Homeಮುಖಪುಟಐದು ತಿಂಗಳಲ್ಲಿ ಮತದಾರರ ಪಟ್ಟಿಗೆ 41 ಲಕ್ಷ ಹೊಸ ಮತದಾರರ ಸೇರ್ಪಡೆ ಹೇಗೆ ಸಾಧ್ಯ?: ಪವನ್...

ಐದು ತಿಂಗಳಲ್ಲಿ ಮತದಾರರ ಪಟ್ಟಿಗೆ 41 ಲಕ್ಷ ಹೊಸ ಮತದಾರರ ಸೇರ್ಪಡೆ ಹೇಗೆ ಸಾಧ್ಯ?: ಪವನ್ ಖೇರಾ ಪ್ರಶ್ನೆ

- Advertisement -
- Advertisement -

ಮಹಾರಾಷ್ಟ್ರ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂಬ ರಾಹುಲ್ ಗಾಂಧಿಯವರ ಆರೋಪವನ್ನು ಬೆಂಬಲಿಸಿದ ಕಾಂಗ್ರೆಸ್ ನಾಯಕ ಪವನ್ ಖೇರಾ, 2024ರ ವಿಧಾನಸಭಾ ಚುನಾವಣೆಗೆ ಹಿಂದಿನ ಐದು ತಿಂಗಳಲ್ಲಿ ಮಹಾರಾಷ್ಟ್ರದ ಮತದಾರರ ಪಟ್ಟಿಗೆ 41 ಲಕ್ಷ ಹೊಸ ಮತದಾರರನ್ನು ಸೇರಿಸಲಾಗಿದೆ. ಇದು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

“ನಮ್ಮ ಪ್ರಶ್ನೆಗಳು ಬಹಳ ಸ್ಪಷ್ಟವಾಗಿವೆ… 2019 ರಿಂದ 2024 ರವರೆಗಿನ ಐದು ವರ್ಷಗಳಲ್ಲಿ, ಮಹಾರಾಷ್ಟ್ರದಲ್ಲಿ 31 ಲಕ್ಷ ಹೊಸ ಮತದಾರರನ್ನು ಮತದಾರರ ಪಟ್ಟಿಗೆ ಸೇರಿಸಲಾಗಿದೆ. ಹೀಗಿರುವಾಗ, ಕೇವಲ ಐದು ತಿಂಗಳಲ್ಲಿ 41 ಲಕ್ಷ ಹೊಸ ಮತದಾರರನ್ನು ಸೇರಿಸಲು ಹೇಗೆ ಸಾಧ್ಯ? ಎಂದು ಖೇರಾ ಕೇಳಿದ್ದಾರೆ.

ಸುದ್ದಿ ಸಂಸ್ಥೆ ಎಎನ್‌ಐ ಜೊತೆ ಮಾತನಾಡಿದ ಅವರು, “ಮಹಾರಾಷ್ಟ್ರ ಚುನಾವಣೆಯಲ್ಲಿ ಸಂಜೆ 5 ಗಂಟೆಯ ನಂತರ ಮತದಾನದ ಶೇಕಡಾವಾರು ಪ್ರಮಾಣ ಭಾರೀ ಏರಿಕೆಯಾದ ಬಗ್ಗೆಯೂ ಪ್ರಶ್ನೆಗಳನ್ನು ಎತ್ತಿದ್ದಾರೆ.

“ಸಂಜೆ 5 ಗಂಟೆಗೆ ಶೇ. 58.22ರಷ್ಟು ಮತದಾನ ಪ್ರಮಾಣ ತೋರಿಸಲಾಗಿತ್ತು. ಅಂತಿಮ ಮತದಾನ ಪ್ರಮಾಣ ಶೇ. 66ರಷ್ಷು ಆಗಿತ್ತು. ಹಾಗಿದ್ದರೆ, ಒಂದು ಗಂಟೆಯ ಅವಧಿಯಲ್ಲಿ ಶೇ. 8 ರಷ್ಟು ಹೆಚ್ಚಳ ಹೇಗೆ ಸಾಧ್ಯ? ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋತ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದ ಅದೇ 12,000 ಬೂತ್‌ಗಳಿಂದ ಹೊಸ ಮತದಾರರು ಬರಲು ಹೇಗೆ ಸಾಧ್ಯ?” ಎಂದು ಖೇರಾ ಕೇಳಿ ಪ್ರಶ್ನಿಸಿದ್ದಾರೆ.

ಮುಖ್ಯ ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡುವ ಸಮಿತಿಯಿಂದ ಭಾರತದ ಮುಖ್ಯ ನ್ಯಾಯಮೂರ್ತಿಗಳನ್ನು ಏಕೆ ತೆಗೆದುಹಾಕಲಾಯಿತು? ಎಂದು ಪ್ರಶ್ನಿಸಿದ ಪವನ್ ಖೇರಾ ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಮಹಾರಾಷ್ಟ್ರ ಚುನಾವಣೆಗೆ ಸಂಬಂಧಿಸಿದ ರಾಹುಲ್ ಗಾಂಧಿಯವರ ಆರೋಪಗಳನ್ನು “ಕಾನೂನಿನ ನಿಯಮಕ್ಕೆ ಅವಮಾನ” ಎಂದು ಚುನಾವಣಾ ಆಯೋಗ ಶನಿವಾರ ಬಣ್ಣಿಸಿದೆ.

“ಮಹಾರಾಷ್ಟ್ರದ ಮತದಾರರ ಪಟ್ಟಿಯ ವಿರುದ್ಧ ಎತ್ತಲಾದ ಆಧಾರರಹಿತ ಆರೋಪಗಳು ಕಾನೂನಿನ ನಿಯಮಕ್ಕೆ ವಿರುದ್ಧವಾಗಿವೆ. ಚುನಾವಣಾ ಆಯೋಗವು ಡಿಸೆಂಬರ್ 24, 2024 ರಂದು ಕಾಂಗ್ರೆಸ್‌ಗೆ ನೀಡಿದ ಉತ್ತರದಲ್ಲಿ ಈ ಎಲ್ಲಾ ಸಂಗತಿಗಳು ಇವೆ. ಅಲ್ಲದೆ ಆಯೋಗದ ವೆಬ್‌ಸೈಟ್‌ನಲ್ಲಿಯೂ ಮಾಹಿತಿ ಲಭ್ಯವಿದೆ. ಮತ್ತೆ ಮತ್ತೆ ಅನುಮಾನಗಳನ್ನು ವ್ಯಕ್ತಪಡಿಸುವಾಗ ಈ ಎಲ್ಲಾ ಸಂಗತಿಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗುತ್ತಿದೆ ಎಂದು ತೋರುತ್ತದೆ,” ಎಂದು ಚುನಾವಣಾ ಆಯೋಗ ಹೇಳಿದೆ.

“ಯಾರಾದರೂ ತಪ್ಪು ಮಾಹಿತಿಯನ್ನು ಹರಡಿದರೆ, ಅದು ಕಾನೂನಿನ ಬಗ್ಗೆ ಅಗೌರವ ತೋರುವುದಲ್ಲದೆ, ಅವರ ಸ್ವಂತ ರಾಜಕೀಯ ಪಕ್ಷದಿಂದ ನೇಮಕಗೊಂಡ ಸಾವಿರಾರು ಪ್ರತಿನಿಧಿಗಳಿಗೆ ಅಪಖ್ಯಾತಿ ತರುತ್ತದೆ. ಚುನಾವಣೆಯ ಸಮಯದಲ್ಲಿ ದಣಿವರಿಯದೆ ಮತ್ತು ಪಾರದರ್ಶಕವಾಗಿ ಕೆಲಸ ಮಾಡಿದ ಲಕ್ಷಾಂತರ ಚುನಾವಣಾ ಸಿಬ್ಬಂದಿಯನ್ನು ಅವಮಾನಿಸದಂತಾಗುತ್ತದೆ. ಮತದಾರರ ಪ್ರತಿಕೂಲ ತೀರ್ಪಿನ ನಂತರ, ಚುನಾವಣಾ ಆಯೋಗವು ರಾಜಿಯಾಗಿದೆ ಎಂದು ಹೇಳುವ ಮೂಲಕ ಅದೇ ವಿಷಯವನ್ನು ಮತ್ತೆ ಮುನ್ನೆಲೆಗೆ ತರಲು ಪ್ರಯತ್ನಿಸುವುದು ಸಂಪೂರ್ಣವಾಗಿ ಅಸಂಬದ್ಧವಾಗಿದೆ” ಎಂದಿದೆ.

ಮಣಿಪುರ ಮತ್ತೆ ಉದ್ವಿಗ್ನ: ಐದು ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿ, ಇಂಟರ್ನೆಟ್ ಸ್ಥಗಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...