Homeಅಂಕಣಗಳು“ಬೇರೆಯವರು ನಿರಾಸೆಯ ಬೇಸರದಲ್ಲಿರುವಾಗ ಒಬ್ಬನೇ ಒಬ್ಬ ಖುಷಿಯಾಗಿರಲು ಹೇಗೆ ಸಾಧ್ಯ?”

“ಬೇರೆಯವರು ನಿರಾಸೆಯ ಬೇಸರದಲ್ಲಿರುವಾಗ ಒಬ್ಬನೇ ಒಬ್ಬ ಖುಷಿಯಾಗಿರಲು ಹೇಗೆ ಸಾಧ್ಯ?”

- Advertisement -
- Advertisement -

ಅಂತರ್ಜಾಲದ ಪುಟದ ಮೇಲೆ ಪುಟಕ್ಕಿಟ್ಟು ಮನಪಟಲದಲ್ಲಿ ಹೊಳೆಯುತ್ತಿರುವ ಬರಹವಿದು.

ದಕ್ಷಿಣ ಬ್ರೆಜಿಲಿನ ಫ್ಲೋರಿಯಾನೋಪಾಲಿಸ್‍ನಲ್ಲಿ ನಡೆದಿತ್ತೊಂದು ಶಾಂತಿಯ ಉತ್ಸವ. ಪತ್ರಕರ್ತೆಯೂ ಮತ್ತು ತತ್ವಜ್ಞಾನಿಯೂ ಆದ ಲಿಯಾ ಡಿಸ್ಕಿನ್ ನಿರೂಪಿಸಿದ ಸಂಗತಿ ಅಂತರ್ಜಾಲದಲ್ಲಿ ಅಲೆದಾಡುತ್ತಿದ್ದ ಸೌಹಾರ್ದ ಪ್ರಿಯರ, ಮಾನವತಾ ಪ್ರೇಮಿಗಳ ಹೃದಯವನ್ನು ಮುಟ್ಟಿತು.

ಮಾನವಶಾಸ್ತ್ರಜ್ಞನೊಬ್ಬ ಈ ಬುಡಕಟ್ಟನ್ನು ಅಧ್ಯಯನ ಮಾಡುತ್ತಿದ್ದ. ಅವನ ಕೆಲಸಗಳನ್ನೆಲ್ಲಾ ಮುಗಿಸಿಕೊಂಡು ಹೊರಡುವ ಮುನ್ನ ತನ್ನ ಸುತ್ತುವರಿದಿದ್ದ ಬುಡಕಟ್ಟಿನ ಮಕ್ಕಳಿಗೆ ಆಟವಾಡಿಸಲು ಮತ್ತು ತನ್ನ ಪ್ರೀತಿಯ ಸಂಕೇತವಾಗಿ ಸಿಹಿ ಹಂಚಲು ಹೋಗಿ, ಒಂದು ಸಂಗತಿ ಜಗತ್ತಿಗೆ ತಿಳಿಯಲು ಕಾರಣನಾದ.

ಪಟ್ಟಣದಿಂದ ತಂದಿದ್ದ ಚಾಕೊಲೆಟ್ ಮತ್ತಿತರ ಸಿಹಿತಿನಿಸುಗಳನ್ನು ಬುಟ್ಟಿಯೊಂದರಲ್ಲಿಟ್ಟು ಅದನ್ನು ಒಂದಷ್ಟು ದೂರದಲ್ಲಿರುವ ಮರದ ಕೆಳಗೆ ಇಟ್ಟ. ಮಕ್ಕಳನ್ನೆಲ್ಲಾ ಒಟ್ಟಾಗಿಸಿ ಸಾಲಾಗಿ ನಿಲ್ಲಿಸಿದ. ನಾನು ಸೀಟಿ ಊದಿದಾಗ ಓಡಲು ಪ್ರಾರಂಭಿಸಬೇಕು, ಯಾರು ಮೊದಲು ಓಡುತ್ತಾರೋ ಅವರಿಗೆ ಆ ಎಲ್ಲಾ ತಿನಿಸುಗಳು ಎಂದು ಪೈಪೋಟಿಯನ್ನು ಒಡ್ಡಿದ. ಮಕ್ಕಳೆಲ್ಲಾ ನಿಂತರು. ಈತ “ಹೋಗಿ” ಎಂದು ಸೀಟಿ ಊದುತ್ತಿದ್ದಂತೆ ಆ ಮಕ್ಕಳೆಲ್ಲಾ ಜೋರಾಗಿ ಓಡುವುದು ಬಿಟ್ಟು ಒಬ್ಬರೊಬ್ಬರ ಕೈಗಳನ್ನು ಹಿಡಿದು ಒಟ್ಟಾಗಿ, ಎಲ್ಲರೂ ಓಡುವಂತಾಗುವಂತೆ ಲಘು ವೇಗದಲ್ಲಿ ಓಡಿ, ಒಟ್ಟಿಗೆ ಮುಟ್ಟಿ ಆ ತಿನಿಸುಗಳನ್ನು ಎಲ್ಲರೂ ಹಂಚಿಕೊಂಡು ಸಂತೋಷದಿಂದ ತಿಂದರು.

ಯಾರು ಮೊದಲು ಓಡುತ್ತಾರೋ, ಮಾಡುತ್ತಾರೋ ಅವರಿಗೇ ಬಹುಮಾನ ಎನ್ನುವಂತ ಸ್ಪರ್ಧೆಯ ಆಟವನ್ನು ಬಾಲ್ಯದಿಂದಲೇ ರೂಢಿಗೊಳಿಸಿಕೊಂಡಿರುವಂತಹ ಸಮಾಜದ ಈ ಮಾನವ ಶಾಸ್ತ್ರಜ್ಞನಿಗೆ ಇವರ ರೇಸ್ ಇಲ್ಲದ, ಸ್ಪರ್ಧೆ ಹೂಡದ, ಸಹಕಾರದ ಓಟ ಆಶ್ಚರ್ಯ ತಂದಿತು. “ಯಾಕೆ ಯಾರಾದರೊಬ್ಬರು, ಸಾಮರ್ಥ್ಯವಿರುವವರು ಓಡಿ ಬಹುಮಾನವನ್ನು ಗೆಲ್ಲಲಿಲ್ಲ? ಅದೊಂದು ಖುಷಿ (ಫನ್) ಅಲ್ಲವೇ” ಎಂದು ಕೇಳಿದ.

ಹಾಗೆ ತನ್ನೊಂದಿಗಿರುವವರನ್ನು ಬಿಟ್ಟು ತಾನೊಬ್ಬನೇ ಓಡಿ ಹೋಗಿ ಅದೇನನ್ನೋ ಪಡೆಯುವುದು ಬಹುಮಾನವಲ್ಲ, ಅದು ಅವಮಾನ ಎಂಬ ಸಂಸ್ಕೃತಿಯನ್ನು ರೂಢಿಸಿಕೊಂಡಿರುವ ಆ ಬುಡಕಟ್ಟಿನ ಹೆಣ್ಣುಮಗುವೊಂದು ಮರುಪ್ರಶ್ನಿಸಿತು, “ಬೇರೆಯವರು ನಿರಾಸೆಯ ಬೇಸರದಲ್ಲಿರುವಾಗ ಒಬ್ಬನೇ ಒಬ್ಬ ಖುಷಿಯಾಗಿರಲು ಹೇಗೆ ಸಾಧ್ಯ?”

ಉಬೂಂಟು ಅಲ್ಲಿನ ಬುಡಕಟ್ಟು ರೂಢಿಸಿಕೊಂಡಿರುವ ಪ್ರಜ್ಞೆ. ಅದಿರುವುದು ದಕ್ಷಿಣ ಆಫ್ರಿಕಾದಲ್ಲಿ. ನೀನು ವೇಗವಾಗಿ ಕ್ರಮಿಸಬೇಕಾದರೆ ಒಬ್ಬನೇ ಓಡು. ಆದರೆ ನೀನು ಬಹುದೂರ ಕ್ರಮಿಸಬೇಕಾದರೆ ಒಟ್ಟಾಗಿ ಹೋಗು ಎನ್ನುವ ಆಫ್ರಿಕಾದ ಗಾದೆಯ ಮಾತಿನಂತೆ ಉಬೂಂಟು ಒಂದು ಜೀವನಾದರ್ಶದ ರೂಢಿ.

ಲಿಯಾ ಡಿಸ್ಕಿನ್

‘ಊ-ಬೂನ್-ಟೂ’ ಎಂದರೆ ನಮ್ಮಿಂದ ‘ನಾನು’ ಎಂದು ಅರ್ಥ ಜಲು ಅಥವಾ ಖ್ಸೋಸ ಭಾಷೆಯಲ್ಲಿ.

ಆರ್ಚ್ ಬಿಷಪ್ ಮತ್ತು ಸಾಮಾಜಿಕ ಕಾರ್ಯಕರ್ತ ಡೆಸ್ಮಂಡ್ ಟುಟು ಹೇಳುವಂತೆ “ಉಬೂಂಟು ಎನ್ನುವುದು ಮಾನವನಾಗಿರುವುದರ ಸಾರತತ್ವ. ಇದು ಈ ಜಗತ್ತಿಗೆ ಆಫ್ರಿಕನ್ನರ ಕೊಡುಗೆ. ಇದರಲ್ಲಿ ಅತಿಥಿಗಳನ್ನು ಆದರಿಸುವುದು, ಒಬ್ಬರು ಮತ್ತೊಬ್ಬರಿಗೆ ಕಾಳಜಿ ವಹಿಸುವುದು, ಇತರರಿಗಾಗಿ ಪ್ರತಿಫಲಾಪೇಕ್ಷೆ ಇಲ್ಲದೇ ತಮ್ಮ ಕಾಯಕವನ್ನು ವಿಸ್ತರಿಸುವುದು, ಒಬ್ಬನ ಒಳಿತಿನಲ್ಲಿ ತನ್ನಯ ಒಳಿತು ಎಂಬ ಸಿದ್ಧಾಂತವನ್ನು ಪಾಲಿಸುವುದು; ಎಲ್ಲಾ ಇವೆ. ಒಬ್ಬ ವ್ಯಕ್ತಿಯು ಮತ್ತೊಬ್ಬ ವ್ಯಕ್ತಿಯ ಮೂಲಕ ಅನುಬಂಧಕ್ಕೆ ಒಳಗಾಗಿರುವುದೇ ಮಾನವತೆ. ಒಬ್ಬ ಮತ್ತೊಬ್ಬ ವ್ಯಕ್ತಿಯನ್ನು ಅಮಾನವೀಯವಾಗಿ ನಡೆಸಿಕೊಂಡಲ್ಲಿ ತನ್ನನ್ನೇ ಅಮಾನವೀಯಗೊಳಿಸಿಕೊಂಡಂತೆ. ಒಬ್ಬರ ಮೇಲೆ ದಬ್ಬಾಳಿಕೆ ಮಾಡುವುದು ಯಾವುದೇ ಮನುಷ್ಯನಿಗೆ ಅವಮಾನದ ಸಂಗತಿ. ಮನುಷ್ಯರ ಐಕ್ಯತೆ ನಿರ್ಬಂಧಗಳಿಗೆ ಒಳಗಾಗಿದೆ. ಸಮುದಾಯದ ಸಾಮಾನ್ಯ ಒಳಿತಿಗೆ ಸಾಮಾನ್ಯತೆಯಲ್ಲಿ ಅದರ ಭಾಗವಾಗಿರುವ ಪ್ರಜ್ಞೆಯೇ ಒಬ್ಬನ ಮಾನವತೆಯಾಗಿರುತ್ತದೆ.”

ದಕ್ಷಿಣ ಆಫ್ರಿಕಾದ ಅನೇಕ ಭಾಗಗಳಲ್ಲಿ ಉಬೂಂಟು ಪಾಲಿಸುವ ಬುಡಕಟ್ಟಿನ ಜನರಿದ್ದು ಅವರದೊಂದು ಸಕಾರಾತ್ಮಕ ಪದ್ಧತಿಯೊಂದು ಚಾಲ್ತಿಯಲ್ಲಿದೆ. ಅದೇನೆಂದರೆ ಯಾವುದೇ ವ್ಯಕ್ತಿಯು ಏನೇ ತಪ್ಪು ಅಥವಾ ಅಪರಾಧ ಮಾಡಿದರೂ ಅವನನ್ನು ಹಳ್ಳಿಯ ಮಧ್ಯಭಾಗಕ್ಕೆ ಕರೆದುಕೊಂಡು ಬರುತ್ತಾರೆ. ನಂತರ ಊರಿನ ಜನರೆಲ್ಲಾ ಸುತ್ತುವರೆದು, ಎರಡು ದಿನಗಳ ಕಾಲ ಅವನು ಮಾಡಿರುವ ಒಳ್ಳೆಯ ಕೆಲಸಗಳನ್ನೆಲ್ಲಾ ಹೇಳುತ್ತಿರುತ್ತಾರೆ. ಅವರ ಪ್ರಕಾರ ಯಾವುದೇ ವ್ಯಕ್ತಿಯು ಮೂಲದಲ್ಲಿ ಒಳ್ಳೆಯವನೇ ಆಗಿರುತ್ತಾನೆ. ಆದರೆ ಯಾವುದೋ ಒಂದು ಗಳಿಗೆಯಲ್ಲಿ ತಪ್ಪು ಮಾಡಿಬಿಡುತ್ತಾನೆ. ಹೊರಗಿನ ದುಷ್ಟ ಶಕ್ತಿಯ ಪ್ರಭಾವದಿಂದ ತಪ್ಪು ಸಂಭವಿಸಿರುತ್ತದೆ. ಆ ತಪ್ಪು ಮಾಡುವುದೆಂದರೆ ತನ್ನ ಒಳ್ಳೆಯತನವನ್ನು ಮರುಕಳಿಸೆಂದು ಅವನ ಕೂಗು ಅಥವಾ ಅಳಲಾಗಿರುತ್ತದೆ. ಆದ್ದರಿಂದ ಹಳ್ಳಿಯವರೆಲ್ಲಾ ಒಗ್ಗಟ್ಟಾಗಿ ತನ್ನ ಒಳ್ಳೆಯತನಕ್ಕಾಗಿ ಹಾತೊರೆಯುತ್ತಾ ಸಹಾಯ ಬೇಡುತ್ತಿರುವವನಿಗೆ ಸಹಕರಿಸಲೆಂದು ಅವನ ಒಳ್ಳೆಯ ಕೆಲಸಗಳನ್ನು, ಗುಣಗಳನ್ನು ಹೇಳುವಂತಹ ಕೆಲಸವನ್ನು ಮಾಡುತ್ತಾರೆ. ಈ ಆಚರಣೆಯ ಮೂಲಕ ತಪ್ಪು ಮಾಡಿರುವವನು ನಿಸರ್ಗದಿಂದ ಪಡೆದಿರುವ ಒಳ್ಳೆಯತನವನ್ನು ಮರಳಿಪಡೆಯುತ್ತಾನೆಂದು ಅವರ ನಂಬಿಕೆ. ಶಿಕ್ಷೆ ಮತ್ತು ಅವಮಾನಗಳನ್ನು ಮಾಡುವುದರಿಂದ ವ್ಯಕ್ತಿಯು ತಮ್ಮಿಂದ ನಿಸರ್ಗದತ್ತವಾದ ಗುಣರಹಿತನಾಗಿ ಸಂಪೂರ್ಣ ಹೊರಟೇ ಹೋಗುತ್ತಾನೆಂದು ಅವರು ಹೆದರುತ್ತಾರೆ. ಆದ್ದರಿಂದ ಆತನನ್ನು ಅಪಮಾನಿಸುವುದೂ ಇಲ್ಲ, ಶಿಕ್ಷಿಸುವುದೂ ಇಲ್ಲ. ಬದಲಿಗೆ ಅವನ ಒಳ್ಳೆಯತನವನ್ನು ಸ್ಮರಣೆಗೆ ತರುವುದರ ಮೂಲಕ, ಅವನು ಮತ್ತು ನಿಸರ್ಗದ ಕೊಡುಗೆಗೆ ಬೆರೆತುಕೊಳ್ಳಲು ಪ್ರೋತ್ಸಾಹಿಸುತ್ತಾರೆ.

ಯಾರಾದರೊಬ್ಬರು ಏನಾದರೊಂದು ತಪ್ಪು ಮಾಡಿದರೆ ಸಾಕು, ಆತ ಮಾಡಿರುವ ಒಳ್ಳೆಯ ಕೆಲಸ ಮತ್ತು ಸಹಾಯಗಳನ್ನೆಲ್ಲಾ ಮರೆತು ಚಾರಿತ್ರ್ಯವಧೆ ಮಾಡುವ ಜನರ ನಡುವೆ ಉಬೂಂಟು ಜನ ವಿಶೇಷವಾಗಿ ಮತ್ತು ಸಕಾರಾತ್ಮಕವಾಗಿ ಕಾಣುತ್ತಾರೆ. ಚಿತ್ತಾರವನ್ನು ಮಸಿ ನುಂಗಿತು ಎಂದಿಲ್ಲ ಇವರಲ್ಲಿ. ಅಡಿಕೆ ಕದ್ದ ಮಾನ ಆನೆ ಕೊಟ್ಟರೂ ಬಾರದು ಎನ್ನುವ ಜನರಲ್ಲ ಇವರು.

ಇದು ಆಫ್ರಿಕಾದ ಪ್ರಾಚೀನ ಸಾಂಪ್ರದಾಯಿಕ ಧಾರ್ಮಿಕತೆಯ ತತ್ವವೇ ಆಗಿತ್ತು ಎಂದು ತಮ್ಮ ಮಹಾಪ್ರಬಂಧಗಳಲ್ಲಿ ಮಾನವಶಾಸ್ತ್ರಜ್ಞರು ಹೇಳಿದ್ದಾರೆ. ಅವರು ಹಾಗೆ ಇರಲೇ ಬೇಕಾದದ್ದು ಧಾರ್ಮಿಕ ಶ್ರದ್ಧೆ ಮತ್ತು ಸಂಪ್ರದಾಯವೇ ಆಗಿದ್ದು ಉಟೂಂಬುವನ್ನು ಹೆಚ್ಚು ಉತ್ಪ್ರೇಕ್ಷೆಗೊಳಿಸುವ ಅಗತ್ಯವಿಲ್ಲ. ಇತರ ಅಂಧಶ್ರದ್ಧೆಗಳಂತೆ ಇದನ್ನೂ ಪಾಲಿಸುತ್ತಾರೆ ಎಂದೂ ಉಟೂಂಬುವನ್ನು ವೈಭವೀಕರಿಸದಿರಲು ಪಾಶ್ಚಾತ್ಯ ವಿದ್ವಾಂಸರು ವಿಮರ್ಶಿಸುತ್ತಾರೆ.

ಮಾನವನ ಹಿತವನ್ನು ಸಮುದಾಯದ ಸುಖವನ್ನು ಹೊಂದಲು ವಿಶೇಷವಾದ ಪಾಂಡಿತ್ಯದ ಅರ್ಥವಂತಿಕೆ ಏಕೆ ಬೇಕು? ಮಾನವತೆಯ ದುರ್ಭಿಕ್ಷದ ಕಾಲದಲ್ಲಿ, ಒಡಕುಗಳನ್ನೇ ಬಲಗೊಳಿಸುವ ತತ್ವಗಳು ಮೆರೆಯುವಲ್ಲಿ ಅಂಧಾನುಕರುಣೆಯೋ ಅಥವಾ ಉತ್ಪ್ರೇಕ್ಷೆಯೋ ಒಟ್ಟಾರೆ ಯಾವುದೇ ನಡವಳಿಕೆ ಮತ್ತು ರೂಢಿಯು ಮಾನವನಿಗೆ ಸಾಮೂಹಿಕವಾಗಿ ಹಿತವನ್ನು ತಂದರೆ, ಐಕ್ಯತೆಯನ್ನು ಬಲಪಡಿಸುವಂತಾದರೆ ಅದರಲ್ಲಿ ಕೂದಲು ಸೀಳುವುದೇಕೆ ಎನ್ನುತ್ತಾರೆ ಸೌಹಾರ್ದದ ಪ್ರೇಮಿಗಳು.


ಇದನ್ನು ಓದಿ: ತೇಜಸ್ವಿಯವರ ಒಂದು ಸೀಟಿನ ಸ್ಕೂಟರ್‍ರೂ… ಡ್ರಾಪಾಯಣದ ಸಮೃದ್ಧ ಅನುಭವವೂ….
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...