Homeಮುಖಪುಟಐದು ತಿಂಗಳಲ್ಲಿ ಮತದಾರರ ಪಟ್ಟಿಗೆ 41 ಲಕ್ಷ ಹೊಸ ಮತದಾರರ ಸೇರ್ಪಡೆ ಹೇಗೆ ಸಾಧ್ಯ?: ಪವನ್...

ಐದು ತಿಂಗಳಲ್ಲಿ ಮತದಾರರ ಪಟ್ಟಿಗೆ 41 ಲಕ್ಷ ಹೊಸ ಮತದಾರರ ಸೇರ್ಪಡೆ ಹೇಗೆ ಸಾಧ್ಯ?: ಪವನ್ ಖೇರಾ ಪ್ರಶ್ನೆ

- Advertisement -
- Advertisement -

ಮಹಾರಾಷ್ಟ್ರ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂಬ ರಾಹುಲ್ ಗಾಂಧಿಯವರ ಆರೋಪವನ್ನು ಬೆಂಬಲಿಸಿದ ಕಾಂಗ್ರೆಸ್ ನಾಯಕ ಪವನ್ ಖೇರಾ, 2024ರ ವಿಧಾನಸಭಾ ಚುನಾವಣೆಗೆ ಹಿಂದಿನ ಐದು ತಿಂಗಳಲ್ಲಿ ಮಹಾರಾಷ್ಟ್ರದ ಮತದಾರರ ಪಟ್ಟಿಗೆ 41 ಲಕ್ಷ ಹೊಸ ಮತದಾರರನ್ನು ಸೇರಿಸಲಾಗಿದೆ. ಇದು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

“ನಮ್ಮ ಪ್ರಶ್ನೆಗಳು ಬಹಳ ಸ್ಪಷ್ಟವಾಗಿವೆ… 2019 ರಿಂದ 2024 ರವರೆಗಿನ ಐದು ವರ್ಷಗಳಲ್ಲಿ, ಮಹಾರಾಷ್ಟ್ರದಲ್ಲಿ 31 ಲಕ್ಷ ಹೊಸ ಮತದಾರರನ್ನು ಮತದಾರರ ಪಟ್ಟಿಗೆ ಸೇರಿಸಲಾಗಿದೆ. ಹೀಗಿರುವಾಗ, ಕೇವಲ ಐದು ತಿಂಗಳಲ್ಲಿ 41 ಲಕ್ಷ ಹೊಸ ಮತದಾರರನ್ನು ಸೇರಿಸಲು ಹೇಗೆ ಸಾಧ್ಯ? ಎಂದು ಖೇರಾ ಕೇಳಿದ್ದಾರೆ.

ಸುದ್ದಿ ಸಂಸ್ಥೆ ಎಎನ್‌ಐ ಜೊತೆ ಮಾತನಾಡಿದ ಅವರು, “ಮಹಾರಾಷ್ಟ್ರ ಚುನಾವಣೆಯಲ್ಲಿ ಸಂಜೆ 5 ಗಂಟೆಯ ನಂತರ ಮತದಾನದ ಶೇಕಡಾವಾರು ಪ್ರಮಾಣ ಭಾರೀ ಏರಿಕೆಯಾದ ಬಗ್ಗೆಯೂ ಪ್ರಶ್ನೆಗಳನ್ನು ಎತ್ತಿದ್ದಾರೆ.

“ಸಂಜೆ 5 ಗಂಟೆಗೆ ಶೇ. 58.22ರಷ್ಟು ಮತದಾನ ಪ್ರಮಾಣ ತೋರಿಸಲಾಗಿತ್ತು. ಅಂತಿಮ ಮತದಾನ ಪ್ರಮಾಣ ಶೇ. 66ರಷ್ಷು ಆಗಿತ್ತು. ಹಾಗಿದ್ದರೆ, ಒಂದು ಗಂಟೆಯ ಅವಧಿಯಲ್ಲಿ ಶೇ. 8 ರಷ್ಟು ಹೆಚ್ಚಳ ಹೇಗೆ ಸಾಧ್ಯ? ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋತ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದ ಅದೇ 12,000 ಬೂತ್‌ಗಳಿಂದ ಹೊಸ ಮತದಾರರು ಬರಲು ಹೇಗೆ ಸಾಧ್ಯ?” ಎಂದು ಖೇರಾ ಕೇಳಿ ಪ್ರಶ್ನಿಸಿದ್ದಾರೆ.

ಮುಖ್ಯ ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡುವ ಸಮಿತಿಯಿಂದ ಭಾರತದ ಮುಖ್ಯ ನ್ಯಾಯಮೂರ್ತಿಗಳನ್ನು ಏಕೆ ತೆಗೆದುಹಾಕಲಾಯಿತು? ಎಂದು ಪ್ರಶ್ನಿಸಿದ ಪವನ್ ಖೇರಾ ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಮಹಾರಾಷ್ಟ್ರ ಚುನಾವಣೆಗೆ ಸಂಬಂಧಿಸಿದ ರಾಹುಲ್ ಗಾಂಧಿಯವರ ಆರೋಪಗಳನ್ನು “ಕಾನೂನಿನ ನಿಯಮಕ್ಕೆ ಅವಮಾನ” ಎಂದು ಚುನಾವಣಾ ಆಯೋಗ ಶನಿವಾರ ಬಣ್ಣಿಸಿದೆ.

“ಮಹಾರಾಷ್ಟ್ರದ ಮತದಾರರ ಪಟ್ಟಿಯ ವಿರುದ್ಧ ಎತ್ತಲಾದ ಆಧಾರರಹಿತ ಆರೋಪಗಳು ಕಾನೂನಿನ ನಿಯಮಕ್ಕೆ ವಿರುದ್ಧವಾಗಿವೆ. ಚುನಾವಣಾ ಆಯೋಗವು ಡಿಸೆಂಬರ್ 24, 2024 ರಂದು ಕಾಂಗ್ರೆಸ್‌ಗೆ ನೀಡಿದ ಉತ್ತರದಲ್ಲಿ ಈ ಎಲ್ಲಾ ಸಂಗತಿಗಳು ಇವೆ. ಅಲ್ಲದೆ ಆಯೋಗದ ವೆಬ್‌ಸೈಟ್‌ನಲ್ಲಿಯೂ ಮಾಹಿತಿ ಲಭ್ಯವಿದೆ. ಮತ್ತೆ ಮತ್ತೆ ಅನುಮಾನಗಳನ್ನು ವ್ಯಕ್ತಪಡಿಸುವಾಗ ಈ ಎಲ್ಲಾ ಸಂಗತಿಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗುತ್ತಿದೆ ಎಂದು ತೋರುತ್ತದೆ,” ಎಂದು ಚುನಾವಣಾ ಆಯೋಗ ಹೇಳಿದೆ.

“ಯಾರಾದರೂ ತಪ್ಪು ಮಾಹಿತಿಯನ್ನು ಹರಡಿದರೆ, ಅದು ಕಾನೂನಿನ ಬಗ್ಗೆ ಅಗೌರವ ತೋರುವುದಲ್ಲದೆ, ಅವರ ಸ್ವಂತ ರಾಜಕೀಯ ಪಕ್ಷದಿಂದ ನೇಮಕಗೊಂಡ ಸಾವಿರಾರು ಪ್ರತಿನಿಧಿಗಳಿಗೆ ಅಪಖ್ಯಾತಿ ತರುತ್ತದೆ. ಚುನಾವಣೆಯ ಸಮಯದಲ್ಲಿ ದಣಿವರಿಯದೆ ಮತ್ತು ಪಾರದರ್ಶಕವಾಗಿ ಕೆಲಸ ಮಾಡಿದ ಲಕ್ಷಾಂತರ ಚುನಾವಣಾ ಸಿಬ್ಬಂದಿಯನ್ನು ಅವಮಾನಿಸದಂತಾಗುತ್ತದೆ. ಮತದಾರರ ಪ್ರತಿಕೂಲ ತೀರ್ಪಿನ ನಂತರ, ಚುನಾವಣಾ ಆಯೋಗವು ರಾಜಿಯಾಗಿದೆ ಎಂದು ಹೇಳುವ ಮೂಲಕ ಅದೇ ವಿಷಯವನ್ನು ಮತ್ತೆ ಮುನ್ನೆಲೆಗೆ ತರಲು ಪ್ರಯತ್ನಿಸುವುದು ಸಂಪೂರ್ಣವಾಗಿ ಅಸಂಬದ್ಧವಾಗಿದೆ” ಎಂದಿದೆ.

ಮಣಿಪುರ ಮತ್ತೆ ಉದ್ವಿಗ್ನ: ಐದು ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿ, ಇಂಟರ್ನೆಟ್ ಸ್ಥಗಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...