Homeಮುಖಪುಟರಾಹುಲ್ ಗಾಂಧಿ ಮೇಲಿನ ಪ್ರತಿ ಜೋಕಿಗೆ ಬಿಜೆಪಿ ಐಟಿ ಸೆಲ್ ನೂರು ರೂ ಕೊಡುತ್ತೆ

ರಾಹುಲ್ ಗಾಂಧಿ ಮೇಲಿನ ಪ್ರತಿ ಜೋಕಿಗೆ ಬಿಜೆಪಿ ಐಟಿ ಸೆಲ್ ನೂರು ರೂ ಕೊಡುತ್ತೆ

- Advertisement -
- Advertisement -

| ಪ್ರವೀಣ್ ಎಸ್ ಶೆಟ್ಟಿ |
ನಾನು ಕಳೆದ ತಿಂಗಳು ಮಂಗಳೂರಿನ ಒಂದು ಪುಸ್ತಕದ ಮಳಿಗೆಯಲ್ಲಿ ನನಗೆ ಬೇಕಾಗಿದ್ದ ಒಂದು ಪುಸ್ತಕ ಹುಡುಕುತ್ತಿದ್ದೆ. ಅಲ್ಲಿ ನನಗೆ ಒಬ್ಬ ಹಳೆಯ ಪರಿಚಿತರು ಸಿಕ್ಕಿದರು. ಅವರು ನನ್ನ ಜತೆ ಮಾತನಾಡುತ್ತಾ, ನಿಮ್ಮ ಹತ್ತಿರ ಯಾವುದಾದರೂ ಉತ್ತಮ ಸರ್ದಾರ್ಜಿ ಜೋಕ್ ಪುಸ್ತಕಗಳು ಇದ್ದರೆ ಕೊಡಿ ಎಂದು ಹೇಳಿದರು. 55 ವರ್ಷ ದಾಟಿದ ಅವರಿಗೆ ಜೋಕ್ ಪುಸ್ತಕಗಳ ಬಗ್ಗೆ ಯಾಕೆ ಒಮ್ಮೆಲೇ ಆಸಕ್ತಿ ಹುಟ್ಟಿತು ಎಂದು ನನಗೆ ಆಶ್ಚರ್ಯವಾಯಿತು. ಹಾಗಾಗಿ ನಾನು ಅವರಲ್ಲಿ ಕೇಳಿದೆ- ನಿಮಗೆ ಈ ಇಳಿ ವಯಸ್ಸಿನಲ್ಲಿ ಜೋಕುಗಳ ಪುಸ್ತಕ ಯಾಕೆ ಬೇಕಾಯಿತು ಎಂದು.

ಆಗ ಅವರು ಮುಜುಗರ ಪಡುತ್ತಾ -ನಾನು ಬಿ‌ಜೆ‌ಪಿ ಐ‌ಟಿ ಸೆಲ್ ನಲ್ಲಿ ಕೆಲಸ ಮಾಡುತ್ತಿದ್ದೇನೆ, ಅವರು ಕಳುಹಿಸುವ ಪೋಸ್ಟ್ ಗಳನ್ನು ಸಾಮಾಜಿಕ ಮೀಡಿಯಾದಲ್ಲಿ ಯಥಾವತ್ ಕಾಪಿ ಪೇಸ್ಟ್ ಫಾರ್ವರ್ಡ್ ಮಾಡುವುದೇ ನನ್ನ ಕೆಲಸ. ಒಂದು ಪೋಸ್ಟ್ ಗೆ ರೂ.3/- ಕೊಡುತ್ತಾರೆ. ಯೂಟೂಬ್ ನಲ್ಲಿ ರಾಜಕೀಯ ವಿಡಿಯೋಗಳ ಕೆಳಗೆ ಹಾಕುವ ಹೊಲಸು ಬೈಗುಳಗಳ ಕಾಮೆಂಟಿಗೂ ನಮಗೆ ಹಣ ಸಿಗುತ್ತದೆ. ಮೋದಿಗೆ ತನ್ನ ಭಕ್ತರು ಎದುರಾಳಿಗಳಿಗೆ ಕೊಡುವ ಹೊಲಸು ಬೈಗುಳ ಓದುವುದೆಂದರೆ ತುಂಬಾ ಇಷ್ಟವಂತೆ, ಅವರು ದಿನದ 12 ಗಂಟೆ ಸಾಮಾಜಿಕ ಮೀಡಿಯಾ ಜಾಲಾಡುವುದರಲ್ಲಿಯೇ ಕಳೆಯುತ್ತಾರೆ ಎಂದು ಅವರು ನನಗೆ ಹೇಳಿದರು. (ಇದನ್ನೇ ಅವರ ಭಕ್ತರು ಮೋದಿ ದಿನಕ್ಕೆ 18 ಗಂಟೆ ಕೆಲಸ ಮಾಡುತ್ತಾರೆ ಎಂದು ಬಡಾಯಿ ಕೊಚ್ಚುವುದು).

ಅವರಿಗೆ ಜೋಕ್ ಪುಸ್ತಕಗಳು ಬೇಕಿರುವುದಕ್ಕೆ ಕಾರಣ ಅವುಗಳಲ್ಲಿಯ ಜೋಕುಗಳನ್ನು ಸ್ವಲ್ಪ ಬದಲಾವಣೆ ಮಾಡಿ ಅವು ರಾಹುಲ್ ಗಾಂಧಿಗೆ ಅನ್ವಯ ಆಗುವಂತೆ ತಿರುಚಿ ಬಿ‌ಜೆ‌ಪಿ ಐ‌ಟಿ ಸೆಲ್ ಗೆ ಕಳುಹಿಸಿದರೆ ಒಂದು ಒಳ್ಳೆಯ ಜೋಕಿಗೆ ಕನಿಷ್ಠ ರೂ. 100/- ಕೊಡುತ್ತಾರೆ, ಹೊಸತರದ ಉತ್ತಮ ಜೋಕ್ ಆಗಿದ್ದರೆ ರೂ 200/- ಸಹಾ ಕೊಡುತ್ತಾರಂತೆ. ಅದಕ್ಕಾಗಿ ಅವರು ಜೋಕ್ ಪುಸ್ತಕಗಳನ್ನು ಹುಡುಕುತ್ತಿದ್ದದ್ದು.

ರಾಹುಲ್ ಗಾಂಧಿ ಕ್ಯಾಂಬ್ರೀಡ್ಜ್ ನಲ್ಲಿ ಎಂ.ಫಿಲ್ ಮಾಡಿದ್ದಾರೆ, ಜತೆಗೆ ಬಿಜ್ನೆಸ್ ಮ್ಯಾನೇಜ್ಮೆಂಟ್ ಕೋರ್ಸ್ ಸಹಾ ಮಾಡಿದ್ದಾರೆ. ಲಂಡನ್ ನಲ್ಲಿ ಒಂದು ಟೆಕ್ ಕಂಪನಿಯಲ್ಲಿ ಡೈರೆಕ್ಟರ್ ಸಹಾ ಆಗಿದ್ದರು. ಅವರನ್ನು ಲೇವಡಿ ಮಾಡುವಷ್ಟು ಯೋಗ್ಯತೆ ಪಿ‌ಯೂ‌ಸಿಯಲ್ಲಿ ಮೂರು ಸಾರಿ ಫೇಲಾಗಿ ಶಾಲೆ ಅರ್ಧಕ್ಕೆ ಬಿಟ್ಟಿರುವ ಸ್ವತಃ ನಿಮಗೆ ಅಥವಾ ನಿಮ್ಮ ಅರೆಸಾಕ್ಷರ ಮೋದಿಗೆ ಇದೆಯೇ? ಗುಜರಾತಿ ಮಾಧ್ಯಮ ಶಾಲೆಯಲ್ಲಿ ಕೇವಲ ಎಂಟನೇ ಕ್ಲಾಸ್ ವರೆಗೆ ಮಾತ್ರ ಕಲಿತಿರುವ ಮೋದಿಗೆ ಸರಿಯಾಗಿ ಇಂಗ್ಲೀಷ್ ಸಹಾ ಮಾತನಾಡಲು ಬರುವುದಿಲ್ಲ, ಆದರೂ ನೀವು ಅವಿದ್ಯಾವಂತ ಮೋದಿಗಾಗಿ ವಿದ್ಯಾವಂತ ರಾಹುಲ್ ಗಾಂಧಿಯನ್ನು ಲೇವಡಿ ಮಾಡುವುದು ಸರಿಯೇ? ಎಂದು ನಾನು ಕೇಳಿದೆ.

ಅದಕ್ಕೆ ಅವರು – ಹೌದು ನೀವು ಹೇಳುವುದು ಸರಿ. ರಾಹುಲ್ ಗಾಂಧಿ ಮೋದಿಗಿಂತ ಹೆಚ್ಚು ವಿದ್ಯಾವಂತ, ಬುದ್ದಿವಂತ ಮತ್ತು ಸಂಭಾವಿತ, ಆದರೆ ಸತತ ಲೇವಡಿ ಅಪಹಾಸ್ಯಗಳ ಮೂಲಕ ಅವರೊಬ್ಬ ಪೆದ್ದ ಮಂದಬುದ್ದಿಯವ ಎಂದು ಮಾಧ್ಯಮಗಳಲ್ಲಿ ಬಿಂಬಿಸುತ್ತಲೇ ಇರಬೇಕು, ಇದರಿಂದ ಹೊಸ ಪೀಳಿಗೆಯ ಯುವ ಮತದಾರರು ಅವರನ್ನು ಹಗುರವಾಗಿ ಪರಿಗಣಿಸುತ್ತಾರೆ ಹಾಗೂ ಅವರಿಗೆ ಹೆಚ್ಚು ಮಹತ್ವ ಮತ್ತು ಗೌರವ ಕೊಡುವುದಿಲ್ಲ, ಕೊನೆಗೆ ಇದು ಕಾಂಗ್ರೆಸ್ಸಿಗೆ ನೆಗೆಟಿವ್ ವೋಟ್ ಆಗಿ ಪರಿಣಮಿಸುತ್ತದೆ ಎಂಬುದು ನಮ್ಮ ಬಿ‌ಜೆ‌ಪಿ ಪ್ರಚಾರ ವಿಭಾಗದವರ ಮನೋವೈಜ್ನಾನಿಕ ರಣತಂತ್ರ ವಾಗಿದೆ ಎಂದು ಅವರು ಗುಟ್ಟು ಬಿಟ್ಟುಕೊಟ್ಟರು. ಅದಕ್ಕಾಗಿಯೇ ಬಿ‌ಜೆ‌ಪಿ ಐ‌ಟಿ ಸೆಲ್ ನವರೇ ರಾಹುಲ್ ಗಾಂಧಿಗೆ ‘ಪಪ್ಪು’ ಚೋಟಾ ಭೀಮ್ ಎಂದು ಅಡ್ಡ ಹೆಸರಿಟ್ಟು ಲೇವಡಿ ಶುರು ಮಾಡಿದ್ದು, ಅದನ್ನೇ ನಾವೂ ಅನುಸರಿಸಬೇಕು ಎಂದು ನಮಗೆ ಆದೇಶವಿದೆ ಎಂದು ಆ ಮಿತ್ರರು ನನಗೆ ಹೇಳಿದರು.

ಅರೆಸಾಕ್ಷರ ಮೋದಿಗೆ “ರಾಜಕೀಯ ತಂತ್ರಗಾರಿಕೆ” ಗೊತ್ತಿದೆಯೇ ವಿನಹ ನಮ್ಮ ಬೃಹತ್ ದೇಶದ ಆರ್ಥಿಕತೆಯ ಬಗ್ಗೆ ಮತ್ತು ಸಾಮಾಜಿಕ ಸಮಸ್ಯೆಗಳ ಬಗ್ಗೆ ಸ್ವಲ್ಪವೂ ಜ್ಞಾನವಿಲ್ಲ, ಅವರು ಗುಜರಾತ್ ಮುಖ್ಯ ಮಂತ್ರಿ ಆಗುವುದಕ್ಕೇ ಮೊದಲು ಒಂದು ಪಂಚಾಯತ್ ಸದಸ್ಯನಾಗಿಯೂ ಜನ ಸೇವೆ ಮಾಡಿಲ್ಲ. ಕೇವಲ ಆಗಿನ ಗುಜರಾತ್ ಮುಖ್ಯಮಂತ್ರಿಗಳಾದ ಕೇಶುಭಾಯಿ ಪಟೇಲ್, ಸುರೇಶ್ ಮೆಹತಾ, ಮತ್ತು ಮಾಧವ ಸಿಂಹ್ ಸೋಲಂಕಿ ಇವರುಗಳ ಬೆನ್ನಿಗೆ ಮೋದಿ ಇರಿಯುತ್ತಾ ಬಂದು 2001 ರಲ್ಲಿ ನೇರವಾಗಿ ಮುಖ್ಯಮಂತ್ರಿ ಖುರ್ಚಿ ಕಬಳಿಸಿದ್ದು. ಮತ್ತೂ ನಂತರ ಅದನ್ನು ಉಳಿಸಿಕೊಳ್ಳಲು ಉದ್ದೇಶಪೂರ್ವಕವಾಗಿ ಕರಾಳ ಗೋಧ್ರಾಕಾಂಡ ರಚಿಸಿದ್ದು ಅಷ್ಟೇ. ಸ್ವಲ್ಪವೂ ಆರ್ಥಿಕ ತಜ್ನತೆ ಇಲ್ಲದರಿಂದಾಗಿಯೇ ಮೋದಿ ಪೆದ್ದು ಪೆದ್ದಾಗಿ ನೋಟು ರದ್ದತಿ ಮಾಡಿ ಇಡೀ ದೇಶದ ಆರ್ಥಿಕತೆಗೆ ಮಾರಣಾಂತಿಕ ಪೆಟ್ಟು ಕೊಟ್ಟಿದ್ದು ನಿಜ ಎಂದು ಆ ಸರ್ದಾರ್ಜಿ ಜೋಕುಪ್ರಿಯರು ಒಪ್ಪಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...