Homeಮುಖಪುಟರಾಹುಲ್ ಗಾಂಧಿ ಮೇಲಿನ ಪ್ರತಿ ಜೋಕಿಗೆ ಬಿಜೆಪಿ ಐಟಿ ಸೆಲ್ ನೂರು ರೂ ಕೊಡುತ್ತೆ

ರಾಹುಲ್ ಗಾಂಧಿ ಮೇಲಿನ ಪ್ರತಿ ಜೋಕಿಗೆ ಬಿಜೆಪಿ ಐಟಿ ಸೆಲ್ ನೂರು ರೂ ಕೊಡುತ್ತೆ

- Advertisement -
- Advertisement -

| ಪ್ರವೀಣ್ ಎಸ್ ಶೆಟ್ಟಿ |
ನಾನು ಕಳೆದ ತಿಂಗಳು ಮಂಗಳೂರಿನ ಒಂದು ಪುಸ್ತಕದ ಮಳಿಗೆಯಲ್ಲಿ ನನಗೆ ಬೇಕಾಗಿದ್ದ ಒಂದು ಪುಸ್ತಕ ಹುಡುಕುತ್ತಿದ್ದೆ. ಅಲ್ಲಿ ನನಗೆ ಒಬ್ಬ ಹಳೆಯ ಪರಿಚಿತರು ಸಿಕ್ಕಿದರು. ಅವರು ನನ್ನ ಜತೆ ಮಾತನಾಡುತ್ತಾ, ನಿಮ್ಮ ಹತ್ತಿರ ಯಾವುದಾದರೂ ಉತ್ತಮ ಸರ್ದಾರ್ಜಿ ಜೋಕ್ ಪುಸ್ತಕಗಳು ಇದ್ದರೆ ಕೊಡಿ ಎಂದು ಹೇಳಿದರು. 55 ವರ್ಷ ದಾಟಿದ ಅವರಿಗೆ ಜೋಕ್ ಪುಸ್ತಕಗಳ ಬಗ್ಗೆ ಯಾಕೆ ಒಮ್ಮೆಲೇ ಆಸಕ್ತಿ ಹುಟ್ಟಿತು ಎಂದು ನನಗೆ ಆಶ್ಚರ್ಯವಾಯಿತು. ಹಾಗಾಗಿ ನಾನು ಅವರಲ್ಲಿ ಕೇಳಿದೆ- ನಿಮಗೆ ಈ ಇಳಿ ವಯಸ್ಸಿನಲ್ಲಿ ಜೋಕುಗಳ ಪುಸ್ತಕ ಯಾಕೆ ಬೇಕಾಯಿತು ಎಂದು.

ಆಗ ಅವರು ಮುಜುಗರ ಪಡುತ್ತಾ -ನಾನು ಬಿ‌ಜೆ‌ಪಿ ಐ‌ಟಿ ಸೆಲ್ ನಲ್ಲಿ ಕೆಲಸ ಮಾಡುತ್ತಿದ್ದೇನೆ, ಅವರು ಕಳುಹಿಸುವ ಪೋಸ್ಟ್ ಗಳನ್ನು ಸಾಮಾಜಿಕ ಮೀಡಿಯಾದಲ್ಲಿ ಯಥಾವತ್ ಕಾಪಿ ಪೇಸ್ಟ್ ಫಾರ್ವರ್ಡ್ ಮಾಡುವುದೇ ನನ್ನ ಕೆಲಸ. ಒಂದು ಪೋಸ್ಟ್ ಗೆ ರೂ.3/- ಕೊಡುತ್ತಾರೆ. ಯೂಟೂಬ್ ನಲ್ಲಿ ರಾಜಕೀಯ ವಿಡಿಯೋಗಳ ಕೆಳಗೆ ಹಾಕುವ ಹೊಲಸು ಬೈಗುಳಗಳ ಕಾಮೆಂಟಿಗೂ ನಮಗೆ ಹಣ ಸಿಗುತ್ತದೆ. ಮೋದಿಗೆ ತನ್ನ ಭಕ್ತರು ಎದುರಾಳಿಗಳಿಗೆ ಕೊಡುವ ಹೊಲಸು ಬೈಗುಳ ಓದುವುದೆಂದರೆ ತುಂಬಾ ಇಷ್ಟವಂತೆ, ಅವರು ದಿನದ 12 ಗಂಟೆ ಸಾಮಾಜಿಕ ಮೀಡಿಯಾ ಜಾಲಾಡುವುದರಲ್ಲಿಯೇ ಕಳೆಯುತ್ತಾರೆ ಎಂದು ಅವರು ನನಗೆ ಹೇಳಿದರು. (ಇದನ್ನೇ ಅವರ ಭಕ್ತರು ಮೋದಿ ದಿನಕ್ಕೆ 18 ಗಂಟೆ ಕೆಲಸ ಮಾಡುತ್ತಾರೆ ಎಂದು ಬಡಾಯಿ ಕೊಚ್ಚುವುದು).

ಅವರಿಗೆ ಜೋಕ್ ಪುಸ್ತಕಗಳು ಬೇಕಿರುವುದಕ್ಕೆ ಕಾರಣ ಅವುಗಳಲ್ಲಿಯ ಜೋಕುಗಳನ್ನು ಸ್ವಲ್ಪ ಬದಲಾವಣೆ ಮಾಡಿ ಅವು ರಾಹುಲ್ ಗಾಂಧಿಗೆ ಅನ್ವಯ ಆಗುವಂತೆ ತಿರುಚಿ ಬಿ‌ಜೆ‌ಪಿ ಐ‌ಟಿ ಸೆಲ್ ಗೆ ಕಳುಹಿಸಿದರೆ ಒಂದು ಒಳ್ಳೆಯ ಜೋಕಿಗೆ ಕನಿಷ್ಠ ರೂ. 100/- ಕೊಡುತ್ತಾರೆ, ಹೊಸತರದ ಉತ್ತಮ ಜೋಕ್ ಆಗಿದ್ದರೆ ರೂ 200/- ಸಹಾ ಕೊಡುತ್ತಾರಂತೆ. ಅದಕ್ಕಾಗಿ ಅವರು ಜೋಕ್ ಪುಸ್ತಕಗಳನ್ನು ಹುಡುಕುತ್ತಿದ್ದದ್ದು.

ರಾಹುಲ್ ಗಾಂಧಿ ಕ್ಯಾಂಬ್ರೀಡ್ಜ್ ನಲ್ಲಿ ಎಂ.ಫಿಲ್ ಮಾಡಿದ್ದಾರೆ, ಜತೆಗೆ ಬಿಜ್ನೆಸ್ ಮ್ಯಾನೇಜ್ಮೆಂಟ್ ಕೋರ್ಸ್ ಸಹಾ ಮಾಡಿದ್ದಾರೆ. ಲಂಡನ್ ನಲ್ಲಿ ಒಂದು ಟೆಕ್ ಕಂಪನಿಯಲ್ಲಿ ಡೈರೆಕ್ಟರ್ ಸಹಾ ಆಗಿದ್ದರು. ಅವರನ್ನು ಲೇವಡಿ ಮಾಡುವಷ್ಟು ಯೋಗ್ಯತೆ ಪಿ‌ಯೂ‌ಸಿಯಲ್ಲಿ ಮೂರು ಸಾರಿ ಫೇಲಾಗಿ ಶಾಲೆ ಅರ್ಧಕ್ಕೆ ಬಿಟ್ಟಿರುವ ಸ್ವತಃ ನಿಮಗೆ ಅಥವಾ ನಿಮ್ಮ ಅರೆಸಾಕ್ಷರ ಮೋದಿಗೆ ಇದೆಯೇ? ಗುಜರಾತಿ ಮಾಧ್ಯಮ ಶಾಲೆಯಲ್ಲಿ ಕೇವಲ ಎಂಟನೇ ಕ್ಲಾಸ್ ವರೆಗೆ ಮಾತ್ರ ಕಲಿತಿರುವ ಮೋದಿಗೆ ಸರಿಯಾಗಿ ಇಂಗ್ಲೀಷ್ ಸಹಾ ಮಾತನಾಡಲು ಬರುವುದಿಲ್ಲ, ಆದರೂ ನೀವು ಅವಿದ್ಯಾವಂತ ಮೋದಿಗಾಗಿ ವಿದ್ಯಾವಂತ ರಾಹುಲ್ ಗಾಂಧಿಯನ್ನು ಲೇವಡಿ ಮಾಡುವುದು ಸರಿಯೇ? ಎಂದು ನಾನು ಕೇಳಿದೆ.

ಅದಕ್ಕೆ ಅವರು – ಹೌದು ನೀವು ಹೇಳುವುದು ಸರಿ. ರಾಹುಲ್ ಗಾಂಧಿ ಮೋದಿಗಿಂತ ಹೆಚ್ಚು ವಿದ್ಯಾವಂತ, ಬುದ್ದಿವಂತ ಮತ್ತು ಸಂಭಾವಿತ, ಆದರೆ ಸತತ ಲೇವಡಿ ಅಪಹಾಸ್ಯಗಳ ಮೂಲಕ ಅವರೊಬ್ಬ ಪೆದ್ದ ಮಂದಬುದ್ದಿಯವ ಎಂದು ಮಾಧ್ಯಮಗಳಲ್ಲಿ ಬಿಂಬಿಸುತ್ತಲೇ ಇರಬೇಕು, ಇದರಿಂದ ಹೊಸ ಪೀಳಿಗೆಯ ಯುವ ಮತದಾರರು ಅವರನ್ನು ಹಗುರವಾಗಿ ಪರಿಗಣಿಸುತ್ತಾರೆ ಹಾಗೂ ಅವರಿಗೆ ಹೆಚ್ಚು ಮಹತ್ವ ಮತ್ತು ಗೌರವ ಕೊಡುವುದಿಲ್ಲ, ಕೊನೆಗೆ ಇದು ಕಾಂಗ್ರೆಸ್ಸಿಗೆ ನೆಗೆಟಿವ್ ವೋಟ್ ಆಗಿ ಪರಿಣಮಿಸುತ್ತದೆ ಎಂಬುದು ನಮ್ಮ ಬಿ‌ಜೆ‌ಪಿ ಪ್ರಚಾರ ವಿಭಾಗದವರ ಮನೋವೈಜ್ನಾನಿಕ ರಣತಂತ್ರ ವಾಗಿದೆ ಎಂದು ಅವರು ಗುಟ್ಟು ಬಿಟ್ಟುಕೊಟ್ಟರು. ಅದಕ್ಕಾಗಿಯೇ ಬಿ‌ಜೆ‌ಪಿ ಐ‌ಟಿ ಸೆಲ್ ನವರೇ ರಾಹುಲ್ ಗಾಂಧಿಗೆ ‘ಪಪ್ಪು’ ಚೋಟಾ ಭೀಮ್ ಎಂದು ಅಡ್ಡ ಹೆಸರಿಟ್ಟು ಲೇವಡಿ ಶುರು ಮಾಡಿದ್ದು, ಅದನ್ನೇ ನಾವೂ ಅನುಸರಿಸಬೇಕು ಎಂದು ನಮಗೆ ಆದೇಶವಿದೆ ಎಂದು ಆ ಮಿತ್ರರು ನನಗೆ ಹೇಳಿದರು.

ಅರೆಸಾಕ್ಷರ ಮೋದಿಗೆ “ರಾಜಕೀಯ ತಂತ್ರಗಾರಿಕೆ” ಗೊತ್ತಿದೆಯೇ ವಿನಹ ನಮ್ಮ ಬೃಹತ್ ದೇಶದ ಆರ್ಥಿಕತೆಯ ಬಗ್ಗೆ ಮತ್ತು ಸಾಮಾಜಿಕ ಸಮಸ್ಯೆಗಳ ಬಗ್ಗೆ ಸ್ವಲ್ಪವೂ ಜ್ಞಾನವಿಲ್ಲ, ಅವರು ಗುಜರಾತ್ ಮುಖ್ಯ ಮಂತ್ರಿ ಆಗುವುದಕ್ಕೇ ಮೊದಲು ಒಂದು ಪಂಚಾಯತ್ ಸದಸ್ಯನಾಗಿಯೂ ಜನ ಸೇವೆ ಮಾಡಿಲ್ಲ. ಕೇವಲ ಆಗಿನ ಗುಜರಾತ್ ಮುಖ್ಯಮಂತ್ರಿಗಳಾದ ಕೇಶುಭಾಯಿ ಪಟೇಲ್, ಸುರೇಶ್ ಮೆಹತಾ, ಮತ್ತು ಮಾಧವ ಸಿಂಹ್ ಸೋಲಂಕಿ ಇವರುಗಳ ಬೆನ್ನಿಗೆ ಮೋದಿ ಇರಿಯುತ್ತಾ ಬಂದು 2001 ರಲ್ಲಿ ನೇರವಾಗಿ ಮುಖ್ಯಮಂತ್ರಿ ಖುರ್ಚಿ ಕಬಳಿಸಿದ್ದು. ಮತ್ತೂ ನಂತರ ಅದನ್ನು ಉಳಿಸಿಕೊಳ್ಳಲು ಉದ್ದೇಶಪೂರ್ವಕವಾಗಿ ಕರಾಳ ಗೋಧ್ರಾಕಾಂಡ ರಚಿಸಿದ್ದು ಅಷ್ಟೇ. ಸ್ವಲ್ಪವೂ ಆರ್ಥಿಕ ತಜ್ನತೆ ಇಲ್ಲದರಿಂದಾಗಿಯೇ ಮೋದಿ ಪೆದ್ದು ಪೆದ್ದಾಗಿ ನೋಟು ರದ್ದತಿ ಮಾಡಿ ಇಡೀ ದೇಶದ ಆರ್ಥಿಕತೆಗೆ ಮಾರಣಾಂತಿಕ ಪೆಟ್ಟು ಕೊಟ್ಟಿದ್ದು ನಿಜ ಎಂದು ಆ ಸರ್ದಾರ್ಜಿ ಜೋಕುಪ್ರಿಯರು ಒಪ್ಪಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...