Homeಮುಖಪುಟರಾಹುಲ್ ಗಾಂಧಿ ಮೇಲಿನ ಪ್ರತಿ ಜೋಕಿಗೆ ಬಿಜೆಪಿ ಐಟಿ ಸೆಲ್ ನೂರು ರೂ ಕೊಡುತ್ತೆ

ರಾಹುಲ್ ಗಾಂಧಿ ಮೇಲಿನ ಪ್ರತಿ ಜೋಕಿಗೆ ಬಿಜೆಪಿ ಐಟಿ ಸೆಲ್ ನೂರು ರೂ ಕೊಡುತ್ತೆ

- Advertisement -
- Advertisement -

| ಪ್ರವೀಣ್ ಎಸ್ ಶೆಟ್ಟಿ |
ನಾನು ಕಳೆದ ತಿಂಗಳು ಮಂಗಳೂರಿನ ಒಂದು ಪುಸ್ತಕದ ಮಳಿಗೆಯಲ್ಲಿ ನನಗೆ ಬೇಕಾಗಿದ್ದ ಒಂದು ಪುಸ್ತಕ ಹುಡುಕುತ್ತಿದ್ದೆ. ಅಲ್ಲಿ ನನಗೆ ಒಬ್ಬ ಹಳೆಯ ಪರಿಚಿತರು ಸಿಕ್ಕಿದರು. ಅವರು ನನ್ನ ಜತೆ ಮಾತನಾಡುತ್ತಾ, ನಿಮ್ಮ ಹತ್ತಿರ ಯಾವುದಾದರೂ ಉತ್ತಮ ಸರ್ದಾರ್ಜಿ ಜೋಕ್ ಪುಸ್ತಕಗಳು ಇದ್ದರೆ ಕೊಡಿ ಎಂದು ಹೇಳಿದರು. 55 ವರ್ಷ ದಾಟಿದ ಅವರಿಗೆ ಜೋಕ್ ಪುಸ್ತಕಗಳ ಬಗ್ಗೆ ಯಾಕೆ ಒಮ್ಮೆಲೇ ಆಸಕ್ತಿ ಹುಟ್ಟಿತು ಎಂದು ನನಗೆ ಆಶ್ಚರ್ಯವಾಯಿತು. ಹಾಗಾಗಿ ನಾನು ಅವರಲ್ಲಿ ಕೇಳಿದೆ- ನಿಮಗೆ ಈ ಇಳಿ ವಯಸ್ಸಿನಲ್ಲಿ ಜೋಕುಗಳ ಪುಸ್ತಕ ಯಾಕೆ ಬೇಕಾಯಿತು ಎಂದು.

ಆಗ ಅವರು ಮುಜುಗರ ಪಡುತ್ತಾ -ನಾನು ಬಿ‌ಜೆ‌ಪಿ ಐ‌ಟಿ ಸೆಲ್ ನಲ್ಲಿ ಕೆಲಸ ಮಾಡುತ್ತಿದ್ದೇನೆ, ಅವರು ಕಳುಹಿಸುವ ಪೋಸ್ಟ್ ಗಳನ್ನು ಸಾಮಾಜಿಕ ಮೀಡಿಯಾದಲ್ಲಿ ಯಥಾವತ್ ಕಾಪಿ ಪೇಸ್ಟ್ ಫಾರ್ವರ್ಡ್ ಮಾಡುವುದೇ ನನ್ನ ಕೆಲಸ. ಒಂದು ಪೋಸ್ಟ್ ಗೆ ರೂ.3/- ಕೊಡುತ್ತಾರೆ. ಯೂಟೂಬ್ ನಲ್ಲಿ ರಾಜಕೀಯ ವಿಡಿಯೋಗಳ ಕೆಳಗೆ ಹಾಕುವ ಹೊಲಸು ಬೈಗುಳಗಳ ಕಾಮೆಂಟಿಗೂ ನಮಗೆ ಹಣ ಸಿಗುತ್ತದೆ. ಮೋದಿಗೆ ತನ್ನ ಭಕ್ತರು ಎದುರಾಳಿಗಳಿಗೆ ಕೊಡುವ ಹೊಲಸು ಬೈಗುಳ ಓದುವುದೆಂದರೆ ತುಂಬಾ ಇಷ್ಟವಂತೆ, ಅವರು ದಿನದ 12 ಗಂಟೆ ಸಾಮಾಜಿಕ ಮೀಡಿಯಾ ಜಾಲಾಡುವುದರಲ್ಲಿಯೇ ಕಳೆಯುತ್ತಾರೆ ಎಂದು ಅವರು ನನಗೆ ಹೇಳಿದರು. (ಇದನ್ನೇ ಅವರ ಭಕ್ತರು ಮೋದಿ ದಿನಕ್ಕೆ 18 ಗಂಟೆ ಕೆಲಸ ಮಾಡುತ್ತಾರೆ ಎಂದು ಬಡಾಯಿ ಕೊಚ್ಚುವುದು).

ಅವರಿಗೆ ಜೋಕ್ ಪುಸ್ತಕಗಳು ಬೇಕಿರುವುದಕ್ಕೆ ಕಾರಣ ಅವುಗಳಲ್ಲಿಯ ಜೋಕುಗಳನ್ನು ಸ್ವಲ್ಪ ಬದಲಾವಣೆ ಮಾಡಿ ಅವು ರಾಹುಲ್ ಗಾಂಧಿಗೆ ಅನ್ವಯ ಆಗುವಂತೆ ತಿರುಚಿ ಬಿ‌ಜೆ‌ಪಿ ಐ‌ಟಿ ಸೆಲ್ ಗೆ ಕಳುಹಿಸಿದರೆ ಒಂದು ಒಳ್ಳೆಯ ಜೋಕಿಗೆ ಕನಿಷ್ಠ ರೂ. 100/- ಕೊಡುತ್ತಾರೆ, ಹೊಸತರದ ಉತ್ತಮ ಜೋಕ್ ಆಗಿದ್ದರೆ ರೂ 200/- ಸಹಾ ಕೊಡುತ್ತಾರಂತೆ. ಅದಕ್ಕಾಗಿ ಅವರು ಜೋಕ್ ಪುಸ್ತಕಗಳನ್ನು ಹುಡುಕುತ್ತಿದ್ದದ್ದು.

ರಾಹುಲ್ ಗಾಂಧಿ ಕ್ಯಾಂಬ್ರೀಡ್ಜ್ ನಲ್ಲಿ ಎಂ.ಫಿಲ್ ಮಾಡಿದ್ದಾರೆ, ಜತೆಗೆ ಬಿಜ್ನೆಸ್ ಮ್ಯಾನೇಜ್ಮೆಂಟ್ ಕೋರ್ಸ್ ಸಹಾ ಮಾಡಿದ್ದಾರೆ. ಲಂಡನ್ ನಲ್ಲಿ ಒಂದು ಟೆಕ್ ಕಂಪನಿಯಲ್ಲಿ ಡೈರೆಕ್ಟರ್ ಸಹಾ ಆಗಿದ್ದರು. ಅವರನ್ನು ಲೇವಡಿ ಮಾಡುವಷ್ಟು ಯೋಗ್ಯತೆ ಪಿ‌ಯೂ‌ಸಿಯಲ್ಲಿ ಮೂರು ಸಾರಿ ಫೇಲಾಗಿ ಶಾಲೆ ಅರ್ಧಕ್ಕೆ ಬಿಟ್ಟಿರುವ ಸ್ವತಃ ನಿಮಗೆ ಅಥವಾ ನಿಮ್ಮ ಅರೆಸಾಕ್ಷರ ಮೋದಿಗೆ ಇದೆಯೇ? ಗುಜರಾತಿ ಮಾಧ್ಯಮ ಶಾಲೆಯಲ್ಲಿ ಕೇವಲ ಎಂಟನೇ ಕ್ಲಾಸ್ ವರೆಗೆ ಮಾತ್ರ ಕಲಿತಿರುವ ಮೋದಿಗೆ ಸರಿಯಾಗಿ ಇಂಗ್ಲೀಷ್ ಸಹಾ ಮಾತನಾಡಲು ಬರುವುದಿಲ್ಲ, ಆದರೂ ನೀವು ಅವಿದ್ಯಾವಂತ ಮೋದಿಗಾಗಿ ವಿದ್ಯಾವಂತ ರಾಹುಲ್ ಗಾಂಧಿಯನ್ನು ಲೇವಡಿ ಮಾಡುವುದು ಸರಿಯೇ? ಎಂದು ನಾನು ಕೇಳಿದೆ.

ಅದಕ್ಕೆ ಅವರು – ಹೌದು ನೀವು ಹೇಳುವುದು ಸರಿ. ರಾಹುಲ್ ಗಾಂಧಿ ಮೋದಿಗಿಂತ ಹೆಚ್ಚು ವಿದ್ಯಾವಂತ, ಬುದ್ದಿವಂತ ಮತ್ತು ಸಂಭಾವಿತ, ಆದರೆ ಸತತ ಲೇವಡಿ ಅಪಹಾಸ್ಯಗಳ ಮೂಲಕ ಅವರೊಬ್ಬ ಪೆದ್ದ ಮಂದಬುದ್ದಿಯವ ಎಂದು ಮಾಧ್ಯಮಗಳಲ್ಲಿ ಬಿಂಬಿಸುತ್ತಲೇ ಇರಬೇಕು, ಇದರಿಂದ ಹೊಸ ಪೀಳಿಗೆಯ ಯುವ ಮತದಾರರು ಅವರನ್ನು ಹಗುರವಾಗಿ ಪರಿಗಣಿಸುತ್ತಾರೆ ಹಾಗೂ ಅವರಿಗೆ ಹೆಚ್ಚು ಮಹತ್ವ ಮತ್ತು ಗೌರವ ಕೊಡುವುದಿಲ್ಲ, ಕೊನೆಗೆ ಇದು ಕಾಂಗ್ರೆಸ್ಸಿಗೆ ನೆಗೆಟಿವ್ ವೋಟ್ ಆಗಿ ಪರಿಣಮಿಸುತ್ತದೆ ಎಂಬುದು ನಮ್ಮ ಬಿ‌ಜೆ‌ಪಿ ಪ್ರಚಾರ ವಿಭಾಗದವರ ಮನೋವೈಜ್ನಾನಿಕ ರಣತಂತ್ರ ವಾಗಿದೆ ಎಂದು ಅವರು ಗುಟ್ಟು ಬಿಟ್ಟುಕೊಟ್ಟರು. ಅದಕ್ಕಾಗಿಯೇ ಬಿ‌ಜೆ‌ಪಿ ಐ‌ಟಿ ಸೆಲ್ ನವರೇ ರಾಹುಲ್ ಗಾಂಧಿಗೆ ‘ಪಪ್ಪು’ ಚೋಟಾ ಭೀಮ್ ಎಂದು ಅಡ್ಡ ಹೆಸರಿಟ್ಟು ಲೇವಡಿ ಶುರು ಮಾಡಿದ್ದು, ಅದನ್ನೇ ನಾವೂ ಅನುಸರಿಸಬೇಕು ಎಂದು ನಮಗೆ ಆದೇಶವಿದೆ ಎಂದು ಆ ಮಿತ್ರರು ನನಗೆ ಹೇಳಿದರು.

ಅರೆಸಾಕ್ಷರ ಮೋದಿಗೆ “ರಾಜಕೀಯ ತಂತ್ರಗಾರಿಕೆ” ಗೊತ್ತಿದೆಯೇ ವಿನಹ ನಮ್ಮ ಬೃಹತ್ ದೇಶದ ಆರ್ಥಿಕತೆಯ ಬಗ್ಗೆ ಮತ್ತು ಸಾಮಾಜಿಕ ಸಮಸ್ಯೆಗಳ ಬಗ್ಗೆ ಸ್ವಲ್ಪವೂ ಜ್ಞಾನವಿಲ್ಲ, ಅವರು ಗುಜರಾತ್ ಮುಖ್ಯ ಮಂತ್ರಿ ಆಗುವುದಕ್ಕೇ ಮೊದಲು ಒಂದು ಪಂಚಾಯತ್ ಸದಸ್ಯನಾಗಿಯೂ ಜನ ಸೇವೆ ಮಾಡಿಲ್ಲ. ಕೇವಲ ಆಗಿನ ಗುಜರಾತ್ ಮುಖ್ಯಮಂತ್ರಿಗಳಾದ ಕೇಶುಭಾಯಿ ಪಟೇಲ್, ಸುರೇಶ್ ಮೆಹತಾ, ಮತ್ತು ಮಾಧವ ಸಿಂಹ್ ಸೋಲಂಕಿ ಇವರುಗಳ ಬೆನ್ನಿಗೆ ಮೋದಿ ಇರಿಯುತ್ತಾ ಬಂದು 2001 ರಲ್ಲಿ ನೇರವಾಗಿ ಮುಖ್ಯಮಂತ್ರಿ ಖುರ್ಚಿ ಕಬಳಿಸಿದ್ದು. ಮತ್ತೂ ನಂತರ ಅದನ್ನು ಉಳಿಸಿಕೊಳ್ಳಲು ಉದ್ದೇಶಪೂರ್ವಕವಾಗಿ ಕರಾಳ ಗೋಧ್ರಾಕಾಂಡ ರಚಿಸಿದ್ದು ಅಷ್ಟೇ. ಸ್ವಲ್ಪವೂ ಆರ್ಥಿಕ ತಜ್ನತೆ ಇಲ್ಲದರಿಂದಾಗಿಯೇ ಮೋದಿ ಪೆದ್ದು ಪೆದ್ದಾಗಿ ನೋಟು ರದ್ದತಿ ಮಾಡಿ ಇಡೀ ದೇಶದ ಆರ್ಥಿಕತೆಗೆ ಮಾರಣಾಂತಿಕ ಪೆಟ್ಟು ಕೊಟ್ಟಿದ್ದು ನಿಜ ಎಂದು ಆ ಸರ್ದಾರ್ಜಿ ಜೋಕುಪ್ರಿಯರು ಒಪ್ಪಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...