Homeಮುಖಪುಟರಾಹುಲ್ ಗಾಂಧಿ ಮೇಲಿನ ಪ್ರತಿ ಜೋಕಿಗೆ ಬಿಜೆಪಿ ಐಟಿ ಸೆಲ್ ನೂರು ರೂ ಕೊಡುತ್ತೆ

ರಾಹುಲ್ ಗಾಂಧಿ ಮೇಲಿನ ಪ್ರತಿ ಜೋಕಿಗೆ ಬಿಜೆಪಿ ಐಟಿ ಸೆಲ್ ನೂರು ರೂ ಕೊಡುತ್ತೆ

- Advertisement -
- Advertisement -

| ಪ್ರವೀಣ್ ಎಸ್ ಶೆಟ್ಟಿ |
ನಾನು ಕಳೆದ ತಿಂಗಳು ಮಂಗಳೂರಿನ ಒಂದು ಪುಸ್ತಕದ ಮಳಿಗೆಯಲ್ಲಿ ನನಗೆ ಬೇಕಾಗಿದ್ದ ಒಂದು ಪುಸ್ತಕ ಹುಡುಕುತ್ತಿದ್ದೆ. ಅಲ್ಲಿ ನನಗೆ ಒಬ್ಬ ಹಳೆಯ ಪರಿಚಿತರು ಸಿಕ್ಕಿದರು. ಅವರು ನನ್ನ ಜತೆ ಮಾತನಾಡುತ್ತಾ, ನಿಮ್ಮ ಹತ್ತಿರ ಯಾವುದಾದರೂ ಉತ್ತಮ ಸರ್ದಾರ್ಜಿ ಜೋಕ್ ಪುಸ್ತಕಗಳು ಇದ್ದರೆ ಕೊಡಿ ಎಂದು ಹೇಳಿದರು. 55 ವರ್ಷ ದಾಟಿದ ಅವರಿಗೆ ಜೋಕ್ ಪುಸ್ತಕಗಳ ಬಗ್ಗೆ ಯಾಕೆ ಒಮ್ಮೆಲೇ ಆಸಕ್ತಿ ಹುಟ್ಟಿತು ಎಂದು ನನಗೆ ಆಶ್ಚರ್ಯವಾಯಿತು. ಹಾಗಾಗಿ ನಾನು ಅವರಲ್ಲಿ ಕೇಳಿದೆ- ನಿಮಗೆ ಈ ಇಳಿ ವಯಸ್ಸಿನಲ್ಲಿ ಜೋಕುಗಳ ಪುಸ್ತಕ ಯಾಕೆ ಬೇಕಾಯಿತು ಎಂದು.

ಆಗ ಅವರು ಮುಜುಗರ ಪಡುತ್ತಾ -ನಾನು ಬಿ‌ಜೆ‌ಪಿ ಐ‌ಟಿ ಸೆಲ್ ನಲ್ಲಿ ಕೆಲಸ ಮಾಡುತ್ತಿದ್ದೇನೆ, ಅವರು ಕಳುಹಿಸುವ ಪೋಸ್ಟ್ ಗಳನ್ನು ಸಾಮಾಜಿಕ ಮೀಡಿಯಾದಲ್ಲಿ ಯಥಾವತ್ ಕಾಪಿ ಪೇಸ್ಟ್ ಫಾರ್ವರ್ಡ್ ಮಾಡುವುದೇ ನನ್ನ ಕೆಲಸ. ಒಂದು ಪೋಸ್ಟ್ ಗೆ ರೂ.3/- ಕೊಡುತ್ತಾರೆ. ಯೂಟೂಬ್ ನಲ್ಲಿ ರಾಜಕೀಯ ವಿಡಿಯೋಗಳ ಕೆಳಗೆ ಹಾಕುವ ಹೊಲಸು ಬೈಗುಳಗಳ ಕಾಮೆಂಟಿಗೂ ನಮಗೆ ಹಣ ಸಿಗುತ್ತದೆ. ಮೋದಿಗೆ ತನ್ನ ಭಕ್ತರು ಎದುರಾಳಿಗಳಿಗೆ ಕೊಡುವ ಹೊಲಸು ಬೈಗುಳ ಓದುವುದೆಂದರೆ ತುಂಬಾ ಇಷ್ಟವಂತೆ, ಅವರು ದಿನದ 12 ಗಂಟೆ ಸಾಮಾಜಿಕ ಮೀಡಿಯಾ ಜಾಲಾಡುವುದರಲ್ಲಿಯೇ ಕಳೆಯುತ್ತಾರೆ ಎಂದು ಅವರು ನನಗೆ ಹೇಳಿದರು. (ಇದನ್ನೇ ಅವರ ಭಕ್ತರು ಮೋದಿ ದಿನಕ್ಕೆ 18 ಗಂಟೆ ಕೆಲಸ ಮಾಡುತ್ತಾರೆ ಎಂದು ಬಡಾಯಿ ಕೊಚ್ಚುವುದು).

ಅವರಿಗೆ ಜೋಕ್ ಪುಸ್ತಕಗಳು ಬೇಕಿರುವುದಕ್ಕೆ ಕಾರಣ ಅವುಗಳಲ್ಲಿಯ ಜೋಕುಗಳನ್ನು ಸ್ವಲ್ಪ ಬದಲಾವಣೆ ಮಾಡಿ ಅವು ರಾಹುಲ್ ಗಾಂಧಿಗೆ ಅನ್ವಯ ಆಗುವಂತೆ ತಿರುಚಿ ಬಿ‌ಜೆ‌ಪಿ ಐ‌ಟಿ ಸೆಲ್ ಗೆ ಕಳುಹಿಸಿದರೆ ಒಂದು ಒಳ್ಳೆಯ ಜೋಕಿಗೆ ಕನಿಷ್ಠ ರೂ. 100/- ಕೊಡುತ್ತಾರೆ, ಹೊಸತರದ ಉತ್ತಮ ಜೋಕ್ ಆಗಿದ್ದರೆ ರೂ 200/- ಸಹಾ ಕೊಡುತ್ತಾರಂತೆ. ಅದಕ್ಕಾಗಿ ಅವರು ಜೋಕ್ ಪುಸ್ತಕಗಳನ್ನು ಹುಡುಕುತ್ತಿದ್ದದ್ದು.

ರಾಹುಲ್ ಗಾಂಧಿ ಕ್ಯಾಂಬ್ರೀಡ್ಜ್ ನಲ್ಲಿ ಎಂ.ಫಿಲ್ ಮಾಡಿದ್ದಾರೆ, ಜತೆಗೆ ಬಿಜ್ನೆಸ್ ಮ್ಯಾನೇಜ್ಮೆಂಟ್ ಕೋರ್ಸ್ ಸಹಾ ಮಾಡಿದ್ದಾರೆ. ಲಂಡನ್ ನಲ್ಲಿ ಒಂದು ಟೆಕ್ ಕಂಪನಿಯಲ್ಲಿ ಡೈರೆಕ್ಟರ್ ಸಹಾ ಆಗಿದ್ದರು. ಅವರನ್ನು ಲೇವಡಿ ಮಾಡುವಷ್ಟು ಯೋಗ್ಯತೆ ಪಿ‌ಯೂ‌ಸಿಯಲ್ಲಿ ಮೂರು ಸಾರಿ ಫೇಲಾಗಿ ಶಾಲೆ ಅರ್ಧಕ್ಕೆ ಬಿಟ್ಟಿರುವ ಸ್ವತಃ ನಿಮಗೆ ಅಥವಾ ನಿಮ್ಮ ಅರೆಸಾಕ್ಷರ ಮೋದಿಗೆ ಇದೆಯೇ? ಗುಜರಾತಿ ಮಾಧ್ಯಮ ಶಾಲೆಯಲ್ಲಿ ಕೇವಲ ಎಂಟನೇ ಕ್ಲಾಸ್ ವರೆಗೆ ಮಾತ್ರ ಕಲಿತಿರುವ ಮೋದಿಗೆ ಸರಿಯಾಗಿ ಇಂಗ್ಲೀಷ್ ಸಹಾ ಮಾತನಾಡಲು ಬರುವುದಿಲ್ಲ, ಆದರೂ ನೀವು ಅವಿದ್ಯಾವಂತ ಮೋದಿಗಾಗಿ ವಿದ್ಯಾವಂತ ರಾಹುಲ್ ಗಾಂಧಿಯನ್ನು ಲೇವಡಿ ಮಾಡುವುದು ಸರಿಯೇ? ಎಂದು ನಾನು ಕೇಳಿದೆ.

ಅದಕ್ಕೆ ಅವರು – ಹೌದು ನೀವು ಹೇಳುವುದು ಸರಿ. ರಾಹುಲ್ ಗಾಂಧಿ ಮೋದಿಗಿಂತ ಹೆಚ್ಚು ವಿದ್ಯಾವಂತ, ಬುದ್ದಿವಂತ ಮತ್ತು ಸಂಭಾವಿತ, ಆದರೆ ಸತತ ಲೇವಡಿ ಅಪಹಾಸ್ಯಗಳ ಮೂಲಕ ಅವರೊಬ್ಬ ಪೆದ್ದ ಮಂದಬುದ್ದಿಯವ ಎಂದು ಮಾಧ್ಯಮಗಳಲ್ಲಿ ಬಿಂಬಿಸುತ್ತಲೇ ಇರಬೇಕು, ಇದರಿಂದ ಹೊಸ ಪೀಳಿಗೆಯ ಯುವ ಮತದಾರರು ಅವರನ್ನು ಹಗುರವಾಗಿ ಪರಿಗಣಿಸುತ್ತಾರೆ ಹಾಗೂ ಅವರಿಗೆ ಹೆಚ್ಚು ಮಹತ್ವ ಮತ್ತು ಗೌರವ ಕೊಡುವುದಿಲ್ಲ, ಕೊನೆಗೆ ಇದು ಕಾಂಗ್ರೆಸ್ಸಿಗೆ ನೆಗೆಟಿವ್ ವೋಟ್ ಆಗಿ ಪರಿಣಮಿಸುತ್ತದೆ ಎಂಬುದು ನಮ್ಮ ಬಿ‌ಜೆ‌ಪಿ ಪ್ರಚಾರ ವಿಭಾಗದವರ ಮನೋವೈಜ್ನಾನಿಕ ರಣತಂತ್ರ ವಾಗಿದೆ ಎಂದು ಅವರು ಗುಟ್ಟು ಬಿಟ್ಟುಕೊಟ್ಟರು. ಅದಕ್ಕಾಗಿಯೇ ಬಿ‌ಜೆ‌ಪಿ ಐ‌ಟಿ ಸೆಲ್ ನವರೇ ರಾಹುಲ್ ಗಾಂಧಿಗೆ ‘ಪಪ್ಪು’ ಚೋಟಾ ಭೀಮ್ ಎಂದು ಅಡ್ಡ ಹೆಸರಿಟ್ಟು ಲೇವಡಿ ಶುರು ಮಾಡಿದ್ದು, ಅದನ್ನೇ ನಾವೂ ಅನುಸರಿಸಬೇಕು ಎಂದು ನಮಗೆ ಆದೇಶವಿದೆ ಎಂದು ಆ ಮಿತ್ರರು ನನಗೆ ಹೇಳಿದರು.

ಅರೆಸಾಕ್ಷರ ಮೋದಿಗೆ “ರಾಜಕೀಯ ತಂತ್ರಗಾರಿಕೆ” ಗೊತ್ತಿದೆಯೇ ವಿನಹ ನಮ್ಮ ಬೃಹತ್ ದೇಶದ ಆರ್ಥಿಕತೆಯ ಬಗ್ಗೆ ಮತ್ತು ಸಾಮಾಜಿಕ ಸಮಸ್ಯೆಗಳ ಬಗ್ಗೆ ಸ್ವಲ್ಪವೂ ಜ್ಞಾನವಿಲ್ಲ, ಅವರು ಗುಜರಾತ್ ಮುಖ್ಯ ಮಂತ್ರಿ ಆಗುವುದಕ್ಕೇ ಮೊದಲು ಒಂದು ಪಂಚಾಯತ್ ಸದಸ್ಯನಾಗಿಯೂ ಜನ ಸೇವೆ ಮಾಡಿಲ್ಲ. ಕೇವಲ ಆಗಿನ ಗುಜರಾತ್ ಮುಖ್ಯಮಂತ್ರಿಗಳಾದ ಕೇಶುಭಾಯಿ ಪಟೇಲ್, ಸುರೇಶ್ ಮೆಹತಾ, ಮತ್ತು ಮಾಧವ ಸಿಂಹ್ ಸೋಲಂಕಿ ಇವರುಗಳ ಬೆನ್ನಿಗೆ ಮೋದಿ ಇರಿಯುತ್ತಾ ಬಂದು 2001 ರಲ್ಲಿ ನೇರವಾಗಿ ಮುಖ್ಯಮಂತ್ರಿ ಖುರ್ಚಿ ಕಬಳಿಸಿದ್ದು. ಮತ್ತೂ ನಂತರ ಅದನ್ನು ಉಳಿಸಿಕೊಳ್ಳಲು ಉದ್ದೇಶಪೂರ್ವಕವಾಗಿ ಕರಾಳ ಗೋಧ್ರಾಕಾಂಡ ರಚಿಸಿದ್ದು ಅಷ್ಟೇ. ಸ್ವಲ್ಪವೂ ಆರ್ಥಿಕ ತಜ್ನತೆ ಇಲ್ಲದರಿಂದಾಗಿಯೇ ಮೋದಿ ಪೆದ್ದು ಪೆದ್ದಾಗಿ ನೋಟು ರದ್ದತಿ ಮಾಡಿ ಇಡೀ ದೇಶದ ಆರ್ಥಿಕತೆಗೆ ಮಾರಣಾಂತಿಕ ಪೆಟ್ಟು ಕೊಟ್ಟಿದ್ದು ನಿಜ ಎಂದು ಆ ಸರ್ದಾರ್ಜಿ ಜೋಕುಪ್ರಿಯರು ಒಪ್ಪಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...