Homeಮುಖಪುಟಬಂಗಾಳಿ ಭಾಷಿಕ ಮುಸ್ಲಿಮರನ್ನು ಬಾಂಗ್ಲಾದೇಶಿಗಳು ಎನ್ನುವುದೇಕೆ?: ಮಾಣಿಕ್ ಸರ್ಕಾರ್ ಕಿಡಿ

ಬಂಗಾಳಿ ಭಾಷಿಕ ಮುಸ್ಲಿಮರನ್ನು ಬಾಂಗ್ಲಾದೇಶಿಗಳು ಎನ್ನುವುದೇಕೆ?: ಮಾಣಿಕ್ ಸರ್ಕಾರ್ ಕಿಡಿ

- Advertisement -
- Advertisement -

ಅಗರ್ತಲಾ: ಮಾಜಿ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್ ಅವರು ತ್ರಿಪುರಾದಲ್ಲಿ ಆಡಳಿತಾರೂಢ ಬಿಜೆಪಿ-ಆರ್‌ಎಸ್‌ಎಸ್ ಮೈತ್ರಿಕೂಟದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮತದಾರರ ಪಟ್ಟಿಗಳ ಪರಿಷ್ಕರಣೆ ಪ್ರಯತ್ನಗಳು “ಮುಸ್ಲಿಂ ವಿರೋಧಿ, ಮಹಿಳಾ ವಿರೋಧಿ ಮತ್ತು ದಲಿತ ವಿರೋಧಿ” ಕಾರ್ಯಸೂಚಿಯ ಒಂದು ಭಾಗ ಎಂದು ಅವರು ಖಂಡಿಸಿದ್ದಾರೆ. ಇದನ್ನು “ವಿಶೇಷ ತೀವ್ರ ಪರಿಷ್ಕರಣೆ (SIR)” ಎಂದು ಕರೆಯಲಾಗಿದ್ದರೂ, ಇದು ಸಂವಿಧಾನದ ಮೇಲಿನ ನೇರ ದಾಳಿಯಾಗಿದೆ ಎಂದು ಸರ್ಕಾರ್ ಆರೋಪಿಸಿದ್ದಾರೆ.

ಬಂಗಾಳಿ ಭಾಷಿಕ ಮುಸ್ಲಿಮರನ್ನು “ಬಾಂಗ್ಲಾದೇಶಿಗಳು” ಎಂದು ತಾರತಮ್ಯದಿಂದ ಕರೆಯುವ ಪ್ರವೃತ್ತಿಯನ್ನು ಅವರು ತೀವ್ರವಾಗಿ ಖಂಡಿಸಿದರು, ಇದು ಆರ್‌ಎಸ್‌ಎಸ್-ಬಿಜೆಪಿ ಕಡೆಯಿಂದ ಮಾತ್ರ ಬರುತ್ತದೆ ಎಂದು ಬಲವಾಗಿ ಪ್ರತಿಪಾದಿಸಿದರು. ಇದು ಕೇವಲ ಒಂದು ಹೇಳಿಕೆಯಲ್ಲ, ಬದಲಿಗೆ ಸಮುದಾಯವೊಂದರ ಅಸ್ಮಿತೆಯ ಮೇಲಿನ ದಾಳಿ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಕೇವಲ ಬಂಗಾಳಿ ಮಾತನಾಡಿದ್ದಕ್ಕೆ ಯಾರನ್ನಾದರೂ ಬಾಂಗ್ಲಾದೇಶಿ ಎಂದು ಕರೆಯುವುದು ಎಷ್ಟು ಸರಿ? ಅದರಲ್ಲೂ ಮಾತೃಭಾಷೆ ಬಂಗಾಳಿ ಆಗಿರುವ ಮುಸ್ಲಿಂ ಸಮುದಾಯದವರನ್ನು ಹೀಗೆ ಕರೆಯುವುದು ಹಾಸ್ಯಾಸ್ಪದ ಮತ್ತು ಅನ್ಯಾಯ ಎಂದು ಮಾಜಿ ಮುಖ್ಯಮಂತ್ರಿ ಸರ್ಕಾರ್ ತೀವ್ರವಾಗಿ ಪ್ರಶ್ನಿಸಿದ್ದಾರೆ. ಭಾಷೆಯ ಆಧಾರದ ಮೇಲೆ ಒಬ್ಬ ವ್ಯಕ್ತಿಯ ರಾಷ್ಟ್ರೀಯತೆಯನ್ನು ನಿರ್ಧರಿಸುವ ಈ ಅಸಂಬದ್ಧತೆಯನ್ನು ಅವರು ಬಲವಾಗಿ ಖಂಡಿಸಿದರು. ಬಿಜೆಪಿಯವರ ಈ ಹೇಳಿಕೆಗಳು ನಾಗರಿಕ ಹಕ್ಕುಗಳು ಮತ್ತು ತಮ್ಮನ್ನು ತಾವು ಗುರುತಿಸಿಕೊಳ್ಳುವ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಧಕ್ಕೆ ತರುವಂತಹ ಆತಂಕಕಾರಿ ಪ್ರವೃತ್ತಿಗಳನ್ನು ಎತ್ತಿ ತೋರಿಸಿವೆ ಎಂದು ಅವರು ಹೇಳಿದ್ದಾರೆ.

ತ್ರಿಪುರಾ ಮೋಥಾ ಪಾರ್ಟಿ (TMP)ಯ ‘ವಿಶೇಷ ತೀವ್ರ ಪರಿಷ್ಕರಣೆ (SIR)’ ಬೇಡಿಕೆಯನ್ನು ಪ್ರದ್ಯೋತ್ ಬಿಕ್ರಮ್ ಮಾಣಿಕ್ಯ ದೇಬ್‌ಬರ್ಮಾ ನೇತೃತ್ವದಲ್ಲಿ “ಚುನಾವಣಾ ಸಮಗ್ರತೆ ಮತ್ತು ರಾಷ್ಟ್ರೀಯ ಭದ್ರತೆ” ಯ ಹೆಸರಿನಲ್ಲಿ ಮಂಡಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸರ್ಕಾರ್ ವಿವರಿಸಿದರು. ಬಾಂಗ್ಲಾದೇಶದೊಂದಿಗಿನ ತ್ರಿಪುರಾದ ತೆರೆದ ಗಡಿ ಮತ್ತು ದಾಖಲೆರಹಿತ ವಲಸೆಯನ್ನು ಇದಕ್ಕಾಗಿ ಕಾರಣವಾಗಿ ನೀಡಲಾಗಿದೆ. TMP ನಿಯೋಗವು ಈಗಾಗಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಭಾರತದ ಚುನಾವಣಾ ಆಯೋಗವನ್ನು (ECI) ಭೇಟಿ ಮಾಡಿ ತಮ್ಮ ಬೇಡಿಕೆಯನ್ನು ಮುಂದಿಟ್ಟಿದೆ. ಆದರೆ, ಸರ್ಕಾರ್ ಇದನ್ನು ಮತದಾರರ ಜನಸಂಖ್ಯಾ ಸಂಯೋಜನೆಯನ್ನು ಬದಲಾಯಿಸುವ ಪ್ರಯತ್ನ ಎಂದು ಬಲವಾಗಿ ಖಂಡಿಸಿದ್ದಾರೆ. ಇದು ಜನಾಂಗೀಯತೆ ಅಥವಾ ಧರ್ಮದ ಆಧಾರದ ಮೇಲೆ ಕಾನೂನುಬದ್ಧ ನಾಗರಿಕರನ್ನು ಹೊರಹಾಕುವ ಸಾಧ್ಯತೆಯನ್ನು ಹೊಂದಿದೆ ಎಂದು ಅವರು ಆರೋಪಿಸಿದರು. ಭಾರತದ ಪೌರತ್ವ ಚರ್ಚೆಗಳ ಹಿನ್ನೆಲೆಯಲ್ಲಿ ಇಂತಹ ಪರಿಷ್ಕರಣೆಗಳು ವ್ಯಕ್ತಿಗಳನ್ನು ರಾಷ್ಟ್ರರಹಿತರನ್ನಾಗಿ ಅಥವಾ ಮತದಾನದ ಹಕ್ಕಿನಿಂದ ವಂಚಿತರನ್ನಾಗಿಸಬಹುದು ಎಂಬ ಭಯವನ್ನು ಸರ್ಕಾರ್ ವ್ಯಕ್ತಪಡಿಸಿದ್ದಾರೆ.

ಇಂತಹ ಪ್ರಯತ್ನಗಳ ಪರಿಣಾಮ ಕೇವಲ ಚುನಾವಣೆಗಳಿಗೆ ಸೀಮಿತವಲ್ಲ ಎಂದು ಮಾಜಿ ಮುಖ್ಯಮಂತ್ರಿ ಸರ್ಕಾರ್ ತಿಳಿಸಿದರು. ಮಾತೃಭಾಷೆಯ ಆಧಾರದ ಮೇಲೆ ಪೌರತ್ವವನ್ನು ಪ್ರಶ್ನಿಸುವುದು ವೈಯಕ್ತಿಕ ಗುರುತು ಮತ್ತು ಸೇರ್ಪಡೆಯ ಹಕ್ಕಿಗೆ ಧಕ್ಕೆ ನೀಡುತ್ತದೆ. ತ್ರಿಪುರಾದ ಬಂಗಾಳಿ ಮಾತನಾಡುವ ಮುಸ್ಲಿಮರು ತಮ್ಮ ಭಾಷೆ ಮತ್ತು ಧರ್ಮದ ಕಾರಣದಿಂದಾಗಿ ನಿರಂತರ ಸಂಶಯದ ವಾತಾವರಣದಲ್ಲಿ ಬದುಕಬೇಕಾಗುತ್ತದೆ ಎಂದು ಸರ್ಕಾರ್ ಖಂಡಿಸಿದರು.

“ಇಂತಹ ‘ಇತರರನ್ನಾಗಿ ಮಾಡುವ’ ಧೋರಣೆಯು ಕೇವಲ ರಾಜಕೀಯ ನಡೆಯಲ್ಲ, ಇದು ಸಮುದಾಯದಲ್ಲಿ ಆಳವಾದ ಮಾನಸಿಕ ಮತ್ತು ಸಾಮಾಜಿಕ ಪರಿಣಾಮಗಳನ್ನು ಉಂಟುಮಾಡಿ, ಭಯ ಮತ್ತು ಅಸುರಕ್ಷತೆಯನ್ನು ಸೃಷ್ಟಿಸುತ್ತದೆ,” ಎಂದು ಸರ್ಕಾರ್ ಎಚ್ಚರಿಸಿದರು. ಇದು ಭಾರತದ ಜಾತ್ಯತೀತ ತತ್ವಗಳ ಮೇಲಿನ ನೇರ ದಾಳಿಯಾಗಿದೆ. ಭಾಷಾ ಮತ್ತು ಧಾರ್ಮಿಕ ವೈವಿಧ್ಯತೆಯನ್ನು ಆಚರಿಸಬೇಕಾದ ದೇಶದಲ್ಲಿ, ಅದನ್ನು ವಿಭಜನೆಗೆ ಬಳಸಲಾಗುತ್ತಿದೆ ಎಂದು ಅವರು ಕಿಡಿಗಾರಿದರು.

ಮಾಜಿ ಮುಖ್ಯಮಂತ್ರಿ ಸರ್ಕಾರ್ ಅವರು ಸ್ಮಾರ್ಟ್ ವಿದ್ಯುತ್ ಮೀಟರ್‌ಗಳ ಬಗ್ಗೆ ಬಿಜೆಪಿಯ “ದ್ವಿಮುಖ ನೀತಿ”ಯನ್ನು ತೀವ್ರವಾಗಿ ಟೀಕಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಸ್ಮಾರ್ಟ್ ಮೀಟರ್‌ಗಳನ್ನು ಆಳವಡಿಸುವುದನ್ನು ವಿರೋಧಿಸುವ ಬಿಜೆಪಿ, ತ್ರಿಪುರಾದಲ್ಲಿ ಅವುಗಳನ್ನು ಬಲವಂತವಾಗಿ ಆಳವಡಿಸುತ್ತಿದೆ ಎಂದು ಅವರು ಕಿಡಿಗಾರಿದರು. “ಹಿಂದೆ ಯಾವುದೇ ಸಮಸ್ಯೆ ಇರಲಿಲ್ಲ. ಹಾಗಾದರೆ ಯಾಕೆ ಇದ್ದಕ್ಕಿದ್ದಂತೆ ಎಲ್ಲವನ್ನೂ ಬದಲಾಯಿಸಬೇಕು? ಈ ಸ್ಮಾರ್ಟ್ ಮೀಟರ್ ಯಂತ್ರಗಳನ್ನು ತಯಾರಿಸುವ ಕೆಲವು ಬಂಡವಾಳಶಾಹಿಗಳ ಲಾಭಕ್ಕಾಗಿ ಈ ಒತ್ತಡವಿದೆ” ಎಂದು ಅವರು ನೇರವಾಗಿ ಭ್ರಷ್ಟಾಚಾರದ ಆರೋಪ ಮಾಡಿದರು.

ಸ್ಮಾರ್ಟ್ ಮೀಟರ್‌ಗಳಿಂದಾಗಿ “ವಿದ್ಯುತ್ ಬಿಲ್‌ಗಳು ಏರಿಕೆ” ಕಂಡಿದ್ದರಿಂದ ಸಾರ್ವಜನಿಕರಲ್ಲಿ ಉಂಟಾದ ಆಕ್ರೋಶವು ಮಾಜಿ ಮುಖ್ಯಮಂತ್ರಿ ಸರ್ಕಾರ್ ಅವರ ಶೋಷಣೆಯ ಆರೋಪಗಳಿಗೆ ಮತ್ತಷ್ಟು ಪುಷ್ಠಿ ನೀಡಿದೆ. ಈ ಪ್ರತಿಭಟನೆಗಳನ್ನು “ಸಮರ್ಥನೀಯ ಮಾತ್ರವಲ್ಲ, ಅವಶ್ಯಕ” ಎಂದು ಸರ್ಕಾರ್ ಸ್ಪಷ್ಟವಾಗಿ ಹೇಳುವ ಮೂಲಕ, ಸಾರ್ವಜನಿಕರ ಈ ಪ್ರತಿಕ್ರಿಯೆಯನ್ನು ಅನ್ಯಾಯದ ವಿರುದ್ಧದ ಅನಿವಾರ್ಯ ಹೋರಾಟ ಎಂದು ಸಮರ್ಥಿಸಿಕೊಂಡರು. ಕೋಮುವಾದಿ ಮತ್ತು ನಿರಂಕುಶ ಶಕ್ತಿಗಳ ವಿರುದ್ಧ ಸಾಮೂಹಿಕ ಚಳುವಳಿ ನಡೆಸಬೇಕೆಂಬ ಸರ್ಕಾರ್ ಅವರ ಕರೆಯು, ಅಧಿಕಾರದ ಕೇಂದ್ರೀಕರಣ ಮತ್ತು ಭಿನ್ನಾಭಿಪ್ರಾಯದ ದಮನದ ಬಗ್ಗೆ ಇರುವ ಆಳವಾದ ಕಳವಳವನ್ನು ಪ್ರತಿಬಿಂಬಿಸುತ್ತದೆ. ಇವುಗಳು ನಿರಂಕುಶ ಆಡಳಿತಗಳ ಪ್ರಮುಖ ಲಕ್ಷಣಗಳಾಗಿವೆ ಎಂದು ಸರ್ಕಾರ್ ವಿವರಿಸಿದರು.

ವಿ.ಎಸ್.ಅಚ್ಯುತನಂದನ್ ಕುರಿತ ಟೀಕೆ: ಮುಸ್ಲಿಂ ಕಾರ್ಯಕರ್ತನ ವಿರುದ್ಧ ಎಫ್‌ಐಆರ್, ಡಿವೈಎಫ್‌ಐನಿಂದ ‘ಭಯೋತ್ಪಾದಕ’ ಪೋಸ್ಟರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...