಣಿ “ಸಾಮ್ನಾ’ ದ ಸಂಪಾದಕೀಯದಲ್ಲಿ ತಿಳಿಸಲಾಗಿದೆ. ಈ ರಾಜ್ಯಗಳಲ್ಲಿ ಕೆಲವೇ ತಿಂಗಳುಗಳಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ.

“ಚುನಾವಣೆಯನ್ನು ಗೆಲ್ಲಲು ಬಜೆಟ್ ಅನ್ನು ಆಯುಧವಾಗಿ ಬಳಸುವುದು ಎಷ್ಟು ಸೂಕ್ತವಾಗಿದೆ? ಈ ಮತದಾನದ ವ್ಯಾಪ್ತಿಯ ರಾಜ್ಯಗಳಿಗೆ ಸಾಕಷ್ಟು ಯೋಜನೆಗಳನ್ನು ವಿತರಿಸಿದ ಕೇಂದ್ರ ಸರ್ಕಾರವು, ದೇಶದಲ್ಲಿ ಹೆಚ್ಚು ತೆರಿಗೆ ಪಾವತಿಸುವ ಮಹಾರಾಷ್ಟ್ರವನ್ನು ನಿರ್ಲಕ್ಷಿಸಿದೆ” ಎಂದು ಸಂಪಾದಕೀಯದಲ್ಲಿ ಟೀಕಿಸಿದೆ.

ರಾಜ್ಯದ ಬಗ್ಗೆ ಬಜೆಟ್ ಪ್ರತೀಕಾರದ ಮನೋಭಾವವನ್ನು ತೋರಿಸಿದೆ ಎಂದು ಅದು ಆರೋಪಿಸಿದೆ. ಸೀತಾರಾಮನ್ ಕೆಲವು ರಾಜ್ಯಗಳಿಗಷ್ಟೇ ಅಲ್ಲ, ಇಡೀ ದೇಶದ ಹಣಕಾಸು ಸಚಿವರು ಎಂದು ಸಂಪಾದಕಿತದಲ್ಲಿ ನೆನಪಿಸಲಾಗಿದೆ. “ನಾಗ್ಪುರ ಮತ್ತು ನಾಸಿಕ್ ಮೆಟ್ರೋ ಯೋಜನೆಗಳ ಪ್ರಸ್ತಾಪ ಮಾಡಿದ್ದರ ಹೊರತುಪಡಿಸಿ, ಮುಂಬೈ ಮತ್ತು ಮಹಾರಾಷ್ಟ್ರಕ್ಕೆ ಏನನ್ನೂ ನೀಡಿಲ್ಲ” ಎಂದು ಅದು ಹೇಳಿದೆ. “ಈ ತಾರತಮ್ಯ ಏಕೆ? ದೇಶದ ಹಣಕಾಸು ಇಲಾಖೆ ಇಡೀ ದೇಶವನ್ನು ಪರಿಗಣಿಸಬೇಕು” ಎಂದು ಸಂಪಾದಕೀಯ ಆಗ್ರಹಿಸಿದೆ.

ಸಾಂಕ್ರಾಮಿಕ ಪೀಡಿತ ಕೈಗಾರಿಕೆಗಳಿಗೆ ಬಜೆಟ್‌ನಲ್ಲಿ ಏನೂ ಇಲ್ಲ ಎಂದು ಸಂಪಾದಕೀಯವು ಹೇಳಿದೆ. “ಕೋವಿಡ್ -19 ಕಾರಣಕ್ಕೆ ಸಾವಿರಾರು ಕೈಗಾರಿಕೆಗಳಿಗೆ ನಷ್ಟವಾಗಿದೆ. ಅನೇಕ ಜನರು ಉದ್ಯೋಗ ಕಳೆದುಕೊಂಡರು, ನಿರುದ್ಯೋಗ ಹೆಚ್ಚಾಗಿದೆ. ಆದರೆ ಹಣಕಾಸು ಸಚಿವರು ಈ ವಿಷಯದಲ್ಲಿ ಏನನ್ನೂ ಹೇಳಿಲ್ಲ” ಎಂದು ಅದು ಟೀಕಿಸಿದೆ.

ಸಾಮಾನ್ಯ ಜನರು, ತಮ್ಮ ಜೇಬುಗಳಿಗೆ ಎಷ್ಟು ಬಂದಿತು ಎಂದು ಕಾಳಜಿ ವಹಿಸುತ್ತಾರೆ. “ಸ್ವಾವಲಂಬಿ ಭಾರತ” ಮತ್ತು ‘ಸ್ಟಾರ್ಟ್-ಅಪ್’ನಂತಹ “ಹಳೆಯ-ಶೈಲಿಯ ಗುಳ್ಳೆಗಳು” ಮತ್ತು “ಮೂಲಸೌಕರ್ಯ ಮತ್ತು ಕೃಷಿ ಅಭಿವೃದ್ಧಿ”ಯಂತಹ ಕೆಲವು ಹೊಸ “ಟ್ರಿಕ್ ಪದಗಳನ್ನು” ಹೊರತುಪಡಿಸಿ, ಈ ಬಜೆಟ್‌ನಲ್ಲಿ ಸಾರ್ವಜನಿಕರಿಗೆ ಏನೂ ಸಿಕ್ಕಿಲ್ಲ ಎಂದು ಸಾಮ್ನಾ ವರದಿ ಮಾಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಶಿವಸೇನೆಯ ಪ್ರಕಾರ, ಬಜೆಟ್‌ನ “ಕಾಗದದ ಕುದುರೆಗಳು” ಕೇವಲ “ಡಿಜಿಟಲ್ ಕುದುರೆಗಳು” ಆಗಲಿವೆ. ಬಾವಿಯಲ್ಲಿ ಒಂದು ಹನಿ ನೀರು ಕೂಡ ಇಲ್ಲದಿದ್ದರೂ, ಜನರಿಗೆ ಸಾಕಷ್ಟು ನೀರು ಕೊಡುವುದಾಗಿ ಭರವಸೆ ನೀಡಿದ್ದಾರೆ ಎಂದು ಎಎನ್‌ಐ ವರದಿ ತಿಳಿಸಿದೆ.


ಇದನ್ನೂ ಓದಿ: ಟಿಆರ್‌ಎಸ್ ಶಾಸಕನ ಮನೆಗೆ ದಾಳಿ: 39 ಬಿಜೆಪಿ ಕಾರ್ಯಕರ್ತರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....