Homeಅಂಕಣಗಳುಫೇಕ್ ನ್ಯೂಸ್ ತಡೆಗಟ್ಟುವಿಕೆಗೆ ಕ್ರಮಗಳು ಅಗತ್ಯ- ಬೆಕ್ಕಿಗೆ ಗಂಟೆ ಕಟ್ಟುವವರ್‍ಯಾರು? ಹೇಗೆ?

ಫೇಕ್ ನ್ಯೂಸ್ ತಡೆಗಟ್ಟುವಿಕೆಗೆ ಕ್ರಮಗಳು ಅಗತ್ಯ- ಬೆಕ್ಕಿಗೆ ಗಂಟೆ ಕಟ್ಟುವವರ್‍ಯಾರು? ಹೇಗೆ?

- Advertisement -
- Advertisement -

ಫೇಕ್ ನ್ಯೂಸ್ ಅಥವಾ ನಕಲಿ-ಸುಳ್ಳು ಸುದ್ದಿ ಜಾಲ ಮತ್ತು ಹರಡುವಿಕೆ ಈಗ ಯಾವುದೇ ಜಾಗತಿಕ ಪಿಡುಗಿಗಿಂತಲೂ ಗಂಭೀರ ಸಮಸ್ಯೆಯಾಗಿ ಮಾರ್ಪಟ್ಟಿದೆ. ಜಗತ್ತಿನಾದ್ಯಂತ ಹಲವು ಸರ್ಕಾರಗಳು ಇದರ ತಡೆಗೆ ಗಂಭೀರ ಪ್ರಯತ್ನಗಳನ್ನು ಮಾಡುತ್ತಿವೆ. ಇನ್ನೂ ಕೆಲವು ದೇಶಗಳ ಪ್ರಭುತ್ವಗಳು ಈ ಫೇಕ್ ನ್ಯೂಸ್ ಎಕೋಸಿಸ್ಟಮ್‌ಅನ್ನು ತಮ್ಮ ಅವಕಾಶಕ್ಕೆ ಬಳಸಿಕೊಂಡು ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತು ಸಂಸ್ಥೆಗಳನ್ನು ಇನ್ನಷ್ಟು ಅಪಾಯಕ್ಕೆ ತಳ್ಳುತ್ತಿವೆ. ಭಾರತವೂ ಕೂಡ ಇಂತಹುದೇ ಒಂದು ಅಪಾಯಕಾರಿ ಸಂದರ್ಭ-ಸನ್ನಿವೇಶದಲ್ಲಿದೆ. ಆಡಳಿತ ಒಕ್ಕೂಟ ಸರ್ಕಾರದ ಮುಂದಾಳತ್ವ ವಹಿಸಿರುವ ಬಿಜೆಪಿ ಪಕ್ಷ ಮತ್ತು ಅದರ ಸೈದ್ಧಾಂತಿಕ ಬೆಂಬಲಿಗೆ ಸಂಘ ಪರಿವಾರ ಇಂತಹ ಫೇಕ್ ನ್ಯೂಸ್ ಜಾಲದ ಭಾರಿ ಫಲಾನುಭವಿ ಆಗಿರುವುದು ಗುಟ್ಟಾಗೇನೂ ಉಳಿದಿಲ್ಲ. ಆದುದರಿಂದ ಒಕ್ಕೂಟ ಸರ್ಕಾರದಿಂದ ಏನಾದರೂ ಸಕಾರಾತ್ಮಕ ಕ್ರಮವನ್ನು ನಿರೀಕ್ಷಿಸುವುದು ವಿಫಲ ಆಶಾವಾದವಾದೀತು! ಅಲ್ಲದೆ, ಮಾಹಿತಿ ತಂತ್ರಜ್ಞಾನ (ಮಧ್ಯಂತರ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮೀಡಿಯಾ ನೀತಿಸಂಹಿತೆ) 2021ರ ಕೇಂದ್ರ ಸರ್ಕಾರದ ತಿದ್ದುಪಡಿ ಫೇಕ್ ಸುದ್ದಿಗಳನ್ನು ನಿಯಂತ್ರಿಸುವ ಉದ್ದೇಶದಲ್ಲಿ ಯಾವ ರೀತಿಯಲ್ಲೂ ಸ್ಪಷ್ಟತೆಯನ್ನು ತೋರಿಲ್ಲ. ಬದಲಿಗೆ ಪ್ರೆಸ್ ಇನ್‌ಫರ್ಮೇಷನ್ ಬ್ಯೂರೋಗೆ ಹೆಚ್ಚಿನ ಅಧಿಕಾರ ನೀಡಿ, ಒಕ್ಕೂಟ ಸರ್ಕಾರದ ಅಣತಿಯಂತೆ ಜಾಲತಾಣಗಳ ನಿರ್ಬಂಧಗಳಿಗೆ ಅವಕಾಶ ಮಾಡಿಕೊಟ್ಟಿದೆ. ಇದರಿಂದ ಅಸಲಿ ಫೇಕ್ ಸುದ್ದಿಗಳಿಗೆ ಕಡಿವಾಣ ಹಾಕುವುದಕ್ಕಿಂತಲೂ ಸರ್ಕಾರವನ್ನು ಪ್ರಶ್ನಿಸುವ ಮಾಧ್ಯಮ ಸಂಸ್ಥೆಗಳು ಕೆಂಗಣ್ಣಿಗೆ ಒಳಗಾಗುವ ಸಂಭವವೇ ಹೆಚ್ಚು ಎಂಬ ಆತಂಕ-ಆರೋಪಗಳನ್ನು ವ್ಯಕ್ತಪಡಿಸುವಂತೆ ಮಾಡಿದೆ.

ಇಂತಹ ಪರಿಸ್ಥಿತಿಯಲ್ಲಿ ಫೇಕ್ ನ್ಯೂಸ್ ಕಾರ್ಖಾನೆಗೆ ಹೆಚ್ಚು ಬಲಿಯಾಗುತ್ತಿರುವವರು ಬಿಜೆಪಿಯೇತರ ಪಕ್ಷಗಳು ಮುನ್ನಡೆಸುತ್ತಿರುವ ರಾಜ್ಯ ಸರ್ಕಾರಗಳು ಮತ್ತು ಸಂಘ ಪರಿವಾರದ ಒಡಕಿನ ಮತ್ತು ದ್ವೇಷದ ಸಿದ್ಧಾಂತದಲ್ಲಿ ನಂಬಿಕೆಯಿಲ್ಲದ ಹಾಗೂ ಅದನ್ನು ವಿರೋಧಿಸುವ ಜನಸಾಮಾನ್ಯರು. ಕೆಲವು ತಿಂಗಳುಗಳ ಹಿಂದೆ ತಮಿಳುನಾಡಿನ ಮುಖ್ಯಮಂತ್ರಿ ಡಿಎಂಕೆ ಪಕ್ಷದ ಸ್ಟಾಲಿನ್ ಅವರ ಹುಟ್ಟುಹಬ್ಬದ ದಿನ ಬಿಹಾರದ ಉಪಮುಖ್ಯಮಂತ್ರಿ-ಆರ್‌ಜೆಡಿ ಪಕ್ಷದ ಮುಖಂಡ ತಮಿಳುನಾಡಿಗೆ ಆಗಮಿಸಿ ಶುಭ ಕೋರಿದ್ದರು. ಇದೇ ಸಮಯಕ್ಕೆ ಕಾದಿದ್ದರೇನೋ ಎಂಬಂತೆ ಫೇಕ್ ನ್ಯೂಸ್ ಜಾಲ ಅಲರ್ಟ್ ಆಯಿತು; “ಮನೀಶ್ ಕಶ್ಯಪ್” Manish Kashyap Son of Bihar ಎಂಬ ಯುಟ್ಯೂಬ್ ವಾಹಿನಿ) ಎಂಬ ವ್ಯಕ್ತಿ ತನ್ನ ಯೂಟ್ಯೂಬ್ ಚಾನೆಲ್ ಮತ್ತು ಫೇಸ್ಬುಕ್ ಅಕೌಂಟ್‌ನಲ್ಲಿ, ’ತಮಿಳುನಾಡಿನಲ್ಲಿ ಬಿಹಾರಿ ಕಾರ್ಮಿಕರನ್ನು ಕಂಡಕಂಡಲ್ಲಿ ಮಚ್ಚಿನಿಂದ ಕೊಚ್ಚಿ ಕೊಲ್ಲಲಾಗುತ್ತಿದೆ’ ಎಂದು ಬಾಯಿಗೆ ಬಂದಂತೆ ಸುಳ್ಳನ್ನು ಬಡಬಡಿಸತೊಡಗಿದ. ಆತನ ವಿಡಿಯೋವನ್ನು 6 ಮಿಲಿಯನ್ ಜನ ವೀಕ್ಷಿಸಿದ್ದರು. ನೋಡನೋಡುತ್ತಿದ್ದಂತೆ ಆ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಒಂದೇ ಏಟಿನಲ್ಲಿ ಡಿಎಂಕೆ ವಿರುದ್ಧ ಮತ್ತು ಬಿಹಾರದ ಜೆಡಿಯು-ಆರ್‌ಜೆಡಿ ಮೈತ್ರಿಯ ವಿರುದ್ಧ ದ್ವೇಷವನ್ನು ಹರಡುವುದಕ್ಕೆ ಈ ಫೇಕ್‌ನ್ಯೂಸ್‌ಗೆ ಸಾಧ್ಯವಾಗಿತ್ತು. ಈ ಫೇಕ್ ನ್ಯೂಸ್‌ಅನ್ನು ತಹಬದಿಗೆ ತಂದು ಕ್ರಮ ತೆಗೆದುಕೊಳ್ಳುವಷ್ಟರಲ್ಲಿ ಅದು ಸಾಕಷ್ಟು ಡ್ಯಾಮೇಜ್ ಮಾಡಿ ಮುಗಿಸಿತ್ತು. ಸಿಆರ್‌ಪಿಸಿಯ ಕೆಲವು ಸೆಕ್ಷನ್‌ಗಳನ್ನು ರಾಜ್ಯ ಸರ್ಕಾರಗಳು ಇಂತಹ ಪ್ರಕರಣದಲ್ಲಿ ಅನ್ವಯಿಸಬಹುದಾದರೂ, ನಕಲಿ ಸುದ್ದಿಗಳ ವಿಡಿಯೋ-ಪೋಸ್ಟ್‌ಗಳನ್ನು ತಕ್ಷಣವೇ ತೆಗೆದುಹಾಕುವಂತಹ, ಹಾಗೆ ಮಾಡಲು ಆಯಾ ಸಾಮಾಜಿಕ ಮಾಧ್ಯಮ ಸಂಸ್ಥೆಗಳಿಗೆ ನಿರ್ದೇಶಿಸುವಂತಹ ಅಥವಾ ನಿಯಂತ್ರಿಸುವಂತಹ ಕ್ರಮಗಳನ್ನು ತೆಗೆದುಕೊಳ್ಳಲು ಕಾನೂನುಗಳನ್ನು ರೂಪಿಸುವ ಅಧಿಕಾರ ಹೊಂದಿಲ್ಲ. ಇದೇ ರೀತಿ ಬಹಳ ಇತ್ತೀಚಿಗೆ ಉಡುಪಿಯ ಕಾಲೇಜೊಂದರ ಹಾಸ್ಟೆಲ್‌ನಲ್ಲಿ ನಡೆದ ಒಂದು ಅನಗತ್ಯ ತಮಾಷೆಯ ಪ್ರಕರಣಕ್ಕೆ ಕೋಮು ಆಯಾಮ ತಂದು ನಕಲಿ ವಿಡಿಯೋಗಳನ್ನು ಸೃಷ್ಟಿಸಿ, ಕೋಮು ದ್ವೇಷ ಸೃಷ್ಟಿಸಲು ಸಂಘ ಪರಿವಾರ ನಡೆಸುತ್ತಿರುವ ಸಂಚನ್ನು ಗಮನಿಸಬಹುದು. (ಇದರ ಬಗ್ಗೆ ಶುದ್ಧೋದನ ಅವರ ವರದಿ ಈ ಸಂಚಿಕೆಯಲ್ಲಿ ಪ್ರಕಟವಾಗಿದೆ.) ಕರ್ನಾಟಕ ಸರ್ಕಾರ ಮತ್ತು ಪೊಲೀಸರು ಎಷ್ಟೇ ಸ್ಪಷ್ಟೀಕರಣ ನೀಡಿದರೂ, ಹಲವು ಪ್ರಗತಿಪರ ಸುದ್ದಿ ಸಂಸ್ಥೆಗಳು ಎಷ್ಟೇ ಫ್ಯಾಕ್ಟ್ ಚೆಕ್ ಮಾಡಿದರೂ ಸುಳ್ಳಿನ ನಾಗಾಲೋಟಕ್ಕೆ ಬ್ರೇಕ್ ಹಾಕಲು ಸಾಧ್ಯವಾಗಿಲ್ಲ. ಮತ್ಯಾವುದೋ ರೂಪದಲ್ಲಿ ಹೊಸದೊಂದು ಕಾನೂನನ್ನು ರೂಪಿಸಿದರೂ, ಅವುಗಳು ಅಷ್ಟು ಪರಿಣಾಮಕಾರಿಯಾಗಲು ಸಾಧ್ಯವಿಲ್ಲ ಎಂಬುದು ಇಲ್ಲಿಯವರೆಗಿನ ಉದಾಹರಣೆಗಳು ತೋರಿಸಿವೆ. ಅಲ್ಲದೆ ಇಂತಹ ನಿಯಂತ್ರಣಗಳನ್ನೇ ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ ಎಂದು ಬಗೆಯುವ ನಕಲಿ ನರೆಟಿವ್‌ಗಳು ಕೂಡ ಹೆಚ್ಚಾಗುವ ಸಾಧ್ಯತೆಯಿದೆ. ಈ ಎಲ್ಲಾ ಕಾರಣಗಳಿಂದ ಮಾಧ್ಯಮದ ಬಗ್ಗೆ ಹೆಚ್ಚು ಅರಿವನ್ನು ಉಂಟುಮಾಡುವ ಶೈಕ್ಷಣಿಕ ಹಾಗೂ ತಿಳಿವಳಿಕೆ ಮೂಡಿಸುವ ಕಾರ್ಯಕ್ರಮಗಳಷ್ಟೇ ಒಂದಷ್ಟು ಸುಧಾರಣೆಗಳಿಗೆ ಅನುವು ಮಾಡಿಕೊಡಲು ಸಾಧ್ಯವೇನೋ!

ಇಂತಹ ಒಂದು ಯೋಜನೆಯನ್ನು ಸರ್ಕಾರ ಕೈಗೊಳ್ಳುವುದಕ್ಕೆ ವಿಶಾಲವಾದ ಸಮಾಲೋಚನೆಗಳು ಅಗತ್ಯವಿದ್ದರೂ, ಕೆನಡಾ, ಡೆನ್ಮಾರ್ಕ್ ಅಮೆರಿಕದ ಕೆಲವು ರಾಜ್ಯಗಳು ಸೇರಿದಂತೆ ಹಲವು ಕಡೆ ಜಾರಿಯಾಗಿರುವ ಮೀಡಿಯಾ ಲಿಟರೆಸಿ ಯೋಜನೆಗಳಿಂದ ಕೆಲವು ಅಂಶಗಳನ್ನು ತೆಗೆದುಕೊಂದು ಕರ್ನಾಟಕ ತಮಿಳುನಾಡಿನಂತಹ ಮುಂತಾದ ರಾಜ್ಯ ಸರ್ಕಾರಗಳು ಕೆಲವು ಸಕಾರಾತ್ಮಕ ಕ್ರಮಗಳಿಗೆ ಮುಂದಾಗುವುದು ಅವಶ್ಯಕವಾಗಿದೆ. ಮೊದಲನೆಯದಾಗಿ, ಮಾಧ್ಯಮಿಕ ಶಾಲಾ ಹಂತದಿಂದ ಪಿಯುಸಿವರೆಗೂ (ಪದವಿ ಶಿಕ್ಷಣಕ್ಕೂ ಇನ್ನೂ ಗಂಭೀರ ರೀತಿಯಲ್ಲಿ ಇದನ್ನು ಕೊಂಡೊಯ್ಯಬೇಕಿರುವ ಬಗ್ಗೆ ಚಿಂತಿಸಬೇಕಿದೆ), ಮೊದಲ ಹಂತಗಳಲ್ಲಿ ನಕಲಿ ಸುದ್ದಿಗಳ-ನಕಲಿ ನರೆಟಿವ್‌ಗಳ ಸ್ವರೂಪದ ಬಗ್ಗೆ ಪಾಠಗಳನ್ನು ಸೇರಿಸುವುದು, ಮುಂದಿನ ಹಂತಗಳಲ್ಲಿ ನಕಲಿ ಸುದ್ದಿಗಳನ್ನು ಪತ್ತೆ ಹಚ್ಚುವುದನ್ನು ಶಿಕ್ಷಣದ ಭಾಗವಾಗಿಸುವುದು ಹಾಗೂ ನಿಜ ಸುದ್ದಿ ಮೂಲಗಳನ್ನು ಪತ್ತೆಹಚ್ಚುವ ಬಗೆಯನ್ನು ವಿದ್ಯಾರ್ಥಿಗಳಿಗೆ ತಿಳಿಸುವುದನ್ನು ಪಠ್ಯಕ್ರಮದ ಭಾಗವನ್ನಾಗಿಸಲೇಬೇಕಾಗಿದೆ. ಇದರ ಜೊತೆಗೆ ರಿಗರಸ್ ಆದ ಕಾರ್ಯಾಗಾರಗಳನ್ನು ಶಾಲೆಗಳಲ್ಲಿ ಮಾಡಬೇಕಿದೆ. ಮತ್ತು ಇದನ್ನು ಕಡ್ಡಾಯವಾಗಿಯೇ ಕಲಿಸಬೇಕಿದೆ. ಎರಡನೆಯದಾಗಿ, ವಯಸ್ಕರಿಗಾಗಿ ಮೀಡಿಯಾ ಲಿಟರೆಸಿ ಯೋಜನೆಗಳನ್ನು ವ್ಯಾಪಕವಾಗಿ ಹಮ್ಮಿಕೊಂಡು, ಕೋರ್ಸ್‌ಗಳನ್ನು (ಸುಲಭವಾದ ಪ್ರಾತ್ಯಕ್ಷಿತೆಗಳ ಮೂಲಕ) ವಿನ್ಯಾಸ ಮಾಡಬೇಕಿದೆ. ಶಾಲಾ ಶಿಕ್ಷಣವನ್ನು ಮುಗಿಸಿರುವವರು ಅಥವಾ ಶಿಕ್ಷಣದಿಂದ ಹೊರಗುಳಿದವರು ಈ ಕೋರ್ಸ್‌ಗಳನ್ನು ಸುಲಭವಾಗಿ (ಆನ್‌ಲೈನ್ ಅಥವಾ ಶಿಕ್ಷಣ ಸಂಸ್ಥೆಗಳ ಸಹಯೋಗದೊಂದಿಗೆ) ಅಕ್ಸೆಸ್ ಮಾಡಿ ತೆಗೆದುಕೊಳ್ಳಲು ಉತ್ತೇಜಿಸಬೇಕಿದೆ. ಇದನ್ನು ಉತ್ತೇಜಿಸುವುದಕ್ಕಾಗಿಯೇ ಈ ತಿಳಿವಳಿಕೆಯ ಕಾರ್ಯಕ್ರಮದ ಜೊತೆಗೆ ಯಾವುದಾದರೂ ಕಲ್ಯಾಣ ಯೋಜನೆಯನ್ನು ಬೆಸೆಯುವುದೂ ಅವಶ್ಯಕವಾದೀತು. ಮೂರನೆಯದಾಗಿ, ಸರ್ಕಾರ ತಾನು ನೀಡಬಹುದಾದ ಜಾಹೀರಾತು ಸ್ಪೇಸ್‌ಗಳಲ್ಲಿ ಸಾಧ್ಯವಾದಷ್ಟು ನಕಲಿ ಸುದ್ದಿಗಳ ಬಗ್ಗೆ ಎಚ್ಚರ ನೀಡುವ ಕೆಲಸಗಳನ್ನು ಮಾಡಬೇಕಿದೆ. ತಾನು ನೀಡುವ ಅನ್ಯ ಯೋಜನೆಗಳ ಮಾಮೂಲಿ ಜಾಹೀರಾತುಗಳಲ್ಲಿಯೂ ಫೇಕ್ ಸುದ್ದಿಗಳ ಬಗ್ಗೆ ಅರಿವು ಮೂಡಿಸಲು ಒಂದಷ್ಟು ಜಾಗವನ್ನು ಬಳಸಿಕೊಳ್ಳಬೇಕಿದೆ. ಎಷ್ಟೋ ಬಾರಿ ಪ್ರಜಾಸತ್ತಾತ್ಮಕ ಮತ್ತು ಸಾಂವಿಧಾನಿಕ ಮಾರ್ಗದಲ್ಲಿ ನಂಬಿಕೆಯಿಟ್ಟ ಮಾಧ್ಯಮಗಳು ಸರ್ಕಾರದ ಜೊತೆಗೆ ಈ ಅಭಿಯಾನದಲ್ಲಿ ಕೈಜೋಡಿಸಲು ಉತ್ಸುಕವಾಗಿರುತ್ತವೆ. ಇನ್ನು ಕೊನೆಯದಾಗಿ, ಸುಳ್ಳು ಹರಡುವ ಮಾಧ್ಯಮಗಳನ್ನು ಎಚ್ಚರಿಸುವ ಮತ್ತು ಅವುಗಳನ್ನು ಸರಿದಾರಿಗೆ ತರಲು ಅವುಗಳ ಜೊತೆಗೆ ನಿರಂತರ ಸಮಾಲೋಚನೆ ನಡೆಸುವ ಔಟ್‌ರೀಚ್ ಕಾರ್ಯಕ್ರಮಗಳನ್ನು ಸರ್ಕಾರ ಹಮ್ಮಿಕೊಳ್ಳಬೇಕಾಗುತ್ತದೆ.

ಈ ಮೇಲಿನ ಸಲಹೆಗಳು ಸರ್ಕಾರ ಮಾಡಬೇಕಾದ ಎಷ್ಟೋ ಕೆಲಸಗಳಲ್ಲಿ ಕೆಲವೇ ಕೆಲವು. ಆದರೆ ಪ್ರಜಾಪ್ರಭುತ್ವದ ಉಳಿವಿಗೆ ಈ ಫೇಕ್ ನ್ಯೂಸ್ ಫ್ಯಾಕ್ಟರಿಗಳನ್ನು ನಿಯಂತ್ರಿಸಬೇಕಾದ ಸಮಯದಲ್ಲಿ ಈ ಕ್ರಮಗಳ ಬಗ್ಗೆ ಜವಾಬ್ದಾರಿಯುತ ಸರ್ಕಾರಗಳು ತಕ್ಷಣಕ್ಕೆ ಚಿಂತಿಸಬೇಕಿದೆ.


ಇದನ್ನೂ ಓದಿ: ಜಾತಿವಾದಿ, ಜನಾಂಗೀಯವಾದಿ ನಿಂದನೆ: ಆರಗ ಜ್ಞಾನೆಂದ್ರ ವಿರುದ್ಧ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...

ದೆಹಲಿಯ ಉತ್ತಮ್ ನಗರದಲ್ಲಿ ಮುಸ್ಲಿಮರಿಗೆ ಬೆದರಿಕೆ; ಅಮಿತ್ ಶಾಗೆ ಪತ್ರ ಬರೆದ ವಿಪಕ್ಷ ಸಂಸದರು

ರಾಷ್ಟ್ರ ರಾಜಧಾನಿಯ ಉತ್ತಮ್ ನಗರದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಗುಂಪುಗಳು ಮಾಡುತ್ತಿರುವ ಬೆದರಿಕೆಗಳ ಬಗ್ಗೆ ತುರ್ತು ಹಸ್ತಕ್ಷೇಪವನ್ನು ಕೋರಿ ಹಲವಾರು ವಿರೋಧ ಪಕ್ಷದ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ...

‘ಇರಾನ್ ಕತಾರ್ ಮೇಲೆ ಮತ್ತೊಮ್ಮೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಸ್ಪೋಟಿಸುತ್ತೇವೆ’; ಟ್ರಂಪ್ ಬೆದರಿಕೆ

ಇರಾನ್ ಕತಾರ್‌ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡರೆ, ಅಮೆರಿಕ ”ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ಸ್ಫೋಟಿಸುತ್ತದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ರಾಜ್ಯಸಭೆಯಲ್ಲಿ ಎಚ್ಚರಿಸಿದ್ದಾರೆ. ಇರಾನ್‌ನ ಸೌತ್ ಪಾರ್ಸ್ ಗ್ಯಾಸ್...

ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಓಲಾ ಕ್ಯಾಬ್ ಪ್ರಯಾಣದ ಸಂದರ್ಭದಲ್ಲಿ ಚಾಲಕನಿಂದ ನನಗೆ ಬೆದರಿಕೆ ಮತ್ತು ಇಸ್ಲಾಮೋಫೋಬಿಕ್ ಹೇಳಿಕೆಗಳು ಬಂದಿವೆ ಎಂದು ಸುಪ್ರೀಂ ಕೋರ್ಟ್ ವಕೀಲರೊಬ್ಬರು ಆರೋಪಿಸಿದ್ದಾರೆ. ಈ ಘಟನೆಯು, ಪ್ರಯಾಣಿಕರ ಸುರಕ್ಷತೆ ಮತ್ತು...

ಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ ಆರೋಪ; ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ...

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...