Homeಮುಖಪುಟರಾಹುಲ್ ಗಾಂಧಿ ಮೇಲಿನ ಪ್ರತಿ ಜೋಕಿಗೆ ಬಿಜೆಪಿ ಐಟಿ ಸೆಲ್ ನೂರು ರೂ ಕೊಡುತ್ತೆ

ರಾಹುಲ್ ಗಾಂಧಿ ಮೇಲಿನ ಪ್ರತಿ ಜೋಕಿಗೆ ಬಿಜೆಪಿ ಐಟಿ ಸೆಲ್ ನೂರು ರೂ ಕೊಡುತ್ತೆ

- Advertisement -
- Advertisement -

| ಪ್ರವೀಣ್ ಎಸ್ ಶೆಟ್ಟಿ |
ನಾನು ಕಳೆದ ತಿಂಗಳು ಮಂಗಳೂರಿನ ಒಂದು ಪುಸ್ತಕದ ಮಳಿಗೆಯಲ್ಲಿ ನನಗೆ ಬೇಕಾಗಿದ್ದ ಒಂದು ಪುಸ್ತಕ ಹುಡುಕುತ್ತಿದ್ದೆ. ಅಲ್ಲಿ ನನಗೆ ಒಬ್ಬ ಹಳೆಯ ಪರಿಚಿತರು ಸಿಕ್ಕಿದರು. ಅವರು ನನ್ನ ಜತೆ ಮಾತನಾಡುತ್ತಾ, ನಿಮ್ಮ ಹತ್ತಿರ ಯಾವುದಾದರೂ ಉತ್ತಮ ಸರ್ದಾರ್ಜಿ ಜೋಕ್ ಪುಸ್ತಕಗಳು ಇದ್ದರೆ ಕೊಡಿ ಎಂದು ಹೇಳಿದರು. 55 ವರ್ಷ ದಾಟಿದ ಅವರಿಗೆ ಜೋಕ್ ಪುಸ್ತಕಗಳ ಬಗ್ಗೆ ಯಾಕೆ ಒಮ್ಮೆಲೇ ಆಸಕ್ತಿ ಹುಟ್ಟಿತು ಎಂದು ನನಗೆ ಆಶ್ಚರ್ಯವಾಯಿತು. ಹಾಗಾಗಿ ನಾನು ಅವರಲ್ಲಿ ಕೇಳಿದೆ- ನಿಮಗೆ ಈ ಇಳಿ ವಯಸ್ಸಿನಲ್ಲಿ ಜೋಕುಗಳ ಪುಸ್ತಕ ಯಾಕೆ ಬೇಕಾಯಿತು ಎಂದು.

ಆಗ ಅವರು ಮುಜುಗರ ಪಡುತ್ತಾ -ನಾನು ಬಿ‌ಜೆ‌ಪಿ ಐ‌ಟಿ ಸೆಲ್ ನಲ್ಲಿ ಕೆಲಸ ಮಾಡುತ್ತಿದ್ದೇನೆ, ಅವರು ಕಳುಹಿಸುವ ಪೋಸ್ಟ್ ಗಳನ್ನು ಸಾಮಾಜಿಕ ಮೀಡಿಯಾದಲ್ಲಿ ಯಥಾವತ್ ಕಾಪಿ ಪೇಸ್ಟ್ ಫಾರ್ವರ್ಡ್ ಮಾಡುವುದೇ ನನ್ನ ಕೆಲಸ. ಒಂದು ಪೋಸ್ಟ್ ಗೆ ರೂ.3/- ಕೊಡುತ್ತಾರೆ. ಯೂಟೂಬ್ ನಲ್ಲಿ ರಾಜಕೀಯ ವಿಡಿಯೋಗಳ ಕೆಳಗೆ ಹಾಕುವ ಹೊಲಸು ಬೈಗುಳಗಳ ಕಾಮೆಂಟಿಗೂ ನಮಗೆ ಹಣ ಸಿಗುತ್ತದೆ. ಮೋದಿಗೆ ತನ್ನ ಭಕ್ತರು ಎದುರಾಳಿಗಳಿಗೆ ಕೊಡುವ ಹೊಲಸು ಬೈಗುಳ ಓದುವುದೆಂದರೆ ತುಂಬಾ ಇಷ್ಟವಂತೆ, ಅವರು ದಿನದ 12 ಗಂಟೆ ಸಾಮಾಜಿಕ ಮೀಡಿಯಾ ಜಾಲಾಡುವುದರಲ್ಲಿಯೇ ಕಳೆಯುತ್ತಾರೆ ಎಂದು ಅವರು ನನಗೆ ಹೇಳಿದರು. (ಇದನ್ನೇ ಅವರ ಭಕ್ತರು ಮೋದಿ ದಿನಕ್ಕೆ 18 ಗಂಟೆ ಕೆಲಸ ಮಾಡುತ್ತಾರೆ ಎಂದು ಬಡಾಯಿ ಕೊಚ್ಚುವುದು).

ಅವರಿಗೆ ಜೋಕ್ ಪುಸ್ತಕಗಳು ಬೇಕಿರುವುದಕ್ಕೆ ಕಾರಣ ಅವುಗಳಲ್ಲಿಯ ಜೋಕುಗಳನ್ನು ಸ್ವಲ್ಪ ಬದಲಾವಣೆ ಮಾಡಿ ಅವು ರಾಹುಲ್ ಗಾಂಧಿಗೆ ಅನ್ವಯ ಆಗುವಂತೆ ತಿರುಚಿ ಬಿ‌ಜೆ‌ಪಿ ಐ‌ಟಿ ಸೆಲ್ ಗೆ ಕಳುಹಿಸಿದರೆ ಒಂದು ಒಳ್ಳೆಯ ಜೋಕಿಗೆ ಕನಿಷ್ಠ ರೂ. 100/- ಕೊಡುತ್ತಾರೆ, ಹೊಸತರದ ಉತ್ತಮ ಜೋಕ್ ಆಗಿದ್ದರೆ ರೂ 200/- ಸಹಾ ಕೊಡುತ್ತಾರಂತೆ. ಅದಕ್ಕಾಗಿ ಅವರು ಜೋಕ್ ಪುಸ್ತಕಗಳನ್ನು ಹುಡುಕುತ್ತಿದ್ದದ್ದು.

ರಾಹುಲ್ ಗಾಂಧಿ ಕ್ಯಾಂಬ್ರೀಡ್ಜ್ ನಲ್ಲಿ ಎಂ.ಫಿಲ್ ಮಾಡಿದ್ದಾರೆ, ಜತೆಗೆ ಬಿಜ್ನೆಸ್ ಮ್ಯಾನೇಜ್ಮೆಂಟ್ ಕೋರ್ಸ್ ಸಹಾ ಮಾಡಿದ್ದಾರೆ. ಲಂಡನ್ ನಲ್ಲಿ ಒಂದು ಟೆಕ್ ಕಂಪನಿಯಲ್ಲಿ ಡೈರೆಕ್ಟರ್ ಸಹಾ ಆಗಿದ್ದರು. ಅವರನ್ನು ಲೇವಡಿ ಮಾಡುವಷ್ಟು ಯೋಗ್ಯತೆ ಪಿ‌ಯೂ‌ಸಿಯಲ್ಲಿ ಮೂರು ಸಾರಿ ಫೇಲಾಗಿ ಶಾಲೆ ಅರ್ಧಕ್ಕೆ ಬಿಟ್ಟಿರುವ ಸ್ವತಃ ನಿಮಗೆ ಅಥವಾ ನಿಮ್ಮ ಅರೆಸಾಕ್ಷರ ಮೋದಿಗೆ ಇದೆಯೇ? ಗುಜರಾತಿ ಮಾಧ್ಯಮ ಶಾಲೆಯಲ್ಲಿ ಕೇವಲ ಎಂಟನೇ ಕ್ಲಾಸ್ ವರೆಗೆ ಮಾತ್ರ ಕಲಿತಿರುವ ಮೋದಿಗೆ ಸರಿಯಾಗಿ ಇಂಗ್ಲೀಷ್ ಸಹಾ ಮಾತನಾಡಲು ಬರುವುದಿಲ್ಲ, ಆದರೂ ನೀವು ಅವಿದ್ಯಾವಂತ ಮೋದಿಗಾಗಿ ವಿದ್ಯಾವಂತ ರಾಹುಲ್ ಗಾಂಧಿಯನ್ನು ಲೇವಡಿ ಮಾಡುವುದು ಸರಿಯೇ? ಎಂದು ನಾನು ಕೇಳಿದೆ.

ಅದಕ್ಕೆ ಅವರು – ಹೌದು ನೀವು ಹೇಳುವುದು ಸರಿ. ರಾಹುಲ್ ಗಾಂಧಿ ಮೋದಿಗಿಂತ ಹೆಚ್ಚು ವಿದ್ಯಾವಂತ, ಬುದ್ದಿವಂತ ಮತ್ತು ಸಂಭಾವಿತ, ಆದರೆ ಸತತ ಲೇವಡಿ ಅಪಹಾಸ್ಯಗಳ ಮೂಲಕ ಅವರೊಬ್ಬ ಪೆದ್ದ ಮಂದಬುದ್ದಿಯವ ಎಂದು ಮಾಧ್ಯಮಗಳಲ್ಲಿ ಬಿಂಬಿಸುತ್ತಲೇ ಇರಬೇಕು, ಇದರಿಂದ ಹೊಸ ಪೀಳಿಗೆಯ ಯುವ ಮತದಾರರು ಅವರನ್ನು ಹಗುರವಾಗಿ ಪರಿಗಣಿಸುತ್ತಾರೆ ಹಾಗೂ ಅವರಿಗೆ ಹೆಚ್ಚು ಮಹತ್ವ ಮತ್ತು ಗೌರವ ಕೊಡುವುದಿಲ್ಲ, ಕೊನೆಗೆ ಇದು ಕಾಂಗ್ರೆಸ್ಸಿಗೆ ನೆಗೆಟಿವ್ ವೋಟ್ ಆಗಿ ಪರಿಣಮಿಸುತ್ತದೆ ಎಂಬುದು ನಮ್ಮ ಬಿ‌ಜೆ‌ಪಿ ಪ್ರಚಾರ ವಿಭಾಗದವರ ಮನೋವೈಜ್ನಾನಿಕ ರಣತಂತ್ರ ವಾಗಿದೆ ಎಂದು ಅವರು ಗುಟ್ಟು ಬಿಟ್ಟುಕೊಟ್ಟರು. ಅದಕ್ಕಾಗಿಯೇ ಬಿ‌ಜೆ‌ಪಿ ಐ‌ಟಿ ಸೆಲ್ ನವರೇ ರಾಹುಲ್ ಗಾಂಧಿಗೆ ‘ಪಪ್ಪು’ ಚೋಟಾ ಭೀಮ್ ಎಂದು ಅಡ್ಡ ಹೆಸರಿಟ್ಟು ಲೇವಡಿ ಶುರು ಮಾಡಿದ್ದು, ಅದನ್ನೇ ನಾವೂ ಅನುಸರಿಸಬೇಕು ಎಂದು ನಮಗೆ ಆದೇಶವಿದೆ ಎಂದು ಆ ಮಿತ್ರರು ನನಗೆ ಹೇಳಿದರು.

ಅರೆಸಾಕ್ಷರ ಮೋದಿಗೆ “ರಾಜಕೀಯ ತಂತ್ರಗಾರಿಕೆ” ಗೊತ್ತಿದೆಯೇ ವಿನಹ ನಮ್ಮ ಬೃಹತ್ ದೇಶದ ಆರ್ಥಿಕತೆಯ ಬಗ್ಗೆ ಮತ್ತು ಸಾಮಾಜಿಕ ಸಮಸ್ಯೆಗಳ ಬಗ್ಗೆ ಸ್ವಲ್ಪವೂ ಜ್ಞಾನವಿಲ್ಲ, ಅವರು ಗುಜರಾತ್ ಮುಖ್ಯ ಮಂತ್ರಿ ಆಗುವುದಕ್ಕೇ ಮೊದಲು ಒಂದು ಪಂಚಾಯತ್ ಸದಸ್ಯನಾಗಿಯೂ ಜನ ಸೇವೆ ಮಾಡಿಲ್ಲ. ಕೇವಲ ಆಗಿನ ಗುಜರಾತ್ ಮುಖ್ಯಮಂತ್ರಿಗಳಾದ ಕೇಶುಭಾಯಿ ಪಟೇಲ್, ಸುರೇಶ್ ಮೆಹತಾ, ಮತ್ತು ಮಾಧವ ಸಿಂಹ್ ಸೋಲಂಕಿ ಇವರುಗಳ ಬೆನ್ನಿಗೆ ಮೋದಿ ಇರಿಯುತ್ತಾ ಬಂದು 2001 ರಲ್ಲಿ ನೇರವಾಗಿ ಮುಖ್ಯಮಂತ್ರಿ ಖುರ್ಚಿ ಕಬಳಿಸಿದ್ದು. ಮತ್ತೂ ನಂತರ ಅದನ್ನು ಉಳಿಸಿಕೊಳ್ಳಲು ಉದ್ದೇಶಪೂರ್ವಕವಾಗಿ ಕರಾಳ ಗೋಧ್ರಾಕಾಂಡ ರಚಿಸಿದ್ದು ಅಷ್ಟೇ. ಸ್ವಲ್ಪವೂ ಆರ್ಥಿಕ ತಜ್ನತೆ ಇಲ್ಲದರಿಂದಾಗಿಯೇ ಮೋದಿ ಪೆದ್ದು ಪೆದ್ದಾಗಿ ನೋಟು ರದ್ದತಿ ಮಾಡಿ ಇಡೀ ದೇಶದ ಆರ್ಥಿಕತೆಗೆ ಮಾರಣಾಂತಿಕ ಪೆಟ್ಟು ಕೊಟ್ಟಿದ್ದು ನಿಜ ಎಂದು ಆ ಸರ್ದಾರ್ಜಿ ಜೋಕುಪ್ರಿಯರು ಒಪ್ಪಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...