Homeಮುಖಪುಟಐದು ತಿಂಗಳಲ್ಲಿ ಮತದಾರರ ಪಟ್ಟಿಗೆ 41 ಲಕ್ಷ ಹೊಸ ಮತದಾರರ ಸೇರ್ಪಡೆ ಹೇಗೆ ಸಾಧ್ಯ?: ಪವನ್...

ಐದು ತಿಂಗಳಲ್ಲಿ ಮತದಾರರ ಪಟ್ಟಿಗೆ 41 ಲಕ್ಷ ಹೊಸ ಮತದಾರರ ಸೇರ್ಪಡೆ ಹೇಗೆ ಸಾಧ್ಯ?: ಪವನ್ ಖೇರಾ ಪ್ರಶ್ನೆ

- Advertisement -
- Advertisement -

ಮಹಾರಾಷ್ಟ್ರ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂಬ ರಾಹುಲ್ ಗಾಂಧಿಯವರ ಆರೋಪವನ್ನು ಬೆಂಬಲಿಸಿದ ಕಾಂಗ್ರೆಸ್ ನಾಯಕ ಪವನ್ ಖೇರಾ, 2024ರ ವಿಧಾನಸಭಾ ಚುನಾವಣೆಗೆ ಹಿಂದಿನ ಐದು ತಿಂಗಳಲ್ಲಿ ಮಹಾರಾಷ್ಟ್ರದ ಮತದಾರರ ಪಟ್ಟಿಗೆ 41 ಲಕ್ಷ ಹೊಸ ಮತದಾರರನ್ನು ಸೇರಿಸಲಾಗಿದೆ. ಇದು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

“ನಮ್ಮ ಪ್ರಶ್ನೆಗಳು ಬಹಳ ಸ್ಪಷ್ಟವಾಗಿವೆ… 2019 ರಿಂದ 2024 ರವರೆಗಿನ ಐದು ವರ್ಷಗಳಲ್ಲಿ, ಮಹಾರಾಷ್ಟ್ರದಲ್ಲಿ 31 ಲಕ್ಷ ಹೊಸ ಮತದಾರರನ್ನು ಮತದಾರರ ಪಟ್ಟಿಗೆ ಸೇರಿಸಲಾಗಿದೆ. ಹೀಗಿರುವಾಗ, ಕೇವಲ ಐದು ತಿಂಗಳಲ್ಲಿ 41 ಲಕ್ಷ ಹೊಸ ಮತದಾರರನ್ನು ಸೇರಿಸಲು ಹೇಗೆ ಸಾಧ್ಯ? ಎಂದು ಖೇರಾ ಕೇಳಿದ್ದಾರೆ.

ಸುದ್ದಿ ಸಂಸ್ಥೆ ಎಎನ್‌ಐ ಜೊತೆ ಮಾತನಾಡಿದ ಅವರು, “ಮಹಾರಾಷ್ಟ್ರ ಚುನಾವಣೆಯಲ್ಲಿ ಸಂಜೆ 5 ಗಂಟೆಯ ನಂತರ ಮತದಾನದ ಶೇಕಡಾವಾರು ಪ್ರಮಾಣ ಭಾರೀ ಏರಿಕೆಯಾದ ಬಗ್ಗೆಯೂ ಪ್ರಶ್ನೆಗಳನ್ನು ಎತ್ತಿದ್ದಾರೆ.

“ಸಂಜೆ 5 ಗಂಟೆಗೆ ಶೇ. 58.22ರಷ್ಟು ಮತದಾನ ಪ್ರಮಾಣ ತೋರಿಸಲಾಗಿತ್ತು. ಅಂತಿಮ ಮತದಾನ ಪ್ರಮಾಣ ಶೇ. 66ರಷ್ಷು ಆಗಿತ್ತು. ಹಾಗಿದ್ದರೆ, ಒಂದು ಗಂಟೆಯ ಅವಧಿಯಲ್ಲಿ ಶೇ. 8 ರಷ್ಟು ಹೆಚ್ಚಳ ಹೇಗೆ ಸಾಧ್ಯ? ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋತ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದ ಅದೇ 12,000 ಬೂತ್‌ಗಳಿಂದ ಹೊಸ ಮತದಾರರು ಬರಲು ಹೇಗೆ ಸಾಧ್ಯ?” ಎಂದು ಖೇರಾ ಕೇಳಿ ಪ್ರಶ್ನಿಸಿದ್ದಾರೆ.

ಮುಖ್ಯ ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡುವ ಸಮಿತಿಯಿಂದ ಭಾರತದ ಮುಖ್ಯ ನ್ಯಾಯಮೂರ್ತಿಗಳನ್ನು ಏಕೆ ತೆಗೆದುಹಾಕಲಾಯಿತು? ಎಂದು ಪ್ರಶ್ನಿಸಿದ ಪವನ್ ಖೇರಾ ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಮಹಾರಾಷ್ಟ್ರ ಚುನಾವಣೆಗೆ ಸಂಬಂಧಿಸಿದ ರಾಹುಲ್ ಗಾಂಧಿಯವರ ಆರೋಪಗಳನ್ನು “ಕಾನೂನಿನ ನಿಯಮಕ್ಕೆ ಅವಮಾನ” ಎಂದು ಚುನಾವಣಾ ಆಯೋಗ ಶನಿವಾರ ಬಣ್ಣಿಸಿದೆ.

“ಮಹಾರಾಷ್ಟ್ರದ ಮತದಾರರ ಪಟ್ಟಿಯ ವಿರುದ್ಧ ಎತ್ತಲಾದ ಆಧಾರರಹಿತ ಆರೋಪಗಳು ಕಾನೂನಿನ ನಿಯಮಕ್ಕೆ ವಿರುದ್ಧವಾಗಿವೆ. ಚುನಾವಣಾ ಆಯೋಗವು ಡಿಸೆಂಬರ್ 24, 2024 ರಂದು ಕಾಂಗ್ರೆಸ್‌ಗೆ ನೀಡಿದ ಉತ್ತರದಲ್ಲಿ ಈ ಎಲ್ಲಾ ಸಂಗತಿಗಳು ಇವೆ. ಅಲ್ಲದೆ ಆಯೋಗದ ವೆಬ್‌ಸೈಟ್‌ನಲ್ಲಿಯೂ ಮಾಹಿತಿ ಲಭ್ಯವಿದೆ. ಮತ್ತೆ ಮತ್ತೆ ಅನುಮಾನಗಳನ್ನು ವ್ಯಕ್ತಪಡಿಸುವಾಗ ಈ ಎಲ್ಲಾ ಸಂಗತಿಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗುತ್ತಿದೆ ಎಂದು ತೋರುತ್ತದೆ,” ಎಂದು ಚುನಾವಣಾ ಆಯೋಗ ಹೇಳಿದೆ.

“ಯಾರಾದರೂ ತಪ್ಪು ಮಾಹಿತಿಯನ್ನು ಹರಡಿದರೆ, ಅದು ಕಾನೂನಿನ ಬಗ್ಗೆ ಅಗೌರವ ತೋರುವುದಲ್ಲದೆ, ಅವರ ಸ್ವಂತ ರಾಜಕೀಯ ಪಕ್ಷದಿಂದ ನೇಮಕಗೊಂಡ ಸಾವಿರಾರು ಪ್ರತಿನಿಧಿಗಳಿಗೆ ಅಪಖ್ಯಾತಿ ತರುತ್ತದೆ. ಚುನಾವಣೆಯ ಸಮಯದಲ್ಲಿ ದಣಿವರಿಯದೆ ಮತ್ತು ಪಾರದರ್ಶಕವಾಗಿ ಕೆಲಸ ಮಾಡಿದ ಲಕ್ಷಾಂತರ ಚುನಾವಣಾ ಸಿಬ್ಬಂದಿಯನ್ನು ಅವಮಾನಿಸದಂತಾಗುತ್ತದೆ. ಮತದಾರರ ಪ್ರತಿಕೂಲ ತೀರ್ಪಿನ ನಂತರ, ಚುನಾವಣಾ ಆಯೋಗವು ರಾಜಿಯಾಗಿದೆ ಎಂದು ಹೇಳುವ ಮೂಲಕ ಅದೇ ವಿಷಯವನ್ನು ಮತ್ತೆ ಮುನ್ನೆಲೆಗೆ ತರಲು ಪ್ರಯತ್ನಿಸುವುದು ಸಂಪೂರ್ಣವಾಗಿ ಅಸಂಬದ್ಧವಾಗಿದೆ” ಎಂದಿದೆ.

ಮಣಿಪುರ ಮತ್ತೆ ಉದ್ವಿಗ್ನ: ಐದು ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿ, ಇಂಟರ್ನೆಟ್ ಸ್ಥಗಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...