Homeಮುಖಪುಟಐದು ತಿಂಗಳಲ್ಲಿ ಮತದಾರರ ಪಟ್ಟಿಗೆ 41 ಲಕ್ಷ ಹೊಸ ಮತದಾರರ ಸೇರ್ಪಡೆ ಹೇಗೆ ಸಾಧ್ಯ?: ಪವನ್...

ಐದು ತಿಂಗಳಲ್ಲಿ ಮತದಾರರ ಪಟ್ಟಿಗೆ 41 ಲಕ್ಷ ಹೊಸ ಮತದಾರರ ಸೇರ್ಪಡೆ ಹೇಗೆ ಸಾಧ್ಯ?: ಪವನ್ ಖೇರಾ ಪ್ರಶ್ನೆ

- Advertisement -
- Advertisement -

ಮಹಾರಾಷ್ಟ್ರ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂಬ ರಾಹುಲ್ ಗಾಂಧಿಯವರ ಆರೋಪವನ್ನು ಬೆಂಬಲಿಸಿದ ಕಾಂಗ್ರೆಸ್ ನಾಯಕ ಪವನ್ ಖೇರಾ, 2024ರ ವಿಧಾನಸಭಾ ಚುನಾವಣೆಗೆ ಹಿಂದಿನ ಐದು ತಿಂಗಳಲ್ಲಿ ಮಹಾರಾಷ್ಟ್ರದ ಮತದಾರರ ಪಟ್ಟಿಗೆ 41 ಲಕ್ಷ ಹೊಸ ಮತದಾರರನ್ನು ಸೇರಿಸಲಾಗಿದೆ. ಇದು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

“ನಮ್ಮ ಪ್ರಶ್ನೆಗಳು ಬಹಳ ಸ್ಪಷ್ಟವಾಗಿವೆ… 2019 ರಿಂದ 2024 ರವರೆಗಿನ ಐದು ವರ್ಷಗಳಲ್ಲಿ, ಮಹಾರಾಷ್ಟ್ರದಲ್ಲಿ 31 ಲಕ್ಷ ಹೊಸ ಮತದಾರರನ್ನು ಮತದಾರರ ಪಟ್ಟಿಗೆ ಸೇರಿಸಲಾಗಿದೆ. ಹೀಗಿರುವಾಗ, ಕೇವಲ ಐದು ತಿಂಗಳಲ್ಲಿ 41 ಲಕ್ಷ ಹೊಸ ಮತದಾರರನ್ನು ಸೇರಿಸಲು ಹೇಗೆ ಸಾಧ್ಯ? ಎಂದು ಖೇರಾ ಕೇಳಿದ್ದಾರೆ.

ಸುದ್ದಿ ಸಂಸ್ಥೆ ಎಎನ್‌ಐ ಜೊತೆ ಮಾತನಾಡಿದ ಅವರು, “ಮಹಾರಾಷ್ಟ್ರ ಚುನಾವಣೆಯಲ್ಲಿ ಸಂಜೆ 5 ಗಂಟೆಯ ನಂತರ ಮತದಾನದ ಶೇಕಡಾವಾರು ಪ್ರಮಾಣ ಭಾರೀ ಏರಿಕೆಯಾದ ಬಗ್ಗೆಯೂ ಪ್ರಶ್ನೆಗಳನ್ನು ಎತ್ತಿದ್ದಾರೆ.

“ಸಂಜೆ 5 ಗಂಟೆಗೆ ಶೇ. 58.22ರಷ್ಟು ಮತದಾನ ಪ್ರಮಾಣ ತೋರಿಸಲಾಗಿತ್ತು. ಅಂತಿಮ ಮತದಾನ ಪ್ರಮಾಣ ಶೇ. 66ರಷ್ಷು ಆಗಿತ್ತು. ಹಾಗಿದ್ದರೆ, ಒಂದು ಗಂಟೆಯ ಅವಧಿಯಲ್ಲಿ ಶೇ. 8 ರಷ್ಟು ಹೆಚ್ಚಳ ಹೇಗೆ ಸಾಧ್ಯ? ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋತ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದ ಅದೇ 12,000 ಬೂತ್‌ಗಳಿಂದ ಹೊಸ ಮತದಾರರು ಬರಲು ಹೇಗೆ ಸಾಧ್ಯ?” ಎಂದು ಖೇರಾ ಕೇಳಿ ಪ್ರಶ್ನಿಸಿದ್ದಾರೆ.

ಮುಖ್ಯ ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡುವ ಸಮಿತಿಯಿಂದ ಭಾರತದ ಮುಖ್ಯ ನ್ಯಾಯಮೂರ್ತಿಗಳನ್ನು ಏಕೆ ತೆಗೆದುಹಾಕಲಾಯಿತು? ಎಂದು ಪ್ರಶ್ನಿಸಿದ ಪವನ್ ಖೇರಾ ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಮಹಾರಾಷ್ಟ್ರ ಚುನಾವಣೆಗೆ ಸಂಬಂಧಿಸಿದ ರಾಹುಲ್ ಗಾಂಧಿಯವರ ಆರೋಪಗಳನ್ನು “ಕಾನೂನಿನ ನಿಯಮಕ್ಕೆ ಅವಮಾನ” ಎಂದು ಚುನಾವಣಾ ಆಯೋಗ ಶನಿವಾರ ಬಣ್ಣಿಸಿದೆ.

“ಮಹಾರಾಷ್ಟ್ರದ ಮತದಾರರ ಪಟ್ಟಿಯ ವಿರುದ್ಧ ಎತ್ತಲಾದ ಆಧಾರರಹಿತ ಆರೋಪಗಳು ಕಾನೂನಿನ ನಿಯಮಕ್ಕೆ ವಿರುದ್ಧವಾಗಿವೆ. ಚುನಾವಣಾ ಆಯೋಗವು ಡಿಸೆಂಬರ್ 24, 2024 ರಂದು ಕಾಂಗ್ರೆಸ್‌ಗೆ ನೀಡಿದ ಉತ್ತರದಲ್ಲಿ ಈ ಎಲ್ಲಾ ಸಂಗತಿಗಳು ಇವೆ. ಅಲ್ಲದೆ ಆಯೋಗದ ವೆಬ್‌ಸೈಟ್‌ನಲ್ಲಿಯೂ ಮಾಹಿತಿ ಲಭ್ಯವಿದೆ. ಮತ್ತೆ ಮತ್ತೆ ಅನುಮಾನಗಳನ್ನು ವ್ಯಕ್ತಪಡಿಸುವಾಗ ಈ ಎಲ್ಲಾ ಸಂಗತಿಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗುತ್ತಿದೆ ಎಂದು ತೋರುತ್ತದೆ,” ಎಂದು ಚುನಾವಣಾ ಆಯೋಗ ಹೇಳಿದೆ.

“ಯಾರಾದರೂ ತಪ್ಪು ಮಾಹಿತಿಯನ್ನು ಹರಡಿದರೆ, ಅದು ಕಾನೂನಿನ ಬಗ್ಗೆ ಅಗೌರವ ತೋರುವುದಲ್ಲದೆ, ಅವರ ಸ್ವಂತ ರಾಜಕೀಯ ಪಕ್ಷದಿಂದ ನೇಮಕಗೊಂಡ ಸಾವಿರಾರು ಪ್ರತಿನಿಧಿಗಳಿಗೆ ಅಪಖ್ಯಾತಿ ತರುತ್ತದೆ. ಚುನಾವಣೆಯ ಸಮಯದಲ್ಲಿ ದಣಿವರಿಯದೆ ಮತ್ತು ಪಾರದರ್ಶಕವಾಗಿ ಕೆಲಸ ಮಾಡಿದ ಲಕ್ಷಾಂತರ ಚುನಾವಣಾ ಸಿಬ್ಬಂದಿಯನ್ನು ಅವಮಾನಿಸದಂತಾಗುತ್ತದೆ. ಮತದಾರರ ಪ್ರತಿಕೂಲ ತೀರ್ಪಿನ ನಂತರ, ಚುನಾವಣಾ ಆಯೋಗವು ರಾಜಿಯಾಗಿದೆ ಎಂದು ಹೇಳುವ ಮೂಲಕ ಅದೇ ವಿಷಯವನ್ನು ಮತ್ತೆ ಮುನ್ನೆಲೆಗೆ ತರಲು ಪ್ರಯತ್ನಿಸುವುದು ಸಂಪೂರ್ಣವಾಗಿ ಅಸಂಬದ್ಧವಾಗಿದೆ” ಎಂದಿದೆ.

ಮಣಿಪುರ ಮತ್ತೆ ಉದ್ವಿಗ್ನ: ಐದು ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿ, ಇಂಟರ್ನೆಟ್ ಸ್ಥಗಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...